admin

ಮಂಗಳೂರು: ಬಾಲಕ ಬಾಲಕಿಯರ ಜಲಂಧರ್ ರೈ ಟ್ರೋಫಿ 2025 ಕ್ರೀಡಾ ಕೂಟ

ಮಂಗಳೂರು: ಸಾರ್ವಜನಿಕ ಶ್ರೀ ಗಣೇಶ ಸೇವಾ ಸಮಿತಿ ಸಮಿತಿ (ರಿ) ಬೀರಿ ಗಣೇಶ ಭಜನಾ ಮಂದಿರ ಬೀರಿ ಕೋಟೆಕಾರ್ ಹಾಗೂ ಆನಂದಶ್ರಮ ಪ್ರೌಢಶಾಲೆ ಹಳೆ ವಿದ್ಯಾರ್ಥಿಗಳು ಹಾಗೂ ದಿವಂಗತ ಜಲಂಧರ್ ರೈ ಯವರ ಹಿತೈಷಿಗಳು ಆಯೋಜಿಸಿದ ಜಲಂಧರ್ ರೈ ಸ್ಮರಣಾರ್ಥ ಹೈ ಸ್ಕೂಲ್ ಮಟ್ಟದ ಬಾಲಕ ಬಾಲಕಿಯರ ಜಲಂಧರ್ ರೈ ಟ್ರೋಫಿ 2025 ಕ್ರೀಡಾ ಕೂಟ ಉಚ್ಚಿಲ ಕ್ರೀಡಾಂಗಣದಲ್ಲಿ ಅದ್ದೂರಿಯಾಗಿ ನಡೆಯಿತು. ಇದರ ಸಮಾರೋಪ ಸಮಾರಂಭ ಲಯನ್. ಅನಿಲ್ ದಾಸ್ ಅಧ್ಯಕ್ಷತೆಯಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಹಲವಾರು…

Read More

ಮಂಗಳೂರು: ಅಮಾನ್ಯ ಚೆಕ್‌ ಬಳಸಿ ಲಕ್ಷಾಂತರ ರೂ. ವಂಚನೆ : ಮಹಿಳೆಯ ಬಂಧನ….!!

ಮಂಗಳೂರು: ಟೆಕ್ ಮತ್ತು ಆಭರಣ ಮಳಿಗೆಗಳನ್ನು ಗುರಿಯಾಗಿಸಿಕೊಂಡು ಅಮಾನ್ಯ ಚೆಕ್‌ಗಳ ಮೂಲಕ ಲಕ್ಷಾಂತರ ರೂ. ಮೌಲ್ಯದ ವಸ್ತುಗಳನ್ನು ವಂಚಿಸಿದ್ದ ಮಹಿಳೆಯೊಬ್ಬಳನ್ನು ಮಂಗಳೂರು ಬರ್ಕೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಮಹಿಳೆಯನ್ನು ಫರೀದಾ ಬೇಗಂ (28) ಎಂದು ಗುರುತಿಸಲಾಗಿದೆ. ಈಕೆಯ ವಿರುದ್ಧ ಮಂಗಳೂರು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಒಟ್ಟು 9 ವಂಚನೆ ಪ್ರಕರಣಗಳು ದಾಖಲಾಗಿವೆ. ಎಂಪೈರ್ ಮಾಲ್‌ನಲ್ಲಿರುವ ಲ್ಯಾಪ್‌ಟಾಪ್ ಬಜಾರ್ ಅಂಗಡಿಯಿಂದ ರೂ.1.98 ಲಕ್ಷ ಮೌಲ್ಯದ ಮ್ಯಾಕ್‌ಬುಕ್ ಮತ್ತು ಡೆಲ್ ಲ್ಯಾಪ್‌ಟಾಪ್‌ಗಳನ್ನು ಖರೀದಿಸಿ ಬೌನ್ಸ್ ಆದ ಚೆಕ್‌…

Read More

ಕಾರವಾರದಲ್ಲಿ ದೀಪಾವಳಿ ಹಬ್ಬ ಆಚರಿಸಿದ ಪ್ರಧಾನಿ ಮೋದಿ : INS ವಿಕ್ರಾಂತ್ ನಲ್ಲಿ ನೌಕಾಪಡೆಯ ಯೋಧರ ಜೊತೆ ಮೋದಿ

ಕಾರವಾರ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಭಾರತೀಯ ಸಶಸ್ತ್ರ ಪಡೆಗಳೊಂದಿಗೆ ದೀಪಾವಳಿ ಆಚರಿಸುವ ತಮ್ಮ ವಾರ್ಷಿಕ ಸಂಪ್ರದಾಯವನ್ನು ಮುಂದುವರೆಸಿದ್ದಾರೆ. ಇಂದು ಗೋವಾ ಮತ್ತು ಕಾರವಾರ ಕರಾವಳಿಯಲ್ಲಿ ಐಎನ್ಎಸ್ ವಿಕ್ರಾಂತ್‌ನಲ್ಲಿ ನೌಕಾಪಡೆಯ ಸಿಬ್ಬಂದಿಯೊಂದಿಗೆ ಬೆಳಕಿನ ಹಬ್ಬ ದೀಪಾವಳಿ ಆಚರಿಸಿದ್ದರು. ನೂರಾರು “ಧೈರ್ಯಶಾಲಿ” ನೌಕಾಪಡೆಯ ಸಿಬ್ಬಂದಿಯನ್ನು ಉದ್ದೇಶಿಸಿ ಮಾತನಾಡಿದ ಅವರು, “ನೌಕಾಪಡೆಯ ಯೋಧರೊಂದಿಗೆ ಪವಿತ್ರ ಹಬ್ಬವನ್ನು ಆಚರಿಸುತ್ತಿರುವುದು ಅದೃಷ್ಟ”. “ಇಂದು ಅದ್ಭುತ ದಿನ. ಈ ದೃಶ್ಯ ಸ್ಮರಣೀಯ. ಇಂದು, ಒಂದು ಕಡೆ, ನನಗೆ ಸಾಗರವಿದೆ, ಮತ್ತು ಮತ್ತೊಂದೆಡೆ, ಭಾರತ ಮಾತೆಯ…

Read More

ಅಪಘಾತ ಪ್ರಕರಣದಲ್ಲಿ ಹೆಲ್ಮೆಟ್ ಧರಿಸದಿದ್ದಕ್ಕೆ 7 ಲಕ್ಷ ರೂ. ಪರಿಹಾರ ಕಡಿತ: ಹೈಕೋರ್ಟ್ ಆದೇಶ

ಬೆಂಗಳೂರು: ಅಪಘಾತ ಪ್ರಕರಣದಲ್ಲಿ ಮೃತಪಟ್ಟ ಬೈಕ್‌ ಸವಾರನೋರ್ವ ಹೆಲ್ಮೆಟ್‌ ಧರಿಸದ ಕಾರಣ ಪರಿಗಣಿಸಿ ಪರಿಹಾರ ಮೊತ್ತದಲ್ಲಿ ಏಳೂವರೆ ಲಕ್ಷ ರು. ಕಡಿತಗೊಳಿಸಿ ಹೈಕೋರ್ಟ್‌ ಆದೇಶಿಸಿದೆ. ಹೆಲ್ಮೆಟ್‌ ಧರಿಸದೆ ಇರುವುದು ಬೈಕ್‌ ಸವಾರನ ನಿರ್ಲಕ್ಷ್ಯವಾಗಿದೆ ಎಂದು ತೀರ್ಮಾನಿಸಿದ ಹೈಕೋರ್ಟ್‌, ನಿಗದಿಪಡಿಸಿದ ಒಟ್ಟು 19,64,400 ರು. ಪರಿಹಾರದಲ್ಲಿ ನಿರ್ಲಕ್ಷ್ಯದ ಭಾಗವಾಗಿ ಶೇ.40ರಷ್ಟು ಹಣ ಅಂದರೆ 7,85,760 ರು. ಕಡಿತಗೊಳಿಸಿದೆ. ಅಪಘಾತದಿಂದಾಗಿ 2019ರಲ್ಲಿ ಮೃತಪಟ್ಟ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಚಿಕ್ಕಂದವಾಡಿ ಗ್ರಾಮದ ನಿವಾಸಿ ಅವಿನಾಶ್‌ನ (23) ಕುಟುಂಬದವರಿಗೆ ಒಟ್ಟು 18,03,000…

Read More

ಅಕ್ರಮ BPL ಕಾರ್ಡ್ ಪಡೆದವರಿಗೆ ಬಿಗ್ ಶಾಕ್ : ದಂಡ ವಿಧಿಸಲು ಆಹಾರ ಇಲಾಖೆ ಸಿದ್ಧತೆ.!

ಬೆಂಗಳೂರು : ರಾಜ್ಯ ಸರ್ಕಾರವು ಅನರ್ಹ ಬಿಪಿಎಲ್ ಕಾರ್ಡ್‌ ಪಡೆದವರಿಗೆ ಬಿಗ್ ಶಾಕ್ ನೀಡಿದ್ದು, ರಾಜ್ಯಾದ್ಯಂತ 4.9 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸಲಾಗಿದೆ. ಹೌದು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಕೈಗೊಂಡಿರುವ ಅನರ್ಹ ಪಡಿತರದಾರರ ಪತ್ತೆ ಕಾರ್ಯದಲ್ಲಿ ಕಳೆದ ಕೆಲ ವಾರಗಳಲ್ಲಿ ಬರೋಬ್ಬರಿ 2 ಲಕ್ಷಕ್ಕೂ ಅಧಿಕ ಅನರ್ಹ ಫಲಾನುಭವಿಗಳನ್ನು ಗುರುತಿಸಿ ಅವರೆಲ್ಲರ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಗೊಳಿಸಿದೆ. ಈ ಮೂಲಕ ರದ್ದಾದ ಅನರ್ಹ ಬಿಪಿಎಲ್ ಕಾರ್ಡ್‌ಗಳ ಸಂಖ್ಯೆ 4.9 ಲಕ್ಷಕ್ಕೆ ಏರಿಕೆಯಾಗಿದೆ. ಈ ಅಭಿಯಾನದಲ್ಲಿ…

Read More

ಕುಲಾಲ ವೇದಿಕೆ ಮಂಜೇಶ್ವರ ಇದರ ವತಿಯಿಂದ ದಿ|ಜಯಂತ ಮಾಸ್ತರ್ ಮೀಯಪದವ್ ಹಾಗೂ ದಿ|ಸೋಮಶೇಖರ್ ಬಡಾಜೆ ಇವರ ಸ್ಮರಣಾರ್ಥ ವಿವಿಧ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

ಕುಲಾಲ ವೇದಿಕೆ ಮಂಜೇಶ್ವರ ಇದರ ವತಿಯಿಂದ ನಡೆಯುವ ದಿ|ಜಯಂತ ಮಾಸ್ತರ್ ಮೀಯಪದವ್ ಹಾಗೂ ದಿ|ಸೋಮಶೇಖರ್ ಬಡಾಜೆ ಇವರ ಸ್ಮರಣಾರ್ಥ ರಕ್ತದಾನ ಶಿಬಿರ, ವ್ಯೇದಕೀಯ ಶಿಬಿರ ಮತ್ತು ಕಾರ್ಯಕರ್ತರ ಸಮಾವೇಶ ಸಾಂಸ್ಕೃತಿಕ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯು ಶ್ರೀ ಅರಸುಮಂಜಿಷ್ಣಾರ್ ದೈವಸ್ಥಾನ ಉದ್ಯಾವರ ಮಾಡ ಕ್ಷೇತ್ರದಲ್ಲಿ ಪ್ರಾಥನೆಯೊಂದಿಗೆ ಬಿಡುಗಡೆಗೊಳಿಸಲಾಯಿತು. ಕಾರ್ಯಕ್ರಮದಲ್ಲಿ ಶ್ರೀ ತಿಮಿರಿ ಬೆಳ್ಚಾಡರು, ಶ್ರೀ ಮಂಜು ಬೆಳ್ಚಾಡರು, ಕುಲಾಲ ವೇದಿಕೆಯ ಅಧ್ಯಕ್ಷರಾದ ಶ್ರೀರಾಮ ಚಂದ್ರ ಮಾಸ್ತರ್, ಶ್ರೀ ದಿನೇಶ್ ಕೊಡಂಗೆ, ಶ್ರೀ ಚಂದ್ರಶೇಖರ ಮಿಯಪದವು, ಶ್ರೀ ಹರೀಶ್ ಶೆಟ್ಟಿ…

Read More

ಕಾರ್ಕಳ: ಅಭಿಷೇಕ್ ಆಚಾರ್ಯ ಆತ್ಮಹತ್ಯೆ ಪ್ರಕರಣ- ಯುವತಿ ನಿರೀಕ್ಷಾ ಬಂಧನ

ಕಾರ್ಕಳದ ಅಭಿಷೇಕ್ ಆಚಾರ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಯುವತಿ ನಿರೀಕ್ಷಾಳನ್ನು ಬಂಧಿಸಲಾಗಿದೆ.  ಮಂಗಳೂರಿನಲ್ಲಿ ಯುವತಿ ನಿರೀಕ್ಷಾಳನ್ನು ಕದ್ರಿ ಪೊಲೀಸರು ಮಂಗಳೂರಿನಲ್ಲಿ ಬಂಧಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಅಭಿಷೇಕ್ ಹನಿ ಟ್ರ್ಯಾಪ್ ಗೆ ಒಳಪಡಿಸಿ ದುಡ್ಡಿಗಾಗಿ ಬೇಡಿಕೆ ಇಡಲಾಗಿತ್ತು. ಇದರಿಂದ ಬೇಸತ್ತು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದ. ಡೆತ್ ನೋಟ್ ನಲ್ಲಿ ಯುವತಿ ನಿರೀಕ್ಷಾ ಸೇರಿ 4 ಹೆಸರುಗಳನ್ನು ಉಲ್ಲೇಖಿಸಿದ್ದು, ಇದೀಗ ಯುವತಿಯನ್ನು ಬಂಧಿಸಲಾಗಿದೆ ಎನ್ನುವ ಮಾಹಿತಿ ಸಿಕ್ಕಿದೆ.

Read More

ರಾಜ್ಯ ಸರ್ಕಾರದಿಂದ `ಮನೆ ಕಟ್ಟೋರಿಗೆ’ ಗುಡ್ ನ್ಯೂಸ್ : ಪ್ರತಿ ಟನ್ ಮರಳಿಗೆ 850 ರೂ. ನಿಗದಿ ಮಾಡಿ ಆದೇಶ

ರಾಜ್ಯ ಸರ್ಕಾರವು ಪ್ರತಿ 1 ಟನ್ ಮರಳಿಗೆ ರೂ.850 ನಂತೆ ದರ ನಿಗದಿ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಎಂದು ದಾವಣಗೆರೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮರಳು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಅವರು, ರಾಜ್ಯ ಸರ್ಕಾರವು ಪ್ರತಿ 1 ಟನ್ ಮರಳಿಗೆ ರೂ.850 ನಂತೆ ದರ ನಿಗದಿ ಮಾಡಿ ಡಿಸೆಂಬರ್ ಅಂತ್ಯದ ವೇಳೆಗೆ ಮನೆ ನಿರ್ಮಾಣ ಹಾಗೂ ಇನ್ನಿತರೆ ಕಾಮಗಾರಿಗಳಿಗೆ ಮರಳು ಲಭ್ಯವಾಗಲಿದೆ ಎಂದು ಹೇಳಿದ್ದಾರೆ….

Read More

ಎಂಟು ದಿನಗಳಿಂದ ಲವರ್ ಜೊತೆಗೆ ರೂಮ್ ಮಾಡಿದ್ದ ಪುತ್ತೂರಿನ ಯುವಕ ಲಾಡ್ಜ್ ನಲ್ಲೇ ಸಾವು ; ಯುವತಿ ನಾಪತ್ತೆ ! 

ಮಡಿವಾಳದ ಗ್ರ್ಯಾಂಡ್ ಚಾಯ್ಸ್ ಲಾಡ್ಜ್ ನಲ್ಲಿ ಕಳೆದ 8 ದಿನಗಳಿಂದ ಪ್ರೇಯಸಿ ಜೊತೆ ತಂಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮೂಲದ ಯುವಕನೋರ್ವ ನಿಗೂಢ ರೀತಿ ಸಾವನ್ನಪ್ಪಿದ್ದಾನೆ. ಪುತ್ತೂರು ಮೂಲದ 20 ವರ್ಷದ ತಕ್ಷಿತ್ ಮೃತ ಯುವಕ.  ವಿರಾಜಪೇಟೆ ಮೂಲದ ರಕ್ಷಿತಾ ಎನ್ನುವ ಯುವತಿ ಜೊತೆ ಅ.9ರಿಂದ ಇವರು ಲಾಡ್ಜ್‌ನಲ್ಲಿ ರೂಂ ಮಾಡಿಕೊಂಡಿದ್ದರು. ಹೊಟೇಲ್ ರೂಮಿಗೆ ಸ್ವಿಗ್ಗಿ, ಜೊಮೆಟೋದಲ್ಲಿ ಊಟ ತರಿಸಿಕೊಂಡು ಸೇವಿಸುತ್ತಿದ್ದರು. ಅದು ಬಿಟ್ಟರೆ ಹೊರಗೆ ಹೋಗಿರಲಿಲ್ಲ. ಅ.17ರಂದು ಮಧ್ಯಾಹ್ನ ಯುವತಿ ಲಾಡ್ಜ್ ನಿಂದ ಹೊರ…

Read More

ಭರತ್ ಕುಮ್ಡೇಲ್ ತಂದೆ ನಿಧನ; ಪೊಲೀಸ್ ಭದ್ರತೆಯಲ್ಲಿ ಅಂತ್ಯಕ್ರಿಯೆಯಲ್ಲಿ ಭಾಗಿ

ಆಶ್ರಫ್ ಕಲಾಯಿ ಕೊಲೆ ಪ್ರಕರಣದ ಆರೋಪದಲ್ಲಿ ಬಂಧಿತನಾಗಿರುವ ಹಿಂದೂಪರ ಸಂಘಟನೆ ಮುಖಂಡ ಭರತ್ ಕುಮ್ದೇಲು  ಅವರ ತಂದೆ ಸೇಸಪ್ಪ ಬೆಳ್ಳಾಡ (75) ಅವರು ನಿಧನರಾಗಿದ್ದಾರೆ.  ಕಳೆದ ಮೂರು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಧ್ಯಾಹ್ನದ ವೇಳೆಗೆ ಇಹಲೋಕ ತ್ಯಜಿಸಿದರು.  ಮಂಗಳೂರಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮಗ ಭರತ್ ಕುಮ್ದೇಲು ಅವರನ್ನು ತಂದೆಯ ಅಂತ್ಯಕ್ರಿಯೆಯಲ್ಲಿ  ಭಾಗವಹಿಸಲು ಪೊಲೀಸ್  ಭದ್ರತೆಯಲ್ಲಿ ಕರೆ ತರಲಾಯಿತು.  ನ್ಯಾಯಾಲಯವು ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಅನುಮತಿ ನೀಡಿತ್ತು. ಅದರಂತೆ, ಭರತ್‌ ಕುಮ್ಮೆಲು ಅವರು…

Read More