admin

ಪತಿ ಸಾವಿನ ವೇಳೆ ಮಗು ಜನನ- ಶಿಶು ಜತೆ ಸ್ಟ್ರೆಚರ್‌ನಲ್ಲಿ ಬಂದು ಅಂತಿಮ ದರ್ಶನ ಪಡೆದ ಯೋಧನ ಪತ್ನಿ!

ಮಹಾರಾಷ್ಟ್ರ : ಆತ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ. ಪತ್ನಿ ಗರ್ಭಿಣಿಯಾಗಿದ್ದ ಕಾರಣ ಪಿತೃತ್ವ ರಜೆ ಪಡೆದು ಹುಟ್ಟೂರಿಗೆ ಬಂದಿದ್ರು. ಅತ್ತ ಪತ್ನಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಗುವಿನ ಆಗಮನಕ್ಕಾಗಿ ಯೋಧನ ಕುಟುಂಬ ಕಾಯುತ್ತಿತ್ತು. ಆದ್ರೆ, ವಿಧಿಯಾಟ ಬೇರೆಯೇ ಆಗಿತ್ತು. ಪತ್ನಿಗೆ ಬೇಕಾದ ಅಗತ್ಯ ವಸ್ತುಗಳನ್ನು ತರಲು ಬೈಕ್ ನಲ್ಲಿ ತೆರಳಿದ್ದ ಯೋಧ ಅಪಘಾತಕ್ಕೀಡಾಗಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಹೃದಯ ವಿದ್ರಾವಕ ಘಟನೆ ನಡೆದಿರೋದು ಮಹಾರಾಷ್ಟ್ರದ ಸತಾರ ಜಿಲ್ಲೆಯಲ್ಲಿ. 35 ವರ್ಷದ…

Read More

ಬಂಟ್ವಾಳ: ನಿಲ್ಲಿಸಿದ್ದ ಟ್ಯಾಂಕರ್‌ಗೆ ಗೂಡ್ಸ್ ವಾಹನ ಡಿಕ್ಕಿ..!!

ಕಲ್ಲಡ್ಕ: ಗೂಡ್ಸ್ ವಾಹನವೊಂದು ನಿಲ್ಲಿಸಿದ್ದ ಟ್ಯಾಂಕರ್‌ಗೆ ಗುದ್ದಿದ ಘಟನೆ ಕಲ್ಲಡ್ಕದಲ್ಲಿ ನಡೆದಿದೆ. ಹೊಟೇಲ್ ಸಮುದ್ರ ಬಳಿ ಈ ಘಟನೆ ನಡೆದಿದೆ. ಪರಿಣಾಮ ಗೂಡ್ಸ್ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಯಾವುದೇ ದೊಡ್ಡ ಮಟ್ಟದ ಅಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

Read More

ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ಆರು ಮಂದಿ ಉಪನ್ಯಾಸಕರು ಕರ್ತವ್ಯದಿಂದ ವಜಾ

ಬೆಂಗಳೂರು: ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಆಕ್ಸ್‌ಫರ್ಡ್ ಡೆಂಟಲ್ ಕಾಲೇಜಿನ ಆರು ಮಂದಿ ಉಪನ್ಯಾಸಕರನ್ನು ವಜಾ ಮಾಡಲಾಗಿದೆ. ಜ. 8 ರಂದು ಕಾಲೇಜಿನ ವಿದ್ಯಾರ್ಥಿನಿ ಯಶಸ್ವಿನಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆಕೆಯ ಸಾವಿಗೆ ಕಾಲೇಜಿನ ಉಪನ್ಯಾಸಕರೇ ಕಾರಣ ಎಂದು ಉಪನ್ಯಾಸಕರು ಮತ್ತು ಆಕೆಯ ಸಹಪಾಠಿಗಳು ಆರೋಪಿಸಿದ್ದರು. ಉಪನ್ಯಾಸಕರು ಮಾಡಿದ ಜನಾಂಗೀಯ ನಿಂದನೆ, ಕಿರುಕುಳದಿಂದ ‌ನೊಂದು, ಬೇಸತ್ತು ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬ ಆರೋಪ ಸಹ ಕೇಳಿ ಬಂದಿತ್ತು. ಈ ಹಿನ್ನೆಲೆ ಕಾಲೇಜಿನ ಪ್ರಾಂಶುಪಾಲರೂ ‌ಸೇರಿದಂತೆ ಒಟ್ಟು ಐವರು…

Read More

ಮಂಗಳೂರು: ಶಬರಿಮಲೆ ಯಾತ್ರೆಗೆ ತೆರಳಿದ್ದ ಮಾಲಾಧಾರಿ ಎರಿಮಲೆಯಲ್ಲಿ ಹೃದಯಾಘಾತದಿಂದ ನಿಧನ

ಮಂಗಳೂರು : ಶಬರಿಮಲೆ ಯಾತ್ರೆ ಕೈಗೊಂಡಿದ್ದ ಉಳ್ಳಾಲ ತಾಲೂಕಿನ ಅಯ್ಯಪ್ಪ ಮಾಲಾ ವೃತಧಾರಿಯೊಬ್ಬರು ಕೇರಳದ ಎರಿಮಲೆಯಲ್ಲಿ ಹೃದಯಾಘಾತಕ್ಕೆ ಬಲಿಯಾದ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ. ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು ದೇಲಂತಬೆಟ್ಟು ನಿವಾಸಿ ಉದ್ಯಮಿ ಚಂದ್ರಹಾಸ್ ಶೆಟ್ಟಿ (55) ಮೃತಪಟ್ಟವರು. ಚಂದ್ರಹಾಸ್ ಅವರು ಇತರ ಅಯ್ಯಪ್ಪ ಮಾಲಾ ವೃತಧಾರಿಗಳ ಜೊತೆ ಶನಿವಾರದಂದು ನಗರದ ಅರ್ಕುಳ, ತುಪ್ಪೇಕಲ್ಲಿನಿಂದ ಶಬರಿಮಲೆ ಯಾತ್ರೆ ಕೈಗೊಂಡಿದ್ದರು. ಸೋಮವಾರ ಬೆಳಿಗ್ಗೆ ಚಂದ್ರಹಾಸ್ ಅವರು ಎರಿಮಲೆಯಿಂದ ಕಾಡಿನ ದಾರಿಯಾಗಿ ಪಂಪೆಗೆ ಪ್ರಯಾಣ ಬೆಳೆಸಿದ್ದ ವೇಳೆ ಕುಸಿದು ಬಿದ್ದು…

Read More

“ಜೈ ಬಾಂಗ್ಲಾ” ಘೋಷಣೆ ಕೂಗಿದ ಮಹಿಳೆ ಅರೆಸ್ಟ್.!

ಬೆಂಗಳೂರಿನಲ್ಲಿ ದೇಶ ವಿರೋಧಿ ಜೈ ಬಾಂಗ್ಲಾ ಘೋಷಣೆ ಕೂಗಿದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಹೆಬ್ಬಗೋಡಿ ಠಾಣೆಯ ಪೊಲೀಸರು ದೇಶವಿರೋಧಿ ಘೋಷಣೆ ಕೂಗಿದ ಮಹಿಳೆಯನ್ನು ಬಂಧಿಸಿದ್ದಾರೆ. ಪಶ್ಚಿಮ ಬಂಗಾಳದ ಮೂಲದ ಸರ್ಬಾನು ಖಾತುನ್ ಎಂಬ ಮಹಿಳೆ ಜೈ ಬಾಂಗ್ಲಾ ಘೋಷಣೆ ಕೂಗಿದ್ದಾಳೆ. ಘಟನೆ ಹಿನ್ನೆಲೆ ಅಕ್ರಮ ವಲಸಿಗರ ತೆರವು ಕಾರ್ಯಾಚರಣೆ ಮಾಡುವಾಗ ಇಂಥದ್ದೊಂದು ಘಟನೆ ನಡೆದಿದೆ. ಜೆಸಿಬಿ ಬಳಕಿ ಅಕ್ರಮ ಕಟ್ಟಡಗಳ ತೆರವು ಕಾರ್ಯಾಚರಣೆ ನಡೆಸುತ್ತಿದ್ದರು. ಈ ವೇಳೆ ಸ್ಥಳೀಯ ವ್ಯಕ್ತಿಯೊಬ್ಬ ಅದನ್ನು ವಿಡಿಯೋ ಮಾಡಿಕೊಳ್ಳುತ್ತಿದ್ದ. ಈ…

Read More

ಒಇಸಿ ಕುಲಾಲ ಪ್ರಮಾಣಪತ್ರ ವ್ಯವಸ್ಥೆ ಮರುಸ್ಥಾಪನೆಗೆ ಸಂಘಟಿತ ಹೋರಾಟ

ಮಂಜೇಶ್ವರ‌ : ಕಾಸರಗೋಡು ಭಾಗದ ಕುಲಾಲ ಸಮುದಾಯದ ಜನರು ಒಇಸಿ ಕುಲಾಲ (Other eligible comunity) ಪ್ರಮಾಣಪತ್ರ ಪಡೆಯಲು ಸಂಘಟಿತ ಹೋರಾಟ ನಡೆಸುವಂತೆ ಕೇರಳ ಮಣ್ ಪಾತ್ರ ನಿರ್ಮಾಣ ಸಮಯದಾಯ ಸಭಾ (ಕೆ.ಎಂ.ಎಸ್.ಎಸ್.) ಕೇರಳ ರಾಜ್ಯ ಸಮಿತಿ ಪ್ರಧಾನ ಕಾರ್ಯದರ್ಶಿ ರಾಜೇಶ್ ಪಾಲಂಗಾಟ್ ಹೇಳಿದರು. ಕುಲಾಲ ವೇದಿಕೆ ಮಂಜೇಶ್ವರ‌ ಆಶ್ರಯದಲ್ಲಿ‌ ಮಜಿಬೈಲು ಸಹಕಾರಿ ಬ್ಯಾಂಕ್ ಸಭಾಂಗಣದಲ್ಲಿ ರವಿವಾರ ಜರುಗಿದ ಕೆಎಂಎಸ್ಎಸ್ ಮಂಜೇಶ್ವರ‌ ವಲಯ ಸಮಿತಿ ರೂಪೀಕರಣ ಸಭೆ ಹಾಗೂ ತ್ರಿಸ್ತರ ಪಂಚಾಯತ್ ಚುನಾವಣೆ ವಿಜೇತ ಸಮುದಾಯದ ಜನಪ್ರತಿನಿಧಿಗಳ…

Read More

ಮಂಗಳೂರು: ಯುವಕರಿಗೆ ಡ್ರಗ್ಸ್ ಸಾಗಾಟ ಮಾಡುತ್ತಿದ್ದ ಉಗಾಂಢ ಮೂಲದ ಮಹಿಳೆಯ ಬಂಧನ!

ಮಂಗಳೂರು: ಯುವಕರಿಗೆ ಡ್ರಗ್ಸ್ ಸಾಗಾಟ ಮಾಡುತ್ತಿದ್ದ 6ಜನ ವ್ಯಾಪಾರಿಗಳಿಗೆ ವ್ಯವಸ್ಥಿತವಾಗಿ ಬೆಂಗಳೂರು ಸರಹದ್ದಿನಿಂದ ಡ್ರಗ್ಸ್ ನೀಡುತ್ತಿದ್ದ ಉಗಾಂಢ ಮೂಲದ ಮಹಿಳೆಯನ್ನು4ಕೆಜಿ ಎಂಡಿಎಂನೊಂದಿಗೆ ಜಿಗ್ನಿ ಸರಹದ್ದಿನಲ್ಲಿ ಸಿಸಿಬಿ ಪೋಲಿಸರು ಬಂಧಿಸಿದ್ದಾರೆ. ಇದರೊಂದಿಗೆ ಮಂಗಳೂರು ಸರಹದ್ದಿನಲ್ಲಿ ಡ್ರಗ್ಸ್ ಸಾಗಾಟ ಮಾಡುತ್ತಿದ್ದ ಸಪ್ಲೆಯರ್‍,ಗೆ ಇದ್ದ ಒಂದು ಮೂಲವನ್ನು ಬಂಧಿಸಿದ ಹಾಗೆ ಆಗಿದೆ. ಈಗಾಗಲೇ ಡ್ರಗ್ಸ್ ಸಾಗಾಟ ಮಾಡುತ್ತಿದ್ದ 6ಜನ ವ್ಯಾಪಾರಿಗಳನ್ನು ಬಂಧಿಸಿ ಅವರು JC(ನ್ಯಾಯಾಂಗ ಬಂಧನ) ಯಲ್ಲಿದ್ದಾರೆ. NCB ಲೆಕ್ಕಾಚಾರದ ಪ್ರಕಾರ ಸುಮಾರು 4ಕೋಟಿ ಬೆಲೆಬಾಳುವಷ್ಟು 4ಕೆಜಿ ಎಂಡಿಎಂನೊಂದಿಗೆ ಇವರನ್ನು ಬಂಧಿಸಿ…

Read More

ಮಂಗಳೂರು ಮೂಲದ ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್..!!

ಬೆಂಗಳೂರು: ಅಪಾರ್ಟ್ಮೆಂಟ್ ನಲ್ಲಿ ಬೆಂಕಿ ಅವಘಡ ಸಂಭವಿಸಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದ್ದ ಮಹಿಳಾ ಸಾಫ್ಟ್‌ವೇರ್ ಎಂಜಿನಿಯರ್ ಕೇಸ್ ಗೆ ಸ್ಪೋಟಕ ಟ್ವಿಸ್ಟ್ ಸಿಕ್ಕಿದೆ. ಕೊಲೆಯಾದ ಟೆಕ್ಕಿ ಶರ್ಮಿಳಾ ಮೊಬೈಲ್ ಫೋನ್ ಕಾಣೆಯಾಗಿದ್ದು, ತೆರೆದ ಕಿಟಕಿ, ಬೆಂಕಿ ಅವಘಡಕ್ಕೆ ಕಾರಣವೇನೆಂದು ತಿಳಿದು ಬಂದಿರಲಿಲ್ಲ. ಆಕೆಯ ಮೊಬೈಲ್ ನಾಪತ್ತೆಯಾಗಿದ್ದು ಪೊಲೀಸರು ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಭೇದಿಸಲು ಕಾರಣವಾಯಿತು. ಪಕ್ಕದ ಮನೆಯಲ್ಲಿ ವಾಸಿಸುತ್ತಿದ್ದ 18 ವರ್ಷದ ದ್ವಿತೀಯ ಪಿಯು ವಿದ್ಯಾರ್ಥಿಯನ್ನು ಮಹಿಳೆಯ ಮೇಲೆ ಅತ್ಯಾಚಾರ ಹಾಗೂ ಕತ್ತು ಹಿಸುಕಿ…

Read More

ಮಂಗಳೂರು: ರಸ್ತೆ ಬದಿಯ ಸ್ಟಾಲ್ ಮಾಲಿಕನಿಂದ ಹಸುವಿಗೆ ಚೂರಿ ಇರಿತ..!! ದೂರು ದಾಖಲು

ಮಂಗಳೂರು : ಎಡಪದವು ಪುಪಾಡಿಕಲ್ಲು ಎಂಬಲ್ಲಿ ಭಕ್ತರು ಅಯ್ಯಪ್ಪ ಸ್ವಾಮಿ ಬಿರಿ ( ಟೆಂಟ್ ) ಬಳಿ ನಿನ್ನೆ (ಭಾನುವಾರ) ಪೂಜೆಯ ಸಮಾರಂಭ ನಡೆಯುತ್ತಿತ್ತು ಆ ಸಂದರ್ಭದಲ್ಲಿ ಮುಸ್ಲಿಂ ವ್ಯಕ್ತಿ ಒರ್ವ ಚರುಮುರಿ ಸ್ಟಾಲನ್ನು ಇರಿಸಿದ್ದನು ಈ ವೇಳೆ ಸ್ಟಾಲಿಗೆ ಟೊಮೇಟೊ ತಿನ್ನಲು ಬಂದ ದನದ ಮುಖಕ್ಕೆ ವ್ಯಕ್ತಿ ಕೋಪಗೊಂಡು ಚೂರಿ ಇರಿದ ಘಟನೆ ನಡೆದಿದೆ. ಚೂರಿ ಇರಿದ ವ್ಯಕ್ತಿಯನ್ನು ಚರಮುರಿ ಸ್ಟಾಲ್ ನ ಉಮರಬ್ಬ ಎಂದು ತಿಳಿದುಬಂದಿದೆ. ಈತ ಜಾತ್ರೆಯ ವೇಳೆ ಹಲವೆಡೆ ಚರುಮುರಿ ಸ್ಟಾಲ್ ಹಾಕಿ…

Read More

ಮಂಜೇಶ್ವರ: ತ್ರೀಸ್ತರ ಪಂಚಾಯತ್ ಚುನಾವಣೆಯಲ್ಲಿ ಚುನಾಯಿತರಾದ ಸದಸ್ಯರಿಗೆ ಅಭಿನಂದನ ಕಾರ್ಯಕ್ರಮ

ಕುಲಾಲ ವೇದಿಕೆ ಮಂಜೇಶ್ವರ ಇದರ ವತಿಯಿಂದ ಕಳೆದ ತ್ರೀಸ್ತರ ಪಂಚಾಯತ್ ಚುನಾವಣೆಯಲ್ಲಿ ಚುನಾಯಿತರಾದ ಸದಸ್ಯರನ್ನು ಅಭಿನಂದನ ಕಾರ್ಯಕ್ರಮ ಮತ್ತು ಕೇರಳ ಮಣ್ ಪಾತ್ರ ಸಮುದಾಯ ಸಭಾ (KMSS) ಇದರ ಯೂನಿಟ್ ರೂಪಿಕರಣ ಸಭೆಯು ಮಜಿಬೈಲ್ ಕೋ ಒಪರೆಟಿವ್ ಬ್ಯಾಂಕಿನ ಸಭಾಂಗಣದಲ್ಲಿ ಜರಗಿತು.

Read More