ತುಳುನಾಡಿನಲ್ಲಿ ಆಟಿ ಅಮವಾಸ್ಯೆ ಸಂಭ್ರಮ:‘ಪಾಲೆ ಕಷಾಯ’ ಸೇವಿಸೋದ್ರ ಹಿಂದಿದೆ ಔಷಧೀಯ ಸತ್ವ
ಆಟಿ ಅಮಾವಾಸ್ಯೆಯ ದಿನ ಕುಡಿಯುವ ಕಷಾಯವನ್ನು ಸಪ್ತಪರ್ಣಿ ಮರದ ತೊಗಟೆಯಿಂದ ತಯಾರಿಸಲಾಗುತ್ತದೆ. ಇದನ್ನು ಕರಾವಳಿ ಭಾಗದಲ್ಲಿ ಪಾಲೆಮರದ ಕಷಾಯ ಎಂದೂ ಕರೆಯುತ್ತಾರೆ. ಬಹಳ ಹಿಂದಿನ ಕಾಲದಿಂದಲೂ ನಡೆದು ಬಂದಿರುವ ಈ ಆಚರಣೆಯು ಆರೋಗ್ಯದ ದೃಷ್ಠಿಯಿಂದ ಬಹಳ ಒಳ್ಳೆಯದು. ಈ ಕಷಾಯವು ಸಾಕಷ್ಟು ಆಯುರ್ವೇದಿಕ್ ಗುಣಗಳನ್ನು ಹೊಂದಿದ್ದು. ಹಲವಾರು ಕಾಯಿಲೆಗಳನ್ನು ಗುಣಪಡಿಸಲು ಸಹಕಾರಿಯಾಗಿದೆ. ಈಗ ಮಳೆಗಾಲ, ಕರಾವಳಿಯ ಜಡಿಮಳೆಗೆ ನಾನಾ ಬಗೆಯ ಸೋಂಕುಗಳು ಬಾಧಿಸುವ ಅಪಾಯ ಹೆಚ್ಚು. ಇದನ್ನು ಮನಗಂಡ ನಮ್ಮ ಪೂರ್ವಿಕರು ವಿಶಿಷ್ಟ ಆಚರಣೆಯೊಂದನ್ನು ಚಾಲ್ತಿಗೆ ತಂದಿದ್ದರು….

