admin

ಜೂನ್ ತಿಂಗಳ `ಗೃಹಲಕ್ಷ್ಮಿ’ ಹಣ ಬಾರದಿದ್ದರೆ ಈ ಕೆಲಸ ಮಾಡಿ

ಗೃಹಲಕ್ಷ್ಮಿ ಯೋಜನೆಯಡಿ ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾಗಿದ್ದು, ಮಹಿಳೆಯರ ಸಬಲೀಕರಣಕ್ಕಾಗಿ ಸರ್ಕಾರದಿಂದ ಸಹಾಯಧನ ನೀಡಲಾಗುತ್ತದೆ. ಈ ಯೋಜನೆಯಡಿ ಕುಟುಂಬದ ಯಜಮಾನಿ ಮಹಿಳೆಗೆ ಮಾಹೆಯಾನ ರೂ. 2 ಸಾವಿರ ಗಳನ್ನು ಅವರ ಆಧಾರ್ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ನೇರ ನಗದು ಜಮೆ ಮಾಡಲಾಗುತ್ತಿದೆ. ಪ್ರಸ್ತುತ ಅರ್ಜಿ ಸಲ್ಲಿಸಿರುವ ಫಲಾನುಭವಿಗಳಿಗೆ ನಗದು ಜಮೆಯಾಗದೇ ಐಟಿ ಮತ್ತು ಜಿಎಸ್‍ಟಿ ಪಾವತಿದಾರರೆಂದು ಅರ್ಜಿ ಸ್ಥಿತಿಯಲ್ಲಿ ಕಂಡು ಬಂದಿರುತ್ತದೆ. ಐಟಿ ಮತ್ತು ಜಿಎಸ್‍ಟಿ ಪಾವತಿದಾರರು ಹೊರತುಪಡಿಸಿ ಐಟಿ ಮತ್ತು ಜಿಎಸ್‍ಟಿಯಡಿ ಸೇರ್ಪಡೆಯಾಗದ ಫಲಾನುಭವಿಗಳಿಗೆ…

Read More

ಶಿರೂರು ಬಳಿಯ ಗುಡ್ಡ ಕುಸಿತ ಕೇಸ್: ಗಂಗಾವಳಿ ನದಿಯಲ್ಲಿ ಲಾರಿಯ ಹಲವು ಬಿಡಿಭಾಗಗಳು ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಗ್ರಾಮದ ಬಳಿ ಗುಡ್ಡ ಕುಸಿದು ಇಂದಿಗೆ 29 ದಿನಗಳು ಕಳೆದಿವೆ. ಗುಡ್ಡ ಕುಸಿತದಲ್ಲಿ 11 ಜನರು ಮೃತಪಟ್ಟಿದ್ದಾರೆ. ಈ ಗುಡ್ಡ ಕುಸಿತದಲ್ಲಿ ಕೇರಳ ಮೂಲದ ಲಾರಿ ಚಾಲಕ ಅರ್ಜುನ್​ ನಾಪತ್ತೆಯಾಗಿದ್ದಾರೆ. ಗಂಗಾವಳಿ ನದಿಯಲ್ಲಿ ಕೊಚ್ಚಿ ಹೋಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಇದೀಗ ಕೊಚ್ಚಿ ಹೋದವರ ಬಗ್ಗೆ ಮಹತ್ವದ ಅಪ್ಡೇಟ್​​ ಸಿಕ್ಕಿದೆ. ಹೌದು ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಣ್ಮರೆಯಾಗಿದ್ದ ಮೂವರಿಗಾಗಿ…

Read More

ಧಾರ್ಮಿಕ ಸ್ವಾತಂತ್ರ್ಯ ಎಂದರೆ ಮತಾಂತರವಲ್ಲ: ಹೈಕೋರ್ಟ್ ಮಹತ್ವದ ತೀರ್ಪು

ಧಾರ್ಮಿಕ ಸ್ವಾತಂತ್ರ್ಯ ಎಂದರೆ ಮತಾಂತರಗೊಳ್ಳುವ ಹಕ್ಕು ಇದೆ ಎಂದರ್ಥವಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ. ಈ ಹೇಳಿಕೆಯನ್ನು ಒಂದು ಪ್ರಮುಖ ವಿಷಯವಾಗಿ ನೋಡಲಾಗುತ್ತಿದೆ. ಪ್ರತಿಯೊಬ್ಬರಿಗೂ ಧಾರ್ಮಿಕ ಸ್ವಾತಂತ್ರ್ಯದ ಹಕ್ಕಿದೆ, ಆದರೆ ಬಲವಂತದ ಮತಾಂತರವು ಯಾವುದೇ ರೀತಿಯಲ್ಲಿ ಮಾನ್ಯವಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಉತ್ತರ ಪ್ರದೇಶದ ಬದೌನ್ ಜಿಲ್ಲೆಯ ಕೊಟ್ವಾಲಿ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದ್ದು, ಅಜೀಮ್ ಎಂಬ ವ್ಯಕ್ತಿ ಹಿಂದೂ ಮಹಿಳೆಯನ್ನು ಇಸ್ಲಾಂಗೆ ಮತಾಂತರಗೊಳ್ಳುವಂತೆ ಒತ್ತಾಯಿಸಿದ್ದಾನೆ ಮತ್ತು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈ ಘಟನೆಯ…

Read More

ಪುತ್ತೂರು: ಲಾಡ್ಜ್ ಗೆ ಪೊಲೀಸ್ ರ ದಾಳಿ – ಮುಸ್ಲಿಂ ಯುವಕನ ಜೊತೆ ಹಿಂದೂ ಯುವತಿ ಪತ್ತೆ

ಪುತ್ತೂರು: ಲಾಡ್ಜ್ ಒಂದರಲ್ಲಿ ಯಾವುದೇ ಮಾಹಿತಿ ನೀಡದೆ ರೂಂ ಪಡೆದಿದ್ದ ಮುಸ್ಲಿಂ ಯುವಕ, ಹಿಂದೂ ಯುವತಿಯನ್ನು ಪೊಲೀಸರು ಮನೆಗೆ ಕಳುಹಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ನೆಹರೂನಗರದಲ್ಲಿ ಕಾರ್ಯಾಚರಿಸುತ್ತಿರುವ ಕೀರ್ತನಾ ಲಾಡ್ಜ್ ನಲ್ಲಿ ಜೋಡಿ ರೂಂ ಪಡೆದಿದ್ದಾರೆ ಎಂದು ಪೋಲೀಸರಿಗೆ ಹಿಂದೂಪರ ಸಂಘಟನೆ ಕಾರ್ಯಕರ್ತರು ಮಾಹಿತಿ ನೀಡಿದ್ದಾರೆ. ಈ ವೇಳೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಲಾಡ್ಜ್ ನ ದಾಖಲೆ ಪುಸ್ತಕ ಪರಿಶೀಲಿಸಿದ್ದಾರೆ. ಆದರೆ ಜೋಡಿಯ ದಾಖಲೆ ಪಡೆಯದೆ ಲಾಡ್ಜ್ ಸಿಬ್ಬಂದಿಗಳು ರೂಂ ನೀಡಿದ್ದಾರೆ. ಬಳಿಕ ಪೊಲೀಸರು ಅನ್ಯಕೋಮಿನ ಜೋಡಿಯನ್ನು…

Read More

ಉಚಿತವಾಗಿ ‘ಆಧಾರ್ ಕಾರ್ಡ್’ ಅಪ್ ಡೇಟ್ ಮಾಡಲು ಸೆ.14 ಕೊನೆಯ ದಿನ

ನವದೆಹಲಿ : ಭಾರತೀಯ ಜನರ ಪ್ರಮುಖ ದಾಖಲೆಗಳಲ್ಲಿ ಆಧಾರ್ ಅನ್ನು ಸೇರಿಸಲಾಗಿದೆ. ಇದು ಬಹುತೇಕ ಎಲ್ಲಾ ಸರ್ಕಾರಿ ಯೋಜನೆಗಳಲ್ಲಿ ಉಪಯುಕ್ತವಾಗಿದೆ. ಆಧಾರ್ ಕಾರ್ಡ್ ಇಲ್ಲದೆ, ನೀವು ಅನೇಕ ಸರ್ಕಾರಿ ಯೋಜನೆಗಳ ಲಾಭವನ್ನು ಪಡೆಯಲು ಸಾಧ್ಯವಾಗುವುದಿಲ್ಲ. ನಿಮ್ಮ ಆಧಾರ್ ಕಾರ್ಡ್ ಅನ್ನು ಕಾಲಕಾಲಕ್ಕೆ ನವೀಕರಿಸುವುದು ಸಹ ಅವಶ್ಯಕ. ನೀವು ಹತ್ತು ವರ್ಷಗಳಿಂದ ನಿಮ್ಮ ಆಧಾರ್ ಕಾರ್ಡ್ ಅನ್ನು ನವೀಕರಿಸದಿದ್ದರೆ, ಇದು ನಿಮ್ಮ ಕೆಲಸದ ಸುದ್ದಿಯಾಗಿದೆ. ಈಗ ಈ ಜನರು ತಮ್ಮ ಆಧಾರ್ ಕಾರ್ಡ್ ಅನ್ನು ಉಚಿತವಾಗಿ ನವೀಕರಿಸಲು ಅವಕಾಶವಿದೆ….

Read More

ಫೇಸ್ ಬುಕ್ ಗೆಳತಿಯನ್ನು ನಂಬಿ 11 ಲಕ್ಷ ರೂ. ಕಳೆದುಕೊಂಡ ಕಾರ್ಕಳದ ಮಹಿಳೆ

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮಹಿಳೆಯೊಬ್ಬರು ಫೇಸ್‌ ಬುಕ್‌ ಮೂಲಕ ಪರಿಚಯವಾದ ಮಹಿಳೆಯನ್ನು ನಂಬಿ 11 ಲಕ್ಷಕ್ಕೂ ಹೆಚ್ಚು ಹಣ ಪಂಗನಾಮ ಹಾಕಿಸಿಕೊಂಡಿದ್ದಾರೆ. ಕಾರ್ಕಳ ತಾಲೂಕಿನ ಮಿಯ್ಯಾರಿನ ಕುಂಟಿಬೈಲಿನ 38 ವರ್ಷದ ನಿವಾಸಿಯೊಬ್ಬರಿಗೆ ಫೇಸ್‌ ಬುಕ್‌ ಮೂಲಕ ಮಾರ್ಕ್‌ ಸೀಮಾ ಎಂಬವರು ಪರಿಚಯವಾಗಿದ್ದರು. ಗೆಳೆತನದಲ್ಲಿ ಅವರು ತಮ್ಮ ವಿಳಾಸವನ್ನು ನೀಡಿದ್ದರು. ಅವರ ನಂಬರಿನಿಂದ ಸುನಿತಾ ಕುಮಾರಿ ಎಂಬವರು ಮಹಿಳೆಗೆ ಲಂಡನ್ ನಿಂದ ಚಿನ್ನದ ವಸ್ತು ಮತ್ತು ಪೌಂಡು ಹಣ ಪಾರ್ಸೆಲ್ ಬಂದಿದೆ ಎಂದು ಹೇಳಿ ಅದರ ಕಸ್ಟಮ್…

Read More

ಬಾಂಗ್ಲಾದಲ್ಲಿ ನಡೆಯುತ್ತಿರುವ ಹಿಂದೂಗಳ ಮೇಲಿನ ದೌರ್ಜನ್ಯ ಕಳವಳಕಾರಿ- ಪೇಜಾವರ ಶ್ರೀ

ಉಡುಪಿ: ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಕಂಡು ತುಂಬ ಖೇದವಾಗಿದೆ. ಇಡೀ ಹಿಂದೂ ಸಮಾಜ ಜಾಗೃತವಾಗಬೇಕು ಮತ್ತು ವಿಶ್ವಶಾಂತಿಗಾಗಿ ದೇವರಿಗೆ ಮೊರೆಯಿಡುವುದಷ್ಟೆ ನಮ್ಮ ಮುಂದಿರುವ ಆಯ್ಕೆ ಎಂದು ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಹೇಳಿದರು. ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯಕ್ಕೆ ವಿಡಿಯೋ ಮೂಲಕ ಕಳವಳ ವ್ಯಕ್ತಪಡಿಸಿರುವ ಶ್ರೀಪಾದರು, ನಮ್ಮ ದೇಶದಲ್ಲಿರುವ ಎಲ್ಲ ಹಿಂದೂಗಳು ಕೂಡ ಅತ್ಯಂತ ಕಳವಳ ಪಡಬೇಕಾದ ಸ್ಥಿತಿಯಿದು. ಇವತ್ತು ಪಕ್ಕದ ದೇಶದಲ್ಲಿ ಅಷ್ಟೆ ಅಲ್ಲದೆ ಸ್ವದೇಶದಲ್ಲೂ ಹಿಂದೂಗಳ ಮೇಲಿನ ಆಕ್ರಮಣ…

Read More

ಮೂಡುಬಿದಿರೆ : ಕಾಲೇಜು ತರಗತಿಗೆ ಅಕ್ರಮ ಪ್ರವೇಶಿಸಿ ವಿದ್ಯಾರ್ಥಿನಿಗೆ ಕತ್ತರಿಯಿಂದ ಚುಚ್ಚಿ ಹಲ್ಲೆ – ಆರೋಪಿ ಅರೆಸ್ಟ್

ಮೂಡುಬಿದಿರೆ: ದ‌.ಕ.ಜಿಲ್ಲೆಯ ಮೂಡುಬಿದಿರೆಯ ಖಾಸಗಿ ಕಾಲೇಜೊಂದರ ತರಗತಿಗೆ ಅಕ್ರಮವಾಗಿ ಪ್ರವೇಶಿಸಿರುವ ಯುವಕನೊಬ್ಬ ವಿದ್ಯಾರ್ಥಿನಿಯೊಬ್ಬಳ ಮುಖಕ್ಕೆ ಕತ್ತರಿಯಿಂದ ಚುಚ್ಚಿ ಹಲ್ಲೆಗೈದ ಘಟನೆ ಸೋಮವಾರ ನಡೆದಿದೆ. ಆರೋಪಿಯನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ. ತುಮಕೂರು ಮೂಲದ ಮಂಜುನಾಥ ಬಂಧಿತ ಆರೋಪಿ. ಆರೋಪಿ ಮತ್ತು ಕತ್ತರಿಯಿಂದ ಇರಿತಕ್ಕೊಳಗಾದ ವಿದ್ಯಾರ್ಥಿನಿ ತುಮಕೂರಿನವರಾಗಿದ್ದರು. ಇಬ್ಬರೂ ಆತ್ಮೀಯರಾಗಿದ್ದರು. ಆದರೆ ಇತ್ತೀಚೆಗೆ ವಿದ್ಯಾರ್ಥಿನಿಯು ಆರೋಪಿ ಮಂಜುನಾಥನ ಮೊಬೈಲ್ ಕರೆಗಳನ್ನು ನಿರ್ಲಕ್ಷಿಸುತ್ತಾ ಬಂದಿದ್ದಳು ಎಂದು ಹೇಳಲಾಗುತ್ತಿದೆ. ಇದರಿಂದ ಹತಾಶೆಗೊಂಡ ಆರೋಪಿ ಮಂಜುನಾಥ ವಿದ್ಯಾರ್ಥಿನಿಯನ್ನು ಹುಡುಕಿಕೊಂಡು ಬಂದಿದ್ದನು. ಅದರಂತೆ ಸೋಮವಾರ ಕಾಲೇಜಿಗೆ…

Read More

ಕೇಂದ್ರ ಸರ್ಕಾರದಿಂದ ದೇಶದ ‘ಟಾಪ್ 10 ಕಾಲೇಜು’ಗಳ ಲಿಸ್ಟ್ ರಿಲೀಸ್ ; ‘ಹಿಂದೂ ಕಾಲೇಜಿ’ಗೆ ಅಗ್ರಸ್ಥಾನ

 ಭಾರತವು ತನ್ನ ಹಲವಾರು ಶಿಕ್ಷಣ ಸಂಸ್ಥೆಗಳು ಮತ್ತು ಶೈಕ್ಷಣಿಕ ಯಶಸ್ಸಿನ ದೀರ್ಘ ಸಂಪ್ರದಾಯದಿಂದಾಗಿ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವನ್ನ ಮುಂದುವರಿಸಲು ಉತ್ತಮ ಸ್ಥಳವಾಗಿದೆ. ಆದರೆ ಬುದ್ಧಿವಂತಿಕೆಯಿಂದ ಆಯ್ಕೆ ಮಾಡುವುದು ಅಭ್ಯರ್ಥಿಗಳಿಗೆ ಕಷ್ಟವಾಗುತ್ತದೆ ಏಕೆಂದರೆ ವ್ಯಾಪಕ ಶ್ರೇಣಿಯ ಕೋರ್ಸ್’ಗಳು, ಅತ್ಯಾಧುನಿಕ ಸೌಲಭ್ಯಗಳು ಮತ್ತು ಇತರ ಪ್ರಯೋಜನಗಳನ್ನು ನೀಡುವ ಅನೇಕ ಗೌರವಾನ್ವಿತ ವಿಶ್ವವಿದ್ಯಾಲಯಗಳು ಮತ್ತು ಸಂಸ್ಥೆಗಳು ಇವೆ. ಪೂರ್ವನಿರ್ಧರಿತ ಮಾನದಂಡಗಳ ಆಧಾರದ ಮೇಲೆ ರಾಷ್ಟ್ರದ ಉನ್ನತ ಶಿಕ್ಷಣ ಸಂಸ್ಥೆಗಳ ಕಲಿಕೆಯ ಗುಣಮಟ್ಟವನ್ನ ನಿರ್ಣಯಿಸಲು ರಚಿಸಲಾದ ಭಾರತ ಸರ್ಕಾರದ ರಾಷ್ಟ್ರೀಯ ಸಾಂಸ್ಥಿಕ ಶ್ರೇಯಾಂಕ…

Read More

ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪುನರಾರಂಭ

ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯು ಕುಂಟುತ್ತಾ ಸಾಗಿದ್ದು ಇದರಿಂದ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಯನ್ನು ಮನಗೊಂಡು ಇದನ್ನು ಬಗೆಹರಿಸಲು ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮತ್ತು ಶಾಸಕರಾದ ಹರೀಶ್ ಪೂಂಜ ಅವರು ಜೊತೆಸೇರಿ ಎರಡು ತಿಂಗಳುಗಳಿಂದ ನಿರಂತರ ಸಭೆಗಳನ್ನು ನಡೆಸಿದ್ದರು. ಇದಕ್ಕೆ ಫಲಶೃತಿ ದೊರಕಿದ್ದು ಇದೀಗ ರಾಷ್ಟ್ರೀಯ ಹೆದ್ದಾರಿಯ ಬ್ಯಾಕ್ ಟು ಬ್ಯಾಕ್ ಮಾದರಿಯ ಅಡಿಯಲ್ಲಿ ಕಾಮಗಾರಿಯನ್ನು ಗುತ್ತಿಗೆದಾರರಾದ ಡಿ.ಪಿ ಜೈನ್‌ ಅವರಿಂದ ಮುಗ್ರೋಡಿ ಕಂಸ್ಟ್ರಕ್ಷನೆಗೆ ವಹಿಸಲಾಗಿದೆ‌. ನೂತನ ಗುತ್ತಿಗೆದಾರರು ಇಂದು ಬೆಳ್ತಂಗಡಿಯ ಕಾಶಿಬೆಟ್ಟುವಿನಲ್ಲಿ ಕಾಮಗಾರಿ…

Read More