ಕಾಸರಗೋಡು : ಇಬ್ಬರು ಮಕ್ಕಳಿಗೆ ಅಮೀಬಿಕ್ ಮಿದುಳು ಜ್ವರ ದೃಢ

ಕಾಸರಗೋಡು: ಜಿಲ್ಲೆಗೆ ಅಮೀಬಿಕ್‌ ಮಿದುಳು ಜ್ವರ ಕಾಲಿರಿಸಿರುವುದು ದೃಢವಾಗಿದ್ದು, ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಕಾಸರಗೋಡು ಜಿಲ್ಲೆಯ 6 ವರ್ಷದ ಬಾಲಕ ಸಹಿತ ಕಣ್ಣೂರು ಜಿಲ್ಲೆಯ ಮೂರೂವರೆ ವಯಸ್ಸಿನ ಮಗುವಿಗೂ ಮಿದುಳು ಜ್ವರ ದೃಢೀಕರಿಸಲಾಗಿದೆ. ಇಬ್ಬರೂ ಕಲ್ಲಿಕೋಟೆ ಮೆಡಿಕಲ್‌ ಕಾಲೇಜಿನ ಪ್ರತ್ಯೇಕ ನಿಗಾ ವಿಭಾಗದಲ್ಲಿ ಚಿಕಿತ್ಸೆಯಲ್ಲಿದ್ದಾರೆ. ಅವರ ಆರೋಗ್ಯ ಸ್ಥಿತಿ ಆತಂಕಕಾರಿಯೇನಲ್ಲ ಎಂದು ಅಧಿಕೃತರು ತಿಳಿಸಿದ್ದಾರೆ. ಈಗಾಗಲೇ ಈ ವರ್ಷ ಕೇರಳದಲ್ಲಿ 42 ಮಂದಿಗೆ ಅಮೀಬಿಕ್‌ ಮಿದುಳು ಜ್ವರ ಬಾಧಿಸಿದೆ ಎಂದು ಆರೋಗ್ಯ ಇಲಾಖೆ ದೃಢೀಕರಿಸಿದೆ. ಕಳೆದ 45 ದಿನಗಳಲ್ಲಿ…

Read More

ಅ.17ರಿಂದ ನೆಲ್ಲಿತೀರ್ಥ ಶ್ರೀ ಸೋಮನಾಥೇಶ್ವರ ಗುಹಾಲಯದ ವಾರ್ಷಿಕ ತೀರ್ಥ ಸ್ನಾನ ಆರಂಭ

ಮಂಗಳೂರು: ಹಿಂದೂ ಧಾರ್ಮಿಕ ಹಾಗೂ ಧರ್ಮದಾಯ ದತ್ತಿಗಳ ಇಲಾಖೆಗಳ ಆಡಳೀತಕ್ಕೆ ಒಳಪಟ್ಟ ನೆಲ್ಲಿತೀರ್ಥ ಶ್ರೀ ಸೋಮನಾಥೇಶ್ವರ ಗುಹಾಲಯದ ವಾರ್ಷಿಕ ತೀರ್ಥ ಸ್ನಾನ ಅಕ್ಟೋಬರ್ 17 ರಿಂದ ಪ್ರಾರಂಭವಾಗಲಿದ್ದು, ಬರುವ ವರ್ಷದ ಏಪ್ರಿಲ್‌ 14ರ ವರೆಗೆ ಜರುಗಲಿದೆ. ನೆಲ್ಲಿ ತೀರ್ಥ ಸೋಮೇಶ್ವರ ಗುಹಾ ದೇವಾಲಯವು ಕರಾವಳಿಯ ಪ್ರಸಿದ್ಧವಾದ ದೇವಾಲಯಗಳಲ್ಲಿ ಒಂದಾಗಿದೆ. ಇದೊಂದು ಗುಹಾ ದೇವಾಲಯವಾಗಿದ್ದು ಮಹಾ ಶಿವನು ಲಿಂಗ ಸ್ವರೂಪಿಯಾಗಿ ಇಲ್ಲಿ ನೆಲೆಸಿದ್ದಾನೆ. ಇದೊಂದು ಉದ್ಭವ ಶಿವಲಿಂಗದ ನೆಲೆಯಾಗಿದೆ ಅಂದ ಹಾಗೆ ಭಕ್ತರಿಗೆ ಈ ಶಿವಲಿಂಗದ ದರ್ಶನಕ್ಕೆ ಅವಕಾಶ…

Read More

ಅಕ್ಟೋಬರ್ 26ರಂದು ಬಿ.ಸಿ.ರೋಡಿನ ಪೊಸಳ್ಳಿಯಲ್ಲಿ ‘ಯುವ ಪ್ರೇರಣೆ – 2025’ಪ್ರತಿಭಾ ಪುರಸ್ಕಾರ, ನಿರಂತರ ವಿದ್ಯಾರ್ಥಿ ವೇತನ

ಬಂಟ್ವಾಳ : ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ ವತಿಯಿಂದ ಅಕ್ಟೋಬರ್ 26ರಂದು ಬಿ.ಸಿ.ರೋಡಿನ ಪೊಸಳ್ಳಿ ಕುಲಾಲ ಭವನದಲ್ಲಿ ‘ಯುವ ಪ್ರೇರಣೆ – 2025 ಬ್ಯಾಂಕಿಂಗ್ ಸಾಲ ಮತ್ತು ಸ್ವಉದ್ಯೋಗ ಮಾಹಿತಿ ಕಾರ್ಯಾಗಾರ’ ನಡೆಯಲಿದೆ. ಸಂಪನ್ಮೂಲ ವ್ಯಕ್ತಿಗಳಾಗಿ ಕೆನರಾ ಬ್ಯಾಂಕ್ ಬಿ.ಸಿ.ರೋಡು ಶಾಖೆಯ ಸೀನಿಯರ್ ಬ್ರಾಂಚ್ ಮೆನೇಜರ್ ಪುರಂದರ, ಉದ್ಯಮಿ ಎಸ್. ಗಂಗಾಧರ, ಸಮಾಜ ಸೇವಾ ಸಹಕಾರಿ ಸಂಘದ ಪ್ರಧಾನ ವ್ಯವಸ್ಥಾಪಕ ಭೋಜ ಮೂಲ್ಯ ಆಗಮಿಸಲಿದ್ದಾರೆ. ನಂತರ ಎಸ್.ಎಸ್.ಎಲ್.ಸಿ. ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಪಡೆದ…

Read More

ನೇಣು ಬಿಗಿದು ಯುವತಿ ಆತ್ಮಹತ್ಯೆಗೆ ಯತ್ನ..! ರಕ್ಷಿಸಿ ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ರಸ್ತೆ ಅಪಘಾತದಲ್ಲಿ ಮೃತ್ಯು

ಕಾಸರಗೋಡು: ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ ವೈದ್ಯಕೀಯ ವಿದ್ಯಾರ್ಥಿನಿ ಮನೆಯವರಿಂದ ರಕ್ಷಿಸಲ್ಪಟ್ಟು ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟ ಘಟನೆ ಬೇತೂರು ಪಾರ ಸಮೀಪ ನಡೆದಿದೆ. ಮೃತಪಟ್ಟ ವಿದ್ಯಾರ್ಥಿನಿಯನ್ನು ಬೇಡಡ್ಕ ಬೇತೂರುಪಾರ ತಚ್ಚಾರ್ ಕುಂಡುವಿನ ಬಾಬು ಎಂಬವರ ಪುತ್ರಿ ಮಹಿಮಾ (19) ಎಂದು ಗುರುತಿಸಲಾಗಿದೆ. ಇವರು ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿಯಾಗಿದ್ದರು. ಬುಧವಾರ ಬೆಳಗ್ಗೆ ಮಹಿಮಾ ಮನೆಯ ಬೆಡ್ ರೂಮ್ ನಲ್ಲಿ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇದನ್ನು ಗಮನಿಸಿದ ಆಕೆಯ ಸಹೋದರ…

Read More

ಯೂಟ್ಯೂಬ್‌ನಲ್ಲಿ ಸುಳ್ಳು ಸುದ್ದಿ ಪ್ರಸಾರ ಮಾಡಿದ ಆರೋಪ- ಜಯಂತ್ ಟಿ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಸಂಬಂಧಿಸಿ ನೀಡಿರುವ ಹೇಳಿಕೆ ವಿಚಾರವಾಗಿ ಸೌಜನ್ಯಾ ಪರ ಹೋರಾಟಗಾರ ಜಯಂತ್ ಟಿ. ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಸುಮೋಟೋ ಪ್ರಕರಣ ದಾಖಲಾಗಿದೆ. ಜಯಂತ್ ಟಿ ರವರು ಯೂಟ್ಯೂಬ್‌ನಲ್ಲಿ ಸತ್ಯಾಸತ್ಯತೆಯನ್ನು ತಿಳಿದಿದ್ದರು ಸಹ ಅಪೂರ್ಣವಾದ ಮಾಹಿತಿಯೊಂದಿಗೆ ಪೊಲೀಸ್ ಉಪಾಧಿಕ್ಷಕರು ಬಂಟ್ವಾಳ ರವರು ನಿಯಮನುಸಾರ ಕಾನೂನಾತ್ಮಕವಾಗಿ ಮಹೇಶ್ ಶೆಟ್ಟಿ ತಿಮರೋಡಿಯವರ ವಿರುದ್ಧ ಮಾನ್ಯ ಸಹಾಯಕ ಆಯುಕ್ತರು ಪುತ್ತೂರುರವರಿಗೆ ಗಡಿಪಾರು ಪ್ರಸ್ತಾವನೆಯನ್ನು ಸಲ್ಲಿಸಿರುವುದನ್ನು ಸೌಜನ್ಯ ಪರ ಹೋರಾಟಕ್ಕೆ ತೊಂದರೆ ಮಾಡುತ್ತಿದ್ದಾರೆ ಎಂಬಂತೆ ಬಿಂಬಿಸಿ ಸಂಬಂಧ…

Read More

ಬೆಂಗಳೂರಿನಲ್ಲಿ ಕಂಬಳ ನಡೆಸಲು ಹೈಕೋರ್ಟ್‌ ಅನುಮತಿ

ಮಂಗಳೂರು : ಕರಾವಳಿಯಿಂದ ಹೊರಗೆ ಕಂಬಳ ನಡೆಸುವುದಕ್ಕೆ ಇದ್ದ ಅಡ್ಡಿ ನಿವಾರಣೆಯಾಗಿದೆ. ಕಂಬಳ ಆಯೋಜನೆಗೆ ಪೇಟಾದವರು ತಕರಾರು ಮಾಡಿದ ಹಿನ್ನೆಲೆಯಲ್ಲಿ ನಿಂತು ಹೋಗಿದ್ದ ಮೈಸೂರು, ಬೆಂಗಳೂರು ಹಾಗೂ ಶಿವಮೊಗ್ಗ ಕಂಬಳ ನಡೆಸಲು ಹೈಕೋಟ್೯ ನಿನ್ನೆ ಅನುಮತಿ ನೀಡಿದೆ. ಪುತ್ತೂರು ಶಾಸಕ ಅಶೋಕ್‌ ರೈಯವರು ಬೆಂಗಳೂರಿನಲ್ಲಿ ಕಂಬಲ ಆಯೋಜಿಸುವ ಮೂಲಕ ಇತಿಹಾಸ ಸೃಷ್ಟಿಸಿದ್ದರು. ಆದರೆ ಅದರ ಮರುವರ್ಷ ಬೆಂಗಳೂರಿನಲ್ಲಿ ಮತ್ತೆ ಕಂಬಳ ನಡೆಸಲು ಮುಂದಾದಾಗ ಪೆಟಾ ತಕರಾರು ತೆಗೆದು ಕೋರ್ಟ್‌ ಮೆಟ್ಟಿಲೇರಿತ್ತು. ಇದರಿಂದಾಗಿ ಮತ್ತೆ ಬೆಂಗಳೂರಿನಲ್ಲಿ ಕಂಬಳ ನಡೆದಿರಲಿಲ್ಲ….

Read More

ಬಂಟ್ವಾಳ: ಕಾರು ಡಿಕ್ಕಿ ಹೊಡೆದು ಮೆಕ್ಯಾನಿಕ್‌ ಸಾವು..!!

ಬಂಟ್ವಾಳ : ಬಿ.ಸಿ.ರೋಡ್ ಬಳಿಯ ಗಾಣದಪಡ್ಪು ಎಂಬಲ್ಲಿ ಮಂಗಳವಾರ ಸಂಜೆ ಸಂಭವಿಸಿದ ಭೀಕರ ಅಪಘಾತದಲ್ಲಿ ಹೆದ್ದಾರಿ ಬದಿಯಲ್ಲಿ ಕಾರು ದುರಸ್ತಿ ಮಾಡುತ್ತಿದ್ದ ಮೆಕ್ಯಾನಿಕ್‌ ಮತ್ತೊಂದು ವಾಹನ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾರೆ. ಮೃತರನ್ನು ಬೋಳಾರ್ಂತೂರು ನಿವಾಸಿ ಜಬ್ಬಾರ್ (33) ಎಂದು ಗುರುತಿಸಲಾಗಿದೆ. ಅವರು ಅವಿವಾಹಿತರಾಗಿದ್ದು, ಗಾಣದಪಡ್ಪುವಿನ ಶಿವಗಣೇಶ್ ಬ್ಯಾಟರಿ ಅಂಗಡಿಯಲ್ಲಿ ಆಟೋ ಇಲೆಕ್ಟ್ರಿಕಲ್ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದರು. ಜಬ್ಬಾರ್ ಹೆದ್ದಾರಿಯಲ್ಲಿ ನಿಲ್ಲಿಸಿದ್ದ ಕಾರಿಗೆ ಹಾರ್ನ್ ಅಳವಡಿಸುತ್ತಿದ್ದಾಗ ವೇಣೂರಿನ ವ್ಯಕ್ತಿಯೊಬ್ಬರು ಚಲಾಯಿಸುತ್ತಿದ್ದ ಮತ್ತೊಂದು ಕಾರು ಬಂಟ್ವಾಳ ಬೈಪಾಸ್ ಕಡೆಯಿಂದ…

Read More

ಮೂಡುಬಿದಿರೆ: ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೋಲೀಸರ ದಾಳಿ..!ನಾಲ್ವರು ಅರೆಸ್ಟ್, ಇಬ್ಬರು ಅಪ್ರಾಪ್ತೆ ಬಾಲಕಿಯರ ರಕ್ಷಣೆ

ಮೂಡುಬಿದಿರೆ: ವೇಶ್ಯಾವಾಟಿಕೆ ಅಡ್ಡಗೆ ದಾಳಿ ನಡೆಸಿದ ಮೂಡುಬಿದ್ರೆ ಪೊಲೀಸರು ನಾಲ್ವರನ್ನು ಬಂಧಿಸಿರುವ ಘಟನೆ ನಿಡ್ಡೋಡಿಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಬಂಧಿತ ಆರೋಪಿಗಳನ್ನು ನಿಡ್ಡೋಡಿಯ ಮಹೇಶ, ಕಟೀಲು ಪರಿಸರದ ಯಜ್ನೇಶ್, ದಿಲೀಪ್ ಹಾಗೂ ಶ್ರೀಕಾಂತ್ ಎಂದು ಗುರುತಿಸಲಾಗಿದೆ. ಇಬ್ಬರು ಅಪ್ರಾಪ್ತ ಬಾಲಕಿಯರೊಂದಿಗೆ ನಾಲ್ಕು ಮಂದಿ ಯುವಕರ ತಂಡವೊಂದು ನಿಡ್ಡೋಡಿಯ ಮನೆಯೊಂದರಲ್ಲಿದ್ದಾರೆ ಎನ್ನುವ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಇನ್ನೆಕ್ಟರ್ ಸಂದೇಶ್ ಪಿ.ಜಿ.ನೇತೃತ್ವದ ಪೊಲೀಸ್ ತಂಡವು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಮಹೇಶನ ಮನೆಯಲ್ಲಿ ಅವನೊಬ್ಬನೇ ವಾಸವಿದ್ದುದರಿಂದ ಆ ಮನೆಯನ್ನು…

Read More

ಪುತ್ತೂರು: ಬಾಲಕಿಯ ಮೃತದೇಹ ಕೊಂಡೊಯ್ದುತ್ತಿದ್ದ ಆಂಬ್ಯುಲೆನ್ಸ್ ಗೆ ರಸ್ತೆ ಮಧ್ಯೆ ತಡೆದು ಅಡ್ಡಿ- FIR ದಾಖಲು

ಪುತ್ತೂರು: ಪಡ್ನೂರು ಗ್ರಾಮದ ಕಾರ್ಲ ಶ್ರೀರಾಮ ಭಜನಾ ಮಂದಿರದ ಬಳಿ ಶವ ಸಾಗಿಸುತ್ತಿದ್ದ ಅಂಬುಲೆನ್ಸ್‌ನ್ನು ತಡೆದು ಅವಾಚ್ಯ ನಿಂದನೆ ಹಾಗೂ ಜೀವ ಬೆದರಿಕೆ ಹಾಕಿದ ಘಟನೆ ನಡೆದಿದೆ. ದಿನಾಂಕ 12-10-2025 ರ ರಾತ್ರಿ 12:30 ಗಂಟೆಯ ಸುಮಾರಿಗೆ KA 21 AE 3033 ನಂಬರಿನ ಅಂಬುಲೆನ್ಸ್‌ ಶವ ಸಾಗಿಸುತ್ತಿರುವ ವೇಳೆ, KA 19 AE 7322 ನಂಬರಿನ ಬೊಲೆರೋ ವಾಹನವು ಹಿಂಬದಿಯಿಂದ ಓವರ್‌ಟೇಕ್ ಮಾಡಿ ರಸ್ತೆಗೆ ಅಡ್ಡಗಟ್ಟಿ ಅಕ್ರಮವಾಗಿ ತಡೆದಿದೆ ಎಂದು ತಿಳಿದು ಬಂದಿದೆ. ಅಂಬುಲೆನ್ಸ್‌ನಲ್ಲಿ ಮೃತಪಟ್ಟ…

Read More

RSS ಸಂಘವನ್ನು ನಿಷೇಧ ಮಾಡುವುದು ಸರಿಯಲ್ಲ- ಪೇಜಾವರ ಶ್ರೀ

ಉಡುಪಿ: ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ನಿಷೇಧ ಮಾಡುವುದು ಸರಿಯಲ್ಲ ಎಂದು ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. RSS ನಿಷ್ಪಕ್ಷಪಾತವಾಗಿ ದೇಶ ಸೇವೆ ಮಾಡುತ್ತಿದೆ. ಪ್ರಾಕೃತಿಕ ವಿ ಕೋಪ ಗಳ ಸಂದರ್ಭದಲ್ಲಿ RSS ನೀಡುವ ಸೇವೆಯನ್ನು ಯಾರೂ ಅಲ್ಲಗಳೆಯುವುದು ಅಸಾಧ್ಯ. ಯಾವುದೇ ರೀತಿಯ ನಿರ್ಣಯಗಳನ್ನು ತೆಗೆದುಕೊಳ್ಳುವ ಮೊದಲು ಸರ್ಕಾರ ಅದರ ಲಾಭ ನಷ್ಟಗಳನ್ನು, ಸಾಧಕ ಬಾಧಕಗಳನ್ನು ಆಲೋಚನೆ ಮಾಡಬೇಕು. ಯಾವ ಸಚಿವರೇ ತಮ್ಮ ಅಭಿಪ್ರಾಯ ಮಂಡನೆ ಮಾಡಲಿ. ಆದರೆ ಅಂತಿಮವಾಗಿ ಸಿ…

Read More