admin

ಪರಶುರಾಮ ಥೀಂ ಪಾರ್ಕ್ ವಿವಾದ : ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ಮಧ್ಯೆ ಹೊಡೆದಾಟ..!

ಉಡುಪಿ : ಜಿಲ್ಲೆಯಾದ್ಯಂತ ಭಾರೀ ಸದ್ದು ಮಾಡಿರುವ ಪರಶುರಾಮ ಥೀಂ ಪಾರ್ಕ್ ವಿವಾದದ ವಿಚಾರವಾಗಿ ಬಿಜೆಪಿ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಜಟಾಪಟಿ ಮುಂದುವರೆದಿದೆ.  ಈ ಸಂಬಂಧ ನಡೆದ ಜಗಳದಲ್ಲಿ ಮೂವರು ಬಿಜೆಪಿ ಕಾರ್ಯಕರ್ತರು ಗಾಯಗೊಂಡಿದ್ದು ಈ ಕುರಿತು ದೂರು ದಾಖಲಾಗಿದೆ. ಕಾಂಗ್ರೆಸ್ ವಿರುದ್ಧ ಸೋಶಿಯಲ್ ಮೀಡಿಯಾದಲ್ಲಿ ಬಿಜೆಪಿ ಕಾರ್ಯಕರ್ತರು ಪೋಸ್ಟ್ ಮಾಡಿದ್ದರು. ಈ ವಿಚಾರವಾಗಿ ದೊಂಡೇರಂಗಡಿ ಬಿಜೆಪಿ ಕಾರ್ಯಕರ್ತರಾದ ಉದಯ್‌ ನಾಯ್ಕ್‌, ನಿತ್ಯಾನಂದ ಕುಲಾಲ್‌, ರೂಪೇಶ್‌ ಕುಮಾರ್‌ ಎಂಬವರ ಮೇಲೆ ಹಲ್ಲೆ ನಡೆದಿದೆ. ಕಾಂಗ್ರೆಸ್ ನಾಯಕ ಉದಯಕುಮಾರ್…

Read More

ನಾಗರ ಪಂಚಮಿಯ ಹಬ್ಬಕ್ಕೆ ವಿಶೇಷವಾಗಿ ಈ ತಿನಿಸು: “ಅರಿಶಿಣ ಎಲೆ ಕಡುಬು” ಮಾಡುವ ವಿಧಾನ

ನಾಗರ ಪಂಚಮಿಯ ಹಬ್ಬಕ್ಕೆ ವಿಶೇಷವಾಗಿ ಈ ತಿನಿಸು ಮಾಡುತ್ತಾರೆ, ಕರಾವಳಿ ಭಾಗದಲ್ಲಿ ಅರಿಶಿಣದ ಎಲೆಯಿಂದ ಸಿಹಿ ಕಡುಬು ತಯಾರಿಸುತ್ತಾರೆ. ಅರಿಶಿಣ ಎಲೆ ಕಡುಬು ಅಥವಾ ಗಟ್ಟಿ ಎಂದು ಕರೆಯಲ್ಪಡುವ ಈ ತಿನಿಸನ್ನು ಒಮ್ಮೆ ಸವಿದರೆ ಸಾಕು, ಅದರ ರುಚಿ ಹಾಗೂ ಪರಿಮಳವನ್ನು ಮರೆಯಲು ಸಾಧ್ಯವೇ ಇಲ್ಲ.ಇದು ಬಾಯಿಗೆ ರುಚಿಕಾರಿ,ಆರೋಗ್ಯಕ್ಕೂ ಹಿತಕಾರಿ. ಬೇಕಾಗುವ ಸಾಮಗ್ರಿಗಳು:ಅರಿಶಿಣ ಎಲೆಗಳುಕುಚ್ಚಲಕ್ಕಿತಿಂಡಿ ಅಕ್ಕಿತೆಂಗಿನ ತುರಿಬೆಲ್ಲದ ಪುಡಿಉಪ್ಪುನೀರು ಮಾಡುವ ವಿಧಾನ:-ಅರಿಶಿಣ ಎಲೆ ಕಡುಬಿಗೆ ಕುಚ್ಚಲಕ್ಕಿ ಮತ್ತು ತಿಂಡಿ ಅಕ್ಕಿಯನ್ನು 2:1 ಅನುಪಾತದಲ್ಲಿ ಬಳಸಬೇಕು. ಕುಚ್ಚಲಕ್ಕಿ ಹಾಗೂ…

Read More

ವಕ್ಫ್‌ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಮಂಡನೆ

ನವದೆಹಲಿ: ವಕ್ಫ್ ಬೋರ್ಡ್‌ ಅಧಿಕಾರವನ್ನು ಕಡಿಮೆ ಮಾಡುವ ವಕ್ಫ್ (ತಿದ್ದುಪಡಿ) ಮಸೂದೆ 2024 ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಮಂಡಿಸಿದೆ. ಕೇಂದ್ರ ಸಂಸದೀಯ ವ್ಯವಹಾರ ಮತ್ತು ಅಲ್ಪಸಂಖ್ಯಾತ ಖಾತೆಯ ಸಚಿವ ಕಿರಣ್‌ ರಿಜುಜು ಅವರು ಮಸೂದೆಯನ್ನು ಮಂಡಿಸಿದರು. ಈ ಮಸೂದೆ ಈಗ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ.ಪ್ರಸ್ತುತ ವಕ್ಫ್ ಬೋರ್ಡ್ ಹೊಂದಿರುವ ಏಕಪಕ್ಷೀಯ ಅಧಿಕಾರಗಳನ್ನು ಕಡಿಮೆ ಮಾಡಲು ಕೇಂದ್ರ ಉದ್ದೇಶಿಸಿದೆ. ಹಿಂದಿನ ಕಾಯ್ದೆಯಲ್ಲಿ ವಕ್ಫ್‌ ಬೋರ್ಡ್‌ಗೆ ಹೆಚ್ಚಿನ ಅಧಿಕಾರ ನೀಡಿತ್ತು. ಇದರ ಪ್ರಕಾರ ಭೂಮಿಯನ್ನು ವಕ್ಫ್ ಬೋರ್ಡ್‌ನಿಂದ ಹಿಂಪಡೆಯುವುದು ಅಸಾಧ್ಯವಾಗಿತ್ತು. ಇದಾದ…

Read More

BREAKING : ಪಶ್ಚಿಮ ಬಂಗಾಳದಲ್ಲಿ ಬಾಗಲಕೋಟೆ ಮೂಲದ ಯೋಧ ಹುತಾತ್ಮ

ಪಶ್ಚಿಮ ಬಂಗಾಳದಲ್ಲಿ ಬಾಗಲಕೋಟೆ ಮೂಲದ ಯೋಧ ಒಬ್ಬರು ಹುತಾತ್ಮರಾಗಿದ್ದಾರೆ. ಬಿಎಸ್‌ಎಫ್ ಯೋಧ ಉಮೇಶ ದಬಗಲ್ (33) ಎನ್ನುವವರು ಹುತಾತ್ಮರಾಗಿದ್ದಾರೆ ಎಂದು ತಿಳಿದುಬಂದಿದೆ. ಗುಂಡು ತಗುಲಿ ಉಮೇಶ್ ದಬಗಲ್ ಹುತಾತ್ಮ ರಾಗಿರುವ ಶಂಕೆ ಇದೀಗ ವ್ಯಕ್ತವಾಗುತ್ತಿದೆ.ಉಮೇಶ್ ದಬಗಲ್ ಗುಳೇದಗುಡ್ಡ ತಾಲೂಕಿನ ಕಟಗೇರಿ ಗ್ರಾಮದ ನಿವಾಸಿ ಎಂದು ಹೇಳಲಾಗುತ್ತಿದೆ.ಕಳೆದ 13 ವರ್ಷದಿಂದ ಬಿಎಸ್‌ಎಫ್ ನಲ್ಲಿ ಉಮೇಶ್ ಸೇವೆ ಸಲ್ಲಿಸುತ್ತಿದ್ದರು. ನಾಳೆ ಉಮೇಶ್ ಅವರ ಪಾರ್ಥಿವ ಶರೀರ ಸ್ವಗ್ರಾಮಕ್ಕೆ ತಲುಪಲಿದೆ.

Read More

ಬಂಟ್ವಾಳ: ಎಸ್ಸೆಸೆಲ್ಸಿ ವಿದ್ಯಾರ್ಥಿ ಆತ್ಮಹತ್ಯೆ!

ಬಂಟ್ವಾಳ: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯೋರ್ವ ಮನೆಯ ಬಚ್ಚಲು ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಜನಪದವುನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಬೆಂಜನಪದವು ಕರಾವಳಿ ಸೈಟ್ ನಿವಾಸಿ ಉದಯ ಆಚಾರ್ಯ ಅವರ ಮಗ ಭವಿಷ್ಯ ಆಚಾರ್ಯ (15) ಎಂದು ಗುರುತಿಸಲಾಗಿದೆ. ಬಡಕಬೈಲಿನ ಖಾಸಗಿ ಶಾಲೆಯ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯಾಗಿದ್ದ ಈತ ಕಲಿಕೆ ವಿಚಾರದಲ್ಲಿ ಆತ್ಮಹತ್ಯೆ ‌ಮಾಡಿಕೊಂಡಿರಬಹುದು ಎಂಬುದನ್ನು ಮನೆಯವರು ಶಂಕಿಸಿದ್ದಾರೆ. ಅಗಸ್ಟ್ 7 ರಂದು ಬುಧವಾರ ರಾತ್ರಿ ಸುಮಾರು 7.30 ಗಂಟೆಗೆ ಸ್ನಾನ ಮಾಡಲೆಂದು ಬಚ್ಚಲು ಕೋಣೆಗೆ ತೆರಳಿದ…

Read More

ಅನರ್ಹತೆ ಬಳಿಕ ಕುಸ್ತಿಗೆ ವಿದಾಯ ಘೋಷಿಸಿದ ವಿನೇಶ್​ ಫೋಗಟ್: ಎಕ್ಸ್​​​​​​ ಪೋಸ್ಟ್​ ಮೂಲಕ ಭಾವನಾತ್ಮಕ ಸಂದೇಶ

ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇನ್ನೇನು ಚಿನ್ನದ ಪದಕದ ಬೇಟೆಗೆ ಸಿದ್ಧರಾಗಿದ್ದ ಭಾರತದ ಗಟ್ಟಿಗಿತ್ತಿ ವಿನೇಶ್ ಫೋಗಾಟ್‌ ರವರನ್ನು ಪಂದ್ಯದಿಂದ ಅನರ್ಹಗೊಳಿಸಿದ್ದರು. ಈ ಬೆನ್ನಲ್ಲೇ ವಿನೇಶ್ ಸಾಮಾಜಿಕ ಜಾಲತಾಣದಲ್ಲಿ ಭಾವುಕ ಪೋಸ್ಟ್‌ ಹಾಕುವುದರ ಮೂಲಕ ಕುಸ್ತಿ ಪಂದ್ಯಕ್ಕೆ ವಿದಾಯ ಹೇಳಿದ್ದಾರೆ.  ಸಾಮಾಜಿಕ ಮಾಧ್ಯಮ ಎಕ್ಸ್‌ ಖಾತೆಯಲ್ಲಿ ಭಾವುಕ ಸಂದೇಶ ಪ್ರಕಟಿಸಿರುವ ಅವರು ‘ಅಮ್ಮಾ ನನ್ನ ವಿರುದ್ದ ಕುಸ್ತಿ ಗೆದ್ದಿದೆ, ನಾನು ಸೋಲನ್ನು ಅನುಭವಿಸಿದ್ದೇನೆ” ಎಂದಿದ್ದಾರೆ.ಇದೇ ಮೊದಲ ಬಾರಿಗೆ ಒಲಿಂಪಿಕ್ಸ್‌ ನಲ್ಲಿ ಭಾರತದ ಮಹಿಳೆ ಕುಸ್ತಿ ಪಂದ್ಯದಲ್ಲಿ ಫೈನಲ್‌ಗೆ ತಲುಪಿರುವುದು. ಆದರೆ…

Read More

ಮಂಗಳೂರು: ತಾಯಿ ಹಾಗೂ ಇಬ್ಬರು ಮಕ್ಕಳು ನಾಪತ್ತೆ..!

ಮಂಗಳೂರು ನಗರದ ತೊಕ್ಕೊಟ್ಟು ಅಪಾರ್ಟ್‌ಮೆಂಟ್‌ವೊಂದರಲ್ಲಿ ವಾಸಿಸುತ್ತಿದ್ದ ತಾಯಿ ಹಾಗೂ ಮಕ್ಕಳಿಬ್ಬರು ನಾಪತ್ತೆಯಾದ ಘಟನೆ ನಡೆದಿದೆ. ಸ್ಕೈಹೈಟ್ಸ್‌ ಅಪಾರ್ಟ್‌ಮೆಂಟ್‌ ನಿವಾಸಿ ಮಂಜುಳಾ (31) ಮತ್ತು ಅವರ ಮಕ್ಕಳಾದ ಕೃಷ್ಣ (8) ಹಾಗೂ ಖುಷಿ (6) ನಾಪತ್ತೆಯಾದವರು. ಮಂಜುಳಾ ಅವರು ಜು. 29ರಂದು ಬೆಳಗ್ಗೆ 10 ಗಂಟೆಗೆ ಫ್ಲ್ಯಾಟ್‌ನಿಂದ ಹೊರಟಿದ್ದು, ಮಕ್ಕಳನ್ನು ಶಾಲೆಯಿಂದ ಕರೆದುಕೊಂಡು ಹೋಗಿದ್ದಾರೆ. ಅವರ ಪತಿ ದ್ಯಾಮಣ್ಣ ಮೇಟಿ ಅವರು ಆ. 3ರಂದು ಉಳ್ಳಾಲ ಪೊಲೀಸ್‌ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಅವರು ಪತ್ತೆಯಾದಲ್ಲಿ ಉಳ್ಳಾಲ…

Read More

ಮಂಗಳೂರು: 13 ವರ್ಷದ ಬಾಲಕಿ ಕೊಲೆ ಪ್ರಕರಣ- ಅತ್ಯಾಚಾರಗೈದು ಕೊಲೆ, ಆರೋಪಿಯ ಬಂಧನ..!

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಪಣಂಬೂರು ಜೋಕಟ್ಟೆಯಲ್ಲಿ ಮಂಗಳವಾರ  ನಡೆದಿದ್ದ ಬೆಳಗಾವಿ ಮೂಲದ ಬಾಲಕಿಯ ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದು,ಪ್ರಕರಣ ಹೊಸ ತಿರುವು ಪಡೆದಿದೆ. ಬೆಳಗಾವಿ ಜಿಲ್ಲೆಯ ಪ್ರಸ್ತುತ ಜೋಕಟ್ಟೆಯಲ್ಲಿ ವಾಸವಿದ್ದ ಫಕೀರಪ್ಪ ಬಂಧಿತ ಆರೋಪಿಯಾಗಿದ್ದು ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಬಳಿಕ ಆಕೆಯನ್ನು ಕತ್ತು ಹಿಸುಕಿ ಕೊಲೆಗೈದ ಬಗ್ಗೆ ಪೊಲೀಸ್ ತನಿಖೆಯಲ್ಲಿ ಬಾಯ್ಬಿಟ್ಟಿದ್ದಾನೆ.   ಜೋಕಟ್ಟೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಹನುಮಂತಪ್ಪ ಎಂಬವರ ತಮ್ಮನ ಮಗಳು ಈಕೆಯಾಗಿದ್ದು  ಜಿಲ್ಲೆಯ ಹಾಸ್ಟೆಲ್‌ ವೊಂದರಲ್ಲಿ ಕಲಿಯುತ್ತಿದ್ದ ಈಕೆ ಬಿದ್ದು…

Read More

ಹೆಜಮಾಡಿ ಟೋಲ್ ನಲ್ಲಿ ದಾಂಧಲೆ : ಬಂಟ್ವಾಳದ ಯುವಕ ಅರೆಸ್ಟ್

ಪಡುಬಿದ್ರಿ: ಹೆಜಮಾಡಿಯ ಕೆ. ಆರ್ ಟೋಲ್ ಗೇಟ್‌ನಲ್ಲಿ ಮಂಗಳವಾರ ಬೆಳಿಗ್ಗೆ ದಾoಧಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಕಾರು ಚಾಲಕನನ್ನು ಪಡುಬಿದ್ರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯನ್ನು ದಕ್ಷಣ ಕನ್ನಡ ಜಿಲ್ಲೆ ಬಂಟ್ವಾಳ ಮೂಲದ ಸಲೀಂ ಎಂದು ಗುರುತಿಸಲಾಗಿದೆ. ಬೆಳಗ್ಗೆ 9.20ರ ವೇಳೆ ಬಂಟ್ವಾಳದಿಂದ ಸ್ನೇಹಿತರ ಜತೆ ಉಡುಪಿಗೆ ತೆರಳುತ್ತಿದ್ದ ಸಲೀಂ ಎಂಬಾತ ಹೆಜಮಾಡಿಯ ಟೋಲ್ ತಪ್ಪಿಸಲು ಮುಖ್ಯ ಟೋಲ್ ಬದಲು ಒಳ ರಸ್ತೆಯ ಟೋಲ್ನಲ್ಲಿ ತನ್ನ ವಾಹನ ತಂದ ಸಂದರ್ಭ ಟೋಲ್ ಸಿಬ್ಬಂದಿ ಅವನನ್ನು ತಡೆದಿದ್ದರು….

Read More

ಉಡುಪಿ ನಗರದಲ್ಲಿ ಹಾಡಹಗಲೇ ಕಾರಿನಲ್ಲಿ ರಾಸಲೀಲೆ..! ಸಾರ್ವಜನಿಕರಿಂದ ತರಾಟೆ

ಉಡುಪಿ: ನಗರದ ಕವಿ ಮುದ್ದಣ ಮಾರ್ಗದಿಂದ ಚಿತ್ತರಂಜನ್ ಸರ್ಕಲ್ ಸಂಪರ್ಕಿಸುವ ರಸ್ತೆಯ ಸರಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ಎದುರು ಕಾರಿನಲ್ಲೇ ಜೋಡಿಯೊಂದು ಕಾಮದಾಟ ನಡೆಸಿ ಸಿಕ್ಕಿಬಿದ್ದಿದೆ. ಕಾರು ಪಾರ್ಕ್ ಮಾಡಿ ಹಾಡ ಹಗಲಿನಲ್ಲೇ ಅನೈತಿಕ ಚಟುವಟಿಕೆ ನಡೆಸುತ್ತಿದ್ದ ಯುವ ಜೋಡಿ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದು ಬಳಿಕ ಪರಾರಿಯಾಗಿದೆ. ಕೆಂಬಣ್ಣದ ಕಾರಿನ ಗಾಜಿಗೆ ಒಳಭಾಗದಿಂದ ಕಪ್ಪು ಬಣ್ಣದ ಪರದೆ ಹಾಕಿಕೊಂಡಿದ್ದು ಕಾರಿನ ಅಲುಗಾಟ ಕಂಡು ಸಂಶಯಗೊಂಡ ಸ್ಥಳೀಯರು ಇಣುಕಿ ನೋಡಿದ್ದಾರೆ. ಈ ವೇಳೆ ಜೋಡಿಯ ಅನೈತಿಕ ಕೃತ್ಯ…

Read More