admin

ಸಾಮಾಜಿಕ ಜಾಲತಾಣದಲ್ಲಿ ನಿಂದನೆ ಆರೋಪ: ಬೆಳ್ತಂಗಡಿ, ವೇಣೂರು ಠಾಣೆಯಲ್ಲಿ 6 ಪ್ರತ್ಯೇಕ ಪ್ರಕರಣಗಳು ದಾಖಲು

ಬೆಳ್ತಂಗಡಿ; ಸಾಮಾಜಿಕ ಜಾಲತಾಣಗಳಲ್ಲಿ ನಿಂದಿಸಿರುವ ಬಗ್ಗೆ ಬೆಳ್ತಂಗಡಿ ಹಾಗೂ ವೇಣೂರು ಪೊಲೀಸ್ ಠಾಣೆಗಳಲ್ಲಿ ಆರು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಲಾಗಿದೆ. ಹುಬ್ಬಳ್ಳಿ ನಿವಾಸಿ ಅಜಿತ್ ನಾಗಪ್ಪ ಬಸಾಪುರ್ ಎಂಬವರು ದೂರು ನೀಡಿದ್ದು, ಗಿರೀಶ್ ಮಟ್ಟಣ್ಣನವರ್ ಕುಡ್ಲ ರಾಂ ಪೇಜ್ ಗೆ ನೀಡಿದ ಸಂದರ್ಶನದಲ್ಲಿ ಜೈನರ ಬಗ್ಗೆ ತುಚ್ಚವಾಗಿ ಮಾತನಾಡಿರುವುದಾಗಿ ಗಿರೀಶ್ ಮಟ್ಟಣ್ಣನವರ್ ಹಾಗೂ ಕುಡ್ಲ ರಾಂ ಪೇಜ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅದೇ ರೀತಿ ಬೆಳ್ತಂಗಡಿ ನಿವಾಸಿ ವಿಜಯ ಎಂಬವರ ದೂರಿನಂತೆ ವಿಕಾಸ್ ವಿಕ್ಕಿ ಹಿಂದು ಎಂಬ ಫೇಸ್…

Read More

ಧರ್ಮಸ್ಥಳ ಪ್ರಕರಣ: ಅನಾಮಿಕನಿಗೆ ಮಂಪರ್‌ ಪರೀಕ್ಷೆ ನಡೆಸಲು ಎಸ್‌ಐಟಿ ಚಿಂತನೆ?

ಮಂಗಳೂರು: ಧರ್ಮಸ್ಥಳ ಸ್ನಾನಘಟ್ಟದ ಬಳಿ ಅನಾಮಿಕನ ಮಾಹಿತಿದಾರರಿಂದ ಗುರುತಿಸಲ್ಪಟ್ಟ 13 ನೇ ಸ್ಥಳದಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ಮಂಗಳವಾರ ಜಿಪಿಆರ್ ಬಳಸಿ ಶೋಧ ನಡೆಸಿತು. ಆದರೆ ಯಾವುದೇ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿಲ್ಲ. ಮಾಹಿತಿದಾರರು ಗುರುತಿಸಿದ ಹೆಚ್ಚಿನ ಸ್ಥಳಗಳು ಯಾವುದೇ ಅವಶೇಷಗಳನ್ನು ಸಿಗದ ಕಾರಣ ಎಸ್‌ಐಟಿ ದೂರುದಾರರನ್ನು ಮಂಪರ್‌ ಪರೀಕ್ಷೆಗೆ ಒಳಪಡಿಸುವ ಬಗ್ಗೆ ಚಿಂತಿಸಿದೆ ಎಂದು ವರದಿಯಾಗಿದೆ. ಕೆಲವು ಪ್ರದೇಶಗಳನ್ನು ಅಗೆಯುವ ಯಂತ್ರಗಳನ್ನು ಬಳಸಿ ಅಗೆದಾಗಲೂ ಯಾವುದೇ ಪುರಾವೆಗಳು ಸಿಗಲಿಲ್ಲ. ಜುಲೈ 28 ರಿಂದ, ಮಾಹಿತಿದಾರರು 16 ಸ್ಥಳಗಳನ್ನು…

Read More

ಬೆಳ್ತಂಗಡಿ: ಅಕ್ರಮ ಗೋ ಸಾಗಾಟ- ಓರ್ವ ಸೆರೆ, ಪೊಲೀಸರಿಗೆ ಹಲ್ಲೆ ನಡೆಸಿ ಇಬ್ಬರು‌ ಪರಾರಿ

 ಬೆಳ್ತಂಗಡಿ : ಚಾರ್ಮಾಡಿ ಕಡೆಯಿಂದ ಅಕ್ರಮವಾಗಿ ಇನ್ನೋವಾ ಕಾರಿನಲ್ಲಿ ಮೂರು ದನಗಳನ್ನು ಹಿಂಸಾತ್ಮಕ ರೀತಿಯಲ್ಲಿ ಕಟ್ಟಿಹಾಕಿ ತೆಗೆದುಕೊಂಡು ಬರುತ್ತಿರುವ ವೇಳೆ ಪೊಲೀಸರು ತಡೆದು ನಿಲ್ಲಿಸಿದ ಘಟನೆ ಗುರುವಾಯನಕೆರೆಯ ವೃತ್ತದಲ್ಲಿ ಆ.13ರಂದು ಬೆಳಗ್ಗೆ ನಡೆದಿದೆ. ಚಾರ್ಮಾಡಿ ಕಡೆಯಿಂದ ಅತಿ ವೇಗವಾಗಿ ಚಲಿಸುತ್ತಿದ್ದ ಕಾರು ಗುರುವಾಯನಕೆರೆಯಲ್ಲಿ ಮೂರು ಗಾಡಿಗಳಿಗೆ ಡಿಕ್ಕಿ ಹೊಡೆದ ಸಂದರ್ಭದಲ್ಲಿ ಸ್ಥಳದಲ್ಲಿ ನಿಂತಿದ್ದ ಸಂಚಾರಿ ಠಾಣಾ ಪೊಲೀಸರು ತಕ್ಷಣ ಗಾಡಿಯನ್ನು ನಿಲ್ಲಿಸಿದ್ದಾರೆ. ಅದರಲ್ಲಿದ್ದ ಮೂವರಲ್ಲಿ ಇಬ್ಬರು ಪೊಲೀಸರಿಗೆ ಹಲ್ಲೆ ನಡೆಸಿ ಪರಾರಿಯಾಗಿದ್ದು ಓರ್ವನನ್ನು ವಶಕ್ಕೆ ಪಡೆದಿದ್ದಾರೆ. ಸ್ಥಳದಲ್ಲಿ ಹೆಚ್ಚಿನ…

Read More

ಉಳ್ಳಾಲ: ರಸ್ತೆ ಅಪಘಾತ- ಸ್ಕೂಟರ್ ಸವಾರ ಬಲಿ

ಉಳ್ಳಾಲ : ಸವಾರನ ನಿಯಂತ್ರಣ ತಪ್ಪಿ ಸ್ಕೂಟರ್ ಕಂಪೌಂಡ್ ಗೊಡೆದೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸಾವನಪ್ಪಿದ ಘಟನೆ ಮಂಗಳವಾರ ರಾತ್ರಿ ಸೋಮೇಶ್ವರ ಪುರಸಭಾ ವ್ಯಾಪ್ತಿಯ ಅಂಬಿಕಾ ರಸ್ತೆ ಎಂಬಲ್ಲಿ ನಡೆದಿದೆ. ಮೃತರನ್ನು ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು ಮಹಾಲಕ್ಷ್ಮೀ ಮಂದಿರ ಬಳಿಯ ನಿವಾಸಿ ರಾಘವೇಂದ್ರ ಸಾಲ್ಯಾನ್ (44)ಯಾನೆ ರಘು ಎಂದು ಗುರುತಿಸಲಾಗಿದೆ. ಖಾಸಗಿ ಕಂಪನಿಯೊಂದರಲ್ಲಿ ಇಲೆಕ್ಟಿಕಲ್ ಗುತ್ತಿಗೆದಾರರಾಗಿದ್ದ ರಾಘವೇಂದ್ರ ಅವರು ಮಂಗಳವಾರ ರಾತ್ರಿ ಕೆಲಸ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಅಂಬಿಕಾ ರಸ್ತೆಯ ನಿರ್ಮಲಾ ಟ್ರಾವೆಲ್ಸ್…

Read More

ವಿಟ್ಲ: ಬಾವಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!

ವಿಟ್ಲ: ಅಡ್ಡದ ಬೀದಿ ಮನೆಯ ಬಾವಿಯಲ್ಲಿ ರವಿ ಜೋಶಿ (68) ಎಂಬವರ ಶವ ಪತ್ತೆಯಾಗಿದೆ. ಯಕ್ಷಗಾನ ಕಲಾವಿದ ರಸಿಕ ರತ್ನ ಗೋಪಾಲಕೃಷ್ಣ ಜೋಶಿಯವರ ಪುತ್ರರಾದ ಇವರ ಕರ್ನಾಟಕ ಬ್ಯಾಂಕ್‌ನ ನಿವೃತ್ತ ಉದ್ಯೋಗಿಯಾಗಿದ್ದರು. ಮೃತರು ಪತ್ನಿ, ಒಂದು ಹೆಣ್ಣು ಮಗಳು ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ. ಸ್ಥಳಕ್ಕೆ ವಿಟ್ಲ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

Read More

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ 3 ಕಿ.ಮೀ. ವ್ಯಾಪ್ತಿಯಲ್ಲಿ ಆ.15ರಿಂದ ಪ್ಲಾಸ್ಟಿಕ್‌ ನಿಷೇಧ

ಸುಬ್ರಹ್ಮಣ್ಯ : ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರವಾಗಿರುವ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆ.15ರಿಂದ ಏಕಬಳಕೆಯ ಪ್ಲಾಸ್ಟಿಕ್‌ ಚೀಲಗಳ ಬಳಕೆ ಸಂಪೂರ್ಣವಾಗಿ ರದ್ದಾಗಲಿದೆ. ಧಾರ್ಮಿಕ ದತ್ತಿ ಇಲಾಖೆಯಡಿ ಬರುವ ಎಲ್ಲಾ ದೇವಸ್ಥಾನಗಳಲ್ಲಿ ಏಕಬಳಕೆಯ ಪ್ಲಾಸ್ಟಿಕ್‌ ಉತ್ಪಾದನೆ, ಸಂಗ್ರಹ, ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದ್ದು, ಈ ಪ್ರಕಾರ ಸುಬ್ರಹ್ಮಣ್ಯ ಕ್ಷೇತ್ರದಲ್ಲೂ ಪ್ಲಾಸ್ಟಿಕ್‌ ಬಳಕೆ ನಿಷೇಧವಾಗಲಿದೆ. ಪ್ಲಾಸ್ಟಿಕ್‌ನ ನೀರಿನ ಬಾಟಲಿ ಅಂತೆಯೇ ಏಕಬಳಕೆಯ ತೆಳು ಪ್ಲಾಸ್ಟಿಕ್‌ ಚೀಲಗಳು ಸೇರಿದಂತೆ ಎಲ್ಲ ಬಳಸಿ ಎಸೆಯುವ ಪ್ಲಾಸ್ಟಿಕ್‌ ಉತ್ಪನ್ನಗಳು ನಿಷೇಧವಾಗಲಿವೆ. ಅಂಗಡಿಗಳಲ್ಲೂ ಏಕಬಳಕೆಯ…

Read More

ಚಾರ್ಮಾಡಿ ಘಾಟ್ ನಲ್ಲಿ ಪ್ರಪಾತಕ್ಕೆ ಬಿದ್ದು ಯುವಕ ಗಂಭೀರ

ಚಾರ್ಮಾಡಿ: ಪ್ರಕೃತಿ ಸೌಂದರ್ಯದಿಂದ ಹೆಸರುವಾಸಿಯಾದ ಚಾರ್ಮಾಡಿ ಘಾಟ್‌ನಲ್ಲಿ ಅಪಘಾತ ಸಂಭವಿಸಿ, 21 ವರ್ಷದ ಯುವಕನೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.ಮೂತ್ರವಿಸರ್ಜನೆಗಾಗಿ ಪ್ರಪಾತದ ಅಂಚಿನತ್ತ ಹೋದಾಗ, ಕಾಲು ಜಾರಿ ಸುಮಾರು 30 ಅಡಿ ಆಳಕ್ಕೆ ಬಿದ್ದಿದ್ದು, ಚಕ್ ಮಕ್ಕಿ ಗ್ರಾಮದ ನಿವಾಸಿ ಮುಸಮ್ಮಿಲ್ (21) ಗಾಯಗೊಂಡಿದ್ದಾನೆ. ತಕ್ಷಣ ಹೈವೇ ಪಟ್ರೊಲ್ ಸಹಾಯಕ್ಕೆ ಧಾವಿಸಿ, ಅವನನ್ನು ಎತ್ತಿ ಪ್ರಾಥಮಿಕ ಚಿಕಿತ್ಸೆ ನೀಡಿ, ಬಳಿಕ ಮಂಗಳೂರು ಆಸ್ಪತ್ರೆಗೆ ರವಾನಿಸಿದರು

Read More

ಉಡುಪಿ : ಅಡ್ಡಾದಿಡ್ಡಿ ಕಾರು ಚಾಲನೆ- ಅಬುಧಾಬಿ ನೊಂದಣಿಯ ಕಾರು ಹಾಗೂ ಚಾಲಕ ವಶಕ್ಕೆ

ಉಡುಪಿ: ಕಾರನ್ನು ಮಾನವ ಜೀವಕ್ಕೆ ಅಪಾಯಕಾರಿ ಎಸಗುವ ರೀತಿಯಲ್ಲಿ ಚಲಾಯಿಸಿಕೊಂಡು ಹೋಗುತ್ತಿದ್ದ ಚಾಲಕನನ್ನು ಮಣಿಪಾಲ ಪೊಲೀಸರು ಕಾರು ಸಹಿತ ವಶಕ್ಕೆ ಪಡೆದುಕೊಂಡಿರುವ ಬಗ್ಗೆ ವರದಿಯಾಗಿದೆ. ಕೇರಳ ಕಣ್ಣೂರಿನ ಕಂಡಗನ್ ನಿವಾಸಿ ಶೋಹೈಲ್ ನೀಲಾಕತ್(26) ವಶಕ್ಕೆ ಪಡೆದುಕೊಳ್ಳಲಾದ ಆರೋಪಿ. ಈತ ಆ.೧೧ರಂದು ಬೆಳಗ್ಗೆ ಮಣಿಪಾಲ ಅಂಚೆ ಕಛೇರಿ ಎದುರು ತನ್ನ ಕಾರಿಗೆ ಸಂಪೂರ್ಣ ಟಿಂಟ್ ಅಳವಡಿಸಿಕೊಂಡು ಉಡುಪಿ ಕಡೆಯಿಂದ ಹಿರಿಯಡ್ಕ ಕಡೆಗೆ ಅಜಾಗರೂಕತೆ ಯಿಂದ ಮಾನವ ಜೀವಕ್ಕೆ ಅಪಾಯಕಾರಿಯಾಗುವ ರೀತಿಯಲ್ಲಿ ದ್ವಿಚಕ್ರ ವಾಹನಗಳು ಹಾಗೂ ಇತರ ವಾಹನಗಳಿಗೆ ಅಪಘಾತ…

Read More

ಧರ್ಮಸ್ಥಳ ಕೇಸ್: 13ನೇ ಪಾಯಿಂಟ್ ನಲ್ಲಿ GPR ಸ್ಕ್ಯಾನ್ ಮುಕ್ತಾಯ, ತಂತ್ರಜ್ಞರಿಂದ ಪೂಟೇಜ್ ಪರಿಶೀಲನೆ

 ಧರ್ಮಸ್ಥಳದಲ್ಲಿ ಶವ ಹೂತಿಟ್ಟಿದ್ದಾಗಿ ದೂರುದಾರರೊಬ್ಬರು ಹೇಳಿದ್ದಂತ ತಪ್ಪೊಪ್ಪಿಗೆ ಹೇಳಿಕೆಯಿಂದಾಗಿ ಎಸ್ಐಟಿಯಿಂದ ಅಸ್ಥಿ ಪಂಜರಗಳ ಶೋಧ ಕಾರ್ಯಾಚರಣೆಯನ್ನು ನಡೆಸಲಾಗುತ್ತಿದೆ. ಇದೀಗ ಜಿಪಿಆರ್ ಮೂಲಕ ಪಾಯಿಂಟ್ ನಂ.13ರಲ್ಲಿ ಸ್ಕ್ಯಾನ್ ಮಾಡಲಾಗಿದ್ದು, ಅದರ ಮುಕ್ತಾಯದ ಬಳಿಕ ತಂತ್ರಜ್ಞರು ಪೂಟೇಜ್ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಧರ್ಮಸ್ಥಳದಲ್ಲಿ ಶವಗಳ ಅಸ್ಥಿ ಪಂಜರಗಳಿಗಾಗಿ ಎಸ್ಐಟಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಪಾಯಿಂಟ್ ನಂ.6ರಲ್ಲಿ ಹೊರತಾಗಿ ಇದುವರೆಗಿನ ಶೋಧ ಕಾರ್ಯಾಚರಣೆಯಲ್ಲಿ ಎಸ್ಐಟಿಗೆ ಅಸ್ಥಿಪಂಜರಗಳು ಬೇರೆ ಯಾವುದೇ ಪಾಯಿಂಟ್ ನಲ್ಲಿ ದೊರೆತಿಲ್ಲ. ಇನ್ನೂ ದೂರುದಾರ ತೋರಿಸುತ್ತಿರುವಂತ ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆಯನ್ನು ನಡೆಸಲಾಗುತ್ತಿದೆ….

Read More

ಶಿಕ್ಷೆ ಪೂರ್ಣಗೊಳಿಸಿದ ಅಪರಾಧಿಗಳನ್ನು ಪರಿಶೀಲಿಸಿ, ಬಿಡುಗಡೆ ಮಾಡುವಂತೆ ಎಲ್ಲಾ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಸೂಚನೆ

ನವದೆಹಲಿ: ಅಪರಾಧಿಗಳು ತಮ್ಮ ಶಿಕ್ಷೆಯ ಅವಧಿಯನ್ನು ಮೀರಿ ಜೈಲಿನಲ್ಲಿರುವ ಪ್ರಕರಣಗಳನ್ನು ಗುರುತಿಸಿ ತಕ್ಷಣ ಕ್ರಮ ಕೈಗೊಳ್ಳುವಂತೆ ಸುಪ್ರೀಂ ಕೋರ್ಟ್ ಮಂಗಳವಾರ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಗೃಹ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಿದೆ ಅಂತಹ ಯಾವುದೇ ಅಪರಾಧಿ ಜೈಲಿನಲ್ಲಿ ಮುಂದುವರಿದರೆ, ಬೇರೆ ಯಾವುದೇ ಪ್ರಕರಣದಲ್ಲಿ ಅಗತ್ಯವಿಲ್ಲದಿದ್ದರೆ ಅವರನ್ನು ತಕ್ಷಣ ಬಿಡುಗಡೆ ಮಾಡಬೇಕು” ಎಂದು ನ್ಯಾಯಾಲಯ ಆದೇಶಿಸಿದೆ. ನ್ಯಾಯಮೂರ್ತಿ ಬಿ.ವಿ.ನಾಗರತ್ನ ಮತ್ತು ನ್ಯಾಯಮೂರ್ತಿ ಕೆ.ವಿ.ವಿಶ್ವನಾಥ ಅವರಿದ್ದ ನ್ಯಾಯಪೀಠ ಈ ನಿರ್ದೇಶನ ನೀಡಿದೆ. ಶಿಕ್ಷೆಯ ಪೂರ್ಣ ಅವಧಿಯನ್ನು ಪೂರ್ಣಗೊಳಿಸಿದ ಆರೋಪಿಯನ್ನು…

Read More