ಮಂಗಳೂರು: ಭ್ರಷ್ಟಾಚಾರದ ಆರೋಪ, ಯಾವುದೇ ತನಿಖೆಗೆ ಸಿದ್ಧ- ಯು.ಟಿ ಖಾದರ್
ಮಂಗಳೂರು: ಸ್ಪೀಕರ್ ಕಚೇರಿಯಲ್ಲಿ ಅವ್ಯವಹಾರ ಆಗಿದೆ ಎಂದು ಆರೋಪಿಸುವವರು ಕಚೇರಿಗೆ ಲಿಖಿತವಾಗಿ ದೂರು ಸಲ್ಲಿಸಿದರೆ ತನಿಖೆಗೆ ಸಿದ್ದವಿರುವುದಾಗಿ ವಿಧಾನಸಭೆಯ ಸ್ಪೀಕರ್ ಯು ಟಿ ಖಾದರ್ ಹೇಳಿದ್ದಾರೆ. ಭ್ರಷ್ಟಾಚಾರದ ಆರೋಪಗಳಿಗೆ ಸಂಬಂಧಿಸಿ ಅವರು ಮಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದರು. ಭ್ರಷ್ಟಾಚಾರದ ಆರೋಪದ ಕುರಿತು ತಾನು ಮಾಧ್ಯಮಗಳ ಮೂಲಕ ತಿಳಿದುಕೊಂಡೆ. ಜಗತ್ತಿನಲ್ಲಿ ಎಲ್ಲದಕ್ಕೂ ಮದ್ದು ಇದೆ ಆದರೆ ಅಸೂಯೆಗೆ ಮದ್ದಿಲ್ಲ ಎಂದು ಕಿಡಿ ಕಾರಿದರು. ಅಭಿವೃದ್ಧಿ ನಿರಂತರವಾಗಿದ್ದು ಅದನ್ನು ಹಂತಹಂತವಾಗಿ ಮಾಡುತ್ತಾ ಇರುತ್ತೇನೆ. ಯಾರಿಗಾದರೂ ಅದರ ಬಗ್ಗೆ ಸಂಶಯ ಸಂದೇಹಗಳು…

