admin

ಕೇಂದ್ರ ಸರ್ಕಾರದಿಂದ `ಮಹಿಳೆಯರಿಗೆ’ ಗುಡ್ ನ್ಯೂಸ್ : ಉಚಿತ ಹೊಲಿಗೆ ಯಂತ್ರದ ಜೊತೆಗೆ 1 ಲಕ್ಷ ರೂ. ಸಾಲ

ಕೇಂದ್ರದಲ್ಲಿ ಮೂರನೇ ಬಾರಿಗೆ ಎನ್ಡಿಎ ಸರ್ಕಾರ ರಚನೆಯಾಗುವುದರೊಂದಿಗೆ, ನಡೆಯುತ್ತಿರುವ ಅನೇಕ ಯೋಜನೆಗಳನ್ನು ಯಥಾಸ್ಥಿತಿಯಲ್ಲಿ ಮುಂದುವರಿಸಲಾಗಿದೆ. ಈ ಅನುಕ್ರಮದಲ್ಲಿ, ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರಗಳನ್ನು ನೀಡುವ ಯೋಜನೆ ನಡೆಯುತ್ತಿದೆ. ಅನೇಕರು ಈಗಾಗಲೇ ಇದರಿಂದ ಪ್ರಯೋಜನ ಪಡೆದಿದ್ದಾರೆ. ಇಂದಿಗೂ, ಯಾವುದೇ ಮಹಿಳೆ ಅಥವಾ ಪುರುಷ ಈ ಯೋಜನೆಯ ಲಾಭವನ್ನು ಪಡೆಯಬಹುದು. ಕೇಂದ್ರ ಸರ್ಕಾರವು ವಿವಿಧ ರೀತಿಯ ವೃತ್ತಿಗಳಿಗೆ ಸಂಬಂಧಿಸಿದ ವಿಶೇಷ ಉಪಕರಣಗಳು ಮತ್ತು ಯಂತ್ರಗಳನ್ನು ಒದಗಿಸುತ್ತದೆ. ಹೊಲಿಗೆ ಯಂತ್ರವೂ ಈ ರೀತಿಯ ಯಂತ್ರವಾಗಿದೆ. ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ವಿಶ್ವಕರ್ಮ…

Read More

ಗನ್ ತೋರಿಸಿ ವಿಧವೆಯಿಂದ ಡಿಕೆಶಿ ನಿವೇಶನ ವಶ: HD ಕುಮಾರಸ್ವಾಮಿ ಗಂಭೀರ ಆರೋಪ

ಮೈಸೂರು ಚಲೋ ಪಾದಯಾತ್ರೆಯ ಮೂರನೇ ದಿನ ಚನ್ನಪಟ್ಟಣದಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು. ಕಂಡ ಕಂಡವರ ಆಸ್ತಿಗಳನ್ನು ಸರಣಿಯಾಗಿ ಕಬ್ಜಾ ಮಾಡುತ್ತಿರುವ ವ್ಯಕ್ತಿಯೊಬ್ಬ ನನ್ನ ಆಸ್ತಿ, ನನ್ನ ತಂದೆಯವರ ಆಸ್ತಿಯ ಬಗ್ಗೆ ಮಾತನಾಡುತ್ತಿದ್ದಾರೆ. ಆದರೆ, ಅವರು ಮಾಡುತ್ತಿರುವ ಅನಾಚಾರ, ಅಕ್ರಮಗಳ ಬಗ್ಗೆ ನೊಣವಿನಕೆರೆ ಅಜ್ಜಯ್ಯನ ಮುಂದೆ ಬಂದು ಪ್ರಮಾಣ ಮಾಡಲಿ ಎಂದು ಮತ್ತೆ ಸವಾಲು ಹಾಕಿದರು. ಸದಾಶಿವನಗರದಲ್ಲಿ ಐವರು ವಿಧವಾ ತಾಯಂದಿರ ಬಳಿ ನಿವೇಶನಗಳ…

Read More

ಬಂಟ್ವಾಳ: ಅನ್ಯಕೋಮಿನ ಯುವಕನೋರ್ವ ವಿವಾಹಿತ ಮಹಿಳೆಯನ್ನು ಅಡ್ಡಗಟ್ಟಿ ನನಗೆ ನೀನು ಬೇಕು ಎಂದು ಕಿರುಕುಳ- ದೂರು ದಾಖಲು

ಬಂಟ್ವಾಳ: ಅನ್ಯಕೋಮಿನ ಯುವಕನೋರ್ವ ಮಹಿಳೆಯ ಜೊತೆ ಅನುಚಿತವಾಗಿ ವರ್ತಿಸಿದ ಘಟನೆ ಬಂಟ್ವಾಳ ತಾಲೂಕಿನ ಕರಿಯಂಗಳದಲ್ಲಿ ನಡೆದಿದೆ. ಅನ್ಯ ಕೋಮಿನ ಯುವಕನೋರ್ವ ವಿವಾಹಿತ ಮಹಿಳೆಯನ್ನು ಅಡ್ಡಗಟ್ಟಿ  ನನಗೆ ನೀನು ಬೇಕು, ನಿನ್ನನ್ನು ಅನುಭವಿಸದೆ ಬಿಡುವುದಿಲ್ಲ ಎಂಬುವುದಾಗಿ ಹೇಳಿ,  ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಮಹಿಳೆ ದೂರನ್ನು ನೀಡಿದ್ದಾಳೆ. ಆರೋಪಿಯನ್ನು ಕರಿಯಂಗಳ ನಿವಾಸಿ ತಸ್ಸೀಫ್ ಎಂದು ಗುರುತಿಸಲಾಗಿದೆ. ಜತೆಗೆ ಈ ಹಿಂದೆಯೂ ಕಿಟಕಿಯಲ್ಲಿ ಇಣುಕಿ ಕಿರುಕುಳ ನೀಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ವಿವಾಹಿತ ಮಹಿಳೆಯೊಬ್ಬರು ತನ್ನ ಪುತ್ರಿಯನ್ನು ಟ್ಯೂಷನ್ ಗೆ…

Read More

ಮಂಗಳೂರು: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿಸಿ ಮಹಿಳೆಗೆ ಒಂದೇ ತಿಂಗಳಲ್ಲಿ 1ಕೋಟಿಗೂ ಅಧಿಕ ಹಣ ವಂಚನೆ

ಮಂಗಳೂರು: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವಂತೆ ಅಪರಿಚಿತ ವ್ಯಕ್ತಿಯ ಮಾತನ್ನು ನಂಬಿ ಮಹಿಳೆಯೊಬ್ಬರು 1.65 ಕೋಟಿ ರೂ. ಹಣ ವಂಚನೆಗೊಳಗಾದ ಬಗ್ಗೆ ಮಂಗಳೂರು ಸೈಬ‌ರ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮಹಿಳೆ ಷೇರು ಮಾರುಕಟ್ಟೆಯ ಬಗ್ಗೆ ತಿಳಿದುಕೊಳ್ಳಲು ಇನ್ ಸ್ಟಾಗ್ರಾಂನಲ್ಲಿ ಸರ್ಚ್ ಮಾಡಿದ್ದರು. ಈ ವೇಳೆ, ಅಂಕಿತ್ ಪಟೇಲ್ ಎಂಬ ಹೆಸರಿನ ಅಪರಿಚಿತ ಅವರ ವಾಟ್ಸ್ಆ್ಯಪ್‌ನಲ್ಲಿ ಚ್ಯಾಟ್ ಮಾಡಿ, ಷೇರ್ ಮಾರ್ಕೆಟ್ ಗ್ರೂಪಿಗೆ ಜಾಯಿನ್ ಮಾಡಿಸಿದ್ದ. ಬಳಿಕ Fidelity pearl of south Asia ಎಂಬ ಷೇರುಮಾರುಕಟ್ಟೆ ವಾಟ್ಸ್ಆ್ಯಪ್…

Read More

ಉಡುಪಿ: ಅಸ್ವಸ್ಥಗೊಂಡ ಯುವತಿಯನ್ನು ಬಸ್ ನಲ್ಲೇ ಕರೆದೊಯ್ದು ಆಸ್ಪತ್ರೆಗೆ ಸೇರಿಸಿದ ಚಾಲಕ- ನಿರ್ವಾಹಕ

ಉಡುಪಿ: ಖಾಸಗಿ ಬಸ್ಸೊಂದರಲ್ಲಿ ಅಸ್ವಸ್ಥಗೊಂಡ ಯುವತಿಯೊಬ್ಬಳನ್ನು ಬಸ್ ಸಿಬ್ಬಂದಿ ಬಸ್ಸಿನಲ್ಲೇ ಆಸ್ಪತ್ರೆಗೆ ಕರೆದೊಯ್ದು ಸಕಾಲಿಕವಾಗಿ ಚಿಕಿತ್ಸೆಗೆ ನೆರವಾದ ಘಟನೆ ಉಡುಪಿಯಲ್ಲಿ ನಡೆದಿದೆ. ಶಿರ್ವ -ಉಡುಪಿ ನಡುವೆ ಸಂಚರಿಸುವ ನವೀನ್ ಎಂಬ ಖಾಸಗಿ ಬಸ್ಸಿನಲ್ಲಿ ಈ ಘಟನೆ ನಡೆದಿದೆ. ಇಂದು ಬೆಳಗ್ಗೆ ಶಿರ್ವದಿಂದ ಉಡುಪಿಗೆ ಬರುತ್ತಿದ್ದ ಬಸ್ ಉಡುಪಿಯ ಹಳೆ ತಾಲೂಕು ಕಚೇರಿ ಬಳಿಕ ತಲುಪಿದಾಗ ಪ್ರಯಾಣಿಕ ಯುವತಿಯೊಬ್ಬಳು ಅಸ್ವಸ್ಥಗೊಂಡಿದ್ದಾಳೆ. ಬಸ್ಸಿನಲ್ಲೇ ವಾಂತಿ ಮಾಡಿದ ಯುವತಿ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದಳು. ವಿಷಯ ಅರಿವಿಗೆ ಬರುತ್ತಲೇ ಕಾರ್ಯಪ್ರವೃತ್ತರಾದ ಬಸ್‌ ಚಾಲಕ…

Read More

ವಕ್ಫ್‌ ಬೋರ್ಡ್ ಅಧಿಕಾರಕ್ಕೆ ಬ್ರೇಕ್ ಹಾಕಲು ಸಿದ್ಧತೆ : ಸದ್ಯದಲ್ಲೇ ತಿದ್ದುಪಡಿ ಮಸೂದೆ ಮಂಡನೆ..!

ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರವು ಯಾವುದೇ ಆಸ್ತಿಯನ್ನು ‘ವಕ್ಫ್ ಆಸ್ತಿ’ ಎಂದು ಮಾಡುವ ವಕ್ಫ್ ಮಂಡಳಿಯ ಅಧಿಕಾರಕ್ಕೆ ಕಡಿವಾಣ ಹಾಕಲು ಬಯಸಿದೆ ಎನ್ನಲಾಗಿದ್ದು, ಹೀಗಾಗಿ ಶುಕ್ರವಾರ ಸಂಜೆ ಸಚಿವ ಸಂಪುಟವು ವಕ್ಫ್ ಕಾಯಿದೆಯಲ್ಲಿ ಸುಮಾರು 40 ತಿದ್ದುಪಡಿಗಳನ್ನು ಅಂಗೀಕರಿಸಿದೆ ಎಂದು ತಿಳಿದು ಬಂದಿದೆ. ಪ್ರಸ್ತಾವಿತ ತಿದ್ದುಪಡಿಗಳ ಪ್ರಕಾರ, ವಕ್ಫ್ ಬೋರ್ಡ್ ಮಾಡಿದ ಆಸ್ತಿಗಳ ಮೇಲಿನ ಹಕ್ಕುಗಳ ಕಡ್ಡಾಯ ಪರಿಶೀಲನೆಯನ್ನು ಪ್ರಸ್ತಾಪಿಸಲಾಗುವುದು. ಅದೇ ರೀತಿ, ವಕ್ಫ್ ಮಂಡಳಿಯ ವಿವಾದಿತ ಆಸ್ತಿಗಳಿಗೆ ಕಡ್ಡಾಯ ಪರಿಶೀಲನೆಯನ್ನು ಪ್ರಸ್ತಾಪಿಸಲಾಗಿದೆ. ವಕ್ಫ್…

Read More

ಪ್ರಯಾಣಿಕರ ಗಮನಕ್ಕೆ: ಮಂಗಳೂರು-ಯಶವಂತಪುರ ಎಕ್ಸ್ ಪ್ರೆಸ್ ರೈಲಿನ ಸಮಯದಲ್ಲಿ ಬದಲಾವಣೆ

ಮಂಗಳೂರು: ಮಂಗಳೂರು ಜಂಕ್ಷನ್​ನಿಂದ ಬೆಂಗಳೂರಿನ ಯಶವಂತಪುರದವರೆಗೆ ವಾರಕ್ಕೆ ಮೂರು ಬಾರಿ ಸಂಚರಿಸುವ ಎಕ್ಸ್​ಪ್ರೆಸ್ ರೈಲಿನ ಸಮಯದಲ್ಲಿ ಬದಲಾವಣೆಯಾಗಿದೆ. ಈ ಬಗ್ಗೆ ನೈಋತ್ಯ ರೈಲ್ವೆ ಮಾಹಿತಿ ನೀಡಿದೆ. ಮಂಗಳೂರು ಜಂಕ್ಷನ್​ನಿಂದ ಬೆಂಗಳೂರಿನ ಯಶವಂತಪುರದವರೆಗೆ ಸಂಚರಿಸುವ ಎಕ್ಸ್​ಪ್ರೆಸ್ (ರೈಲು ಸಂಖ್ಯೆ 16576) ರೈಲಿನ ವೇಳಾಪಟ್ಟಿಯನ್ನು ನವೆಂಬರ್ 1 ರಿಂದ ಜಾರಿಗೆ ಬರುವಂತೆ ಪರಿಷ್ಕರಣೆ ಮಾಡಲಾಗುತ್ತದೆ. ರೈಲು ಸಂಖ್ಯೆ- 16576 ಮಂಗಳೂರು ಜಂಕ್ಷನ್​ನಿಂದ ಬೆಳಿಗ್ಗೆ 11.30 ರ ಬದಲು ಬೆಳಿಗ್ಗೆ 7 ಗಂಟೆಗೆ ಹೊರಟು, ಅದೇ ದಿನ ರಾತ್ರಿ 8:45 ರ ಬದಲು…

Read More

ಭಾರಿ ಮಳೆ, ನಿಲ್ಲದ ಗುಡ್ಡ ಕುಸಿತ : ಶೃಂಗೇರಿ ಶಾರದಾ ದೇಗುಲ ಸುತ್ತಮುತ್ತ ನಿಷೇಧಾಜ್ಞೆ ಜಾರಿ..!

ಪುರಾಣ ಪ್ರಸಿದ್ದ ಶೃಂಗೇರಿ ಶಾರದಾ ದೇವಾಲಯದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೆರೆ ಆತಂಕ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಅಂದರೆ ಶೃಂಗೇರಿ ದೇವಾಲಯದ ಸುತ್ತಮುತ್ತದ ಗಾಂಧಿ ಮೈದಾನ, ಪ್ಯಾರಲ್ ‌ರೋಡ್, ಪಾರ್ಕಿಂಗ್ ಸ್ಥಳ ಸೇರಿದಂತೆ ನದಿ ತೀರದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಶೃಂಗೇರಿ ದೇವಾಲಯ ಸುತ್ತಮುತ್ತಲಿನ ಪ್ರದೇಶ ಎರಡು ಭಾರಿ ಮುಳುಗಡೆಯಾಗಿತ್ತು. ಇದೀಗ ಮತ್ತೆ ಮಳೆ ಹೆಚ್ಚಾದಂತೆ ಏಕಾಏಕಿ ತುಂಗಾ ನದಿ ಒಳ ಹರಿವಿನಲ್ಲಿ ಹೆಚ್ಚಳವಾಗುವ ಸಾಧ್ಯತೆ ಇದೆ. ಹೀಗಾಗಿ ತುಂಗಾ ನದಿಯಿಂದ…

Read More

ಮನೆಯಲ್ಲೇ ಮಾಡಿ ಮಕ್ಕಳಿಗೆ ಇಷ್ಟವಾಗುವ ಬ್ರೆಡ್ ಪಿಜ್ಜಾ

ಪಿಜ್ಜಾ ಸಾಮಾನ್ಯವಾಗಿ ಎಲ್ಲರಿಗೂ ಅಚ್ಚುಮೆಚ್ಚು. ಮಕ್ಕಳಿಂದ ಹಿಡಿದು ಹಿರಿಯರವರೆಗೆ ಎಲ್ಲರೂ ಇಷ್ಟಪಟ್ಟು ತಿನ್ನುತ್ತಾರೆ. ಮಕ್ಕಳ ನೆಚ್ಚಿನ ಆಹಾರದಲ್ಲಿ ಇದು ಒಂದು. ಮನೆಯಲ್ಲಿಯೇ ಮಕ್ಕಳಿಗೆ ಬ್ರೆಡ್ ಪಿಜ್ಜಾ ಮಾಡಿಕೊಡಿ. ಇದನ್ನು ತಯಾರಿಸುವುದು ಬಹಳ ಸುಲಭ ಬ್ರೆಡ್ ಪಿಜ್ಜಾಗೆ ಬೇಕಾಗುವ ಸಾಮಗ್ರಿ : ಬ್ರೌನ್ ಬ್ರೆಡ್ 4 ಚೀಸ್ : 2 ಕ್ಯಾಪ್ಸಿಕಂ :1/2 ಕಪ್ ಸ್ವೀಟ್ ಕಾರ್ನ್ : 1/2 ಕಪ್ ಪಿಜ್ಜಾ ಸಾಸ್ : ½ ಕಪ್ ಬೆಣ್ಣೆ : 2 ಚಮಚ ಕರಿಮೆಣಸಿನ ಪುಡಿ :…

Read More

ಬ್ಯಾಂಕ್ ಗ್ರಾಹಕರೇ ಗಮನಿಸಿ : ಈ ನಕಲಿ ಬ್ಯಾಂಕ್ ಸಂದೇಶದ ಬಗ್ಗೆ ಇರಲಿ ಎಚ್ಚರ..!

ನವದೆಹಲಿ : ಪ್ರೆಸ್ ಇನ್ಫರ್ಮೇಷನ್ ಬ್ಯೂರೋ (ಪಿಐಬಿ) ಯ ಫ್ಯಾಕ್ಟ್ ಚೆಕ್ ಯುನಿಟ್ ಸಾಮಾಜಿಕ ಮಾಧ್ಯಮದಲ್ಲಿ ಮೋಸದ ಸಂದೇಶದ ಬಗ್ಗೆ ಎಸ್ಬಿಐ ಗ್ರಾಹಕರಿಗೆ ಎಚ್ಚರಿಕೆ ನೀಡಿದೆ. ಈ ಹಗರಣವು ಎಸ್ಬಿಐನಿಂದ ಬಂದಿದೆ ಎಂದು ಹೇಳಲಾದ ಸಂದೇಶವನ್ನು ಒಳಗೊಂಡಿದೆ, ರಿವಾರ್ಡ್ ಪಾಯಿಂಟ್ಗಳನ್ನು ರಿಡೀಮ್ ಮಾಡಲು ಎಪಿಕೆ ಫೈಲ್ ಅನ್ನು ಡೌನ್ಲೋಡ್ ಮಾಡಲು ಸ್ವೀಕರಿಸುವವರಿಗೆ ಸೂಚನೆ ನೀಡುತ್ತದೆ. ಈ ಸಂದೇಶ ನ್ಯಾಯಸಮ್ಮತವಲ್ಲ. ಎಸ್ಬಿಐ ಎಂದಿಗೂ ಎಸ್‌ಎಂಎಸ್ ಅಥವಾ ವಾಟ್ಸಾಪ್ ಮೂಲಕ ಲಿಂಕ್ಗಳು ಅಥವಾ ಎಪಿಕೆ ಫೈಲ್ಗಳನ್ನು ಕಳುಹಿಸುವುದಿಲ್ಲ. ಸಂಭಾವ್ಯ ಹಗರಣಗಳಿಂದ…

Read More