ಮಂಗಳೂರು: ಸ್ಕೂಟರ್ ಚಲಾಯಿಸಿದ ಅಪ್ರಾಪ್ತ ಬಾಲಕ – ಮಾಲಕನಿಗೆ 25,000 ರೂ. ದಂಡ
ಮಂಗಳೂರು: ಅಪ್ರಾಪ್ತ ಬಾಲಕ ಸ್ಕೂಟರ್ ಚಲಾಯಿಸಿ ಅಪಘಾತಕ್ಕೆ ಕಾರಣವಾದ ಆರೋಪದಡಿ ಸ್ಕೂಟರ್ ಮಾಲಕನಿಗೆ ನ್ಯಾಯಾಲಯದ ದಂಡ ವಿಧಿಸಿದೆ. ರಾಷ್ಟ್ರೀಯ ಹೆದ್ದಾರಿ 66ರ ನಂತೂರು ಪದವು ಬಳಿ 2025ರ ಮಾ.30ರಂದು ಮುಂಜಾವ 3:50ರ ವೇಳೆಗೆ ಅಪ್ರಾಪ್ತ ಬಾಲಕ ಸ್ಕೂಟರ್ನಲ್ಲಿ ತೆರಳುತ್ತಿದ್ದ. ಆ ವೇಳೆ ಅದೇ ದಿಕ್ಕಿನಲ್ಲಿ ಕುಂಟಿಕಾನ ಕಡೆಗೆ ಸಾಗುತ್ತಿದ್ದ ದ್ವಿಚಕ್ರ ವಾಹನಕ್ಕೆ ಬಾಲಕ ಢಿಕ್ಕಿ ಹೊಡೆದಿದ್ದು, ಇದರಿಂದ ಎರಡೂ ವಾಹನದಲ್ಲಿದ್ದವರು ಗಾಯಗೊಂಡಿದ್ದರು. ಈ ಬಗ್ಗೆ ಕದ್ರಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಎಸ್ ಐ…

