admin

ಉಡುಪಿಗೆ ಪ್ರಧಾನಿ ನರೇಂದ್ರ ಮೋದಿ: ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಿಸುವಂತೆ ಮನವಿ

ನವೆಂಬರ್ 28ರಂದು ಶ್ರೀ ಕೃಷ್ಣ ಮಠದಲ್ಲಿ ನಡೆಯಲಿರುವ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರು ಭಾಗವಹಿಸುತ್ತಿದ್ದಾರೆ. ಮೂರು ದಶಕಗಳ ಬಳಿಕ ಪ್ರಧಾನಿ ಮೋದಿ ಉಡುಪಿ ಜಿಲ್ಲೆಗೆ ಭೇಟಿ ನೀಡುತ್ತಿರುವ ಈ ಸಂದರ್ಭದಲ್ಲಿ ಸಾರ್ವತ್ರಿಕ ಸ್ಥಳೀಯ ರಜೆ ಘೋಷಿಸುವಂತೆ ಡಿಸಿಗೆ ಶಾಸಕ ಯಶಪಾಲ್ ಸುವರ್ಣ ಮನವಿ ಮಾಡಿದ್ದಾರೆ.

Read More

ಬಂಟ್ವಾಳ: ಕೆ–ಸೆಟ್ ಪರೀಕ್ಷೆಯಲ್ಲಿ ಭಾರ್ಗವಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣ

ಬಂಟ್ವಾಳ : ಕೆ–ಸೆಟ್ (ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ) 2025ರಲ್ಲಿ ಭಾರ್ಗವಿ ಯು. ಎಸ್ ಅವರು ವಾಣಿಜ್ಯ ವಿಷಯದಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿ ರಾಜ್ಯಮಟ್ಟದಲ್ಲಿ 97ನೇ ರ‍್ಯಾಂಕ್ ಪಡೆದು ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅರ್ಹರಾಗಿದ್ದಾರೆ. ಇವರು ಪ್ರಸ್ತುತ ಖಾಸಗಿ ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದು, ಪೂಂಜಾಲಕಟ್ಟೆಯ ನಿವಾಸಿ ಉಮಾನಾಥ್ ಮತ್ತು ಶ್ರೀಲತಾ ಎಂ.ಜೆ ದಂಪತಿಯ ಸುಪುತ್ರಿ.

Read More

ಬೆಳ್ತಂಗಡಿ: ಅಪರಿಚಿತ ವ್ಯಕ್ತಿಯ ಶವ ನೇತ್ರಾವತಿ ನದಿಯಲ್ಲಿ ಪತ್ತೆ

ಬೆಳ್ತಂಗಡಿ: ಸುಮಾರು 55 ರಿಂದ 60 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಮೃತದೇಹವು ಕೊಳೆತ ಸ್ಥಿತಿಯಲ್ಲಿ ನ.23 ರಂದು ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ನೇತ್ರಾವತಿ ನದಿ ನೀರಿನಲ್ಲಿಪತ್ತೆಯಾಗಿದೆ. ಮೃತದೇಹದ ಮೈಮೇಲೆ ನಸು ಹಸಿರು ಬಣ್ಣದ ಉದ್ದ ತೋಳಿನ ಶರ್ಟ್, ಅರ್ದ ತೋಳಿನ ಬಿಳಿ ಬಣ್ಣದ ಬನಿಯನ್, ಕಾಫಿ ಬಣ್ಣದ ಒಳಚಡ್ಡಿ, ನಸು ಹಸಿರು ಬಣ್ಣದ ಪಟ್ಟಿ ಇರುವ ಬಿಳಿ ಪಂಚೆ, ಕೆಂಪು ಉಡಿದಾರ ಧರಿಸಿಕೊಂಡಿದ್ದು ಪತ್ತೆಯಾಗಿದೆ. ಮೃತರ ವಾರೀಸುದಾರರು ಪತ್ತೆಯಾದಲ್ಲಿ ಧರ್ಮಸ್ಥಳ ಠಾಣೆಯ ಪಿಎಸ್‌ಐ 8277986449…

Read More

ಮಂಗಳೂರು: ಬಹುಕೋಟಿ ವೆಚ್ಚದಲ್ಲಿ ನಿರ್ಮಾಣವಾದ ‘ಕುಲಾಲ ಭವನ’ ಉದ್ಘಾಟನೆ

ಸುಸಜ್ಜಿತ ಕುಲಾಲ ಭವನವನ್ನು ಸುಮಿತ್ರಾ ರಾಜು ಸಾಲಿಯಾನ್ ಸಭಾಂಗಣ, ಯಶೋಧಾ ಬಾಬು ಸಾಲಿಯಾನ್ ಬಂಟ್ವಾಳ ವೇದಿಕೆ, ಸರಸ್ವತಿ ವಿಶ್ವನಾಥ ಬಂಗೇರ ಕುಳಾಯಿ (ಬಾಲ್ಯನಿ), ನಮ್ರತಾ ಜಗದೀಶ್ ಬಂಜನ್ ಬ್ಯಾಂಕ್ವೆಟ್ ಹಾಲ್, ಸಾವಿತ್ರಿ ಪಿ.ಕೆ. ಸಾಲಿಯಾನ್ ವೇದಿಕೆ, ವಸಂತಿ ಸದಾಶಿವ ಬಂಜನ್ ಕಚೇರಿ ಹಾಗೂ ಡಾ|ಸುರೇಖಾ ರತನ್ ಕುಲಾಲ್ ಮುಂಬಯಿ ಆಡಳಿತ ಕಚೇರಿ ಉದ್ಘಾಟನೆ ನೆರವೇರಿಸಿದರು. ಮಂಗಳೂರು: ಕುಲಾಲಸಂಘ ಮುಂಬಯಿ ವತಿಯಿಂದ ಮಂಗಳಾದೇವಿ ದೇವಸ್ಥಾನದ ಸನಿಹ ನಿರ್ಮಿಸಿದ ಅತ್ಯಾಧುನಿಕ ಸೌಲಭ್ಯ ಹೊಂದಿದ ಬಹುಕೋಟಿ ವೆಚ್ಚದ ‘ಕುಲಾಲ ಭವನ ರವಿವಾರ…

Read More

ಮಹಿಳೆಯರಿಗೆ ಈ ಯೋಜನೆಯಡಿ ಸಿಗಲಿದೆ ಉಚಿತ ಹೊಲಿಗೆ ಯಂತ್ರ.!

 ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನ ಹೊಲಿಗೆ ಯಂತ್ರ ವಿತರಣಾ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ ಹಾಗೂ ಈ ಯೋಜನೆಯಡಿ ಸೌಲಭ್ಯವನ್ನು ಪಡೆಯಲು ಇಚ್ಚಿಸುವವರು ಕಡ್ಡಾಯವಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿರುತ್ತದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 06.12.2025 ರಂದು ಸಾಯಂಕಾಲ: 5.30 ಗಂಟೆಯವರೆಗೆ ನಿಗಧಿ ಪಡಿಸಿದೆ. ಅರ್ಜಿ ಸಲ್ಲಿಸಲು ಇರಬೇಕಾದ ಸಾಮಾನ್ಯ ಅರ್ಹತೆಗಳು:- 1) ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ (ನಿ.) ದ ವತಿಯಿಂದ ಈ ಯೋಜನೆಗೆ ಅರ್ಜಿ ಸಲ್ಲಿಸಲು ಪ್ರವರ್ಗ-3-ಬಿ ಅಡಿಯಲ್ಲಿ 2(ಎ)…

Read More

ಚರ್ಚೆಯಾಗಬೇಕಿರುವುದು ಸಲಿಂಗ ಕಾಮದ ಬಗ್ಗೆ ಅಲ್ಲ, ಯಕ್ಷಗಾನದಲ್ಲಿ ಮಹಿಳಾ ಕಲಾವಿದರು ಏಕಿಲ್ಲ ಬಗ್ಗೆ: ದಿನೇಶ್ ಅಮೀನ ಮಟ್ಟು

ಬೆಂಗಳೂರು: ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದಂತ ಪುರುಷೋತ್ತಮ ಬಿಳಿಮಲೆ ಅವರು ಯಕ್ಷಗಾನ ಕಲಾವಿಧರಲ್ಲಿ ಬಹುತೇಕರು ಸಲಿಂಗಿಗಳು ಎಂಬುದಾಗಿ ಹೇಳಿಕೆ ನೀಡಿದ್ದು ವಿವಾದಕ್ಕೆ ಕಾರಣವಾಗಿತ್ತು. ಈ ಹೇಳಿಕೆಯ ಹಿನ್ನಲೆಯಲ್ಲಿ ಚರ್ಚೆಯಾಗಬೇಕಿರುವುದು ಸಲಿಂಗ ಕಾಮದ ಬಗ್ಗೆ ಅಲ್ಲ. ಯಕ್ಷಗಾನದಲ್ಲಿ ಯಾಕೆ ಮಹಿಳಾ ಕಲಾವಿದರು ಇಲ್ಲ ಎನ್ನುವ ಬಗ್ಗೆ ಎಂಬುದಾಗಿ  ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು ಹೇಳಿದ್ದಾರೆ. ಈ ಕುರಿತಂತೆ  ಮಾಡಿರುವಂತ  ಅವರು, ಕನ್ನಡ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಪ್ರೊ.ಪುರುಷೋತ್ತಮ ಬಿಳಿಮಲೆ ಅವರ ವಿರುದ್ದ ಯಕ್ಷಗಾನ ಕಲಾವಿದರೊಬ್ಬರು ಮಂಗಳೂರಿನ ಉರ್ವ ಪೊಲೀಸ್ ಠಾಣೆಯಲ್ಲಿ…

Read More

ಉಡುಪಿ: ಹಾಸ್ಟೆಲ್‌ನಲ್ಲಿ ಗಾಂಜಾ ತಂದಿಟ್ಟಿದ್ದ ಇಬ್ಬರು ವಿದ್ಯಾರ್ಥಿಗಳ ಬಂಧನ

ಉಡುಪಿ : ಮಣಿಪಾಲದ ಎರಡು ಹಾಸ್ಟೆಲ್‌ಗಳ ಮೇಲೆ ದಾಳಿ ನಡೆಸಿದ ಪೊಲೀಸರು ಇಬ್ಬರು ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಂದ ಸುಮಾರು 36,000 ರೂ. ಮೌಲ್ಯದ 727 ಗ್ರಾಂ ಗಾಂಜಾ ಮತ್ತು 30,000 ರೂ. ಮೌಲ್ಯದ ಒಂದು ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ. ಬಂಧಿತ ವಿದ್ಯಾರ್ಥಿಗಳನ್ನು ಗುಜರಾತ್ ಮೂಲದ ಕುಶ್‌ಕೆಯುಶ್ ಪಟೇಲ್ (20) ಮತ್ತು ಉತ್ತರ ಪ್ರದೇಶದ ದೇವಾಂಶ್ ತ್ಯಾಗಿ (22) ಎಂದು ಗುರುತಿಸಲಾಗಿದೆ. ಆರೋಪಿಗಳು ಮಣಿಪಾಲದಲ್ಲಿ ವಿದ್ಯಾರ್ಥಿಗಳಿಗೆ ಮಾರಾಟ ಮಾಡುವ ಉದ್ದೇಶದಿಂದ ಗಾಂಜಾ ಸಂಗ್ರಹಿಸಿಟ್ಟಿದ್ದರು. ಈ ಸಂಬಂಧ ಮಣಿಪಾಲ ಪೊಲೀಸ್…

Read More

ಆನಂದಾಶ್ರಮ ಪ್ರೌಢಶಾಲೆ ಕೋಟೆಕಾರ್ ಶಾಲಾ ವಾರ್ಷಿಕೋತ್ಸವದಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಲಯನ್ ಅನಿಲ್ ದಾಸ್ ರವರಿಗೆ ಸನ್ಮಾನ

ಆನಂದಾಶ್ರಮ ಪ್ರೌಢಶಾಲೆ ಕೋಟೆಕಾರ್ ಸೋಮೇಶ್ವರ ಇದರ ಶಾಲಾ ವಾರ್ಷಿಕೋತ್ಸವದ ಸಂದರ್ಭದಲ್ಲಿ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಲಯನ್ ಅನಿಲ್ ದಾಸ್ ರವರನ್ನು ಶಾಲಾ ಆಡಳಿತ ವರ್ಗ ಹಾಗೂ ಮುಖ್ಯ ಅತಿಥಿಗಳು ಸನ್ಮಾನಿಸಿದರು. ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರು, ಶಾಲಾ ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಮತ್ತು ಶಾಲಾ ಮುಖ್ಯೋಪಾಧ್ಯಾಯರು, ಶ್ರೀ ಗುರು ಮೂರ್ತಿ, ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು ಪೋಷಕರು, ಗಣ್ಯರು ಉಪಸ್ಥಿತರಿದ್ದರು.

Read More

ನ.28: “ಅಪರೇಷನ್ ಲಂಡನ್ ಕೆಫೆ”ರಾಜ್ಯಾದ್ಯಂತ ಭರ್ಜರಿ ಬಿಡುಗಡೆ.

ಮಂಗಳೂರು: “ಬಹು ನಿರೀಕ್ಷಿತ ಮಾಸ್ ಮತ್ತು ಆಕ್ಷನ್ ಪೋಸ್ಟರ್ಸ್, ಟೀಸರ್, ಟ್ರೈಲರ್ ಹಾಗೂ ರೈ ರೈ ರೈ ಅದ್ಭುತ ಹಾಡಿನ ಮೂಲಕ ಪ್ರೇಕ್ಷಕರಲ್ಲಿ ಇನ್ನಷ್ಟೂ ಕುತೂಹಲ ಮೂಡಿಸಿರುವ ಅಪರೇಷನ್ ಲಂಡನ್ ಕೆಫೆ ಕನ್ನಡ ಚಿತ್ರವು ಇದೇ ನವೆಂಬ‌ರ್ 28ರಂದು ಏಕಕಾಲಕ್ಕೆ ಕನ್ನಡ ಮರಾಠಿ ಮತ್ತು ಹಿಂದಿ ಭಾಷೆಯಲ್ಲಿ ತೆರೆ ಕಾಣಲಿದೆ” ಎಂದು ನಟ ಅರ್ಜುನ್ ಕಾಪಿಕಾಡ್ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.“ನಿರ್ಮಾಪಕ ವಿಜಯ್ ಕುಮಾರ್ ಶೆಟ್ಟಿ ಚಿತ್ರಕ್ಕೆ ಸಾಕಷ್ಟು ಬಂಡವಾಳ ಹಾಕಿ ಸಿನಿಮಾ ಮಾಡಿದ್ದಾರೆ. ಮರಾಠಿ ಭಾಷೆ ಬಾರದೆ…

Read More

ಉಡುಪಿ ಶ್ರೀಕೃಷ್ಣಮಠಕ್ಕೆ ಪ್ರಧಾನಿ ಮೋದಿ ಭೇಟಿ ಖಚಿತ- ರೋಡ್ ಶೋ ರದ್ದು

ಉಡುಪಿ: ಪ್ರಧಾನಿ ನರೇಂದ್ರ ಮೋದಿ ಅವರು ನ.28ರಂದು ಉಡುಪಿ ಶ್ರೀಕೃಷ್ಣಮಠಕ್ಕೆ ಭೇಟಿ ನೀಡಲಿದ್ದಾರೆ. ಪ್ರಧಾನಿ ಭೇಟಿಯನ್ನು ಉನ್ನತ ಮೂಲಗಳು ಖಚಿತಪಡಿಸಿವೆ. ಕಾರಣಾಂತರಗಳಿಂದ ಪ್ರಧಾನಿಗಳ ರೋಡ್ ಶೋ ಕಾರ್ಯಕ್ರಮ ರದ್ದುಗೊಂಡಿದೆ. ಪ್ರಧಾನಿ ಆಗಮಿಸುವ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ:ಪ್ರಧಾನಿ ಮೋದಿ ಅಂದು ಬೆಳಿಗ್ಗೆ ದೆಹಲಿಯ ಏರ್ ಪೋರ್ಟ್ ನಿಂದ ಹೊರಡಲಿದ್ದಾರೆ. ಬೆಳಿಗ್ಗೆ 11.10ಕ್ಕೆ ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಬೆಳಿಗ್ಗೆ 11.35ಕ್ಕೆ ಉಡುಪಿಯ ಆದಿಉಡುಪಿ ಹೆಲಿಪ್ಯಾಡ್‌ಗೆ ಆಗಮಿಸಲಿದ್ದಾರೆ. ಬಳಿಕ ಪ್ರಧಾನಿ ಅವರು ರಸ್ತೆ ಮಾರ್ಗದ ಮೂಲಕ…

Read More