
ಬಂಟ್ವಾಳದಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಜಾನುವಾರು ಸಾಗಾಟ ಮಾಡಿದ ಪ್ರಕರಣಕ್ಕೆ ಸಂಬOಧಿಸಿ ಜಾನುವಾರು ನೀಡಿದ ವ್ಯಕ್ತಿಯೊಬ್ಬರ ಮನೆ ಹಾಗೂ ಹಟ್ಟಿಯನ್ನು ಪುಂಜಾಲಕಟ್ಟೆ ಪೊಲೀಸರು ಜಪ್ತಿ ಮಾಡಿದ್ದಾರೆ.



ಜಾನುವಾರು ನೀಡಿದ ಆರೋಪಿ ಭೋಜ ಮೂಲ್ಯ ಅವರ ಬಂಟ್ವಾಳ ತಾಲೂಕಿನ ಸರಪ್ಪಾಡಿ ಗ್ರಾಮದಲ್ಲಿರುವ ಮನೆ ಹಾಗೂ ಜಾನುವಾರುಹಟ್ಟಿಯನ್ನು ಕಾನೂನು ಪ್ರಕ್ರಿಯೆಯಂತೆ ಜಪ್ತಿ ಮಾಡಲಾಗಿದೆ.
ಬಂಟ್ವಾಳ ಉಳಿ ಗ್ರಾಮದ ಮಣಿನಾಲ್ಕೂರು-ತೆಕ್ಕಾರು ರಸ್ತೆಯಲ್ಲಿ ಗೂಡ್ಸ್ ಆಟೋದಲ್ಲಿ ಹಿಂಸಾತ್ಮಕವಾಗಿ ಜಾನುವಾರನ್ನು ಸಾಗಾಟ ಮಾಡಲಾಗುತ್ತಿತ್ತು. ಪುಂಜಾಲಕಟ್ಟೆ ಪೊಲೀಸರು ಗೂಡ್ಸ್ ಆಟೋವನ್ನು ತಡೆದು ಚಾಲಕ ಶೀಧರ ಪೂಜಾರಿಯನ್ನು ವಿಚಾರಿಸಿದಾಗ ಸರಪ್ಪಾಡಿಯ ಭೋಜ ಮೂಲ್ಯ ಅವರಿಂದ ಜಾನುವಾರು ಪಡೆದಿರುವುದಾಗಿ ಒಪ್ಪಿಕೊಂಡಿದ್ದರು.


ಯಾವುದೇ ಪರವಾನಿಗೆ ಇಲ್ಲದೇ ಮಾಂಸ ಮಾಡುವ ಉದ್ದೇಶದಿಂದ ಜಾನುವಾರನ್ನು ಮಾರಾಟ ಮಾಡಿದ ಪ್ರಕರಣದಲ್ಲಿ ಭೋಜ ಮೂಲ್ಯ ಅವರ ಮನೆಯನ್ನು ಜಪ್ತಿ ಮಾಡಲಾಗಿದೆ. ಪ್ರಕರಣಕ್ಕೆ ಸಂಬOಧಿಸಿ ಜಾನುವಾರು, ಆಟೋ, ಹಾಗೂ ಮೊಬೈಲ್ ಫೋನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳ ವಿರುದ್ಧ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


