ಪ್ರತಿಭಟನೆ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಹಿಂದೂ ಜಾಗರಣ ವೇದಿಕೆ ಮುಖಂಡ ಅರೆಸ್ಟ್

ಉಡುಪಿ: ದೆಹಲಿಯ ಕೆಂಪುಕೋಟೆಯಲ್ಲಿ ಕಾರು ಸ್ಪೋಟ ಕೃತ್ಯ ಖಂಡಿಸಿ ಪ್ರತಿಭಟನೆಯನ್ನು ಹಿಂದೂ ಜಾಗರಣ ವೇದಿಕೆಯ ಮುಖಂಡ ನಡೆಸಿದ್ದರು. ಆ ಬಳಿಕ ಪ್ರಚೋದನಕಾರಿ ಭಾಷಣೆ ಮಾಡಿದ್ದರಿಂದಾಗಿ ಅವರನ್ನ ಪೊಲೀಸರು ಬಂಧಿಸಿದ್ದಾರೆ. ಹಿಂದೂ ಜಾಗರಣ ವೇದಿಕೆಯ ಮುಖಂಡ ರತ್ನಾಕರ್ ಅಮೀನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ರತ್ನಾಕರ್ ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಆಜೆಕಾರಿನ ನಿವಾಸಿಯಾಗಿದ್ದಾರೆ. ದೆಹಲಿ ಸ್ಪೋಟ ಖಂಡಿಸಿ ಪ್ರತಿಭಟನೆಯನ್ನು ಹಿಂದೂ ಜಾಗರಣ ವೇದಿಕೆಯ ಮುಖಂಡ ರತ್ನಾಕರ್ ಅಮೀನ್ ನಡೆಸಿದ್ದರು. ಪ್ರತಿಭಟನೆಯ ವೇಳೆಯಲ್ಲಿ ಪ್ರಚೋದನಕಾರಿ ಭಾಷಣವನ್ನು ಮಾಡಿದಂತ ಆರೋಪದಡಿ ಅವರ…

Read More

ಸಹಕಾರಿ ಸಂಘದಲ್ಲಿ 1.70 ಕೋಟಿ ರೂ. ವಂಚನೆ..! ಪರಾರಿಯಾಗಿದ್ದ ಸುರೇಶ್‌ ಭಟ್‌ ಅರೆಸ್ಟ್

ಶಿರಿಯಾರ ಸೇವಾ ಸಹಕಾರಿ ಸಂಘ, ಕಾವಡಿ ಶಾಖೆಯಲ್ಲಿ ನಡೆದ 1 ಕೋಟಿಯ 70 ಲಕ್ಷ ರೂಪಾಯಿ ವಂಚನೆ ಪ್ರಕರಣದ ಪ್ರಮುಖ ಆರೋಪಿ ಕೋಟಾ ಪೊಲೀಸರ ಬಲೆಗೆ ಸಿಕ್ಕಿದ್ದಾನೆ. ಕೋಟ ಪೊಲೀಸ್‌ ಠಾಣೆಯ ಅಪರಾಧ ಸಂಖ್ಯೆ 205/2025, ಬಿ.ಎನ್.ಎಸ್.–2023ರ ಕಲಂ 318(3)(4), 112 ಹಾಗೂ 3(5) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಸಂಘದ ಮ್ಯಾನೇಜರ್‌ ಸುರೇಶ್‌ ಭಟ್ (38) ಹಾಗೂ ಕಿರಿಯ ಗುಮಾಸ್ತ ಹರೀಶ್‌ ಕುಲಾಲ್ ವಿರುದ್ಧ ವಂಚನೆ ಆರೋಪ ಹೊರಿಸಲಾಗಿತ್ತು. ಪ್ರಕರಣ ದಾಖಲಾಗುತ್ತಿದ್ದಂತೆಯೇ ಇಬ್ಬರೂ ತಲೆಮರೆಸಿಕೊಂಡಿದ್ದರು. ಪರಾರಿಯಾಗಿದ್ದ ಸುರೇಶ್‌…

Read More

ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಆರೋಪ: ಕಾರ್ಕಳ ಮೊರಾರ್ಜಿ ವಸತಿ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಸಸ್ಪೆಂಡ್

ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಆರೋಪದಲ್ಲಿ ಕಾರ್ಕಳ ಮಿಯಾರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕನನ್ನು ಸೇವೆಯಿಂದ ವಜಾಗೊಳಿಸಲಾಗಿದೆ.  ಕಲಬುರಗಿ ನಿವಾಸಿ ಮದರಸ್ ಎಸ್ ಮಕಾಂದರ್ ವಜಾಗೊಂಡ ದೈಹಿಕ ಶಿಕ್ಷಣ ಶಿಕ್ಷಕ. ಈತ 2005ರಲ್ಲಿ ದೈಹಿಕ ಶಿಕ್ಷಣ ಶಿಕ್ಷಕನಾಗಿ ಸೇವೆಗೆ ಸೇರ್ಪಡೆಗೊಂಡಿದ್ದ. ಧಾರ್ಮಿಕ ಭಾವನೆಗೆ ಧಕ್ಕೆ ತರುವಂತೆ ಈತ ವಿದ್ಯಾರ್ಥಿಗಳ ಜನಿವಾರ ತೆಗೆಸುವುದು,  ಕೈಗೆ ಕಟ್ಟಿದ ದಾರ ತುಂಡರಿಸುತ್ತಿದ್ದ. ಅಲ್ಲದೆ ವಿದ್ಯಾರ್ಥಿಗಳಿಗೆ ಶಿಕ್ಷೆ ನೀಡುತ್ತಿದ್ದ. ಶಾಲೆಗೆ ಆಗಮಿಸಿದ್ದ ಪೋಷಕರು ಈತನನ್ನು ತರಾಟೆಗೆ ತೆಗೆದುಕೊಂಡಿದ್ದರು.  ಇದೀಗ ಶಾಲಾ…

Read More

ಕಾರ್ಕಳ: ಮನೆಯಲ್ಲಿ 17 ಕೆಜಿ ಜಿಂಕೆ ಮಾಂಸ ಪತ್ತೆ..!! ಒರ್ವ ಅರೆಸ್ಟ್ , ಇಬ್ಬರು ಪರಾರಿ

ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ದುರ್ಗಾ ಗ್ರಾಮದ ತೆಳ್ಳಾರಿನ ಮನೆಯಲ್ಲಿ 17 ಕೆಜಿ ಜಿಂಕೆ ಮಾಂಸ ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ. ಅಕ್ರಮ ಗೋ ಹತ್ಯೆ ಪ್ರಕರಣದ ಸುಳಿವು ಆಧರಿಸಿ ಗ್ರಾಮಾಂತರ ಠಾಣೆ ಪೊಲೀಸರು ನಡೆಸಿದ ದಾಳಿ ವೇಳೆ ಜಿಂಕೆ ಮಾಂಸ ಪತ್ತೆಯಾಗಿದೆ. ಆರೋಪಿಗಳಾದ ಸಾದತ್ ಮತ್ತು ಶಫತ್ ಎಂಬ ಇಬ್ಬರು ಸ್ಥಳದಿಂದ ಪರಾರಿಯಾಗಿದ್ದು, ಮನೆಯಲ್ಲಿದ್ದ ಶಕೂರ್ (48) ಅವರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಈ ಇಬ್ಬರು ಗೋಕಳ್ಳತನ ಮತ್ತು ಅಕ್ರಮ ಹತ್ಯೆ ಪ್ರಕರಣಗಳಲ್ಲಿ…

Read More

ಉಡುಪಿ: ನಕಲಿ ಚಿನ್ನ ಅಡವಿಟ್ಟು ವಂಚಿಸಿದ ಪ್ರಕರಣ – ಐವರು ಆರೋಪಿಗಳ ಬಂಧನ

ಉಡುಪಿ: ಬ್ಯಾಂಕುಗಳಲ್ಲಿ ನಕಲಿ ಚಿನ್ನಾಭರಣಗಳನ್ನು ಅಸಲಿ ಎಂದು ನಂಬಿಸಿ ಅಡಮಾನ ಇಟ್ಟು ಸಾಲ ಪಡೆದ ವಂಚನೆ ಪ್ರಕರಣದಲ್ಲಿ ಉಡುಪಿ ಪೊಲೀಸರು ಐವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಅಂಬಪಾಡಿ ಕಪ್ಪಟ್ಟು ನಿವಾಸಿ ಪುನೀತ್ ಆನಂದ ಕೋಟ್ಯಾನ್, ತೆಂಕನಿಡಿಯೂರು ಲಕ್ಷ್ಮೀನಗರ ನಿವಾಸಿ ಸುದೀಪ್, ಏಣಗುಡ್ಡೆ ನಿವಾಸಿ ರಂಜನ್ ಕುಮಾರ್, ಪೆರ್ಡೂರು ನಿವಾಸಿ ಸರ್ವಜಿತ್ ಹೆಚ್ ಕೆ ಮತ್ತು ಮಹಾರಾಷ್ಟ್ರ ಪುಣೆ ನಿವಾಸಿ ರಾಜೇಶ್ ದಿಲೀಪ್ ಪಾಟೀಲ್ ಎಂದು ಗುರುತಿಸಲಾಗಿದೆ. ದಿನಾಂಕ 30-10-2025 ರಂದು, ಕರ್ನಾಟಕ ಬ್ಯಾಂಕ್ ಕಟ್ಟಿಂಗೇರಿ ಶಾಖಾ…

Read More

ಕೊಲ್ಲೂರು ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ಖಾತೆ ತೆರೆದು ವಂಚನೆ

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ಖಾತೆ ತೆರೆದು ಅತಿಥಿ ಗೃಹದ ಕೊಠಡಿಯನ್ನು ಕಾಯ್ದಿರಿಸುವುದಾಗಿ ಹಣ ಪಡೆದು ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಮೂಕಾಂಬಿಕಾ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ ನೀಡಿದ ದೂರಿನಂತೆ ಕೊಲ್ಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ದೇವಸ್ಥಾನದ ಅಧಿಕೃತ ವೆಬ್‌ಸೈಟ್  http://karnatakatemplesaccommodation.com ಇದರ ಬದಲಿಗೆ ವೆಬ್‌ಸೈಟನ್ನು ತೆರೆದು, ನಕಲಿ ವೆಬ್‌ಸೈಟ್ karnataka temple accommodation ಮೂಲಕ ಲಲಿತಾಂಬಿಕಾ ಅತಿಥಿ ಗ್ರಹದ ಕೊಠಡಿಯನ್ನು ಕಾಯ್ದಿರಿಸುವುದಾಗಿ ನಂಬಿಸಿ, ಕ್ಯೂ ಆರ್‌ಕೋಡ್ ಮೂಲಕ ಹಣ ಪಡೆದು ವಂಚಿಸಲಾಗಿದೆ. ಈ ಬಗ್ಗೆ ಸೂಕ್ತ…

Read More

ಕಾರ್ಕಳ: ಇಬ್ಬರು ರೈತರನ್ನು ಕೊಂದ ಕಾಡಾನೆಯನ್ನು ಕೊನೆಗೂ ಸೆರೆ ಹಿಡಿದ ಅರಣ್ಯ ಇಲಾಖೆ

ಕಾರ್ಕಳ : ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪ್ರದೇಶದ ಕೆರೆಕಟ್ಟೆ ಬಳಿ ಇಬ್ಬರು ರೈತರ ಪ್ರಾಣವನ್ನು ಬಲಿ ಪಡೆದಿದ್ದ ಕಾಡು ಆನೆಯನ್ನು ಅರಣ್ಯ ಇಲಾಖೆ ಎರಡು ದಿನಗಳ ವ್ಯಾಪಕ ಕಾರ್ಯಾಚರಣೆಯ ನಂತರ ಕೊನೆಗೂ ಸೆರೆಹಿಡಿಯಲಾಗಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಭಾಗವತಿ ಪ್ರಕೃತಿ ಶಿಬಿರದ ಬಳಿಯ ಕಾಡಿನಲ್ಲಿ ಒಂಟಿ ಆನೆ ಅಡಗಿತ್ತು. ಮಂಗಳೂರು ಅರಣ್ಯ ವಿಭಾಗ ಮತ್ತು ಕುದುರೆಮುಖ ವನ್ಯಜೀವಿ ವಿಭಾಗದ ಅಧಿಕಾರಿಗಳ ಮೇಲ್ವಿಚಾರಣೆಯಲ್ಲಿ ಈ ಬೃಹತ್ ಸೆರೆಹಿಡಿಯುವ ಕಾರ್ಯಾಚರಣೆಯನ್ನು ನಡೆಸಲಾಯಿತು. ಶಿವಮೊಗ್ಗ ಜಿಲ್ಲೆಯ ಸಕ್ರೆಬೈಲ್, ಕೊಡಗು ಜಿಲ್ಲೆಯ ದುಬಾರೆ…

Read More

ನ.28ಕ್ಕೆ ಉಡುಪಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಉಡುಪಿ: ಪರ್ಯಾಯ ಪುತ್ತಿಗೆ ಮಠದ ಶ್ರೀಸುಗುಣೇಂದ್ರ ತೀರ್ಥರು ತಮ್ಮ 4 ನೇ ವಿಶ್ವ ಗೀತಾ ಪರ್ಯಾಯದ ಅಂಗವಾಗಿ ಮುಂದಿನ ನ.28ರಂದು ಹಮ್ಮಿಕೊಂಡಿರುವ ಬೃಹತ್ ಗೀತೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಆಹ್ವಾನ ನೀಡಿದ್ದು, ಅದರಂತೆ ಅವರು ನ.28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ. ನ.28ರಂದು ನಡೆಯುವ ಲಕ್ಷ ಕಂಠ ಗೀತಗಾಯನ ಪಾರಾಯಣ ಕಾರ್ಯಕ್ರಮದಲ್ಲಿ ಪ್ರಧಾನಿ ಅವರು ಭಾಗವಹಿಸಲಿದ್ದಾರೆ ಎಂದು ಪರ್ಯಾಯ ಪುತ್ತಿಗೆ ಮಠದ ಮೂಲಗಳು ತಿಳಿಸಿವೆ. ಪ್ರಧಾನಿ ಅವರು ಶ್ರೀಕೃಷ್ಣ ಮಠಕ್ಕೆ…

Read More

20 ಅಡಿ ಆಳದಲ್ಲಿ ಬಿದ್ದ 50 ಲಕ್ಷ ರೂಪಾಯಿ ಚಿನ್ನಾಭರಣ ಮೇಲಕ್ಕೆತ್ತಿದ ಈಶ್ವರ್ ಮಲ್ಪೆ

ಮಲ್ಪೆ: ಸುಮಾರು 20 ಅಡಿ ಆಳದಲ್ಲಿ ಕೆರೆ ನೀರಿಗೆ ಬಿದ್ದ 50 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಇರುವ ಚೀಲವನ್ನು ಮೇಲಕ್ಕೆತ್ತಿದ ಈಶ್ವ‌ರ್ ಮಲ್ಪೆ ಅವರ ತಂಡ ವಾರಸುದಾರರಿಗೆ ನೀಡುವ ಮೂಲಕ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಘಟನೆಯ ಹಿನ್ನೆಲೆ ಚಿಕ್ಕಮಗಳೂರು ಮಾಗಡಿ ಬಳಿ ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಕೆರೆಗೆ ಬಿದ್ದಿತ್ತು. ಅದರಲ್ಲಿದ್ದ ಜುವೆಲರಿ ಅಂಗಡಿಯ ಮಾಲಕ ಈಜಿ ದಡ ಸೇರಿದ್ದರು. ಕಾರನ್ನು ಕ್ರೇನ್ ತರಿಸಿ ಮೇಲಕ್ಕೆತ್ತಲಾಯಿತು. ಆದರೆ ಕಾರಿನಲ್ಲಿದ್ದ 50 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣವಿದ್ದ…

Read More

ಸಿಡಿಲು ಬಡಿದು ಹಾನಿಯಾದ ಮನೆಗೆ ಶೀಘ್ರವೇ ಸ್ಪಂದಿಸಿ ಸಹಕರಿಸಿದ ಕಾಂತಾವರ ಕುಲಾಲ ಸಂಘ

ಕಾಂತಾವರ ಗ್ರಾಮದ ಬೇಲಾಡಿ ಕಂಬಳಗುಡ್ಡೆ ಜಲಜ ಮೂಲ್ಯ ಇವರ ಮನೆಗೆ ಅ. 21 ರಂದು ಸಿಡಿಲು ಬಡಿದು ಅಪಾರ ಪ್ರಮಾಣದಲ್ಲಿ ಹಾನಿಯಾಗಿದ್ದು ವಿದ್ಯುತ್ ಸಂಪರ್ಕ ಸಂಪೂರ್ಣ ಕಳಚಿ ಹೋಗಿದ್ದು ಗೋಡೆಗಳು ಕುಸಿದಿತ್ತು. ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಪ್ರಭಾಕರ್ ಕುಲಾಲ್ ಮತ್ತು ಸ್ಥಳೀಯ ಪಂಚಾಯತ್ ಸದಸ್ಯರ ಸೂಚನೆ ಮೇರೆಗೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮತ್ತು ಲೆಕ್ಕಾಧಿಕಾರಿಯವರು ಭೇಟಿ ನೀಡಿ ಪರಿಹಾರಕ್ಕೆ ಕ್ರಮ ಕೈಗೊಂಡಿರುತ್ತಾರೆ. ಅಸಹಾಯಕ ಸ್ಥಿತಿಯಲ್ಲಿದ್ದ ಕುಟುಂಬದ ಮನೆಗೆ ಭೇಟಿ ನೀಡಿದ ಕಾಂತಾವರ ಕುಲಾಲ ಸಂಘದ ಅಧ್ಯಕ್ಷರಾದ…

Read More