ಮಂಗಳೂರು: ಭ್ರಷ್ಟಾಚಾರದ ಆರೋಪ, ಯಾವುದೇ ತನಿಖೆಗೆ ಸಿದ್ಧ- ಯು.ಟಿ ಖಾದರ್

ಮಂಗಳೂರು: ಸ್ಪೀಕರ್ ಕಚೇರಿಯಲ್ಲಿ ಅವ್ಯವಹಾರ ಆಗಿದೆ ಎಂದು ಆರೋಪಿಸುವವರು ಕಚೇರಿಗೆ ಲಿಖಿತವಾಗಿ ದೂರು ಸಲ್ಲಿಸಿದರೆ ತನಿಖೆಗೆ ಸಿದ್ದವಿರುವುದಾಗಿ ವಿಧಾನಸಭೆಯ ಸ್ಪೀಕರ್ ಯು ಟಿ ಖಾದರ್ ಹೇಳಿದ್ದಾರೆ. ಭ್ರಷ್ಟಾಚಾರದ ಆರೋಪಗಳಿಗೆ ಸಂಬಂಧಿಸಿ ಅವರು ಮಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದರು. ಭ್ರಷ್ಟಾಚಾರದ ಆರೋಪದ ಕುರಿತು ತಾನು ಮಾಧ್ಯಮಗಳ ಮೂಲಕ ತಿಳಿದುಕೊಂಡೆ. ಜಗತ್ತಿನಲ್ಲಿ ಎಲ್ಲದಕ್ಕೂ ಮದ್ದು ಇದೆ ಆದರೆ ಅಸೂಯೆಗೆ ಮದ್ದಿಲ್ಲ ಎಂದು ಕಿಡಿ ಕಾರಿದರು.   ಅಭಿವೃದ್ಧಿ ನಿರಂತರವಾಗಿದ್ದು ಅದನ್ನು ಹಂತಹಂತವಾಗಿ ಮಾಡುತ್ತಾ ಇರುತ್ತೇನೆ. ಯಾರಿಗಾದರೂ ಅದರ ಬಗ್ಗೆ ಸಂಶಯ ಸಂದೇಹಗಳು…

Read More

ಬಂಟ್ವಾಳ: ಡಿವೈಡರ್‌ಗೆ ಡಿಕ್ಕಿ ಹೊಡೆದು ಕಾರು ಪಲ್ಟಿ- ಯುವಕ ಮೃತ್ಯು

ಬಂಟ್ವಾಳ: ಪಾಣೆಮಂಗಳೂರು ಫೈ ಓವರ್‌‌ನಲ್ಲಿ ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಪುತ್ತೂರಿನ ಯುವಕ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ಯುವಕನ್ನು ಪುತ್ತೂರು ಕುದ್ಮಾರು ನಿವಾಸಿ ಕಾರ್ತಿಕ್ (24) ಎಂದು ಗುರುತಿಸಲಾಗಿದೆ. ಮೂವರು ಪ್ರಯಾಣಿಸುತ್ತಿದ್ದ ಕಾರು ಬಂಟ್ವಾಳ ಪಾಣೆಮಂಗಳೂರು ಫೈ ಓವರ್ ಬಳಿ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಪರಿಣಾಮ ಗಂಭೀರ ಗಾಯಗೊಂಡಿದ್ದ ಕಾರ್ತಿಕ್ ರನ್ನು ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಯಿತಾದರೂ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Read More

ಬೆಳ್ತಂಗಡಿ: ಗೋಮಾಂಸ ಮಾಡುತ್ತಿದ್ದ ಶೆಡ್ ಗೆ ಪೊಲೀಸ್ ರೇಡ್..! ಇಬ್ಬರು ಅರೆಸ್ಟ್

ಬೆಳ್ತಂಗಡಿ: ದನಗಳನ್ನು ಕಳವು ಮಾಡಿಕೊಂಡು ಬಂದು ಗೋಮಾಂಸ ಮಾಡುತ್ತಿದ್ದಾಗ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿ, ದನದ ಮಾಂಸ ಮತ್ತು ಪರಿಕರಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಬಂಧಿತ ಆರೋಪಿಗಳನ್ನು ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದ ಬೆದ್ರಬೆಟ್ಟು ನಿವಾಸಿ ಅಬ್ದುಲ್ ನಝೀರ್ ಮತ್ತು ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ಝಕಾರಿಯಾ ಎಂದು ಗುರುತಿಸಲಾಗಿದೆ. ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದ ಬೆದ್ರಬೆಟ್ಟು ಚರ್ಚ್ ಬಳಿಯ ಖಾಸಗಿ ರಬ್ಬರ್ ತೋಟದ ಶೆಡ್ ಒಳಗಡೆ ಅಕ್ರಮವಾಗಿ ಜಾನುವಾರು ಕಡಿದು…

Read More

ಬಂಟ್ವಾಳ: ಪೊಸಳ್ಳಿಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ನಿರಂತರ ವಿದ್ಯಾರ್ಥಿ ವೇತನ ವಿತರಣೆ

ಬಂಟ್ವಾಳ : ಐಎಎಸ್, ಐಪಿಎಸ್ ಆಗಲು ವಿದ್ಯಾರ್ಥಿಗಳು ಆಸಕ್ತಿ ತೋರಿಸಬೇಕು, ಪ್ರತಿಭಾವಂತ ವಿದ್ತಾರ್ಥಿಗಳಿಗೆ ಮುಂದಿನ ಉನ್ನತ ಶಿಕ್ಷಣದ ಬಗ್ಗೆ ಮಾಹಿತಿ ಕೊಡಬೇಕು, ಅಷ್ಟೇ ಅಲ್ಲದೇ ಉನ್ನತ ಶಿಕ್ಷಣಕ್ಕೆ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಣದ ಯಾವುದೇ ಸಮಸ್ಯೆ ಬಾರದಂತೆ ‌ಅವರಿಗೆ ಬೇಕಾಗುವ ಹಣದ ಕ್ರೋಡೀಕರಣದ ಅಗತ್ಯ ಇದ್ದು ಇದಕ್ಕೆ ಎಲ್ಲರ ಸಹಕರಿಸಬೇಕು ಎಂದು ಕೊಡಗು ಜಿಲ್ಲಾ ಕುಲಾಲ ಸಂಘದ ಅಧ್ಯಕ್ಷ ‌ನಿವೃತ್ತ ಪೊಲೀಸ್ ಅಧಿಕಾರಿ ಕುಶಾಲಪ್ಪ ಮೂಲ್ಯ ತಿಳಿಸಿದರು. ಅವರು ಬಿ.ಸಿ.ರೋಡಿನ ಫೊಸಳ್ಳಿ ಸಮುದಾಯವಭವನದಲ್ಲಿ ಆದಿತ್ಯವಾರ ನಡೆದ ಬಂಟ್ವಾಳ ತಾಲೂಕು…

Read More

ಏಷ್ಯನ್ ಮಾಸ್ಟರ್ಸ್ ಕ್ರೀಡಾಕೂಟಕ್ಕೆ ಉಳ್ಳಾಲದ ಚಂದ್ರಶೇಖರ ಯು.ಪೆರುಬೈಲು ಆಯ್ಕೆ

ಉಳ್ಳಾಲ: 23 ನೇ ಏಷ್ಯನ್ ಮಾಸ್ಟರ್ಸ್ ಅಥ್ಲೆಟಿಕ್ ಚಾಂಪಿಯನ್ ಶಿಪ್ 2025 ನ.5 ರಿಂದ 9 ರ ತನಕ ಚೆನ್ನೈಯ ನೆಹರು ಕ್ರೀಡಾಂಗಣದಲ್ಲಿ ಜರಗುವ ಏಷ್ಯನ್ ಮಾಸ್ಟರ್ಸ್ ಕ್ರೀಡಾ ಕೂಟಕ್ಕೆ ಉಳ್ಳಾಲ, ಸೋಮೇಶ್ವರ ಚಂದ್ರಶೇಖರ ಯು.ಪೆರುಬೈಲು ಅವರು ದ.ಕ ಜಿಲ್ಲೆಯಿಂದ ಆಯ್ಕೆಯಾಗಿರುತ್ತಾರೆ. ಈ ಕ್ರೀಡಾಕೂಟದಲ್ಲಿ 22 ರಾಷ್ಟ್ರಗಳು ಭಾಗವಹಿಸುತ್ತದೆ. ಇವರು 60 ವಯೋಮಿತಿಯಲ್ಲಿ 400ಮಿ. ಓಟ ಹಾಗೂ 800ಮಿ. ಓಟದಲ್ಲಿ ಭಾಗವಹಿಸಲಿದ್ದಾರೆ. 10-15 ವರ್ಷಗಳಲ್ಲಿ ಜಿಲ್ಲಾಮಟ್ಟ, ರಾಜ್ಯಮಟ್ಟ ಹಾಗೂ ರಾಷ್ಟ್ರಮಟ್ಟದಲ್ಲಿ ಭಾಗವಹಿಸಿ ಹಲವಾರು ಪ್ರಶಸ್ತಿಗಳನ್ನು ಗಳಿಸಿರುತ್ತಾರೆ. ಇವರು…

Read More

ಉಳ್ಳಾಲ: ಆಟವಾಡುತ್ತಾ 15 ಅಡಿ ಆಳದ ಬಾವಿಗೆ ಬಿದ್ದ ಮಗು!!

ಉಳ್ಳಾಲ: ಆಟವಾಡುತ್ತಿದ್ದ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ ಮನೆ ಆವರಣದಲ್ಲಿರುವ 15 ಅಡಿ ಬಾವಿಗೆ ಬಿದ್ದಿದ್ದು, ಮಗುವನ್ನು ಸ್ಥಳೀಯ ಯುವಕ ಜೀವದ ಹಂಗು ತೊರೆದು ರಕ್ಷಿಸಿ ಮಾನವೀಯತೆ ಮೆರೆದಿರುವ ಘಟನೆ ದೇರಳಕಟ್ಟೆ ಬೆಳ್ಮ ಗ್ರಾಮದ ಮಾರಿಯಮ್ಮಗೋಳಿ ದೈವಸ್ಥಾನದ ಸಮೀಪ ಭಾನುವಾರ ಸಂಜೆ ವೇಳೆ ನಡೆದಿದೆ. ಗುರುಪ್ರಸಾದ್ ಎಂಬವರ ಮಗಳಾದ ಎರಡೂವರೆ ಹರೆಯದ ಹಿಮಾನಿಯನ್ನು ರಕ್ಷಿಸಲಾಗಿದೆ. ಮನೆಮಂದಿ ಅಂಗಳದಲ್ಲಿ ಕುಳಿತಿದ್ದ ಸಂದರ್ಭ ಅಂಗಳದಲ್ಲಿ ಆಟವಾಡುತ್ತಾ ಮಗು ಮನೆ ಆವರಣದಲ್ಲಿನ ತೆರೆದ ಬಾವಿಯೊಳಗೆ ಬಿದ್ದಿದೆ. 15 ಅಡಿ ಆಳದ ನೀರಿದ್ದ…

Read More

ಬಿ.ಸಿ.ರೋಡಿನ ಪೊಸಳ್ಳಿಯಲ್ಲಿ “ಯುವ ಪ್ರೇರಣೆ – 2025”

“ಯುವ ಪ್ರೇರಣೆ -2025” ಕಾರ್ಯಕ್ರಮವನ್ನು ಕೆನರಾ ಬ್ಯಾಂಕಿನ ಸೀನಿಯರ್ ಮೆನೇಜರ್ ಪುರಂದರ ಉದ್ಘಾಟಿಸಿದರು. ಬಂಟ್ವಾಳ : ಕೇಂದ್ರ ಸರಕಾರ ಮತ್ತು ರಾಜ್ಯ ದಿಂದ ಸಬ್ಸಿಡಿ ಇರುವ ಹಲವಾರು ರೀತಿಯ ಸಾಲ ಸೌಲಭ್ಯಗಳು ಇವೆ. ಸಿಗುವ ಸಾಲದ ಸೌಲಭ್ಯವನ್ನು ಸರಿಯಾಗಿ ಬಳಸಿಕೊಂಡು ಮರುಪಾವತಿಯನ್ನು ವ್ಯವಸ್ಥಿತವಾಗಿ ಮಾಡಿದರೆ ಬ್ಯಾಂಕ್‌ಗಳು ಕರೆದು ಮತ್ತೆ ಮತ್ತೆ ಸಾಲ ಕೊಡುತ್ತದೆ. ತಮ್ಮ ಬ್ಯಾಂಕ್ ಖಾತೆ ಎನ್‌ಪಿಎ ಮಾಡಲಿಕ್ಕೆ ಅವಕಾಶ ಮಾಡಬಾರದು. ಸಿಬಿಲ್ ವರದಿಯಿಂದ ಯಾವುದೇ ಸಾಲಗಾರನ ಸಂಪೂರ್ಣ ಮಾಹಿತಿ ಬರುತ್ತದೆ ಎಂದು ಕೆನರಾ ಬ್ಯಾಂಕಿನ…

Read More

ಕುಂಬಳೆ: 300 ಮಂದಿ ಕಾರ್ಮಿಕರು ಕಾರ್ಯ ನಿರತರಾಗಿದ್ದ ಪ್ಯಾಕ್ಟರಿಯಲ್ಲಿ ಭಾರೀ ಪ್ರಮಾಣ ಸ್ಫೋಟ..!!

ಕುಂಬಳೆ : ಅನಂತಪುರ ಪ್ಲೈವುಡ್ ಪ್ಯಾಕ್ಟರಿಯೊಂದರಲ್ಲಿ ಬಾಯ್ಲಾರ್  ಸ್ಪೋಟವಾಗಿ ಓರ್ವ ಮೃತಪಟ್ಟು ಹಲವರಿಗೆ ಗಾಯಗಳಾಗಿದೆ ಎಂದು ಪ್ರಾಥಮಿಕ ವರದಿ. ಇಂದು (ಸೋಮವಾರ) ಸುಮಾರು ಗಂಟೆ  7ರಿಂದ 7.30ರೊಳಗೆ  ನಡೆದ ದುರ್ಘಟನೆಯಲ್ಲಿ ಅನ್ಯರಾಜ್ಯ ಕಾರ್ಮಿಕನಾದ  ಓರ್ವ ಮೃತಪಟ್ಟಿದ್ದಾರೆ. ಹಲವರ ಸ್ಥಿತಿ ಚಿಂತಾಜನಕವಾಗಿದೆ.   ಅನಂತಪುರ ಬಳಿಯ ಕಣ್ಣೂರು ಕುನ್ನಿಲ್ ಸಮೀಪದ ಡೆಕ್ಕೂರು  ಪ್ಲೈವುಡ್ ಫ್ಯಾಕ್ಟರಿಯಲ್ಲಿನ ಬಾಯ್ಲರ್ ಸ್ಪೋಟಗೊಂಡಿದ್ದು ವಿವಿದೆಡೆ ಬೆಂಕಿ ಹತ್ತಿಕೊಂಡಿದೆ. 300 ರಷ್ಟು ಕಾರ್ಮಿಕರು ಸ್ಪೋಟ ವೇಳೆ ಸ್ಥಳದಲ್ಲಿದ್ದರು. ಇಲ್ಲಿನ  ಪೆರಾಲ್ ಕಣ್ಣೂರು,ಸಿದ್ದಿಬಯಲು ಸಮೀಪದವರೆಗೆ ಇದರ ಅಪಾಯ ಸಂಭವಿಸಿದೆ‌. ಈ…

Read More

ಧರ್ಮಸ್ಥಳ ಪ್ರಕರಣ: ಅಕ್ಟೋಬರ್ ಅಂತ್ಯದೊಳಗೆ ಅಂತಿಮ ವರದಿ ಸಲ್ಲಿಸುವಂತೆ ‘SIT’ಗೆ ಗೃಹ ಸಚಿವ ಪರಮೇಶ್ವರ್ ಸೂಚನೆ

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಕ್ಟೋಬರ್ 31ರ ಒಳಗೆ ಧರ್ಮಸ್ಥಳ ಪ್ರಕರಣ ಸಂಪೂರ್ಣಗೊಳ್ಳುತ್ತದೆ. ಬೆಂಗಳೂರಿನಲ್ಲಿ ಈ ವಿಚಾರವಾಗಿ ಜಿ ಪರಮೇಶ್ವರ್ ಮಹತ್ವದ ಸುಳಿವು ನೀಡಿದ್ದು, ಅಕ್ಟೋಬರ್ 31ರ ಒಳಗಾಗಿ ಸೊಸೈಟಿ ಅಧಿಕಾರಿಗಳು ಧರ್ಮಸ್ಥಳ ಪ್ರಕರಣದ ಕುರಿತು ವರದಿ ಸಲ್ಲಿಸಲಿದ್ದಾರೆ ಎಂದು ತಿಳಿಸಿದರು. ಧರ್ಮಸ್ಥಳ ವಿರುದ್ಧ ರೂಪಿಸಿದ ಆರೋಪಕ್ಕೆ ಸಂಬಂಧಪಟ್ಟಂತೆ ಅಕ್ಟೋಬರ್ ನಲ್ಲಿ ಎಸ್ಐಟಿ ವರದಿ ನೀಡುವುದಾಗಿ ಹೇಳಿದೆ ಅಕ್ಟೋಬರ್ 31ರ ಒಳಗೆ ತನಿಖಾ ವರದಿ ಕೊಡಬಹುದು ಒಂದೆರಡು ದಿನ ಹಿಂದೆ ಮುಂದೆ ಆಗಬಹುದು ಅಷ್ಟೇ ಎಲ್ಲವನ್ನು ಸೇರಿಸಿ ಕೊಡಲು…

Read More

IMA ರಾಜ್ಯ ಘಟಕದ ಉಪಾಧ್ಯಕ್ಷರಾಗಿ ಡಾ. ಅಣ್ಣಯ್ಯ ಕುಲಾಲ್ ಉಳ್ತೂರು

ಗಂಗಾವತಿಯಲ್ಲಿ ಶನಿವಾರ ಜರಗಿದ 91ನೇ ಐಎಂಎ ರಾಜ್ಯ ಸಮ್ಮೇಳನದಲ್ಲಿ ರಾಜ್ಯ ಉಪಾಧ್ಯಕ್ಷರಾಗಿ ಡಾ.ಎಂ. ಅಣ್ಣಯ್ಯ ಕುಲಾಲ್ ಉಳ್ತೂರು ಅವರು ಉಪಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು. ರಾಷ್ಟ್ರ ಅಧ್ಯಕ್ಷರಾಗಿ ಡಾ. ಭಾನುಶಾಲಿ, ರಾಷ್ಟ್ರ ಉಪಾಧ್ಯಕ್ಷರಾಗಿ ಡಾ.ಬಿದ್ದಾಳ್, ರಾಜ್ಯ ನಿರ್ಗಮನ ಹಾಗೂ ಆಗಮನ ಅಧ್ಯಕ್ಷರುಗಳಾದ ಡಾ.ಚಿನಿವಾಳ‌, ಡಾ.ವೀರಭದ್ರಯ್ಯ ಹಾಗೂ ಇನ್ನಿತರ ಹಿರಿಯ ರಾಷ್ಟ್ರ ಹಾಗೂ ರಾಜ್ಯ ನಾಯಕರುಗಳು ಉಪಸ್ಥಿತರಿದ್ದು ಪ್ರತಿಜ್ಞಾ ವಿಧಿ ಭೋದಿಸಿದರು. ಕರಾವಳಿ ಮಲೆನಾಡು ಹಾಗೂ ಮೈಸೂರು ವಿಭಾಗದಲ್ಲಿ ಪರಿಣಾಮಕಾರಿ ಸಂಘಟನಾ ಸೇವೆ ಸಲ್ಲಿಸಿದ ಡಾ.ಕುಲಾಲ್ ಅವರಿಗೆ ಬೆಳಗಾವಿ ವಿಭಾಗದ…

Read More