ಬಂಟ್ವಾಳ: ಎಸ್ಸೆಸೆಲ್ಸಿ ವಿದ್ಯಾರ್ಥಿ ಆತ್ಮಹತ್ಯೆ!
ಬಂಟ್ವಾಳ: ಎಸ್ಎಸ್ಎಲ್ಸಿ ವಿದ್ಯಾರ್ಥಿಯೋರ್ವ ಮನೆಯ ಬಚ್ಚಲು ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಜನಪದವುನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಬೆಂಜನಪದವು ಕರಾವಳಿ ಸೈಟ್ ನಿವಾಸಿ ಉದಯ ಆಚಾರ್ಯ ಅವರ ಮಗ ಭವಿಷ್ಯ ಆಚಾರ್ಯ (15) ಎಂದು ಗುರುತಿಸಲಾಗಿದೆ. ಬಡಕಬೈಲಿನ ಖಾಸಗಿ ಶಾಲೆಯ ಎಸ್ಎಸ್ಎಲ್ಸಿ ವಿದ್ಯಾರ್ಥಿಯಾಗಿದ್ದ ಈತ ಕಲಿಕೆ ವಿಚಾರದಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬುದನ್ನು ಮನೆಯವರು ಶಂಕಿಸಿದ್ದಾರೆ. ಅಗಸ್ಟ್ 7 ರಂದು ಬುಧವಾರ ರಾತ್ರಿ ಸುಮಾರು 7.30 ಗಂಟೆಗೆ ಸ್ನಾನ ಮಾಡಲೆಂದು ಬಚ್ಚಲು ಕೋಣೆಗೆ ತೆರಳಿದ…

