ಕಲ್ಲಾಪು ಬುರ್ದುಗೋಳಿ ಶ್ರೀ ಕೊರಜ್ಜನ ಉದ್ಭವ ಶಿಲೆಯ ಆದಿಸ್ಥಳದಲ್ಲಿ ಚಿತ್ರದ ಯಶಸ್ಸಿಗಾಗಿ ಪ್ರಾರ್ಥಿಸಿದ ಬಿಗ್ ಬಾಸ್ ಶೈನ್ ಶೆಟ್ಟಿ

0 0
Read Time:1 Minute, 19 Second

ಉಳ್ಳಾಲ : ಈ ತಿಂಗಳು ತೆರೆಕಾಣಲಿರುವ ಶೈನ್ ಶೆಟ್ಟಿ, ಪ್ರಭು ಮುಂಡ್ಕೂರು ಅಭಿನಯದ ಮರ್ಯಾದೆ ಪ್ರಶ್ನೆ ಯಶಸ್ಸಿಗಾಗಿ ಕಲ್ಲಾಪು ಬುರ್ದುಗೋಳಿ ಕೊರಗಜ್ಜ ಉದ್ಬವ ಶಿಲೆಯ ಆದಿಸ್ಥಳದಲ್ಲಿ ಪ್ರಾರ್ಥನೆ ಸಲ್ಲಿಸಿ, ನಾವು ದಿನನಿತ್ಯ ನಮ್ಮ ಕಾರ್ಯ ಪ್ರಾರಂಭಿಸುವಾಗ ಅಜ್ಜನನ್ನು ನೆನಪಿಸಿಕೊಂಡು ಸಾಕಷ್ಟು ಯಶಸ್ವಿಯಾಗಿದ್ದೇವೆ, ಈ ಚಿತ್ರವೂ ಜನರ ಮನಗೆಳ್ಳುವಲ್ಲಿ ಕೊರಗಜ್ಜ ಹರಸಲಿ ಎಂದು ಪ್ರಾರ್ಥಿಸಲು ಈಕ್ಷೇತ್ರಕ್ಕೆ ಬಂದಿದ್ದೇವೆ ಖಂಡಿತ ದೈವ ಬಲ ಇರುತ್ತದೆ ಎಂದು ಮಾಧ್ಯಮಕ್ಕೆ ಪ್ರತಿಕ್ರಿಯಿಸಿದರು.


ಬುರ್ದುಗೋಳಿ ಕ್ಷೇತ್ರದ ಅಧ್ಯಕ್ಷರಾದ ವಿಶ್ವನಾಥ್ ನಾಯಕ್ ಕ್ಷೇತ್ರದ ಇತಿಹಾಸವನ್ನು ನಟರಿಗೆ ತಿಳಿಸಿ, ಗೌರವಿಸಿದರು.
ಈ ಸಂದರ್ಬದಲ್ಲಿ ಕದ್ರಿ ಇವೆಂಟ್ಸ್ ನ ಜಗದೀಶ್ ಕದ್ರಿ, ಸಾಯಿ‌ ಪರಿವಾರ್ ಟ್ರಸ್ಟ್ ನ ಪ್ರವೀಣ್ ಎಸ್ ಕುಂಪಲ, ಬುರ್ದುಗೋಳಿ ಕ್ಷೇತ್ರದ ಪುರುಷೋತ್ತಮ ಮೆಲಾಂಟ, ನವೀನ್ ಕಾಯಂಗಲ, ಪುರುಷೋತ್ತಮ ಕಲ್ಲಾಪು, ಪ್ರಶಾಂತ್ ಕಾಯಂಗಲ, ಹರೀಶ್ ಕೊಟ್ಟಾರಿ ಜೊತೆಗಿದ್ದರು.

Happy
Happy
100 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *