FSL ವರದಿ ಬರುವವರೆಗೆ ಧರ್ಮಸ್ಥಳದಲ್ಲಿ ಉತ್ಖನನ ತಾತ್ಕಾಲಿಕವಾಗಿ ಸ್ಥಗಿತ..!
ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಆರಂಭವಾಗಿಲ್ಲ. ಅನಾಲಿಸಿಸ್ ಬಂದ ಮೇಲೆ ತನಿಖೆ ಶುರು ಮಾಡಲಾಗುತ್ತದೆ. ನಿಯಮದಂತೆ ಅಪರಿಚಿತ ವ್ಯಕ್ತಿಗೆ ಪೊಲೀಸರು ರಕ್ಷಣೆ ನೀಡಲಾಗಿದೆ. ಸಾಕ್ಷಿದಾರನಿಗೆ ಕೇಂದ್ರ ಸರ್ಕಾರ ರೂಪಿಸಿರುವ ನಿಯಮದಂತೆ ರಕ್ಷಣೆ ನೀಡಲಾಗಿದೆ. ಅಪರಿಚಿತ ಧರ್ಮಸ್ಥಳದ ಎಲ್ಲಾ ಕಡೆ ತೋರಿಸಿದರೇ ಅಗೆಯುವುದಿಲ್ಲ. ಉತ್ಖನನ ಸ್ಥಗಿತಗೊಳಿಸುವ ಬಗ್ಗೆ ಎಸ್ಐಟಿಯವರೇ ನಿರ್ಧರಿಸಿದ್ದಾರೆ. ಎಫ್ಎಸ್ಎಲ್ ವರದಿ ಬರುವವರೆಗೆ ಉತ್ಖನನ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಶವ ಶೋಧ ಸ್ಥಗಿತಗೊಳಿಸುವ ಬಗ್ಗೆ ನಾವು ತೀರ್ಮಾನ ಕೈಗೊಂಡಿಲ್ಲ. ಧರ್ಮಸ್ಥಳ ಪ್ರಕರಣ ಅತ್ಯಂತ ಸೂಕ್ಷ್ಮ ವಿಚಾರವಾಗಿದೆ. ಹೀಗಾಗಿ…

