admin

ಭಾರತ – ಚೀನ ನಡುವೆ 5 ವರ್ಷದ ಬಳಿಕ ವಿಮಾನ ಸಂಚಾರ ಆರಂಭ

ನವದೆಹಲಿ: ಭಾರತ ಮತ್ತು ಚೀನ ಮಧ್ಯೆ 5 ವರ್ಷದ ಬಳಿಕ ನೇರ ವಿಮಾನ ಸಂಚಾರ ಆರಂಭಗೊಳ್ಳಲಿದೆ. ನಾಗರಿಕ ವಿಮಾನಯಾನ ಅಧಿಕಾರಿಗಳ ನಡುವಿನ ನಿರಂತರ ಚರ್ಚೆಗಳ ನಂತರ ಈ ತಿಂಗಳ ಅಂತ್ಯದ ವೇಳೆಗೆ ನೇರ ವಿಮಾನ ಸೇವೆಗಳನ್ನು ಪುನರಾರಂಭಿಸಲು ಭಾರತ ಮತ್ತು ಚೀನ ಒಪ್ಪಿಕೊಂಡಿವೆ. ಶಾಂಫೈ ಸಹಕಾರ ಸಂಸ್ಥೆ ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ನಡುವೆ ನಡೆದ ಮಹತ್ವದ ಸಭೆಯ ಬಳಿಕ ವಿಮಾನ ಹಾರಾಟಕ್ಕೆ ಎರಡೂ ದೇಶಗಳು ಒಪ್ಪಿಗೆ ನೀಡಿವೆ.ಅಕ್ಟೋಬ‌ರ್ 26ರಿಂದ…

Read More

‘ಮಂಗಳೂರು ದಸರಾ’ ವೈಭವದ ಆಕರ್ಷಕ ಶೋಭಾಯಾತ್ರೆ

ಮಂಗಳೂರು:ಬಹು ನಿರೀಕ್ಷಿತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ‘ಮಂಗಳೂರು ದಸರಾ’ದ ಶೋಭಾಯಾತ್ರೆಗೆ ಗುರುವಾರ ಸಂಜೆ ಚಾಲನೆ ನೀಡಲಾಗಿದ್ದು, ಶುಕ್ರವಾರ ಮುಂಜಾನೆಯವರೆಗೆ ವೈಭವದಿಂದ ನೆರವೇರಿತು. ದೇವಸ್ಥಾನದ ನವೀಕರಣದ ರೂವಾರಿ, ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ ಅವರು ಈ ಸಮಾರಂಭವನ್ನು ಉದ್ಘಾಟಿಸಿದರು.ಸೆಪ್ಟೆಂಬರ್ 22 ರಂದು ನವರಾತ್ರಿ ಆಚರಣೆಗಳು ಆರಂಭಗೊಂಡಿದ್ದವು. ಅಲಂಕೃತಗೊಂಡಿದ್ದ ಮಹಾಗಣಪತಿ, ಆದಿಶಕ್ತಿ, ನವದುರ್ಗೆಯರು ಮತ್ತು ಶಾರದಾ ಮಾತೆಯ ವಿಗ್ರಹಗಳನ್ನು ಭವ್ಯ ರಥಗಳ ಮೇಲೆ ಮೆರವಣಿಗೆ ಮಾಡಲಾಯಿತು. ಇದರೊಂದಿಗೆ ವರ್ಣರಂಜಿತ ಸ್ತಬ್ಧಚಿತ್ರಗಳು…

Read More

ಮೊಬೈಲ್ ಗೇಮ್ ಆಡಿದ್ದಕ್ಕೆ ಗದರಿದ ಸಹೋದರಿ: ಮನನೊಂದು ಬಾಲಕ ಆತ್ಮಹತ್ಯೆ

ಮೊಬೈಲ್ ಗೇಮ್ ಆಡಿದ್ದಕ್ಕಾಗಿ ಅಕ್ಕ ಗದರಿದ್ದಕ್ಕೆ ಮನನೊಂದ ಬಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ದೆಹಲಿಯ ಆದರ್ಶ ನಗರದಲ್ಲಿ ನಡೆದಿದೆ. ಆದರ್ಶ್ (15) ಆತ್ಮಹತ್ಯೆ ಮಾಡಿಕೊಂಡ ಬಾಲಕ. ಆದರ್ಶ್ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ತನ್ನ ಅಧ್ಯಯನವನ್ನು ನಿರ್ಲಕ್ಷಿಸಿ ಮೊಬೈಲ್ ಗೇಮ್ ಆಡಿದ್ದಕ್ಕೆ ಅಕ್ಕ-ತಮ್ಮನ ನಡುವೆ ವಾಗ್ವಾದ ನಡೆದಿದೆ. ಈ ವೇಳೆ ಅಕ್ಕ ತಮ್ಮನನ್ನು ಗದರಿದ್ದಾಳೆ. ಇದರಿಂದ ಮನನೊಂದ ಬಾಲಕ ಮನೆಯ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಕೂಡಲೇ ಆದರ್ಶ‌ನನ್ನು ಹತ್ತಿರದ ಆಸ್ಪತ್ರೆಗೆ…

Read More

ನವರಾತ್ರಿ ಸಂಭ್ರಮದಲ್ಲಿ ಚಿನ್ನದ ಸರ ಕಳ್ಳತನಕ್ಕೆ ಯತ್ನಿಸಿದ ಮಹಿಳೆಯರ ಬಂಧನ

ಅಂಬಲಪಾಡಿ ದೇವಸ್ಥಾನದಲ್ಲಿ ನವರಾತ್ರಿ ಸಂಭ್ರಮದ ಜನಜಂಗುಳಿಯ ನಡುವೆಯೇ ವೃದ್ಧ ಮಹಿಳೆಯೊಬ್ಬರ ಚಿನ್ನದ ಸರ ಕಳ್ಳತನ ಮಾಡಲು ಯತ್ನಿಸಿದ ಇಬ್ಬರು ಮಹಿಳೆಯರನ್ನು ಪೊಲೀಸರು ಬಂಧಿಸಿದ್ದಾರೆ. ಈ ಇಬ್ಬರು ಮಹಿಳೆಯರ ಬಗ್ಗೆ ವೃದ್ಧ ಸಂತ್ರಸ್ತೆಗೆ ಸಂಶಯ ಬಂದಿದ್ದು, ಪರಿಶೀಲನೆ ನಡೆಸಿದಾಗ ಕಾಣೆಯಾಗಿದ್ದ ಚಿನ್ನದ ಸರ ಪತ್ತೆಯಾಗಿದೆ ಎಂದು ವರದಿಯಾಗಿದೆ. ಈ ಘಟನೆಯಿಂದ ರೊಚ್ಚಿಗೆದ್ದ ಸಾರ್ವಜನಿಕರು, ಅದರಲ್ಲೂ ವಿಶೇಷವಾಗಿ ಮಹಿಳಾ ಭಕ್ತರು ಆರೋಪಿಗಳ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದಾರೆ. ಆದರೆ, ಸ್ಥಳೀಯ ಮುಖಂಡರಾದ ವಿಷ್ಣು ಶೆಟ್ಟಿ ಅವರು ಮಧ್ಯಪ್ರವೇಶಿಸಿ, ಜನರಿಂದ ಹಲ್ಲೆಯಾಗದಂತೆ…

Read More

 ಕೆಮ್ಮಿನ ಸಿರಪ್ ಸೇವಿಸಿ ಆರು ಮಕ್ಕಳು ಸಾವು: ಲ್ಯಾಬ್ ಪರೀಕ್ಷೆಯಲ್ಲಿ ಆಘಾತಕಾರಿ ಮಾಹಿತಿ ಬಹಿರಂಗ

ಮಧ್ಯಪ್ರದೇಶ: ಇಲ್ಲಿನ ಚಿಂದ್ವಾರದಲ್ಲಿ ಕೆಮ್ಮಿನ ಸಿರಪ್ ಸೇವನೆಯಿಂದ ಆರು ಮಕ್ಕಳು ಸಾವನ್ನಪ್ಪಿದ್ದಾರೆ ಎಂಬ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ. ಬಯಾಪ್ಸಿ ವರದಿಗಳು ಮಕ್ಕಳಿಗೆ ಮೂತ್ರಪಿಂಡ ವೈಫಲ್ಯ ಉಂಟಾಗಿದೆ ಎಂದು ಬಹಿರಂಗಪಡಿಸಿವೆ. ವಿಷಯ ಬೆಳಕಿಗೆ ಬಂದ ತಕ್ಷಣ, ಚಿಂದ್ವಾರ ಕಲೆಕ್ಟರ್ ತಕ್ಷಣ ಕ್ರಮ ಕೈಗೊಂಡು ಎರಡು ಕೆಮ್ಮಿನ ಸಿರಪ್‌ಗಳಾದ ಕೋಲ್ಡ್ರಿಫ್ ಮತ್ತು ನೆಕ್ಸ್ಟ್ರೋ-ಡಿಎಸ್ ಮೇಲೆ ನಿಷೇಧ ಹೇರಿದರು. ಚಿಂದ್ವಾರದ ಪರಾಸಿಯಾ ಪ್ರದೇಶದಲ್ಲಿ ಹರಡುತ್ತಿರುವ ನಿಗೂಢ ಕಾಯಿಲೆಯ ಬಗ್ಗೆ ಹೊಸ ಸಂಗತಿಗಳು ಬೆಳಕಿಗೆ ಬರುತ್ತಿವೆ. ವೈರಾಣು ಪ್ರಯೋಗಾಲಯದಲ್ಲಿ ಪರೀಕ್ಷಿಸಲಾದ ಮೂರು…

Read More

ಉಪ್ಪಿನಂಗಡಿ: ಮಾದಕ ವಸ್ತು ಸಾಗಿಸುತ್ತಿದ್ದ ಆರೋಪಿಯ ಬಂಧನ

ಉಪ್ಪಿನಂಗಡಿ: ಕಾರಿನಲ್ಲಿ ಮಾದಕ ವಸ್ತು ಸಾಗಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಪುತ್ತೂರು ತಾಲೂಕು ಬಜತ್ತೂರು ಗ್ರಾಮದ ಬೆದ್ರೋಡಿ ಎಂಬಲ್ಲಿ ನಡೆದಿದೆ. ಉಪ್ಪಿನಂಗಡಿ ಗ್ರಾಮದ ಮಠ ನಿವಾಸಿ ರಜಾಕ್ (43) ಬಂಧಿತ ಆರೋಪಿ. ದಿನಾಂಕ ಅಕ್ಟೋಬರ್ 1 ರಂದು ಉಪ್ಪಿನಂಗಡಿ ಪೊಲೀಸ್ ಠಾಣೆಯ ಪೊಲೀಸ್‌ ಉಪನಿರೀಕ್ಷಕರಾದ ಅವಿನಾಶ್ ಹೆಚ್ ರವರು ಮತ್ತು ಸಿಬ್ಬಂದಿ ಠಾಣಾ ವ್ಯಾಪ್ತಿಯಲ್ಲಿ ರೌಂಡ್ಸ್ ಕರ್ತವ್ಯದಲ್ಲಿ ವಾಹನ ತಪಾಸಣೆ ಮಾಡುವ ಸಮಯ ಸುಮಾರು 4 ಗಂಟೆಗೆ ನೆಲ್ಯಾಡಿ ಕಡೆಯಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ಕಪ್ಪು…

Read More

ಮದರಸಾಗಳಲ್ಲಿ 556 ಹಿಂದೂ ಮಕ್ಕಳ ಬಲವಂತದ ಮತಾಂತರ : NHRC ನೋಟಿಸ್

ಮಧ್ಯಪ್ರದೇಶದಲ್ಲಿ 27 ಅಕ್ರಮ ಮದರಸಾಗಳ ಬಗ್ಗೆ ದೊಡ್ಡ ವಿವಾದ ಭುಗಿಲೆದ್ದಿದ್ದು, ಅಲ್ಲಿ 500 ಕ್ಕೂ ಹೆಚ್ಚು ಹಿಂದೂ ಮಕ್ಕಳಿಗೆ ಕುರಾನ್ ಕಲಿಸಿ ಇಸ್ಲಾಂಗೆ ಮತಾಂತರಗೊಳ್ಳುವಂತೆ ಒತ್ತಡ ಹೇರಿದ ಪ್ರಕರಣಗಳು ಬೆಳಕಿಗೆ ಬಂದಿವೆ. ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (NHRC) ರಾಜ್ಯದ 27 ಮದರಸಾಗಳಲ್ಲಿ 556 ಹಿಂದೂ ಮಕ್ಕಳು ಭಾಗಿಯಾಗಿದ್ದಾರೆ ಎಂಬ ಆರೋಪದ ಮತಾಂತರ ಜಾಲದ ಬಗ್ಗೆ ರಾಜ್ಯ ಸರ್ಕಾರದಿಂದ ಪ್ರತಿಕ್ರಿಯೆ ಕೇಳಿದ್ದು, 15 ದಿನಗಳಲ್ಲಿ ವರದಿ ನೀಡುವಂತೆ ಕೋರಿದೆ. ಅನೇಕ ಮದರಸಾಗಳಲ್ಲಿ, ಮುಸ್ಲಿಮೇತರ ಮಕ್ಕಳನ್ನು ಕುರಾನ್ ಅಧ್ಯಯನ…

Read More

ನಾಳೆ (ಅ. 2) ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ 17ನೇ ಶಾಖೆ ಕಲ್ಲಡ್ಕದಲ್ಲಿ ಶುಭಾರಂಭ

ಪುತ್ತೂರು: ಸುದೀರ್ಘ 67 ವರ್ಷಗಳ ಇತಿಹಾಸವಿರುವ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ 17ನೇ ಶಾಖೆಯು ಅ. 2ರಂದು ಕಲ್ಲಡ್ಕದ ಕೆ.ಸಿ ರೋಡ್ ಈಶಾನ ಕಾಂಪ್ಲೆಕ್ಸ್ನಲ್ಲಿ ಶುಭಾರಂಭಗೊಳ್ಳಲಿದೆ ಎಂದ ಸಂಘದ ಅಧ್ಯಕ್ಷ ಭಾಸ್ಕರ ಎಂ ಪೆರುವಾಯಿ ಹೇಳಿದರು. ಸೆ. 29ರಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಂಬಾರಿಕೆ ಮತ್ತು ಗ್ರಾಮೀಣ ಗುಡಿ ಕೈಗಾರಿಕೆಗಳ ಅಭಿವೃದ್ಧಿಗಾಗಿ 1958ರಲ್ಲಿ ಸ್ಥಾಪನೆಗೊಂಡ ಸಹಕಾರಿ ಸಂಘವು ಪ್ರಸ್ತುತ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಮೈಸೂರು ಜಿಲ್ಲಾ ವ್ಯಾಪ್ತಿಯನ್ನು ಹೊಂದಿದೆ. ಈಗಾಗಲೇ 16 ಕಡೆಗಳಲ್ಲಿ ಶಾಖೆಗಳು ಪ್ರಾರಂಭಗೊಂಡಿದ್ದು…

Read More

ಮಂಗಳೂರು ದಸರಾ: ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆ – ಪರ್ಯಾಯ ಮಾರ್ಗಗಳನ್ನು ಬಳಸಲು ಸೂಚನೆ

ಮಂಗಳೂರು: ಪ್ರಸಿದ್ಧ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ನಡೆಯುವ ದಸರಾ ಮೆರವಣಿಗೆಯ ಹಿನ್ನೆಲೆಯಲ್ಲಿ ಅಕ್ಟೋಬರ್ 2ರಂದು ಸಂಜೆ 4 ಗಂಟೆಯಿಂದ ಅಕ್ಟೋಬರ್ 3ರ ಬೆಳಗ್ಗೆ 6 ಗಂಟೆಯವರೆಗೆ ನಗರದ ವಿವಿಧ ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ಬದಲಾವಣೆಗಳನ್ನು ಜಾರಿಗೊಳಿಸಲಾಗುತ್ತಿದೆ ಎಂದು ಮಂಗಳೂರು ನಗರ ಪೊಲೀಸ್ ಇಲಾಖೆ ತಿಳಿಸಿದೆ. ಮೆರವಣಿಗೆ ಕುದ್ರೋಳಿ ದೇವಸ್ಥಾನದಿಂದ ಆರಂಭವಾಗಿ ದುರ್ಗಾಮಹಲ್ ಜಂಕ್ಷನ್, ಮಣ್ಣಗುಡ್ಡೆ, ನಾರಾಯಣಗುರು ವೃತ್ತ, ಲಾಲ್‌ಭಾಗ್, ಬಳ್ಳಾಲ್ ಭಾಗ್, ಕೊಡಿಯಲ್‌ಗುತ್ತು, ಪಿವಿಎಸ್, ನವಭಾರತ ವೃತ್ತ, ಹಂಪನಕಟ್ಟೆ, ಕಾರ್ ಸ್ಟ್ರೀಟ್, ಅಳಕೆ ಬ್ರಿಡ್ಜ್ ಮೂಲಕ ಮತ್ತೆ…

Read More

ಧರ್ಮಸ್ಥಳ ಪ್ರಕರಣ: ಅವಶೇಷ ಪತ್ತೆಯಾದ ಬಂಗ್ಲೆಗುಡ್ಡೆ ಪ್ರದೇಶದಲ್ಲಿ ಎಸ್.ಐ.ಟಿ ಪರಿಶೀಲನೆ

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ, ರಾಜ್ಯ ವಿಶೇಷ ತನಿಖಾ ದಳದ (ಎಸ್.ಐ.ಟಿ) ಅಧಿಕಾರಿಗಳು ಮಂಗಳವಾರ ಬಂಗ್ಲೆಗುಡ್ಡೆ ಪ್ರದೇಶಕ್ಕೆ ಭೇಟಿ ನೀಡಿ ಕೂಲಂಕಷ ಪರಿಶೀಲನೆ ನಡೆಸಿದರು. ಪ್ರಕರಣದ ಮೃತದೇಹಗಳ ಅವಶೇಷಗಳು ಪತ್ತೆಯಾದ ಸ್ಥಳಗಳ ಸಮಗ್ರ ಮಾಹಿತಿ ಕಲೆಹಾಕುವ ನಿಟ್ಟಿನಲ್ಲಿ, ಎಸ್.ಐ.ಟಿ ಅಧಿಕಾರಿಗಳು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳೊಂದಿಗೆ ಆಗಮಿಸಿದ್ದರು.ಪ್ರಕರಣದ ತನಿಖೆಗೆ ಪೂರಕವಾಗುವಂತೆ, ಹಿಂದೆ ಅವಶೇಷಗಳು ದೊರೆತಿದ್ದ ನಿರ್ದಿಷ್ಟ ಜಾಗಗಳು ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಸ್ಕೆಚ್ ತಯಾರಿಸುವ ಕಾರ್ಯವನ್ನು ಅಧಿಕಾರಿಗಳ ತಂಡ ಕೈಗೊಂಡಿದೆ ಎಂದು ತಿಳಿದುಬಂದಿದೆ.

Read More