admin

ಬಂಟ್ವಾಳ: ಪೊಸಳ್ಳಿಯಲ್ಲಿ ಕುಲಾಲ ಕುಟುಂಬಗಳ ಸಮ್ಮಿಲನ ಸಂಭ್ರಮ

ಬಿ.ಸಿ.ರೋಡ್ : ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘ ಪೊಸಳ್ಳಿ ಇದರ ಆಶ್ರಯದಲ್ಲಿರುವ ಕುಲಾಲ ಸೇವಾದಳ ಮತ್ತು ಮಹಿಳಾ ಘಟಕದ ಸಹಯೋಗದೊಂದಿಗೆ ಕುಲಾಲ ಕುಟುಂಬಗಳ ಸಮ್ಮಿಲನ ಆಟಿ ತಿಂಗಳ ತಿನಸುಗಳ ಹಬ್ಬ ಕಾರ್ಯಕ್ರಮ ಆದಿತ್ಯವಾರ ಪೊಸಳ್ಳಿ ಕುಲಾಲ ಸಮುದಾಯ ಭವನದಲ್ಲಿ ನಡೆಯಿತು.ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ ಅಧ್ಯಕ್ಷ ಕೃಷ್ಣಪ್ಪ ಬಿ. ಸಮಾರಂಭವನ್ನು ಉದ್ಘಾಟಿಸಿ ಸಭಾಧ್ಯಕ್ಷತೆ ವಹಿಸಿದ್ದರು. ರೋಟರಿ ಕ್ಲಬ್ ಬಂಟ್ವಾಳ ಟೌನ್ ಇದರ ಪ್ರಧಾನ ಕಾರ್ಯದರ್ಶಿ ನಾರಾಯಣ ಸಿ. ಪೆರ್ನೆ ತುಳುನಾಡು ಮತ್ತು ಆಟಿತಿಂಗಳ ಮಹತ್ವದ…

Read More

ಗಮನಿಸಿ : ಉಚಿತವಾಗಿ ‘ಆಧಾರ್ ಕಾರ್ಡ್’ ಅಪ್ ಡೇಟ್ ಮಾಡಲು ಸೆ.14 ಕೊನೆಯ ದಿನ.!

ಭಾರತೀಯ ಜನರ ಪ್ರಮುಖ ದಾಖಲೆಗಳಲ್ಲಿ ಆಧಾರ್ ಅನ್ನು ಸೇರಿಸಲಾಗಿದೆ. ಇದು ಬಹುತೇಕ ಎಲ್ಲಾ ಸರ್ಕಾರಿ ಯೋಜನೆಗಳಲ್ಲಿ ಉಪಯುಕ್ತವಾಗಿದೆ. ಆಧಾರ್ ಕಾರ್ಡ್ ಇಲ್ಲದೆ, ನೀವು ಅನೇಕ ಸರ್ಕಾರಿ ಯೋಜನೆಗಳ ಲಾಭವನ್ನು ಪಡೆಯಲು ಸಾಧ್ಯವಾಗುವುದಿಲ್ಲ.ನಿಮ್ಮ ಆಧಾರ್ ಕಾರ್ಡ್ ಅನ್ನು ಕಾಲಕಾಲಕ್ಕೆ ನವೀಕರಿಸುವುದು ಸಹ ಅವಶ್ಯಕ. ನೀವು ಹತ್ತು ವರ್ಷಗಳಿಂದ ನಿಮ್ಮ ಆಧಾರ್ ಕಾರ್ಡ್ ಅನ್ನು ನವೀಕರಿಸದಿದ್ದರೆ, ಇದು ನಿಮ್ಮ ಕೆಲಸದ ಸುದ್ದಿಯಾಗಿದೆ. ಈಗ ಈ ಜನರು ತಮ್ಮ ಆಧಾರ್ ಕಾರ್ಡ್ ಅನ್ನು ಉಚಿತವಾಗಿ ನವೀಕರಿಸಲು ಅವಕಾಶವಿದೆ. ಸೆಪ್ಟೆಂಬರ್ 14, 2024…

Read More

ಮಂಗಳೂರು : ನೆರೆ, ಮಳೆ ಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಭೇಟಿ…!!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು,  ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಅಧಿಕಾರಿಗಳೊಂದಿಗೆ ಜಿಲ್ಲೆಯ ವಿವಿಧ ನೆರೆ ಪೀಡಿತ ಹಾಗೂ ಮಳೆಹಾನಿ ಪ್ರದೇಶಗಳಿಗೆ ಇಂದು ಬುಧವಾರ ಭೇಟಿ ನೀಡಿ ಪರಿಶೀಲಿಸಿದರು. ಪರಿಸ್ಥಿತಿಯನ್ನು ಖುದ್ದು ಪರಿಶೀಲಿಸಿದ ಜಿಲ್ಲಾಧಿಕಾರಿ ಸ್ಥಳೀಯ ಸಾರ್ವಜನಿಕರೊಂದಿಗೆ ಅಹವಾಲು ಆಲಿಸಿದರು. ನೆರೆ ಪೀಡಿತ ಪ್ರದೇಶಗಳಲ್ಲಿ ಹಾಗೂ ಸಂಭಾವ್ಯ ನೆರೆ ಪ್ರದೇಶಗಳಲ್ಲಿ ನಿರಂತರ ನಿಗಾ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ನೆರೆ ಪ್ರದೇಶಗಳ ನಿವಾಸಿಗಳ ಸ್ಥಳಾಂತರ ಮತ್ತು ಕಾಳಜಿ ಕೇಂದ್ರಗಳ ಸ್ಥಾಪನೆಯ ಬಗ್ಗೆ ಸ್ಥಳೀಯ ಅಧಿಕಾರಿಗಳಿಗೆ ಅವರು…

Read More

ದ.ಕ ಜಿಲ್ಲೆಯ ನಾಳೆ (ಆ.01) ಶಾಲೆ – ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ಭಾರಿ ಮಳೆಯ ಹಿನ್ನೆಲೆಯಲ್ಲಿ ದ.ಕ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ (ಆಗಸ್ಟ್ 1) ರಂದು ರಜೆ ಘೋಷಿಸಲಾಗಿದೆ. ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶಿಸಿದೆ.

Read More

ಮೂರು ತಿಂಗಳ ಹಿಂದೆ ನಾಪತ್ತೆಯಾದ ಮಹಿಳೆ ಗುಹೆಯಲ್ಲಿ ಪತ್ತೆ..! ಹಾವಿನ ರೀತಿ ವರ್ತನೆ

ಜಾರ್ಖಂಡ್ : 3 ತಿಂಗಳಿಂದ ಕಾಣೆಯಾಗಿದ್ದ ಬಾಲಕಿ ಗುಹೆಯಲ್ಲಿ ಡಿಢೀರ್‌ ಪ್ರತ್ಯಕ್ಷವಾಗಿ, ಹಾವಿನ ರೀತಿಯಲ್ಲಿ ವರ್ತಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಘಟನೆಯು ಜಾರ್ಖಂಡ್‍ನಲ್ಲಿ (jharkhand) ನಡೆದಿದೆ. ಕಳೆದ ಮೂರು ತಿಂಗಳಿನಿಂದ ಬಾಲಕಿ ಕಾಣೆಯಾಗಿದ್ದಳು. ಆದರೆ ಇತ್ತೀಚೆಗೆ ಆಕೆ ರಾಣಿದಿಹ್ ಗುಪ್ತಾ ಧಾಮ್ ಗುಹೆಯಲ್ಲಿ ಪತ್ತೆಯಾಗಿದ್ದಾಳೆ. ಆದರೆ ಅವಳು ಹಾವಿನಂತೆ ವರ್ತಿಸುತ್ತಿದ್ದಾಳೆ ಎನ್ನಲಾಗಿದೆ. ಆಕೆ ಹಾವಿನಂತೆ ವರ್ತಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ವಿಡಿಯೋದಲ್ಲಿ ಏನಿದೆ?ವಿಡಿಯೊದಲ್ಲಿರುವ ಹುಡುಗಿ ಗುಹೆಯ ನೆಲದ ಮೇಲೆ ಹಾವಿನಂತೆ ತೆವಳುತ್ತಾ ತನ್ನ…

Read More

ಮಂಗಳೂರು: ಅಪಾಯಕಾರಿ ಸ್ಥಳಗಳಲ್ಲಿ ರೀಲ್ಸ್ ಮಾಡಿದ್ರೆ FIR – ಜಿಲ್ಲಾಧಿಕಾರಿ ಎಚ್ಚರಿಕೆ

ಮಂಗಳೂರು: ಮಳೆಗಾಲದ ಸಂದರ್ಭ ಅಪಾಯಕಾರಿ ಪ್ರದೇಶಗಳಲ್ಲಿ ರೀಲ್ಸ್ ಮಾಡಿದರೆ ಅವರ ಮೇಲೆ ಎಫ್ಐಆರ್ ದಾಖಲಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈಮುಗಿಲನ್ ಎಚ್ಚರಿಕೆ ನೀಡಿದ್ದಾರೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿರುವ ಪ್ರವಾಸಿ ತಾಣ, ಬೀಚ್ ಗಳಲ್ಲಿ ಅಪಾಯಕಾರಿ ಬೋರ್ಡ್ ಆಳವಡಿಸಲಾಗಿದೆ. ಬೋರ್ಡ್ ಜೊತೆ ಕೆಲವು ಕಾನೂನುಗಳು ಅನ್ವಯವಾಗುತ್ತದೆ. ಇಂತಹ ಬೋರ್ಡ್ ಇರುವ ಪ್ರದೇಶಗಳಲ್ಲಿ ಕಾನೂನು ಮೀರಿ ರೀಲ್ಸ್ ಮಾಡಿದರೆ ಅವರ ಮೇಲೆ ಎಫ್ಐಆರ್ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಕಾಡಿನ ಮಧ್ಯೆ ಹಾಗು ಇತರ ಅಪಾಯಕಾರಿ ಪ್ರದೇಶಗಳಲ್ಲಿ ವಿಡಿಯೋ ಮಾಡುವುದು…

Read More

ಜೀವ, ವೈದ್ಯಕೀಯ ವಿಮಾ ಕಂತುಗಳ ಮೇಲಿನ 18% ಜಿಎಸ್‌ಟಿ ಹಿಂತೆಗೆದುಕೊಳ್ಳಿ: ಸೀತಾರಾಮನ್‌ಗೆ ಗಡ್ಕರಿ ಸಲಹೆ

ನವದೆಹಲಿ: ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರ ಬರೆದಿದ್ದು, ಜೀವ ಮತ್ತು ವೈದ್ಯಕೀಯ ವಿಮೆ ಮೇಲಿನ 18% ಜಿಎಸ್‌ಟಿಯನ್ನು ಹಿಂಪಡೆಯುವಂತೆ ಕೋರಿದ್ದಾರೆ. ನಾಗ್ಪುರ ವಿಭಾಗೀಯ ಜೀವ ವಿಮಾ ನಿಗಮದ ನೌಕರರ ಸಂಘವು ಎತ್ತಿರುವ ಸಮಸ್ಯೆಗಳಿಗೆ ಗಡ್ಕರಿ ಅವರು ಸೀತಾರಾಮನ್ ಅವರಿಗೆ ಪತ್ರ ಬರೆದಿದ್ದಾರೆ. “ಜೀವನ ಮತ್ತು ವೈದ್ಯಕೀಯ ವಿಮಾ ಪ್ರೀಮಿಯಂ ಮೇಲಿನ ಜಿಎಸ್‌ಟಿಯನ್ನು ಹಿಂಪಡೆಯುವ ಸಲಹೆಯನ್ನು ಆದ್ಯತೆಯ ಮೇರೆಗೆ ಪರಿಗಣಿಸಲು ನಿಮ್ಮನ್ನು ವಿನಂತಿಸುತ್ತಿರುವೆ. ಏಕೆಂದರೆ ಇದು ಹಿರಿಯ ನಾಗರಿಕರಿಗೆ…

Read More

BIG UPDATE : ಕೇರಳ ಭೂಕುಸಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 160ಕ್ಕೆ ಏರಿಕೆ : ಮನೆಯೊಳಗೆ ಸೋಫಾದ ಮೇಲೆ ಕುಳಿತಿದ್ದ ಮೂರು ಶವಗಳು ಪತ್ತೆ!

ವಯನಾಡ್: ವಯನಾಡಿನ ಮುಂಡಕ್ಕೈ ಮತ್ತು ಕಬ್ಬಿನ ಪ್ರದೇಶಗಳಲ್ಲಿ ಭೂಕುಸಿತದಿಂದ ಸಾವನ್ನಪ್ಪಿದವರ ಸಂಖ್ಯೆ ಹೆಚ್ಚುತ್ತಿದೆ. ಮುಂಡಕ್ಕೈ ಪ್ರದೇಶದಲ್ಲಿ ಇಂದು ಮುಂಜಾನೆ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು, ಇದು ರಕ್ಷಣಾ ಕಾರ್ಯಕರ್ತರಿಗೆ ನಿನ್ನೆ ತಲುಪಲು ಕಷ್ಟಕರವಾಗಿತ್ತು. ಇಲ್ಲಿಯವರೆಗೆ, 160 ಸಾವುಗಳು ಅಧಿಕೃತವಾಗಿ ದೃಢಪಟ್ಟಿವೆ. ಬೆಳಿಗ್ಗೆ ನಡೆಸಿದ ಶೋಧದಲ್ಲಿ ಇನ್ನೂ ಐದು ಶವಗಳು ಪತ್ತೆಯಾಗಿವೆ. ಮುಂಡಕ್ಕೈನ ಮನೆಯೊಂದರಲ್ಲಿ ಸೋಫಾದ ಮೇಲೆ ಕುಳಿತಿದ್ದ ಮೂರು ಶವಗಳು ಪತ್ತೆಯಾಗಿವೆ ಎಂದು ಸ್ವಯಂಸೇವಕರು ತಿಳಿಸಿದ್ದಾರೆ. ಮನೆ ಶಿಥಿಲಾವಸ್ಥೆಯಲ್ಲಿದ್ದ ಕಾರಣ ಶವಗಳನ್ನು ಹೊರತೆಗೆಯಲು ಸಾಧ್ಯವಾಗಲಿಲ್ಲ. ದೊಡ್ಡ ಕತ್ತರಿಸುವ ಯಂತ್ರಗಳು…

Read More

ಮಂಗಳೂರು: ಬಸ್ಸಿನಲ್ಲಿ ವಿದ್ಯಾರ್ಥಿಗೆ ಏಕಾಏಕಿ ಎದೆ ನೋವು- ಆಸ್ಪತ್ರೆಯ ಒಳಗೆ ಬಸ್ ನುಗ್ಗಿಸಿದ ಚಾಲಕ, ನಿರ್ವಾಹಕ..!

ಮಂಗಳೂರು: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿಗೆ ಏಕಾಏಕಿ ಎದೆ ನೋವು ಕಾಣಿಸಿಕೊಂಡಿದ್ದು, ಚಾಲಕ ಹಾಗು ನಿರ್ವಾಹಕ ಏನನ್ನೂ ಯೋಚಿಸದೆ ಬಸ್ಸನ್ನು ಆಂಬುಲೆನ್ಸ್ ಮಾದರಿಯಲ್ಲಿ ಚಲಾಯಿಸಿ ಸೂಕ್ತ ಸಮಯದಲ್ಲಿ ಆಸ್ಪತ್ರೆಗೆ ಸೇರಿಸಿ ಜೀವ ಉಳಿಸಿದ್ದಾರೆ. 13ಎಫ್ ರೂಟ್ ನಂಬರ್ ಕೃಷ್ಣ ಪ್ರಸಾದ್ ಬಸ್ಸು ಎಂದಿನಂತೆ ಕುಳೂರು ಮಾರ್ಗವಾಗಿ ಚಲಿಸುತಿತ್ತು. ಈ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿಗೆ ಹಠಾತ್ತನೆ ಎದೆ ನೋವು ಕಾಣಿಸಿಕೊಂಡಿದೆ. ಆಕೆಗೆ ಹೃದಯಾಘಾತವಾಗುವ ಲಕ್ಷಣಗಳು ಕಂಡುಬರುತ್ತಿದ್ದಂತೆ ಎಚ್ಚೆತ್ತುಕೊಂಡ ಬಸ್ಸಿನ ಚಾಲಕ ಗಜೇಂದ್ರ ಕುಂದರ್ ಹಾಗೂ ನಿರ್ವಾಹಕ ಮಹೇಶ್ ಪೂಜಾರಿ…

Read More

ನಾಯಿ ಮಾಂಸ ಮಾರಾಟ ಆರೋಪ ಪ್ರಕರಣ; ಪುನೀತ್ ಕೆರೆಹಳ್ಳಿಗೆ ಷರತ್ತುಬದ್ಧ ಜಾಮೀನು

ರಾಜಸ್ಥಾನದಿಂದ ಕಲಬೆರಕೆ ಮಾಂಸ ಸಾಗಾಟ ಆರೋಪ ಪ್ರಕರಣದಲ್ಲಿ ಬಂಧಿತರಾಗಿದ್ದ ರಾಷ್ಟ್ರ ರಕ್ಷಣಾ ಪಡೆ ಮುಖಂಡ ಪುನೀತ್ ಕೆರೆಹಳ್ಳಿಗೆ 5ನೇ ಎಸಿಎಂಎಂ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಪ್ರತಿ ತಿಂಗಳ ಮೊದಲ ಭಾನುವಾರದಂದು ಠಾಣೆಗೆ ಹಾಜರಾಗಿ ಸಹಿ ಮಾಡಬೇಕು, ವಿಚಾರಣೆ ಮುಗಿಯುವವರೆಗೂ ದೇಶಬಿಟ್ಟು ಹೋಗಬಾರದು, ಬಿಡುಗಡೆ ಬಳಿಕ ಸಾಕ್ಷಿಗಳ ಮೇಲೆ ಪ್ರಭಾವ ಬೀರಬಾರದು ಜೊತೆಗೆ ಮುಂದೆ ಇಂತಹದ್ದೇ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಬಾರದು ಎಂದು…

Read More