admin

ಷೇರು ಮಾರುಕಟ್ಟೆಯಲ್ಲಿ ಭರ್ಜರಿ ಆರಂಭ : ಹೂಡಿಕೆದಾರರಿಗೆ 3.67 ಲಕ್ಷ ಕೋಟಿ ಲಾಭ!

ಮುಂಬೈ : ದೇಶೀಯ ಷೇರು ಮಾರುಕಟ್ಟೆಗಳು ಶುಕ್ರವಾರ ಭಾರಿ ಲಾಭದೊಂದಿಗೆ ಪ್ರಾರಂಭವಾದವು. ಪ್ರಮುಖ ಸೂಚ್ಯಂಕಗಳು ಒಟ್ಟಾರೆಯಾಗಿ ಏರಿಕೆ ಕಂಡವು. ಬೆಳಿಗ್ಗೆ 9.30 ರ ಸುಮಾರಿಗೆ ಸೆನ್ಸೆಕ್ಸ್ ಉತ್ತಮವಾಗಿ ಪ್ರಾರಂಭವಾಯಿತು ಮತ್ತು 593.67 ಪಾಯಿಂಟ್ಸ್ ಏರಿಕೆಗೊಂಡು 79,699.55 ಕ್ಕೆ ವಹಿವಾಟು ನಡೆಸಿತು. ನಿಫ್ಟಿ 50 ಸೂಚ್ಯಂಕವು 172.30 ಪಾಯಿಂಟ್ ಅಥವಾ ಶೇಕಡಾ 0.71 ರಷ್ಟು ಏರಿಕೆ ಕಂಡು 24,316.05 ಕ್ಕೆ ತಲುಪಿದೆ. ಮತ್ತೊಂದೆಡೆ, ಬ್ಯಾಂಕ್ ನಿಫ್ಟಿ ಸಹ 400 ಕ್ಕೂ ಹೆಚ್ಚು ಅಂಕಗಳ ಲಾಭದೊಂದಿಗೆ ಪ್ರಾರಂಭವಾಯಿತು. ಒಂದು ದಿನದ…

Read More

ಬಂಟ್ವಾಳ: ಬೆಂಗಳೂರಿನಿಂದ ಬರುತ್ತಿದ್ದ ಖಾಸಗಿ ಬಸ್ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ

ಫರಂಗಿಪೇಟೆ: ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬನ್ನೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿಯ ಫರಂಗಿಪೇಟೆ ಸಮೀಪ ಹತ್ತನೇ ಮೈಲ್ ಕಲ್ಲು ಎಂಬಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ. ಘಟನೆಯಲ್ಲಿ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ ವಿಭಜಕದ ಮಧ್ಯೆ ಇರುವ ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ಎರಡು ಮರಗಳಿಗೆ ಢಿಕ್ಕಿ ಹೊಡೆದು ಉರುಳಿಬಿದ್ದಿದೆ. ಇದರಿಂದ 10ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ.

Read More

ಮಂಗಳೂರು: ವೆನ್ಲಾಕ್ ಆಸ್ಪತ್ರೆಯಲ್ಲಿ 250 ಹಾಸಿಗೆ ಸಾಮರ್ಥ್ಯದ ಸರ್ಜಿಕಲ್ ಸ್ಪೆಷಾಲಿಟಿ ಬ್ಲಾಕ್ ಲೋಕಾರ್ಪಣೆ – 17 ಕೋಟಿ ರೂ. ವೆಚ್ಚದಲ್ಲಿ ತುರ್ತು ಚಿಕಿತ್ಸಾ ಘಟಕ

ಮಂಗಳೂರು: ನಗರದ ವೆನ್‌ಲಾಕ್ ಆಸ್ಪತ್ರೆಯಲ್ಲಿ 17 ಕೋಟಿ ರೂ. ವೆಚ್ಚದಲ್ಲಿ ತುರ್ತು ಚಿಕಿತ್ಸಾ ಘಟಕ(ಕ್ರಿಟಿಕಲ್ ಕೇರ್ ಯುನಿಟಿ) ನಿರ್ಮಾಣಕ್ಕೆ ರಾಜ್ಯ ಸರಕಾರ ಅನುಮೋದನೆ ನೀಡಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂ ರಾವ್ ಹೇಳಿದ್ದಾರೆ. ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ 56 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ವೆನ್‌ಲಾಕ್ ಜಿಲ್ಲಾಸ್ಪತ್ರೆಯ ನೂತನ ಸರ್ಜಿಕಲ್ ಸೂಪರ್ ಸ್ಪೆಷಾಲಿಟಿ ಕಟ್ಟಡದ ಉದ್ಘಾಟನೆ ನೆರವೇರಿಸಿ, ಕಾಮಗಾರಿ ಶೀಗ್ರದಲ್ಲೇ ಟೆಂಡರ್ ಕರೆಯಲಾಗುವುದು ಎಂದು ಹೇಳಿದರು. ವೆನ್‌ಲಾಕ್…

Read More

ರಾಷ್ಟ್ರ ಧ್ವಜವನ್ನು ಕೆಳಗಿಳಿಸುವಾಗ ವಿದ್ಯುತ್‌ ಶಾಕ್‌ನಿಂದ ಇಗರ್ಜಿಯ ಫಾದರ್‌ ಮೃತ್ಯು…!!

ಕಾಸರಗೋಡು: ರಾಷ್ಟ್ರ ಧ್ವಜವನ್ನು ಸಂಜೆ ಕೆಳಗಿಳಿಸುವಾಗ ವಿದ್ಯುತ್‌ ಶಾಕ್‌ನಿಂದ ಇಗರ್ಜಿಯ ಫಾದರ್‌ ಒಬ್ಬರು ಸಾವಿಗೀಡಾಗಿದ್ದಾರೆ. ಪಕ್ಕದಲ್ಲೇ ಇದ್ದ ಮತ್ತೋರ್ವರಿಗೆ ಗಾಯ ವಾಗಿದ್ದು, ಆಸ್ಪತ್ರೆಗೆ ದಾಖಲಿಸಸಲಾಗಿದೆ ಎಂದು ತಿಳಿದು ಬಂದಿದೆ. ಮೃತಪಟ್ಟವರು ಮುಳ್ಳೇರಿಯ ಇನ್‌ಫೆಂಟ್‌ ಸೈಂಟ್‌ ಜೀಸಸ್‌ ಇಗರ್ಜಿಯ ಫಾದರ್‌ ಶಿನ್ಸ್‌ (30) ಎಂದು ತಿಳಿಯಲಾಗಿದೆ. ಆ. 15ರಂದು ಸ್ವಾತಂತ್ರ್ಯೋತ್ಸವ ಆಚರಣೆಯಲ್ಲಿ ಆರೋಹಣ ಮಾಡಿದ್ದ ರಾಷ್ಟ್ರ ಧ್ವಜವನ್ನು ಸಂಜೆ ಆರು ಗಂಟೆಗೆ ಕೆಳಗಿಳಿಸುವಾಗ ಘಟನೆ ನಡೆದಿದೆ. ಗುರುವಾರ ಸಂಜೆ 6 ಗಂಟೆಗೆ ಮುಳ್ಳೇರಿಯದ ಇಗರ್ಜಿಗೆ ತಲುಪಿ ರಾಷ್ಟ್ರ ಧ್ವಜವನ್ನು…

Read More

ಓಂ ಶ್ರೀ ಗೆಳೆಯರ ಬಳಗ (ರಿ) ನಾಯಿಲ ನರಿಕೊಂಬು ಇದರ ಆಶ್ರಯದಲ್ಲಿ 78ನೇ ಸ್ವಾತಂತ್ರ್ಯಆಚರಣೆ

ಪಾಣೆಮಂಗಳೂರು: ಓಂ ಶ್ರೀ ಗೆಳೆಯರ ಬಳಗ (ರಿ) ನಾಯಿಲ ನರಿಕೊಂಬು ಇದರ ಆಶ್ರಯದಲ್ಲಿ 78ನೇ ಸ್ವಾತಂತ್ರ್ಯ ಆಚರಣೆಯನ್ನು ಆಚರಿಸಲಾಯಿತು. ಮುಖ್ಯಅತಿಥಿಯಾಗಿ ವಕೀಲರು ಆಗಿರುವ ಶ್ರೀಮತಿ ಕಾವ್ಯಶ್ರೀ ಉಮೇಶ್ ನೆಲ್ಲಿಗುಡ್ಡೆ ಧ್ವಜ ರೋಹಣಗೈದು ಸ್ವಾತಂತ್ರ್ಯ ಆಚರಣೆಯ ಮಹತ್ವವನ್ನು ತಿಳಿಸಿದರು. ಶ್ರೀಯುತ ಉಮೇಶ್ ನೆಲ್ಲಿಗುಡ್ಡೆ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನರಿ ಕೊಂಬು ಬಿ ಒಕ್ಕೂಟದ ಸೇವಾ ಪ್ರತಿನಿಧಿ ಶ್ರೀಮತಿ ಪ್ರತಿಭಾ ಉಪಸ್ಥಿತರಿದ್ದರು. ಸಂಘದ ಅಧ್ಯಕ್ಷರಾದ ಕಿರಣ್ ಅಟ್ಲುರು ರವರು ಕಾರ್ಯಕ್ರಮವನ್ನು ನಿರೂಪಿಸಿದರು ಮತ್ತು ಸ್ವಾಗತಿಸಿ ಧನ್ಯವಾದ ವಿತ್ತರು. ನಂತರ ಸಂಘದಲ್ಲಿ…

Read More

78ರ ಸ್ವಾತಂತ್ಯ್ರೋತ್ಸಕ್ಕೆ ನಮೋ ಸುದೀರ್ಘ ಭಾಷಣದ ಮುಖ್ಯ ಅಂಶಗಳು

ನವದೆಹಲಿ : ದೇಶಾಧ್ಯಂತ ಸ್ವಾತಂತ್ಯ್ರೋತ್ಸವದ ಸಂಭ್ರಮ. ಕೆಂಪುಕೋಟೆಯಲ್ಲಿ ತ್ರಿವರ್ಣ ಧ್ವಜ ಬಾನೆತ್ತರಕ್ಕೆ ಹಾರುವುದರ ಜೊತೆಗೆ ದೇಶೋದ್ಘಾರದ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣ ದೇಶಭಕ್ತರನ್ನು ಎಚ್ಚರಿಸಿದಂತಿತ್ತು. ದೇಶದ ಪ್ರಜೆಗಳಿಗಾಗಿ ನಮೋ ಹೇಳಿದ ಮಾತುಗಳ ಸಂಕ್ಷಿಪ್ತ ವಿವರ ಇಲ್ಲಿದೆ. 1. ನೆರೆಯ ಬಾಂಗ್ಲಾ ದೇಶದ ಸುರಕ್ಷತೆಗೆ ಆಧ್ಯತೆ:ಸದ್ಯ ಬಾಂಗ್ಲಾದೇಶದ ಪರಿಸ್ಥಿತಿಯ ಕುರಿತು ಎಲ್ಲರಿಗೂ ತಿಳಿದಿದೆ. ಇದೇ ವಿಚಾರವಾಗಿ ಕಾಳಜಿ ವಹಿಸಿರುವ ನಮೋ , ಬಾಂಗ್ಲಾದೇಶದ ಪರಿಸ್ಥಿತಿ ಶೀಘ್ರದಲ್ಲೇ ಸುಧಾರಿಸುತ್ತದೆ ಎಂದು ಆಶಿಸಿದ್ದಾರೆ. ಬಾಂಗ್ಲಾದೇಶದ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಭಾರತ…

Read More

ಮಂಜೇಶ್ವರ: ಯುವಕ ಸಂಘ (ರಿ.) ಬಡಾಜೆ ವತಿಯಿಂದ 78ನೇ ಸ್ವಾತಂತ್ರೋತ್ಸವ ದಿನಾಚರಣೆ

ಮಂಜೇಶ್ವರ: ಯುವಕ ಸಂಘ (ರಿ.) ಬಡಾಜೆ ಮಂಜೇಶ್ವರ ಇದರ 78 ನೇ ಸ್ವಾತಂತ್ರೋತ್ಸವದ ಕಾರ್ಯಕ್ರಮದ ಅಂಗವಾಗಿ ಬೆಳಗ್ಗೆ 9.00 ಗಂಟೆಗೆ ಧ್ವಜಾರೋಹಣ ಕಾರ್ಯಕ್ರಮ ನೆರವೇರಿತು. ಹೊಸಂಗಡಿ Cure & Care ಆಸ್ಪತ್ರೆಯ ಡೈರೆಕ್ಟರ್ & ಡಾಕ್ಟರ್ ಶ್ರೀಯುತ ವೆಂಕಟ್ ರೆಡ್ಡಿ ಯವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಇದೇ ವೇಳೆ ಎಸ್ಎಸ್ ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಪ್ರತಿಭಾನ್ವಿತ ಮಕ್ಕಳಿಗೆ ಸನ್ಮಾನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಇದೇ ವೇಳೆ ಸ್ಫೂರ್ತಿ ವಿದ್ಯಾನಿಕೇತನ ಶಾಲೆಯ…

Read More

ಮಂಗಳೂರು: ಅಕ್ರಮವಾಗಿ ಮೊಬೈಲ್ ಸಿಮ್ ಸಂಗ್ರಹಿಸಿ ಸೈಬರ್ ವಂಚಕರಿಗೆ ನೀಡುತ್ತಿದ್ದ ಇಬ್ಬರು ಅರೆಸ್ಟ್

ಮಂಗಳೂರು: ಪರಿಚಿತರನ್ನು ಪುಸಲಾಯಿಸಿ ಅವರ ಹೆಸರಲ್ಲಿ ಮೊಬೈಲ್ ಸಿಮ್ ಗಳನ್ನು ಪಡೆದು ಅದನ್ನು ವಿದೇಶದಲ್ಲಿರುವ ಸೈಬರ್ ವಂಚಕರಿಗೆ ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಬೆಳ್ತಂಗಡಿಯ ನಿವಾಸಿಗಳಾದ ಬಿಬಿಎ ವಿದ್ಯಾರ್ಥಿ ಶಹಾದ್ ಮೊಹಮ್ಮದ್ ಸಮೀರ್‌ (21), ಮೊಹಮ್ಮದ್ ಅಜೀಮ್‌ (19) ಎಂದು ಗುರುತಿಸಲಾಗಿದೆ. ಬಂಧಿತರಿಂದ 86 ಸಿಮ್ ಕಾರ್ಡ್‌ಗಳು ಸಹಿತ ₹ 5.49 ಲಕ್ಷ ಮೌಲ್ಯದ ಸ್ವತ್ತುಗಳನ್ನು ಮಂಗಳವಾರ ವಶಪಡಿಸಿಕೊಂಡಿದ್ದಾರೆ. ಆರೋಪಿಗಳು ಮರೋಳಿ ಗ್ರಾಮದ ಬಿಕರ್ನಕಟ್ಟೆ ಬಜ್ಜೋಡಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದು ಯುವಕರು…

Read More

ಸುಳ್ಯ: ದೇವರಕಾನ ಶಾಲೆಯಲ್ಲಿ ಅದ್ದೂರಿ 78ನೇ ಸ್ವಾತಂತ್ರ್ಯ ದಿನಾಚರಣೆ

ಸುಳ್ಯ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ದೇವರ ಕಾನದಲ್ಲಿ 78ನೇ ವರ್ಷದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮವು ಅದ್ದೂರಿಯಿಂದ ನಡೆಯಿತು. ಮುಂಜಾನೆ 8:30ಕ್ಕೆ ಸ್ವಾತಂತ್ರ್ಯ ಹೋರಾಟಗಾರರಿಗೆ ಜೈಕಾರ ಹಾಕುತ್ತಾ ಜಾಥಾ ಕಾರ್ಯಕ್ರಮ ನಡೆಯಿತು.9:30ಕ್ಕೆ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಾಗಿರುವ ಗುರುಪ್ರಸಾದ್ ಎಡಮಲೆಯವರು ಧ್ವಜಾರೋಹಣಗೈದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷರಾಗಿರುವ ಗುರುಪ್ರಸಾದ್ ಎಡಮಲೆ, ಉಪಾಧ್ಯಕ್ಷೆ ಮಮತಾ ಎಡಮಲೆ, ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿರುವ ಸತೀಶ್ ಎಡಮಲೆ,…

Read More

ಎ.ಐ.ಸಿ ಸಿ ಮಣ್ಣಗುಡ್ಡ ಮಂಗಳೂರು ಇದರ ವತಿಯಿಂದ 78 ನೇ ಸ್ವಾತಂತ್ರ್ಯ ದಿನಾಚರಣೆ

ಎ.ಐ.ಸಿ.ಸಿ. ಮಾನವ ಹಕ್ಕು ದಕ್ಷಿಣ ಕನ್ನಡ ಜಿಲ್ಲಾ ವತಿಯಿಂದ 3ನೇ ವರ್ಷದ ಸ್ವಾತಂತ್ರ ದಿನಾಚರಣೆಯ ಕಾರ್ಯಕ್ರಮ ಮಂಗಳೂರಿನ ಬಳ್ಳಾಲಭಾಗ್ ಕಚೇರಿಯಲ್ಲಿ ನಡೆಯಿತು. ಎಲ್ಲಾ ಪದಾಧಿಕಾರಿಗಳು ಹಾಗೂ ಸದಸ್ಯರ ಸಮ್ಮುಖದಲ್ಲಿ ಮುಖ್ಯ ಆತಿಥಿಗಳಾದ ಶ್ರೀ ಜಿನರಾಜ್ ಸಾಲಿಯಾನ್ ರವರು ದ್ವಜಾರೋಹಣ ಮಾಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೇ ನೀಡಿದರು. ವೇದಿಕೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಾನವ ಹಕ್ಕು ಇದರ ಅಧ್ಯಕ್ಷರಾದ ಶ್ರೀ ಪ್ರಸಾದ್ ಹಾಗೂ ದಾಸ್ ಚಾರಿಟೇಬಲ್ ಟ್ರಸ್ಟಿನ ಅಧ್ಯಕ್ಷರಾದ ಲಯನ್ ಅನಿಲ್ ದಾಸ್ ಹಾಗೂ ಮುಖ್ಯ ಆತಿಥಿಗಳಾದ ಶ್ರೀ…

Read More