ಸಿಎಂ ರಾಜೀನಾಮೆ ನೀಡದಿದ್ದರೆ BJP ಜಿಲ್ಲೆ ಜಿಲ್ಲೆಗಳಲ್ಲಿ ಪ್ರತಿಭಟನೆ- ಶಾಸಕ ಸುನೀಲ್ ಕುಮಾರ್
ಉಡುಪಿ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಸೂಚನೆ ನೀಡಿದ್ದರಿಂದ ಸಿದ್ದರಾಮಯ್ಯ ಅವರು ಯಾವುದೇ ಹುದ್ದೆಯಲ್ಲಿ ಇರಬಾರದು. ತಕ್ಷಣವೇ ರಾಜೀನಾಮೆ ನೀಡಿ, ತನಿಖೆ ಆಗುವ ತನಕ ಮುಖ್ಯಮಂತ್ರಿ ಸ್ಥಾನದಿಂದ ಕೆಳಕ್ಕಿಳಿಯಬೇಕು ಎಂದು ಮಾಜಿ ಸಚಿವ, ಶಾಸಕ ವಿ ಸುನೀಲ್ ಕುಮಾರ್ ಆಗ್ರಹಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ರಾಜ್ಯಪಾಲರನ್ನು ಪ್ರಶ್ನೆ ಮಾಡುವ ಕಾಂಗ್ರೆಸ್ ಮುಂದೆ ನ್ಯಾಯಾಲಯದ ನಿಲುವು ಪ್ರಶ್ನೆ ಮಾಡುವ ಭಂಡತನ ತೋರಬಹುದು ಎಂದರು. ಸಿಎಂ ರಾಜೀನಾಮೆ ನೀಡದಿದ್ದರೆ ಒಂದೆರೆಡು ದಿನದಲ್ಲಿ ಬಿಜೆಪಿ ಜಿಲ್ಲೆ ಜಿಲ್ಲೆಗಳಲ್ಲಿ…

