admin

ದ.ಕ.ಜಿಲ್ಲೆಯ ಮಳೆಹಾನಿಗೆ ರಾಜ್ಯ ಸರಕಾರ 300 ಕೋಟಿಗೂ ಅಧಿಕ ಪ್ಯಾಕೇಜ್ ಘೋಷಿಸಲಿ – ಶಾಸಕ ವೇದವ್ಯಾಸ ಕಾಮತ್

ಮಂಗಳೂರು : ಮಳೆಯಿಂದ ತೀವ್ರ ಹಾನಿಗೊಳಗಾದ ದ.ಕ.ಜಿಲ್ಲೆಗೆ ರಾಜ್ಯ ಸರಕಾರ 300ಕೋಟಿಗೂ ಅಧಿಕ ಪ್ಯಾಕೇಜ್ ಘೋಷಿಸಬೇಕು ಎಂದು ಶಾಸಕ ವೇದವ್ಯಾಸ ಕಾಮತ್ ಆಗ್ರಹಿಸಿದರು. ನಗರದ ಅಟಲ್ ಕೇಂದ್ರದಲ್ಲಿ ಮಾತನಾಡಿದ ಅವರು, ಮನೆ ಸಂಪೂರ್ಣ ಹಾನಿಯಾದಾಗ ಹಿಂದೆ ಯಡಿಯೂರಪ್ಪ ಹಾಗೂ ಬೊಮ್ಮಾಯಿ ಸರಕಾರವು ಎನ್‌ಡಿಆರ್‌ಎಫ್‌ನ 1.20 ಲಕ್ಷ ಅನುದಾನಕ್ಕೆ 3.80ಲಕ್ಷ ಸೇರಿಸಿ 5ಲಕ್ಷ ರೂ. ಪರಿಹಾರ ನೀಡುತ್ತಿತ್ತು. ಅದೇ ರೀತಿ ಭಾಗಶಃ ಹಾನಿಗೆ ಎನ್‌ಡಿಆರ್‌ಎಫ್‌ನ 50ಸಾವಿರ ಅನುದಾನಕ್ಕೆ ಸೇರಿಸಿ 2-3 ಲಕ್ಷ ಅನುದಾನ ನೀಡುತ್ತಿತ್ತು. ಇದೀಗ ಮಳೆ ಬಂದು…

Read More

‘ಮುಡಾ’ ಹಗರಣ ಖಂಡಿಸಿ ‘ರಣಕಹಳೆ’ ಮೊಳಗಿಸಿದ ಬಿಜೆಪಿ-ಜೆಡಿಎಸ್ : ‘ಮೈಸೂರು ಚಲೋ’ ಪಾದಯಾತ್ರೆಗೆ ಚಾಲನೆ

ಬೆಂಗಳೂರು : ಮುಡಾ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಬೆಂಗಳೂರಿನಿಂದ ಮೈಸೂರಿಗೆ ಬಿಜೆಪಿ ಹಾಗೂ ಜೆಡಿಎಸ್ ಎಂದು ಪಾದಯಾತ್ರೆ ಹಮ್ಮಿಕೊಂಡಿವೆ. ಈ ಕುರಿತು ಇಂದು ಬೆಂಗಳೂರಿನ ಕೆಂಗೇರಿಯ ಕೆಂಪಮ್ಮ ದೇವಸ್ಥಾನದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಪಾದಯಾತ್ರೆಗೆ ನಗಾರಿ ಬಾರಿಸುವ ಮೂಲಕ ಚಾಲನೆ ನೀಡಿದರು. ಈ ಒಂದು ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್ವಾಲ್, ಪ್ರಹ್ಲಾದ್ ಜೋಶಿ, ವಿ. ಸೋಮಣ್ಣ, ವಿಪಕ್ಷ ನಾಯಕ ಆರ್….

Read More

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಆರೋಪಿಗೆ ಆಶ್ರಯ ನೀಡಿದ್ದ ಇಬ್ಬರು ಆರೋಪಿಗಳ ವಿರುದ್ಧ ಎನ್​​ಐಎ ಚಾರ್ಜ್​​ಶೀಟ್..!

ಬೆಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಆಶ್ರಯ ನೀಡಿದ್ದ ಇಬ್ಬರು ಆರೋಪಿಗಳ ವಿರುದ್ಧ ಎನ್​​ಐಎ ಚಾರ್ಜ್​​ಶೀಟ್​​ ಸಲ್ಲಿಸಿದೆ. ಆರೋಪಿ ಮುಸ್ತಫಾ ಪೈಚಾರ್​ಗೆ ಆಶ್ರಯ ನೀಡಿದ್ದ ಹಿನ್ನೆಲೆ ಮನ್ಸೂರ್ ಪಾಷಾ ಮತ್ತು ಹೆಚ್​ವೈ ರಿಯಾಜ್ ವಿರುದ್ಧ ಚಾರ್ಜ್​ಶೀಟ್ ಸಲ್ಲಿಸಲಾಗಿದೆ. ಆರೋಪಿಗೆ ಮನ್ಸೂರ್, ರಿಯಾಜ್​ ಆಶ್ರಯ ನೀಡಿದ್ದರು. ಮೇ 5ರಂದು ಸಕಲೇಶಪುರದಲ್ಲಿ ಮುಸ್ತಫಾ ನನ್ನು ಬಂಧಿಸಿದ್ದು, ವಿದೇಶಕ್ಕೆ ಪರಾರಿಯಾಗುಲು ಯತ್ನಿಸಿದ್ದ ರಿಯಾಜ್​ ನನ್ನು ಜೂ.3ರಂದು ಮುಂಬೈ ಏರ್​​ಪೋರ್ಟ್​ನಲ್ಲಿ ಬಂಧಿಸಲಾಗಿತ್ತು. ನನ್ನ ಪತಿಯ ಹತ್ಯೆಯಲ್ಲಿ ಮುಸ್ತಫಾ…

Read More

ನನ್ನ ಮೇಲೆ ಸಿದ್ದರಾಮಯ್ಯ ಸುಳ್ಳು ಆರೋಪ ಮಾಡಿದ್ದರು, ಈಗ ಅವರಿಗೆ ‘ಕರ್ಮ’ ರಿಟರ್ನ್ ಆಗಿದೆ : ಜನಾರ್ಧನ್ ರೆಡ್ಡಿ

ಬೆಂಗಳೂರು : ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಇದೀಗ ಸಂಕಷ್ಟ ಎದುರಾಗಿದ್ದು, ಸಿಎಂ ಸಿದ್ದರಾಮಯ್ಯ ವಿರುದ್ಧ ಇಂದು ಜೆಡಿಎಸ್ ಹಾಗೂ ಬಿಜೆಪಿ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಹಮ್ಮಿಕೊಂಡಿವೆ. ಇನ್ನು ಮಾಜಿ ಸಚಿವ ಜನಾರ್ಧನ್ ರೆಡ್ಡಿ ಅವರು ಸಿದ್ದರಾಮಯ್ಯ ವಿರುದ್ಧ ಕಿಡಿ ಕಾರಿದ್ದು, ನನ್ನ ವಿರುದ್ಧ ಸುಳ್ಳು ಆರೋಪ ಮಾಡಿ ಬಳ್ಳಾರಿವರೆಗೂ ಪಾದಯಾತ್ರೆ ಮಾಡಿದ್ದರು ಇದೀಗ ಅವರಿಗೆ ಕರ್ಮ ರಿಟರ್ನ್ ಆಗಿದೆ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ನನ್ನ ಮೇಲೆ ಸುಳ್ಳು ಆರೋಪವನ್ನು ಮಾಡಿದರು….

Read More

ವಯನಾಡ್‌ ಪವಾಡ: ಅಜ್ಜಿ -ಮೊಮ್ಮಗಳಿಗೆ ಕಾಲಡಿ ರಕ್ಷಣೆ ನೀಡಿದ ಗಜರಾಜ

ವಯನಾಡು ಭೀಕರ ಭೂಕುಸಿತದಿಂದ  ಇಡೀ ಊರಿಗೆ ಊರೇ ಸ್ಮಶಾನವಾಗಿತ್ತು. ಇತ್ತ ಸಾಗಬೇಕಾದ ದಿಕ್ಕು ಗೊತ್ತಿಲ್ಲ. ಸಾವು ಕಣ್ಮುಂದೆ ಕೈಚಾಚಿ ನಿಂತಾಗ ಮನಕಲಕುವ ಸನ್ನಿವೇಶವೊಂದು ನಡೆದಿದೆ. ದೇವರ ರೂಪದಲ್ಲಿ ಬಂದ ಗಜರಾಜ ಮುಂಡಕೈ ನಿವಾಸಿ ಸುಜಾತ ಹಾಗೂ ಕುಟುಂಬಕ್ಕೆ ಇಡೀ ರಾತ್ರಿ ಕಾವಲಾಗಿತ್ತು. ಇದು ಆಶ್ಚರ್ಯ ಎನಿಸಿದರು ಸತ್ಯ. ಈ ಕುರಿತು ಖುದ್ದು ಸುಜಾತ ಅವರೇ ಸ್ಥಳೀಯರೊಬ್ಬರಿಗೆ ಮಾಹಿತಿ ನೀಡಿದ್ದಾರೆ. ವಯನಾಡು ಭೂಕುಸಿತದಲ್ಲಿ ಇಡೀ ಊರಿಗೆ ಊರೇ ಮಣ್ಣು ಪಾಲಾದರೂ ಈ ಕುಟುಂಬ ಬದುಕಿದ್ದು ಮಾತ್ರ ರೋಚಕ. ಸಂಕಷ್ಟದಲ್ಲಿದ್ದ…

Read More

‘PG’ಗಳಿಗೆ ‘CCTV ಕ್ಯಾಮೆರಾ’ ಅಳವಡಿಕೆ ಕಡ್ಡಾಯ..!

ಬೆಂಗಳೂರು: ನಗರದಲ್ಲಿರುವಂತ ಅನೇಕ ಪೇಯಿಂಗ್ ಗೆಸ್ಟ್ ಗಳಿಗೆ ಸಿಸಿಟಿವಿಯನ್ನು ಅಳವಡಿಕೆ ಮಾಡಿಲ್ಲ. ಕೆಲ ದಿನಗಳ ಹಿಂದಷ್ಟೇ ಯುವತಿಯನ್ನು ಪಿಜಿಗೆ ನುಗ್ಗಿ ಚಾಕುವಿನಿಂದ ಪ್ರಿಯಕರ ಇರಿದ ಘಟನೆ ವರದಿಯಾದ ನಂತ್ರ, ಇನ್ಮುಂದೆ ಬೆಂಗಳೂರಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆ ಕಡ್ಡಾಯಗೊಳಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಆದೇಶಿಸಿದ್ದಾರೆ. ಈ ಕುರಿತಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು ಆದೇಶ ಹೊರಡಿಸಿದ್ದಾರೆ. ಅದರಲ್ಲಿ ಬೆಂಗಳೂರು ನಗರದಲ್ಲಿರುವ ಪೇಯಿಂಗ್‌ ಗೆಸ್ಟ್‌ಗಳಲ್ಲಿ (ಪಿ.ಜಿ) ಸಿಸಿಟಿವಿ ಕ್ಯಾಮೆರಾ ಕಡ್ಡಾಯವಾಗಿ ಅಳವಡಿಸಬೇಕು. ಪಿ.ಜಿಗಳಲ್ಲಿ ಭದ್ರತಾ ಸಿಬ್ಬಂದಿ…

Read More

ಮಂಗಳೂರು: ನಡು ರಸ್ತೆಯಲ್ಲೇ ‘ಕಾಲೇಜು ವಿದ್ಯಾರ್ಥಿ’ಗಳ ನಡುವೆ ಹೊಡೆದಾಟ

ಮಂಗಳೂರು: ವಿದ್ಯಾರ್ಥಿಗಳ ಗುಂಪೊಂದು ನಡುರಸ್ತೆಯಲ್ಲಿಯೇ ಪರಸ್ಪರ ಹೊಡೆದಾಡಿಕೊಂಡ ಘಟನೆ ಮಂಗಳೂರಿನ ಪ್ರತಿಷ್ಠಿತ ಅಲೋಶಿಯಸ್ ಕಾಲೇಜು ಬಳಿ ನಡೆದಿದೆ. ಕಾಲೇಜು ಗೇಟ್ ಮುಂಭಾಗದ ರಸ್ತೆಯಲ್ಲಿ ಎರಡು ಪ್ರತ್ಯೇಕ ಬಣ್ಣದ ಯುನಿಫಾರಂ ಧರಿಸಿರುವ ವಿದ್ಯಾರ್ಥಿಗಳ ಗುಂಪಿನ ನಡುವೆ ಹೊಡೆದಾಟ ನಡೆದಿದೆ. ಕಾಲೇಜು ಬಿಟ್ಟ ಬಳಿಕ ಕ್ಷುಲ್ಲಕ ಕಾರಣಕ್ಕಾಗಿ ವಿದ್ಯಾರ್ಥಿಗಳ ಗುಂಪಿನ ನಡುವೆ ಹೊಡೆದಾಟ ನಡೆದಿದೆ ಎನ್ನಲಾಗಿದೆ. ಆದರೆ ವಿದ್ಯಾರ್ಥಿಗಳ ನಡುವೆ ಹಿಗ್ಗಾಮುಗ್ಗಾವಾಗಿ ಹಲ್ಲೆ ನಡೆಸುತ್ತಿರುವುದು ವೀಡಿಯೋದಲ್ಲಿ ದಾಖಲಾಗಿದೆ. ಸದ್ಯ ಹೊಡೆದಾಟದ ವಿಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗುತ್ತಿದೆ.

Read More

ಮಂಗಳೂರು : ಕೆತ್ತಿಕಲ್ ಗುಡ್ಡ ಪ್ರದೇಶದಲ್ಲಿ ಭೂ ಮಾಫಿಯಾ ಶಂಕೆ- ಉನ್ನತ ಮಟ್ಟದ ತನಿಖೆಗೆ ಆದೇಶ

ಮಂಗಳೂರು : ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿರುವ ಕೆತ್ತಿಕಲ್ ಗುಡ್ಡ ಪ್ರದೇಶ ಕುಸಿಯುವ ಭೀತಿ ಎದುರಾಗಿದ್ದು, ಭಯದ ವಾತಾವರಣ ನಿರ್ಮಾಣವಾಗಿದೆ. ಇಲ್ಲಿ ಭೂ ಮಾಫಿಯಾದ ವಾಸನೆ ಇದೆ. ಉನ್ನತ ಮಟ್ಟದ ತನಿಖೆಗೆ ಆದೇಶ ನೀಡುತ್ತಿದ್ದೇನೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಅಪಾಯದ ಅಂಚಿನಲ್ಲಿರುವ ಕೆತ್ತಿಕಲ್ ರಾ.ಹೆದ್ದಾರಿಯಲ್ಲಿ ಗುಡ್ಡವನ್ನು ಶುಕ್ರವಾರ ಬೆಳಗ್ಗೆ ವೀಕ್ಷಣೆ ಮಾಡಿದ ಬಳಿಕ ಸಚಿವರು ಸುದ್ದಿಗಾರರ ಜೊತೆ ಮಾತನಾಡುತ್ತಿದ್ದರು. ಕೆತ್ತಿಕಲ್ ನಲ್ಲಿ ಹೆದ್ದಾರಿ ಕಾಮಗಾರಿ ಹೆಸರಿನಲ್ಲಿ ಮಣ್ಣು ಗಣಿಗಾರಿಕೆ ಮಾಡಲಾಗಿದೆ….

Read More

ಮುದ್ರಾ ಯೋಜನೆಯಲ್ಲಿ ಸಾಲ ಕೊಡಿಸುವುದಾಗಿ ನಂಬಿಸಿ ಹಲವರಿಗೆ ವಂಚನೆ

ಮಂಗಳೂರು: ವ್ಯಕ್ತಿಯೋರ್ವ ಕೇಂದ್ರ ಸರಕಾರದ ಮುದ್ರಾ ಯೋಜನೆಯಲ್ಲಿ ಸಾಲ ಕೊಡಿಸುವುದಾಗಿ ನಂಬಿಸಿ ಸಾರ್ವಜನಿಕರಿಗೆ 20.50 ಲಕ್ಷ ರೂ. ಪಡೆದು ವಂಚಿಸಿರುವ ಕುರಿತು ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಗರದ ಐಸ್‌ಕ್ರೀಂ ಪಾರ್ಲರ್‌ನಲ್ಲಿ ಕೆಲಸ ಮಾಡುತ್ತಿದ್ದ ಅನಿಲ್‌ ಎನ್ನುವವರಿಗೆ ಪರಿಚಯವಾಗಿದ್ದ ಪ್ರಕಾಶ್ ಪೂಜಾರಿ ಎಂಬಾತ ತಾನು ಮುದ್ರಾ ಯೋಜನೆಯ ಏಜೆಂಟ್ ಎಂದು ಪರಿಚಯಿಸಿ ಸಾಲ ಕೊಡಿಸುತ್ತೇನೆ ಎಂದು ತಿಳಿಸಿದ್ದಾನೆ. ಅನಿಲ್ ಅವರು ಬೇಡ ಎಂದರೂ, ವಿನಯದಿಂದ ಮಾತನಾಡಿ ಹಲವರಿಗೆ 15 ಲಕ್ಷ ರೂ. ವರೆಗೆ ಸಾಲ ತೆಗೆಸಿಕೊಟ್ಟಿದ್ದೇನೆ…

Read More

ವಯನಾಡ್ ಭೂಕುಸಿತ: 16 ಗಂಟೆಗಳಲ್ಲಿ 190 ಅಡಿ ಉದ್ದದ ಸೇತುವೆ ನಿರ್ಮಿಸಿದ ಸೇನೆ

ವಯನಾಡ್ :ವಯನಾಡ್ ಭೂಕುಸಿತ ದುರಂತದ ನಡುವೆ ಭಾರತೀಯ ಸೇನೆಯ ಮದ್ರಾಸ್ ಎಂಜಿನಿಯರ್ಸ್ ಗ್ರೂಪ್ ಕೇವಲ 16 ಗಂಟೆಗಳಲ್ಲಿ 190 ಅಡಿ ಉದ್ದದ ಸೇತುವೆಯನ್ನು ನಿರ್ಮಿಸಿದೆ. 24 ಟನ್ ಸಾಮರ್ಥ್ಯದ ಈ ಸೇತುವೆಯನ್ನು ವಯನಾಡಿನ ಮೇಜರ್ ಸೀತಾ ಅವರ ಮೇಲ್ವಿಚಾರಣೆ ಮತ್ತು ಪ್ರಯತ್ನದಿಂದ ನಿರ್ಮಿಸಲಾಗಿದೆ. ಭೂಕುಸಿತವು ವಯನಾಡ್ ಮೇಲೆ ತೀವ್ರ ಪರಿಣಾಮ ಬೀರಿದ ನಂತರ, ವಿವಿಧ ಪ್ರದೇಶಗಳಿಗೆ ಸಂಪರ್ಕವು ಸಂಪೂರ್ಣವಾಗಿ ಕಳೆದುಹೋಯಿತು, ಆದ್ದರಿಂದ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಯನ್ನು ಮುಂದುವರಿಸಲು ಈ ಪ್ರದೇಶಗಳನ್ನು ತಲುಪುವ ಅವಶ್ಯಕತೆಯಿದೆ. ಅದರಂತೆ, ಮದ್ರಾಸ್…

Read More