admin

ಮಂಗಳೂರಿನ ವಿಶ್ವಾಸಾರ್ಹ ಸಂಸ್ಥೆ ವಿಷನ್ ಇಂಡಿಯಾ ಮತ್ತೆ ತಂದಿದೆ ಸೀಸನ್ 2 ನ ಉಳಿತಾಯಾಯದೊಂದಿಗೆ ಭರ್ಜರಿ ಬಹುಮಾನಗಳನ್ನು ಗೆಲ್ಲುವ ಯೋಜನೆ

ಮಂಗಳೂರು: ಸ್ಕೀಮ್ ಹಾಗೂ ಸೇವಿಂಗ್ ಯೋಜನೆಯ ಇತಿಹಾಸದಲ್ಲೇ ಅತೀ ದೊಡ್ಡ ಬಹುಮಾನವನ್ನು ನೀಡುವ ಮಹತ್ತರ ಯೋಜನೆಗೆ ವಿಷನ್ 2 ಇಂಡಿಯಾ (ಸೀಸನ್ 2) ಚಾಲನೆ ನೀಡಿದೆ. 1ಕೋಟಿ ನಗದು ಹಾಗೂ ಚಿನ್ನಾಭರಣ, ಒಟ್ಟು ಹದಿನೇಳು ಕಾರು, ಹತ್ತು ಸುಸಜ್ಜಿತ ಮನೆ, ನೂರಕ್ಕಿಂತ ಹೆಚ್ಚು ದ್ವಿಚಕ್ರ ವಾಹನ, 50ಕ್ಕಿಂತ ಹೆಚ್ಚು ಐಪೋನ್, ವಿದೇಶ ಪ್ರಯಾಣ ಹಾಗೂ ಸಮಾಧಾನಕರ ಬಹುಮಾನವಾಗಿ ನಗದು, ಚಿನ್ನ ಹಾಗೂ ಇನ್ನಿತರ ಫರ್ನಿಚರ್, ಎಲೆಕ್ಟ್ರಾನಿಕ್, ಗೃಹೋಪಯೋಗಿ ವಸ್ತುಗಳನ್ನು ನೀಡಲಿದೆ ಎಂದು ಸಂಸ್ಥೆಯ ಸಂಸ್ಥಾಪಕರು ತಿಳಿಸಿದ್ದಾರೆ. ಪ್ರತಿ…

Read More

ವಿಧಾನಪರಿಷತ್ ಚುನಾವಣೆ: ಬಿಜೆಪಿಯ ಮೂವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ

ಬೆಂಗಳೂರು: ಇಂದು ವಿಧಾನಪರಿಷತ್ ಚುನಾವಣೆ ಬಿಜೆಪಿ ಅಭ್ಯರ್ಥಿಗಳಾದ ಸಿ.ಟಿ.ರವಿ, ಎನ್.ರವಿಕುಮಾರ್ ಮತ್ತು ಎಂ.ಜಿ. ಮುಳೆ ಅವರು ವಿಧಾನಸೌಧದ 1ನೇ ಮಹಡಿ, ಕೊಠಡಿ ಸಂಖ್ಯೆ 121ರಲ್ಲಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ, ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ್, ವಿಧಾನಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್,…

Read More

ರಸ್ತೆಯಲ್ಲಿ ನಮಾಝ್ ಪ್ರಕರಣ: B ರಿಪೋರ್ಟ್ ರದ್ದು ಪಡಿಸಲು VHP ಮನವಿ

ಮಂಗಳೂರು: ವಿಶ್ವ ಹಿಂದೂ ಪರಿಷದ್ ಮಂಗಳೂರು ವತಿಯಿಂದ ನಮಾಜು ಮಾಡಿದ ಪ್ರಕರಣಕ್ಕೆ ಹಾಕಿದ ” B ” ರಿಪೋರ್ಟ್ ರದ್ದು ಪಡಿಸಿ ಶರಣ್ ಪಂಪ್ವೆಲ್ ವಿರುದ್ದ ದಾಖಲಿಸಿದ ಪ್ರಕರಣ ರದ್ದು ಗೊಳಿಸಲು ಮನವಿ ಸಲ್ಲಿಸಲಾಗಿದೆ. ಮಂಗಳೂರಿನ ಕಂಕನಾಡಿ ಬಳಿ ಅನುಮತಿ ರಹಿತ ನಮಾಜು ಮಾಡಿದ ಪ್ರಕರಣಕ್ಕೆ ಹಾಕಿದ ” B ” ರಿಪೋರ್ಟ್ ರದ್ದು ಪಡಿಸಲು ಮತ್ತು ಕರ್ನಾಟಕ ಸರಕಾರ ದ್ವೇಷ ರಾಜಕಾರಣ ಮಾಡಿ ಹಿಂದೂ ನಾಯಕ ಶರಣ್ ಪಂಪುವೆಲ್ ರವರನ್ನು ಗುರಿಯಾಗಿಸಿ ದಾಖಲಿಸಿದ ಪ್ರಕರಣ ವಾಪಾಸ್…

Read More

ಎಕ್ಸಿಟ್ ಪೋಲ್ ನಲ್ಲಿ ಮತ್ತೆ ಮೋದಿ: ವರದಿಗಳ ಬೆನ್ನಲ್ಲೇ ಷೇರು ಮಾರುಕಟ್ಟೆ ಏರಿಕೆ ನಿರೀಕ್ಷೆ!

ಮುಂಬಯಿ: ಕಳೆದ ವಾರ ಸಾಕಷ್ಟು ಏರುಪೇರಿನಿಂದ ಕೂಡಿದ್ದ ಷೇರು ಮಾರುಕಟ್ಟೆ, ರೂಪಾಯಿ ಮೌಲ್ಯ ಮತ್ತು ಬಾಂಡ್‌ ಮೌಲ್ಯಗಳು ಸೋಮವಾರ ಏರಿಕೆ ಕಾಣಬಹುದು ಎಂಬ ನಿರೀಕ್ಷೆ ಹುಟ್ಟಿದೆ. ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಮತ್ತೂಮ್ಮೆ ಅಧಿಕಾರಕ್ಕೇರಲಿದೆ ಎಂದು ಬಹುತೇಕ ಸಮೀಕ್ಷೆಗಳು ಭವಿಷ್ಯ ನುಡಿದಿರುವ ಹಿನ್ನೆಲೆಯಲ್ಲಿ ಹೂಡಿಕೆದಾರರ ಉತ್ಸಾಹ ಹೆಚ್ಚಾಗಿದ್ದು, ಷೇರುಪೇಟೆ ಏರಿಕೆ ಹಾದಿಗೆ ಮರಳಬಹುದು ಎನ್ನಲಾಗಿದೆ. ಫ‌ಲಿತಾಂಶ ಬಾಕಿ ಇದ್ದ ಕಾರಣ ವಿದೇಶಿ ಹೂಡಿಕೆ ದಾರರು ಎಚ್ಚರಿಕೆಯಿಂದ ಹೂಡಿಕೆ ಮಾಡಿದ್ದರು. ಹೀಗಾಗಿ ಷೇರುಪೇಟೆ ಕುಸಿತ ಕಂಡಿತ್ತು. ಈಗ ಮತಗಟ್ಟೆ ಸಮೀಕ್ಷೆಗಳ…

Read More

ಜೈಲಿನಲ್ಲಿ ಮುಂಬೈ ಸರಣಿ ಸ್ಫೋಟದ ಆರೋಪಿ ಮೊಹಮ್ಮದ್ ಖಾನ್ ಬರ್ಬರ ಹತ್ಯೆ

ಕೊಲ್ಲಾಪುರ: 1993ರ ಮುಂಬೈ ಬಾಂಬ್ ಸ್ಫೋಟದ ಆರೋಪಿ ಮೊಹಮ್ಮದ್ ಅಲಿ ಖಾನ್‌ರನ್ನು ಕೊಲ್ಲಾಪುರ ಜೈಲಿನಲ್ಲಿ ಶಿರಚ್ಛೇದ ಮಾಡುವ ಮೂಲಕ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಐವರು ಆರೋಪಿಗಳು ಭಾನುವಾರ ಆರೋಪಿ ಮೊಹಮ್ಮದ್ ಅಲಿಯನ್ನು ಕೊಲೆ ಮಾಡಿದ್ದಾರೆ. ಈ ಐವರು ಆರೋಪಿಗಳು ಮೊಹಮ್ಮದ್ ಅಲಿಯ ಶಿರಚ್ಛೇದ ಮಾಡಿದ ಪರಿಣಾಮ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. 1993ರ ಮುಂಬೈ ಸ್ಫೋಟದ ನಾಲ್ವರು ಅಪರಾಧಿಗಳನ್ನು ಕೊಲ್ಲಾಪುರ ಜೈಲಿನಲ್ಲಿ ಬಂಧಿಸಲಾಗಿತ್ತು. ಒಬ್ಬ ಅಪರಾಧಿಯ ಹೆಸರು ಮೊಹಮ್ಮದ್ ಅಲಿ ಖಾನ್. ಇನ್ನೊಂದು ಪ್ರಕರಣದಲ್ಲಿ…

Read More

ಅಡ್ಕ ಕುಲಾಲ ಬಂಗೇರ ಕುಟುಂಬ ನಾಗಮೂಸ್ಥಾನದ ಅಧ್ಯಕ್ಷರಾಗಿ ಖ್ಯಾತ ನ್ಯಾಯವಾದಿ ರಾಮಪ್ರಸಾದ್ ಮರು ಆಯ್ಕೆ

ಅಡ್ಕ ಕುಲಾಲ ಬಂಗೇರ ನಾಗಮೂಲಸ್ಥಾನದ ಕುಟುಂಬಸ್ಥರ ಸಭೆಯು ದಿನಾಂಕ 02.06.2024ನೇ ಆದಿತ್ಯವಾರದಂದು ನಡೆದಿರುತ್ತದೆ. ಸಭೆಯಲ್ಲಿ ಎಲ್ಲಾ ಕುಟುಂಬಸ್ಥರು ಒಗ್ಗಟ್ಟಿನಿಂದ ಮುಂದಿನ ಕಾರ್ಯಕ್ರಮಗಳನ್ನು ನಡೆಸುವುದಕ್ಕೋಸ್ಕರ ಸಮಿತಿ ರಚನೆಯ ಬಗ್ಗೆ ಚರ್ಚಿಸಲಾಯಿತು. ಕುಟುಂಬದ ಯಜಮಾನರಾದ ಶ್ರೀ ಸೀತಾರಾಮ ಬಂಗೇರರವರು ಮಾತನಾಡಿ ಮುಂದಿನ ಎಲ್ಲಾ ಕಾರ್ಯಕ್ರಮಗಳು ಎಲ್ಲಾ ರೀತಿಯಲ್ಲಿ ಒಳ್ಳೆಯ ರೀತಿಯಿಂದ ನಡೆಯಬೇಕೆಂದು ತಿಳಿಸಿದರು. ಅಧ್ಯಕ್ಷರಾದ ಶ್ರೀ ರಾಮಪ್ರಸಾದ್ ರವರು ಮಾತನಾಡಿ ಈವರೆಗಿನ ಎಲ್ಲಾ ವಿಚಾರಗಳನ್ನು ಸಭೆಗೆ ತಿಳಿಸಿದರಲ್ಲದೆ, ಮುಂದೆ ಹೊಸ ಸಮಿತಿ ರಚನೆಯಾಗಬೇಕೆಂದು ವಿನಂತಿಸಿದರು. ಸೇರಿದ ಕುಟುಂಬಸ್ಥರು ಮೊದಲಿನ ಸಮಿತಿಯೇ…

Read More

ಮಡಿಕೇರಿ ಉಪತಹಶೀಲ್ದಾರ್ ಸುನಿಲ್ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಉಪ ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸಿ ಪದೋನ್ನತಿ ಹೊಂದಿ ಮಡಿಕೇರಿಕರ್ತವ್ಯ ಕ್ಕೆ ಹಾಜರಾಗಿದ್ದ ಸುನಿಲ್ (42) ಹೃದಯಾಘಾತದಿಂದ ಭಾನುವಾರ ನಿಧನರಾದರು. ಕಂದಾಯ ಇಲಾಖೆಯಲ್ಲಿ ಗ್ರಾಮ ಕರಣಿಕರಾಗಿ ಸೇವೆ ಸಲ್ಲಿಸಿ, ಉಪ ತಹಶೀಲ್ದಾರ್ ಆಗಿ ಪದೋನ್ನತಿ ಹೊಂದಿದ್ದ ಸುನಿಲ್ ಅವರು ಉಪ ತಹಸಿಲ್ದಾರ್ ಆಗಿ ಮಡಿಕೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಬೆಳ್ತಂಗಡಿ ಆಡಳಿತ ಕಂದಾಯ ಇಲಾಖೆಯಲ್ಲಿ ಗ್ರಾಮ ಕಾರಣಿಕರಾಗಿ ಬಳಿಕ ಆಡಳಿತ ಸೌಧದಲ್ಲಿ ಭೂಮಿ ಶಾಖೆಯ ನಿರ್ವಾಹಕರಾಗಿ ಸೇವೆ ಸಲ್ಲಿಸಿದ್ದರು

Read More

ಪ್ರಧಾನಿ ಮೋದಿ ವ್ಯಕ್ತಿತ್ವ ಹಿಮಾಲಯದಂತಿದೆ, ಅವರ ಮುಂದೆ ಯಾರೂ ನಿಲ್ಲಲು ಸಾಧ್ಯವಿಲ್ಲ: ಬಾಬಾ ರಾಮದೇವ್

ನವದೆಹಲಿ: ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಲಿದ್ದಾರೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಹೇಳಿದ ನಂತರ ಯೋಗ ಗುರು ಬಾಬಾ ರಾಮ್ದೇವ್ ಭಾನುವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ಶ್ಲಾಘಿಸಿದ್ದಾರೆ ಮತ್ತು ಅವರ ನಾಯಕತ್ವ ಮತ್ತು ವ್ಯಕ್ತಿತ್ವವನ್ನು ಶ್ಲಾಘಿಸಿದ್ದಾರೆ. ರಾಮದೇವ್ ಅವರು ಮೋದಿ ವ್ಯಕ್ತಿತ್ವವನ್ನು ಹಿಮಾಲಯಕ್ಕೆ ಹೋಲಿಸಿದ್ದಾರೆ ಮತ್ತು ಅವರ ಮುಂದೆ ಯಾರೂ ನಿಲ್ಲಲು ಸಾಧ್ಯವಿಲ್ಲ ಎಂದು ಹೇಳಿದರು.ಬಿಜೆಪಿ ನೇತೃತ್ವದ ಎನ್ಡಿಎ ಮೂರನೇ ಅವಧಿಗೆ ಆಯ್ಕೆಯಾಗಲಿದೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಘೋಷಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಬಾಬಾ ರಾಮ್ದೇವ್,…

Read More

ಮೊದಲ ಬಾರಿಗೆ ಖಗೋಳದಲ್ಲಿ ಸಂಭವಿಸಲಿದೆ ವಿಸ್ಮಯ – 6 ಗ್ರಹಗಳು ಒಟ್ಟಿಗೆ ಗೋಚರ

ನವದೆಹಲಿ : ಇದೇ ಮೊದಲ ಬಾರಿಗೆ ಖಗೋಳ ವಿಸ್ಮಯವನ್ನು ನೋಡುವ ಅವಕಾಶ ಎಲ್ಲರಿಗೂ ಸಿಗಲಿದೆ. ಒಂದು ಪವಾಡ ಸಂಭವಿಸಲಿದ್ದು ಸೌರವ್ಯೂಹವು ಭೂಮಿಯಿಂದ ಗೋಚರಿಸುತ್ತದೆ, 6 ಗ್ರಹಗಳು ಒಟ್ಟಿಗೆ ಗೋಚರಿಸುತ್ತವೆ. ನಾಳೆ ಜೂನ್ 3 ರಂದು ಸೌರವ್ಯೂಹವು ಭೂಮಿಯಿಂದ ಗೋಚರಿಸುತ್ತದೆ ಮತ್ತು 6 ಗ್ರಹಗಳು ಸರಳ ರೇಖೆಯಲ್ಲಿ ಕಾಣಿಸಿಕೊಳ್ಳುತ್ತವೆ. ವಿಶೇಷವೆಂದರೆ ಭೂಮಿಯಿಂದ ಈ ಅದ್ಭುತ ನೋಟವನ್ನು ನೋಡಲು ಸಾಧ್ಯವಾಗುತ್ತದೆ. ದಿ ಗಾರ್ಡಿಯನ್ ವರದಿಯ ಪ್ರಕಾರ, ಬುಧ, ಮಂಗಳ, ಗುರು, ಶನಿ, ನೆಪ್ಚೂನ್ ಮತ್ತು ಯುರೇನಸ್ ಈ ಸರಣಿಯಲ್ಲಿ ಸೇರಲಿದ್ದಾರೆ….

Read More