admin

ನಾವು ಕ್ರೈಸ್ತ ಧರ್ಮಕ್ಕೆ ಮತಾಂತರ ಆಗಿಲ್ಲ : ಸ್ಪಷ್ಟನೆ ನೀಡಿದ ಚಿನ್ನಯ್ಯನ 2ನೇ ಹೆಂಡತಿ

ಧರ್ಮಸ್ಥಳದಲ್ಲಿ ಶವ ಹೂತು ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್ ಆದಂತ ಚಿನ್ನಯ್ಯನ 2ನೇ ಹೆಂಡತಿ ಪ್ರತಿಕ್ರಿಯೆ ನೀಡಿದ್ದು, ನನ್ನ ಗಂಡ ಒಳ್ಳೆಯವರು, ಅವರ ಬಂಧನ ವಿಷಯ ಟಿವಿ ಮೂಲಕವೇ ತಿಳಿಯಿತು. ಚಿನ್ನಯ್ಯ ಒಳ್ಳೆಯವರು, ನಾವು ಕ್ರೈಸ್ತ ಧರ್ಮಕ್ಕೆ ಮತಾಂತರ ಆಗಿಲ್ಲ ಎಂದು ಧರ್ಮಸ್ಥಳ ಪ್ರಕರಣದಲ್ಲಿ ಬಂಧಿತನಾಗಿರುವ ಚಿನ್ನಯ್ಯನ ಎರಡನೇ ಪತ್ನಿ ಮಲ್ಲಿಕಾ ಹೇಳಿದರು. ತಮಿಳುನಾಡಿನ ಸತ್ಯಮಂಗಲಂ ತಾಲೂಕಿನ ಗ್ರಾಮವೊಂದರಲ್ಲಿ ಮಾತನಾಡಿದ ಅವರು, ಮೊದಲನೇ ಪತ್ನಿ ತೊರೆದು 6 ವರ್ಷದ ಬಳಿಕ ಅವರು ನನ್ನನ್ನು ವಿವಾಹವಾಗಿದ್ದರು. ವಿವಾಹದ ಸಂದರ್ಭದಲ್ಲಿ…

Read More

ಮಂಗಳೂರು: ಖೋಟಾನೋಟು ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಮಂಗಳೂರು: ಖೋಟಾನೋಟು ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಪೂರ್ವ ಠಾಣಾ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಬಿಸಿರೋಡ್ ಸಮೀಪದ ತಲಪಾಡಿ ಜೋಡು ಮಾರ್ಗ ನಿವಾಸಿ ನಿಜಾಮ್ (33) ಬಂಧಿತ ಆರೋಪಿ. ಈತನ ಮೇಲೆ 2023 ರಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಠಾಣಾ ಅ.ಕ್ರ 01/2023 ಕಲಂ 489 (ಬಿ) ಮತ್ತು (ಸಿ) ಜೊತೆಗೆ 34 ಭಾ.ದಂ.ಸಂ. ರಂತೆ ಪ್ರಕರಣ ದಾಖಲಾಗಿದ್ದು, ನ್ಯಾಯಲಯದಲ್ಲಿ ವಿಚಾರಣೆಯ ಹಂತದಲ್ಲಿದೆ. ಈ ಮಧ್ಯೆ ಆರೋಪಿಯು ನ್ಯಾಯಾಲಯದಿಂದ ಜಾಮೀನು ಪಡೆದು ಹೊರಬಂದ ಬಳಿಕ, ಪ್ರಕರಣದ ವಿಚಾರಣೆಗೆ…

Read More

ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಮಹಿಳೆ..!

ವರದಕ್ಷಿಣೆ ಕಿರುಕುಳ ತಾಳಲಾರದೆ ಉಪನ್ಯಾಸಕಿಯೊಬ್ಬರು ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಜಸ್ಥಾನದ ಜೋಧ್​​ಪುರದಲ್ಲಿ ನಡೆದಿದೆ. ಮಹಿಳೆ ಮೂರು ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡಿದ್ದರು. ಸಂಜು ಬಿಷ್ಣೋಯ್ ಎಂಬ ಮಹಿಳೆ ತನ್ನ ಪತಿ ಮತ್ತು ಅತ್ತೆ-ಮಾವ ವರದಕ್ಷಿಣೆ ಕಿರುಕುಳದಿಂದ ಬೇಸತ್ತು ಈ ಭೀಕರ ಕೃತ್ಯ ಎಸಗಿದ್ದಾಳೆ. ಮಗು ಸ್ಥಳದಲ್ಲೇ ಸಾವನ್ನಪ್ಪಿದರೆ, ಸಂಜು ಶನಿವಾರ ಬೆಳಗ್ಗೆ ಚಿಕಿತ್ಸೆಯ ಸಮಯದಲ್ಲಿ ಸಾವನ್ನಪ್ಪಿದ್ದಾರೆ. ಜೋಧ್‌ಪುರದ ದಂಗಿಯಾವಾಸ್ ಪೊಲೀಸ್ ಠಾಣೆ ಪ್ರದೇಶದ ಸರ್ನಾದಾ ಗ್ರಾಮದಲ್ಲಿರುವ ಅವರ ನಿವಾಸದಲ್ಲಿ ಈ ಘಟನೆ ನಡೆದಿದೆ….

Read More

ತಿಮರೋಡಿಗೆ ಶಾಕ್ ಕೊಟ್ಟ ಎಸ್ಐಟಿ, ಸರ್ಚ್ ವಾರೆಂಟ್ ಪಡೆದು ನಿವಾಸದ ಮೇಲೆ ದಾಳಿ..!

ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣದ ತನಿಖೆಯಲ್ಲಿ ಇಂದು ಮಹತ್ವದ ಬೆಳವಣಿಗೆಯಾಗಿದೆ. ದೂರುದಾರ ಚಿನ್ನಯ್ಯ ಅಲಿಯಾಸ್ ಮಾಸ್ಕ್ ಮ್ಯಾನ್ ವಿಚಾರಣೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳು ಇದೀಗ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಮನೆ ಮೇಲೆ ದಾಳಿ ನಡೆಸಿದ್ದಾರೆ. ಆರೋಪಿ ಚಿನ್ನಯ ಜೊತೆ ಎಸ್ಐಟಿ ಅಧಿಕಾರಿಗಳು ಉಜಿರೆ ಬಳಿ ಇರುವ ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ಎಂಟ್ರಿಕೊಟ್ಟಿದ್ದಾರೆ. ಸರ್ಚ್ ವಾರಂಟ್ ಪಡೆದ ಎಸ್ಐಟಿ ಅಧಿಕಾರಿಗಳು ಮಹೇಶ್ ಶೆಟ್ಟಿ ತಿಮರೋಡಿ ಮನೆ ಪರಿಶೋಧನೆ, ಸ್ಥಳ ಮಹಜರು ನಡೆಸಲು ದಿಢೀರ್ ಎಂಟ್ರಿಕೊಟ್ಟಿದ್ದಾರೆ. ಆರೋಪಿಯಾಗಿರುವ…

Read More

ಅನನ್ಯಾ ಭಟ್ ನಾಪತ್ತೆ ಕೇಸ್ : ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ SIT ಕಚೇರಿಗೆ ಬಂದ ಸುಜಾತಾ ಭಟ್.!

ಅನ್ಯಾನ್ಯ ಭಟ್ ನಾಪತ್ತೆ ಪ್ರಕರಣ ಸಂಬಂಧ ಇಂದು ಬೆಳ್ಳಂಬೆಳಗ್ಗೆ ಸುಜಾತ್ ಭಟ್ ಅವರು ಬೆಳ್ತಂಗಡಿಯ ಎಸ್ ಐಟಿ ಕಚೇರಿಗೆ ಆಗಮಿಸಿದ್ದಾರೆ. ಅನನ್ಯ ಭಟ್ ನಾಪತ್ತೆಯಾಗಿದ್ದರ ಬಗ್ಗೆ ಅವರ ತಾಯಿ ಸುಜಾತಾ ಭಟ್ ಆರೋಪಿಸಿದ್ದರು. ತಮ್ಮ ಮಗಳ ಅಸ್ಥಿ ಪಂಜರ ನೀಡುವಂತೆ ಮನವಿ ಮಾಡಿದ್ದರು. ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರವು ಅನನ್ಯ ಭಟ್ ನಾಪತ್ತೆ ಪ್ರಕರಣವನ್ನು ಎಸ್ಐಟಿಗೆ ಹಸ್ತಾಂತರಿಸಿದ್ದು, ಇದೀಗ ಸುಜಾತಾ ಭಟ್ ಗೆ ಎಸ್ ಐಟಿ ನೋಡಿಸ್ ನೀಡಿದೆ. ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣಕ್ಕೆ…

Read More

ಧರ್ಮಸ್ಥಳ ಪ್ರಕರಣ: SIT ತನಿಖೆ ಸರಿಯಾಗಿದೆ, NIA ತನಿಖೆ ಅಗತ್ಯವಿಲ್ಲ- ಗೃಹ ಸಚಿವ ಜಿ.ಪರಮೇಶ್ವರ್

ಬೆಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆಯನ್ನು ಹೇಗೆ ಮಾಡಬೇಕು ಎಂಬುದನ್ನು ಪೊಲೀಸರು ನಿರ್ಧರಿಸುತ್ತಾರೆ. ತನಿಖೆಯಲ್ಲಿ ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ. ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (NIA) ವಹಿಸುವ ಅಗತ್ಯವಿಲ್ಲ ಎಂದು ಗೃಹ ಸಚಿವ ಜಿ ಪರಮೇಶ್ವರ ಸೋಮವಾರ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮಂಪರು ಪರೀಕ್ಷೆ ಬೇಕೋ, ಬೇಡವೋ ಎಂಬುದನ್ನು ನಾನು ನಿರ್ಧರಿಸಲು ಸಾಧ್ಯವಿಲ್ಲ. ಎಸ್ಐಟಿ ಸರಿಯಾಗಿಯೇ ತನಿಖೆ ನಡೆಸುತ್ತಿದೆ. ಹಲವು ಹೇಳಿಕೆಗಳು ಹೊರಬರುತ್ತಿರುವುದನ್ನು ನಾನು ಗಮನಿಸಿದ್ದೇನೆ. ಆದರೆ, ಹೇಳಿಕೆ ನೀಡುವುದರಿಂದ ಸತ್ಯ ಹೊರಬರುವುದಿಲ್ಲ. ರಾಜಕಾರಣಿಗಳು ಮೊದಲು ಹೇಳಿಕೆಗಳನ್ನು ನೀಡುವುದನ್ನು…

Read More

ಪ್ರಧಾನಿ ಜೈಲಿಗೆ ಹೋದ್ರೂ ರಾಜೀನಾಮೆ ನೀಡ್ಲೇಬೇಕು : ಸಾಂವಿಧಾನಿಕ ತಿದ್ದುಪಡಿ ಕುರಿತು ವಿಪಕ್ಷಗಳಿಗೆ ಅಮಿತ್ ಶಾ ಕೌಂಟರ್

ನವದೆಹಲಿ : ಮುಖ್ಯಮಂತ್ರಿಯಾದ್ರೂ ಪ್ರಧಾನಮಂತ್ರಯಾದ್ರೂ ಜೈಲಿನಿಂದ ಆಡಳಿತ ನಡೆಸುವುದು ಒಳ್ಳೆಯದೇ? ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಶ್ನಿಸಿದ್ದಾರೆ. ಇದು ನಮ್ಮ ಪ್ರಜಾಪ್ರಭುತ್ವಕ್ಕೆ ಸೌಜನ್ಯವೇ.? ವಿರೋಧ ಪಕ್ಷಗಳ ವಿರುದ್ಧ ಹರಿಹಾಯ್ದರು. ರಾಷ್ಟ್ರೀಯ ಮಾಧ್ಯಮ ಸಂಸ್ಥೆ ಎಎನ್ಐಗೆ ಅಮಿತ್ ಶಾ ವಿಶೇಷ ಸಂದರ್ಶನ ನೀಡಿದರು. ಅವರು 130ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಮಾತನಾಡಿದರು. ಮಾಜಿ ಉಪರಾಷ್ಟ್ರಪತಿ ಧನ್ಕರ್ ಅವರ ರಾಜೀನಾಮೆಯ ಬಗ್ಗೆಯೂ ಅವರು ಪ್ರತಿಕ್ರಿಯಿಸಿದರು. “ಜೈಲಿಗೆ ಹೋದರೆ, ಸುಲಭವಾಗಿ ಸರ್ಕಾರಗಳನ್ನ ರಚಿಸಬಹುದು…

Read More

ರಾಜ್ಯದಲ್ಲಿ ಟೀನೇಜ್ ಪ್ರೆಗ್ನೆನ್ಸಿ ಭಾರೀ ಹೆಚ್ಚಳ : ಆರೋಗ್ಯ ಇಲಾಖೆಯಿಂದ ಬೆಚ್ಚಿ ಬೀಳಿಸುವ ವರದಿ

ಬೆಂಗಳೂರು : ಕರ್ನಾಟಕದಲ್ಲಿ 18 ವರ್ಷ ತುಂಬುವುದಕ್ಕಿಂತ ಮೊದಲೇ ಗರ್ಭಿಣಿ ಆಗುತ್ತಿರುವವರ ಸಂಖ್ಯೆ ದಾಖಲೆ ಪ್ರಮಾಣದಲ್ಲಿ ಏರಿಕೆಯಾಗಿದೆ. ರಾಜ್ಯಾದ್ಯಂತ 3,36,000 ಕ್ಕೂ ಹೆಚ್ಚು ಟಿನೇಜ್ ಪ್ರಗ್ನೆನ್ಸಿ ಪ್ರಕರಣಗಳು ವರದಿಯಾಗಿದೆ. ಹೌದು, ಕಳೆದ ಮೂರು ವರ್ಷಗಳಲ್ಲಿ ಕರ್ನಾಟಕದಾದ್ಯಂತ ಒಟ್ಟಾರೆಯಾಗಿ 3,36,000 ಕ್ಕೂ ಹೆಚ್ಚು ಟಿನೇಜ್ ಪ್ರಗ್ನೆನ್ಸಿ ಪ್ರಕರಣಗಳು ವರದಿಯಾಗಿದ್ದರೆ, ಕಳೆದ ಆರು ತಿಂಗಳಲ್ಲಿ ರಾಜ್ಯದಲ್ಲಿ 22000 ಹಾಗೂ ಬೆಂಗಳೂರು ಅರ್ಬನ್ನಲ್ಲಿ 8891 ಟೀನೇಜ್ ಪ್ರಗ್ನೆನ್ಸಿ ಪ್ರಕರಣಗಳು ಕಂಡು ಬಂದಿವೆ. 2020-21 ರಿಂದ 2024-25 ರವರೆಗೆ (ಫೆಬ್ರವರಿ ವರೆಗೆ) ಎಲ್ಲಾ…

Read More

ಲಿಯೋ ಡಿಸ್ಟ್ರಿಕ್ಟ್ 317D: ಪಾಠ ಶಾಲಾ ಪ್ರಾಜೆಕ್ಟ್ ಯಶಸ್ವಿ ಉದ್ಘಾಟನೆ

ಮಂಗಳೂರು: ಲಯನ್ಸ್ ಇಂಟರ್‌ನ್ಯಾಶನಲ್ ಲಿಯೋ ಡಿಸ್ಟ್ರಿಕ್ಟ್ 317D ವತಿಯಿಂದ “ಪಾಟಶಾಲಾ ಪ್ರಾಜೆಕ್ಟ್” ಬೈಕಂಪಾಡಿ ಬರ್‌ಟ್ರಾಂಡ್ ರಸ್ಸೆಲ್ ಶಾಲೆಯಲ್ಲಿ ಭವ್ಯವಾಗಿ ಆರಂಭವಾಯಿತು. “ಜ್ಞಾನ – ಚಿತ್ರಕಲೆ – ಸಂಗೀತ” ಎಂಬ ಮೂರ್ನೆಯ ಶಕ್ತಿಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸಿ, ವಿದ್ಯಾರ್ಥಿಗಳ ಕನಸುಗಳಿಗೆ ಬಣ್ಣ ತುಂಬುವ ಕೆಲಸವನ್ನು ಲಿಯೋಗಳು ತಮ್ಮ ಉತ್ಸಾಹದಿಂದ ನಿಭಾಯಿಸಿದರು. ಉದ್ಘಾಟನೆಯನ್ನು ರೇಡಿಯೋ ಸಾರಂಗದ ಮುಖ್ಯ ಕಾರ್ಯಕ್ರಮ ನಿರ್ಮಾಪಕರಾದ ಆರ್‌ಜೆ ಅಭಿಷೇಕ್ ಶೆಟ್ಟಿ ನೆರವೇರಿಸಿದರು.“ಲಿಯೋಗಳ ಉತ್ಸಾಹ, ಶಿಸ್ತಿನೊಂದಿಗೆ ತಾಂತ್ರಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸುವ ಶಕ್ತಿ ಲಯನ್ ಚಳವಳಿಗೆ…

Read More

ಪರಸ್ಪರ ಸಹಕಾರ ಒಗ್ಗಟ್ಟಿನಿಂದ ಕುಲಾಲರ ಉನ್ನತಿ ಸಾಧ್ಯ- ಲಯನ್ ಅನಿಲ್‌ದಾಸ್

ಉಳ್ಳಾಲ: ಕರ್ನಾಟಕ ರಾಜ್ಯ ಕುಲಾಲ ಕುಂಬಾರರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ(ರಿ) ಉಳ್ಳಾಲ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಸಮಾಜ ಬಂಧುಗಳ ವಿಶೇಷ ಸಭೆಯನ್ನು ವೇದಿಕೆಯ ಜಿಲ್ಲಾಧ್ಯಕ್ಷರಾದ ಲ|| ಅನಿಲ್ ದಾಸ್‌ರವರ ಉಪಸ್ಥಿತಿಯಲ್ಲಿ ಉಳ್ಳಾಲ ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷರಾದ ನವೀನ್ ಕುಲಾಲ್ ಪಿದಮಲೆಯವರ ನೇತೃತ್ವದಲ್ಲಿ ನಡೆಸಲಾಯಿತು. ಈ ಸಭೆಯಲ್ಲಿ ಸಮಾಜದ ಸಂಘಟನೆ ಮತ್ತು ಜವಾಬ್ದಾರಿ ಹಾಗೂ ಸರಕಾರದ ಕೆಲವು ಯೋಜನೆಗಳನ್ನು ಸಮಾಜ ಬಂಧುಗಳಿಗೆ ತಲುಪಿಸುವ ನಿಟ್ಟಿನಲ್ಲಿ ಕಾರ್ಯಯೋಜನೆ ರೂಪಿಸಿಕೊಳ್ಳಬೇಕಾದ ಅಗತ್ಯದ ಬಗ್ಗೆ ಜಿಲ್ಲಾಧ್ಯಕ್ಷರು…

Read More