ಮಂಗಳೂರು: ಮಹಿಳೆಗೆ ಕಿರುಕಳ ನೀಡಿದ ಆರೋಪ – ಹೆಡ್‌ಕಾನ್‌ಸ್ಟೇಬಲ್ ಅಮಾನತು…!!

ಮಂಗಳೂರು : ಮಹಿಳೆಗೆ ಕಿರುಕುಳ ನೀಡಿದ ಆರೋಪದ ಹಿನ್ನೆಲೆ ಮತ್ತು ಮಾಹಿತಿ ನೀಡದೆ ಅನಧಿಕೃತವಾಗಿ ಕರ್ತವ್ಯಕ್ಕೆ ಗೈರು ಹಾಜರಾದ ಕಾರಣ ಉಳ್ಳಾಲ ಠಾಣೆಯ ಹೆಡ್‌ಕಾನ್‌ಸ್ಟೇಬಲ್ ಸಂತೋಷ್ ಸಿ.ಜೆ. ಎಂಬವರನ್ನು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಕರ್ತವ್ಯದಿಂದ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. 2023ರಲ್ಲಿ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕಾವೂರು ಠಾಣೆಗೆ ದೂರು ನೀಡಲು ಹೋದ ಮಹಿಳೆಗೆ ಸಂತೋಷ್‌ರ ಪರಿಚಯ ಆಗಿತ್ತು. ಬಳಿಕ ಸಂತೋಷ್‌ನ ನಡವಳಿಕೆ ಬಗ್ಗೆ ಅಸಮಾಧಾನಗೊಂಡ ಮಹಿಳೆ ಕಮಿಷನರ್‌ಗೆ ದೂರು ನೀಡಿದ್ದರು. ಆ ಬಗ್ಗೆ ಕ್ಷಮೆ…

Read More

ಮಂಗಳೂರು: ನದಿಗೆ ಹಾರಿ ಆತ್ಮಹತ್ಯೆ..!! ಯುವತಿಯ ಸಾವಿಗೆ ಪ್ರೇಮ ವೈಫಲ್ಯವೇ ಕಾರಣ

ಮಂಗಳೂರಿನ ಗುರುಪುರ ನದಿಗೆ ಹಾರಿ ಆತ್ಮ*ಹತ್ಯೆ* ಮಾಡಿಕೊಂಡ ಯುವತಿಯ ಸಾವಿಗೆ ಪ್ರೇಮ ವೈಫಲ್ಯವೇ ಕಾರಣ ಎನ್ನಲಾಗಿದೆ. ಸೋಮವಾರ ಸ್ನೇಹಿತೆಯೊಂದಿಗೆ  ಗುರುಪುರ ಬಳಿಗೆ ಬಂದಿದ್ದ ಮೂಡಬಿದ್ರೆ ಕಡೆಪಲ್ಲ ನಿವಾಸಿ ನವ್ಯಾ ಸೇತುವೆಯಿಂದ ನದಿಗೆ ಹಾರಿದ್ದಾಳೆ.  ಈ ವೇಳೆ ಸ್ನೇಹಿತೆ ಕೈ ಹಿಡಿದು ಎಳೆದರೂ ಬದುಕಿಸಲು ಸಾಧ್ಯವಾಗಲಿಲ್ಲ. ವಿಷಯ ತಿಳಿದ ಕೂಡಲೇ ಪೊಲೀಸರು , ಅಗ್ನಿ ಶಾಮಕ ದಳದ ಸಿಬಂದಿ ಆಗಮಿಸಿ ಶವವನ್ನು ಮೇಲಕ್ಕೆತ್ತಿದ್ದಾರೆ. ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ನವ್ಯಾ ಯುವಕನೊಬ್ಬನನ್ನು ಪ್ರೀತಿಸುತ್ತಿದ್ದು ಆತ ಮದುವೆಯಾಗುವುದಾಗಿ…

Read More

ಸುಳ್ಯ: ಬೈಕ್‌ ಅಪಘಾತ- ಸವಾರ ಮೃತ್ಯು..!!

ಸುಳ್ಯ: ಅರಂಬೂರಿನಲ್ಲಿ ಬೈಕ್ ಅಪಘಾತವಾಗಿ ಸವಾರ ಗಂಭೀರ ಗಾಯಗೊಂಡಿರುವ ವ್ಯಕ್ತಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ವರದಿಯಾಗಿದೆ.ಡಿ.5ರಂದು ಮಧ್ಯಾಹ್ನ ಈ ಅಪಘಾತ ಸಂಭವಿಸಿದೆ. ಸಲ್ಮಾನ್ ಎಂಬವರು ಬೈಕ್ ಚಲಾಯಿಸಿಕೊಂಡು ಅರಂಬೂರು ರಸ್ತೆಯಲ್ಲಿ ಹೋಗುತ್ತಿದ್ದ ವೇಳೆ ರಸ್ತೆ ಬದಿ ತಡೆಬೇಲಿಗೆ ಗುದ್ದಿ ರಸ್ತೆಗೆ ಎಸೆಯಲ್ಪಟ್ಟ ಪರಿಣಾಮ ಬೈಕ್ ಪಲ್ಟಿಯಾಗಿ ಸಲ್ಮಾನ್ ಅವರ ತಲೆ ಭಾಗಕ್ಕೆ ಗಂಭೀರ ಗಾಯವಾಗಿತ್ತು. ತಕ್ಷಣ ಅವರನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿರುವುದಾಗಿ ತಿಳಿದುಬಂದಿದೆ.

Read More

ಉಡುಪಿ: ಅಯ್ಯಪ್ಪ ಮಾಲಾಧಾರಿಗಳು ಪ್ರಯಾಣಿಸುತ್ತಿದ್ದ ಟಿಟಿ ವಾಹನಕ್ಕೆ ಕಾರು ಡಿಕ್ಕಿ!

ಉಡುಪಿ : ಹಿರಿಯಡ್ಕ ಕಡೆಯಿಂದ ಉಡುಪಿ ಕಡೆಗೆ ಬರುತ್ತಿದ್ದ ಕಾರು ಪರ್ಕಳ ಕೆನರಾ ಬ್ಯಾಂಕ್ ತಿರುವಿನಲ್ಲಿ ನಿಯಂತ್ರಣ ತಪ್ಪಿ ಟಿಟಿ ವಾಹನಕ್ಕೆ ಡಿಕ್ಕಿಯಾದ ಘಟನೆ ನಡೆದಿದ್ದು, ಟಿಟಿ ವಾಹನದಲ್ಲಿ ತೆಲಂಗಾಣ ಮೂಲದ ಅಯ್ಯಪ್ಪ ಮಾಲಾಧಾರಿಗಳು ಪ್ರಯಾಣಿಸುತ್ತಿದ್ದರು.ಅವರು ಉಡುಪಿಯಿಂದ ಧರ್ಮಸ್ಥಳದ ಕಡೆಗೆ ಸಂಚರಿಸುತ್ತಿದ್ದರು ಎನ್ನಲಾಗಿದೆ. ಪರ್ಕಳ ಪರಿಸರದಲ್ಲಿ ಬೆಳಗ್ಗಿನ ಜಾವ ಮಂಜು ಕವಿದ ವಾತಾವರಣವಿದ್ದು, ತಿರುವು ಗೋಚರಿಸದ ಕಾರಣ ಕಾರು ಬಲಬದಿಗೆ ಸಾಗಿ ಎದುರಿನಿಂದ ಬರುತ್ತಿದ್ದ ಟಿಟಿಗೆ ಡಿಕ್ಕಿಯಾಗಿದೆ. ಕಾರು ಸಂಪೂರ್ಣ ಜಖಂಗೊಂಡಿದೆ. ಕಾರು ಚಾಲಕ ಗಾಯಗೊಂಡಿದ್ದು, ಮಣಿಪಾಲದ…

Read More

ಕೆರೆಯಲ್ಲಿ ತಾಯಿ, ಮಗುವಿನ ಮೃತದೇಹ ಪತ್ತೆ..!!

ಸುಳ್ಯ: ತಾಯಿ ಮತ್ತು ಮೂರು ವರ್ಷದ ಮಗುವಿನ ಮೃತದೇಹ ಮನೆ ಸಮೀಪದ ಕೆರೆಯಲ್ಲಿ ಪತ್ತೆಯಾಗಿರುವ ಘಟನೆ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡಿಯಾಲ ಗ್ರಾಮದಲ್ಲಿ ರವಿವಾರ ನಡೆದಿದೆ. ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಆರ್ವಾರ ಹರೀಶ್ ಎಂಬವರ ಪತ್ನಿ ಮಧುಶ್ರೀ (34) ಹಾಗೂ ಅವರ ಮೂರು ವರ್ಷದ ಮಗು ಧನ್ವಿ ಮೃತರು. ಹರೀಶ್ ಅವರು ತನ್ನ ತಂದೆ, ತಾಯಿ, ಪತ್ನಿ, ಮಗುವಿನೊಂದಿಗ ಆರ್ವಾರ ಮನೆಯಲ್ಲಿ ವಾಸಿಸುತ್ತಿದ್ದು, ಶನಿವಾರ ರಾತ್ರಿ ಮಲಗಿದ್ದ ತಾಯಿ, ಮಗು ರವಿವಾರ ಬೆಳಗ್ಗೆ ಕಾಣದೇ…

Read More

ಮಂಗಳೂರು: ಅದ್ದೂರಿಯಾಗಿ ನಡೆದ ಕುಂಭ ಕಲಾವಳಿ-ಕುಲಾಲ ಕಲಾ ಸೇವಾಂಜಲಿ ಕಾರ್ಯಕ್ರಮ

ಮಂಗಳೂರು: ಕುಲಾಲ ಸಮುದಾಯವು ತಲೆತಲಾಂತರಗಳಿಂದ ಮಹಾನ್ ಸಾಧಕರನ್ನು ನೀಡಿರುವ ದಿವ್ಯ ಸಮುದಾಯವಾಗಿದ್ದು, ಎಲ್ಲ ಸಮುದಾಯಗಳ ಪ್ರೀತಿ ಮತ್ತು ಸ್ವೀಕಾರವನ್ನು ಪಡೆದಿದೆ. ನಮ್ಮದು ಎಂಬ ಭಾವನೆ ಮೂಡಿದಾಗಲೇ ರಾಜಕೀಯ ಹಾಗೂ ಸಾಮಾಜಿಕ ಬೆಳವಣಿಗೆ ಸಾಧ್ಯ. ಕಲೆ, ಸಂಸ್ಕೃತಿ ಮತ್ತು ಆಚಾರಗಳ ಪಾಲನೆ ಅಗತ್ಯವಿದ್ದು, ಪೂರ್ವಜರ ಆದರ್ಶಗಳನ್ನು ಅನುಸರಿಸಿ ಇನ್ನಷ್ಟು ಸೇವಾಕಾರ್ಯಗಳನ್ನು ಕೈಗೊಳ್ಳಬೇಕು. ಹುಟ್ಟುಸಾವಿನ ನಡುವಿನ ಜೀವನದಲ್ಲಿ ಧರ್ಮ ಹಾಗೂ ಕರ್ತವ್ಯ ಪ್ರಜ್ಞೆ ಅತ್ಯಂತ ಮುಖ್ಯವಾದುದು ಎಂದು ಶ್ರೀ ಧಾಮ ಮಾಣಿಲದ ಯೋಗಿ ಕೌಸ್ತುಭ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ…

Read More

ಮೂಲ್ಕಿ: ಕಂಬಳದಲ್ಲಿ ಬಹುಮಾನ ಗೆದ್ದ ಕೋಣಗಳ ಮಾಲಕರಿಗೆ ಹಣಕ್ಕೆ ಬೇಡಿಕೆ- ಮೂವರ ಬಂಧನ

ಮೂಲ್ಕಿ ಕಂಬಳದಲ್ಲಿ ಬಹುಮಾನ ಗೆದ್ದ ಕೋಣಗಳ ಮಾಲಕರಿಗೆ ಹಣಕ್ಕಾಗಿ ಪೀಡಿಸುತ್ತಿದ್ದ ಮೂವರು ಆರೋಪಿಗಳನ್ನು ಮೂಲ್ಕಿ ಪೊಲೀಸರು ಬಂಧಿಸಿದ್ದಾರೆ. ಶ್ಯಾಮ ಸುಂದರ್ ಶೆಟ್ಟಿ, ಅಕ್ಷಯ್ ಪೂಜಾರಿ ಹಾಗೂ ಸುವಿನ್ ಕಾಂಚನ್ ಬಂಧಿತರು.  ಅಂಗಾರಕಟ್ಟೆ ಕೆಂಚನಕೆರೆ ನಿವಾಸಿ ಸಂಶುದ್ದೀನ್ ಅವರಿಗೆ ಈ ಮೂವರು ಆರೋಪಿಗಳು ಹಣಕ್ಕಾಗಿ ಬೇಡಿಕೆ ಇಟ್ಟಿರುವುದಾಗಿ ತಿಳಿದು ಬಂದಿದೆ. ಸಂಶುದ್ದೀನ್ ಅವರು ಮುಂಬೈಯಲ್ಲಿ ನೆಲೆಸಿರುವ ಉದ್ಯಮಿಯೊಬ್ಬರಿಗೆ ಸೇರಿದ ಗದ್ದೆ, ತೋಟ ಹಾಗೂ ಮನೆಯನ್ನು ನೋಡಿಕೊಳ್ಳುತ್ತಿದ್ದರು. ಮೂಲ್ಕಿ ಅರಸು ಕಂಬಳದಲ್ಲಿ ಸಂಶುದ್ದೀನ್ ತಂದಿದ್ದ ಕೋಣಗಳಿಗೆ ಬಹುಮಾನ ಲಭಿಸಿದ್ದು, ಅದರಲ್ಲಿ…

Read More

ಉಪ್ಪಿನಂಗಡಿ : ನಾಪತ್ತೆಯಾದ ಮ್ಯಾನೇಜರ್‌ನಿಂದ ಬ್ಯಾಂಕಿಗೆ 71.41 ಲ.ರೂ. ವಂಚನೆ

ಉಪ್ಪಿನಂಗಡಿ: ಇಲ್ಲಿನ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪೆರ್ನೆ ಎಂಬಲ್ಲಿನ ಬ್ಯಾಂಕ್ ಆಫ್ ಬರೋಡಾ ಶಾಖೆಯ ಉಪಶಾಖಾ ಪ್ರಬಂಧಕನಾಗಿ ಕಾರ್ಯನಿರ್ವಹಿಸುತ್ತಿದ್ದ ಪುಲುಗುಜ್ಜು ಸುಬ್ರಹ್ಮಣ್ಯಂ (30) ನಾಪತ್ತೆ ಪ್ರಕರಣವು ಮಹತ್ವದ ತಿರುವು ಪಡೆದುಕೊಂಡಿದೆ.ನಾಪತ್ತೆಯಾಗಿರುವ ಬ್ಯಾಂಕ್ ಉದ್ಯೋಗಿ ತಾನು ಕರ್ತವ್ಯ ನಿರ್ವಹಿಸುತ್ತಿದ್ದ ಬ್ಯಾಂಕಿಗೆ 71.41 ಲಕ್ಷ ರೂ. ವಂಚನೆ ನಡೆಸಿರುವ ಬಗ್ಗೆ ಬ್ಯಾಂಕ್ ಅಧಿಕಾರಿಗಳು ಪೊಲೀಸರಿಗೆ ದೂರು ನೀಡಿದ್ದಾರೆ. ಬಿ.ಸಿ.ರೋಡಿನಲ್ಲಿ ವಿಷ್ಣು ಎಂಬವರ ಜೊತೆ ರೂಮೊಂದರಲ್ಲಿ ವಾಸ್ತವ್ಯ ಹೊಂದಿದ್ದ ಸುಬ್ರಹ್ಮಣ್ಯಂ ಡಿ.17ರಂದು ತನ್ನ ತಮ್ಮನಿಗೆ ಹುಷಾರಿಲ್ಲ, ರೂಮಿಗೆ ಹೋಗುತ್ತೇನೆಂದು ಬ್ಯಾಂಕಿನಲ್ಲಿ ಹೇಳಿ…

Read More

ಪುತ್ತೂರು: ಯುವತಿಗೆ ವಂಚನೆ ಪ್ರಕರಣ- ಜ.24ರಂದು ಮಗುವಿಗೆ ನಾಮಕರಣ ಮಾಡುವ ಮೂಲಕ ಧರಣಿ-ಪ್ರತಿಭಾ ಕುಳಾಯಿ

ಪುತ್ತೂರಿನ ಯುವತಿಗೆ ವಂಚಿಸಿ ಜಾಮೀನಿನ ಮೇಲೆ ಬಿಡುಗಡೆಗೊಂಡಿರುವ ಆರೋಪಿ ಕೃಷ್ಣ ಜೆ. ರಾವ್ ಜಾಮೀನು ರದ್ದತಿಗೆ ಅರ್ಜಿ ಸಲ್ಲಿಸಲಾಗುವುದು. ಜ.24ರಂದು ಕಲ್ಲಡ್ಕದಲ್ಲಿ ಪ್ರತಿಭಟನಾರ್ಥಕವಾಗಿ ಮಗುವಿಗೆ ನಾಮಕರಣ ಶಾಸ್ತç ನಡೆಸುವುದಾಗಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯೆ ಪ್ರತಿಭಾ ಕುಳಾಯಿ ಹೇಳಿದರು.  ಮಂಗಳೂರಿನಲ್ಲಿ ಅವರು ಯುವತಿ, ಮಗು ಹಾಗೂ ಪೋಷಕರ ಜೊತೆ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.  ಡಿಎನ್‌ಎ ಪರೀಕ್ಷೆಯಲ್ಲಿ ಸಂತ್ರಸ್ತೆ ಪೂಜಾಳ ಮಗುವಿನ ತಂದೆ ಕೃಷ್ಣ ಜೆ.ರಾವ್ ಎಂಬುದು ಸಾಬೀತಾದರೂ ಅವರು ಈಕೆಯನ್ನು ಮದುವೆಯಾಗಲು ಒಪ್ಪುತ್ತಿಲ್ಲ. ಬದಲಾಗಿ 50 ಲಕ್ಷ…

Read More

ಮಂಗಳೂರು: ಜ.4ರಂದು “ಕುಂಭ ಕಲಾವಳಿ” : ಕುಲಾಲ ಕಲಾ ಸೇವಾಂಜಲಿ -ಕುಲಾಲ ಸಿಂಧೂರ ಪ್ರಶಸ್ತಿ ಪ್ರದಾನ

ಮಂಗಳೂರು: ಜಿಲ್ಲಾ ರಾಜೋತ್ಸವ ಪ್ರಶಸ್ತಿ ಪುರಸ್ಕೃತ ಕರ್ನಾಟಕ ರಾಜ್ಯ ಕುಲಾಲ ಕುಂಬಾರರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಹಾಗೂ ದಾಸ್ ಚಾರಿಟೇಬಲ್ ಸೇವಾ ಟ್ರಸ್ಟ್ ಮಂಗಳೂರು ಸಹಯೋಗದಲ್ಲಿ ಪದಗ್ರಹಣ, ಸಾಂಸ್ಕೃತಿಕ ಕಾರ್ಯಕ್ರಮ, ಸಾಧಕರಿಗೆ ಸನ್ಮಾನ, ಆಶಕ್ತರಿಗೆ ನೆರವು ಸೇರಿದಂತೆ ವಿವಿಧ ವಿಭಿನ್ನ ಕಾರ್ಯಕ್ರಮ ‘ಕುಂಭ ಕಲಾವಳಿ’ ಕುಲಾಲ ಕಲಾ ಸೇವಾಂಜಲಿ ಜ. 4 ರಂದು ಕುದ್ಮುಲ್ ರಂಗರಾವ್ ಪುರಭವನ ಮಂಗಳೂರು ಜರುಗಲಿದೆ ಎಂದು ಕರ್ನಾಟಕ ರಾಜ್ಯ ಕುಲಾಲ ಕುಂಬಾರರ…

Read More