ಮಂಗಳೂರು: ರಸ್ತೆ ಸಂಚಾರಕ್ಕೆ ತಡೆಯೊಡ್ಡಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಆಟೊ ರಿಕ್ಷಾ ಚಾಲಕನಿಗೆ ದಂಡ

0 0
Read Time:1 Minute, 2 Second

ಮಂಗಳೂರು: ರಸ್ತೆ ಸಂಚಾರಕ್ಕೆ ತಡೆಯೊಡ್ಡಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಆಟೊ ರಿಕ್ಷಾ ಚಾಲಕನಿಗೆ ದಂಡ ವಿಧಿಸಿದ ಘಟನೆ ನಗರದಲ್ಲಿ ಬುಧವಾರ ರಾತ್ರಿ ನಡೆದಿದೆ.ಸೆ.24ರಂದು ರಾತ್ರಿ 9:30ಕ್ಕೆ ಆಟೊ ರಿಕ್ಷಾ ಚಾಲಕ ಶೈಲೇಶ್ (28) ಎಂಬಾತ ಕುದ್ರೋಳಿ ದೇವಸ್ಥಾನದ ಮುಖ್ಯ ದ್ವಾರದ ಸಾರ್ವಜನಿಕ ರಸ್ತೆಯಲ್ಲಿ ರಸ್ತೆ ಸಂಚಾರಕ್ಕೆ ಅಡಚಣೆ ಉಂಟು ಮಾಡಿದ್ದ ಈ ಬಗ್ಗೆ ಪೊಲೀಸ್ ಸಿಬ್ಬಂದಿ ಕಾನೂನು ಉಲ್ಲಂಘನೆ ನೋಟಿಸ್‌ ದಾಖಲು ಮಾಡಿದ್ದರು.

ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಶೈಲೇಶ್ ಪೊಲೀಸರೊಂದಿಗೆ ವಾಗ್ವಾದ ನಡೆಸಿದ್ದ. ಬಳಿಕ ಆತ ಕ್ಷಮೆ ಯಾಚಿಸಿದ್ದಾನೆ. ಚಾಲಕನ ವಿರುದ್ದ ಐಎಂವಿ ಪ್ರಕರಣ ದಾಖಲಿಸಿ ದಂಡ ವಿಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *