ಪ್ರಯಾಣಿಕರ ಗಮನಕ್ಕೆ: ಮಂಗಳೂರು-ಯಶವಂತಪುರ ಎಕ್ಸ್ ಪ್ರೆಸ್ ರೈಲಿನ ಸಮಯದಲ್ಲಿ ಬದಲಾವಣೆ

ಮಂಗಳೂರು: ಮಂಗಳೂರು ಜಂಕ್ಷನ್​ನಿಂದ ಬೆಂಗಳೂರಿನ ಯಶವಂತಪುರದವರೆಗೆ ವಾರಕ್ಕೆ ಮೂರು ಬಾರಿ ಸಂಚರಿಸುವ ಎಕ್ಸ್​ಪ್ರೆಸ್ ರೈಲಿನ ಸಮಯದಲ್ಲಿ ಬದಲಾವಣೆಯಾಗಿದೆ. ಈ ಬಗ್ಗೆ ನೈಋತ್ಯ ರೈಲ್ವೆ ಮಾಹಿತಿ ನೀಡಿದೆ. ಮಂಗಳೂರು ಜಂಕ್ಷನ್​ನಿಂದ ಬೆಂಗಳೂರಿನ ಯಶವಂತಪುರದವರೆಗೆ ಸಂಚರಿಸುವ ಎಕ್ಸ್​ಪ್ರೆಸ್ (ರೈಲು ಸಂಖ್ಯೆ 16576) ರೈಲಿನ ವೇಳಾಪಟ್ಟಿಯನ್ನು ನವೆಂಬರ್ 1 ರಿಂದ ಜಾರಿಗೆ ಬರುವಂತೆ ಪರಿಷ್ಕರಣೆ ಮಾಡಲಾಗುತ್ತದೆ. ರೈಲು ಸಂಖ್ಯೆ- 16576 ಮಂಗಳೂರು ಜಂಕ್ಷನ್​ನಿಂದ ಬೆಳಿಗ್ಗೆ 11.30 ರ ಬದಲು ಬೆಳಿಗ್ಗೆ 7 ಗಂಟೆಗೆ ಹೊರಟು, ಅದೇ ದಿನ ರಾತ್ರಿ 8:45 ರ ಬದಲು…

Read More

ತುಳುನಾಡಿನಲ್ಲಿ ಆಟಿ ಅಮವಾಸ್ಯೆ ಸಂಭ್ರಮ:‘ಪಾಲೆ ಕಷಾಯ’ ಸೇವಿಸೋದ್ರ ಹಿಂದಿದೆ ಔಷಧೀಯ ಸತ್ವ

ಆಟಿ ಅಮಾವಾಸ್ಯೆಯ ದಿನ ಕುಡಿಯುವ ಕಷಾಯವನ್ನು ಸಪ್ತಪರ್ಣಿ ಮರದ ತೊಗಟೆಯಿಂದ ತಯಾರಿಸಲಾಗುತ್ತದೆ. ಇದನ್ನು ಕರಾವಳಿ ಭಾಗದಲ್ಲಿ ಪಾಲೆಮರದ ಕಷಾಯ ಎಂದೂ ಕರೆಯುತ್ತಾರೆ. ಬಹಳ ಹಿಂದಿನ ಕಾಲದಿಂದಲೂ ನಡೆದು ಬಂದಿರುವ ಈ ಆಚರಣೆಯು ಆರೋಗ್ಯದ ದೃಷ್ಠಿಯಿಂದ ಬಹಳ ಒಳ್ಳೆಯದು. ಈ ಕಷಾಯವು ಸಾಕಷ್ಟು ಆಯುರ್ವೇದಿಕ್ ಗುಣಗಳನ್ನು ಹೊಂದಿದ್ದು. ಹಲವಾರು ಕಾಯಿಲೆಗಳನ್ನು ಗುಣಪಡಿಸಲು ಸಹಕಾರಿಯಾಗಿದೆ. ಈಗ ಮಳೆಗಾಲ, ಕರಾವಳಿಯ ಜಡಿಮಳೆಗೆ ನಾನಾ ಬಗೆಯ ಸೋಂಕುಗಳು ಬಾಧಿಸುವ ಅಪಾಯ ಹೆಚ್ಚು. ಇದನ್ನು ಮನಗಂಡ ನಮ್ಮ ಪೂರ್ವಿಕರು ವಿಶಿಷ್ಟ ಆಚರಣೆಯೊಂದನ್ನು ಚಾಲ್ತಿಗೆ ತಂದಿದ್ದರು….

Read More

ಉಪ್ಪಿನಂಗಡಿ: ದಿಢೀರ್ ಅನಾರೋಗ್ಯಕ್ಕೀಡಾಗಿ ಕಾಲೇಜು ವಿದ್ಯಾರ್ಥಿ ಮೃತ್ಯು.!

ಉಪ್ಪಿನಂಗಡಿ: ದಿಢೀರ್ ಅನಾರೋಗ್ಯಕ್ಕೀಡಾಗಿ ಕಾಲೇಜು ವಿದ್ಯಾರ್ಥಿಯೋರ್ವನು ಮೃತಪಟ್ಟ ಘಟನೆ ಉಪ್ಪಿನಂಗಡಿಯಲ್ಲಿ ಶನಿವಾರ ನಡೆದಿದೆ. ಉಪ್ಪಿನಂಗಡಿಯ ಸರಕಾರಿ ಪ.ಪೂ.ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಮುಹಮ್ಮದ್ ಸಿರಾಜುದ್ದೀನ್ (17) ಮೃತಪಟ್ಟವನು. ಕೊಯಿಲದ ಗಂಡಿಬಾಗಿಲು ನಿವಾಸಿ ಸಿರಾಜುದ್ದೀನ್ ಕಾಲೇಜಿಗೆಂದು ಬೆಳಗ್ಗೆ ತನ್ನ ಸ್ನೇಹಿತರೊಂದಿಗೆ ಬಂದಿದ್ದಾನೆ. ಕಾಲೇಜಿನ ದಾರಿ ಮಧ್ಯೆ ಬಿ.ಪಿ. ಲೋ ಸಮಸ್ಯೆಯಿಂದ ತಲೆ ತಿರುಗಿ ಬಿದ್ದಿದ್ದಾರೆ ಎನ್ನಲಾಗಿದೆ. ತಕ್ಷಣ ಜೊತೆಗಿದ್ದವರು ಸಿರಾಜುದ್ದೀನ್‌ನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಿರಾಜುದ್ದೀನ್ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

Read More

ದ.ಕ.ಜಿಲ್ಲೆಯ ಮಳೆಹಾನಿಗೆ ರಾಜ್ಯ ಸರಕಾರ 300 ಕೋಟಿಗೂ ಅಧಿಕ ಪ್ಯಾಕೇಜ್ ಘೋಷಿಸಲಿ – ಶಾಸಕ ವೇದವ್ಯಾಸ ಕಾಮತ್

ಮಂಗಳೂರು : ಮಳೆಯಿಂದ ತೀವ್ರ ಹಾನಿಗೊಳಗಾದ ದ.ಕ.ಜಿಲ್ಲೆಗೆ ರಾಜ್ಯ ಸರಕಾರ 300ಕೋಟಿಗೂ ಅಧಿಕ ಪ್ಯಾಕೇಜ್ ಘೋಷಿಸಬೇಕು ಎಂದು ಶಾಸಕ ವೇದವ್ಯಾಸ ಕಾಮತ್ ಆಗ್ರಹಿಸಿದರು. ನಗರದ ಅಟಲ್ ಕೇಂದ್ರದಲ್ಲಿ ಮಾತನಾಡಿದ ಅವರು, ಮನೆ ಸಂಪೂರ್ಣ ಹಾನಿಯಾದಾಗ ಹಿಂದೆ ಯಡಿಯೂರಪ್ಪ ಹಾಗೂ ಬೊಮ್ಮಾಯಿ ಸರಕಾರವು ಎನ್‌ಡಿಆರ್‌ಎಫ್‌ನ 1.20 ಲಕ್ಷ ಅನುದಾನಕ್ಕೆ 3.80ಲಕ್ಷ ಸೇರಿಸಿ 5ಲಕ್ಷ ರೂ. ಪರಿಹಾರ ನೀಡುತ್ತಿತ್ತು. ಅದೇ ರೀತಿ ಭಾಗಶಃ ಹಾನಿಗೆ ಎನ್‌ಡಿಆರ್‌ಎಫ್‌ನ 50ಸಾವಿರ ಅನುದಾನಕ್ಕೆ ಸೇರಿಸಿ 2-3 ಲಕ್ಷ ಅನುದಾನ ನೀಡುತ್ತಿತ್ತು. ಇದೀಗ ಮಳೆ ಬಂದು…

Read More

ಮಂಗಳೂರು: ನಡು ರಸ್ತೆಯಲ್ಲೇ ‘ಕಾಲೇಜು ವಿದ್ಯಾರ್ಥಿ’ಗಳ ನಡುವೆ ಹೊಡೆದಾಟ

ಮಂಗಳೂರು: ವಿದ್ಯಾರ್ಥಿಗಳ ಗುಂಪೊಂದು ನಡುರಸ್ತೆಯಲ್ಲಿಯೇ ಪರಸ್ಪರ ಹೊಡೆದಾಡಿಕೊಂಡ ಘಟನೆ ಮಂಗಳೂರಿನ ಪ್ರತಿಷ್ಠಿತ ಅಲೋಶಿಯಸ್ ಕಾಲೇಜು ಬಳಿ ನಡೆದಿದೆ. ಕಾಲೇಜು ಗೇಟ್ ಮುಂಭಾಗದ ರಸ್ತೆಯಲ್ಲಿ ಎರಡು ಪ್ರತ್ಯೇಕ ಬಣ್ಣದ ಯುನಿಫಾರಂ ಧರಿಸಿರುವ ವಿದ್ಯಾರ್ಥಿಗಳ ಗುಂಪಿನ ನಡುವೆ ಹೊಡೆದಾಟ ನಡೆದಿದೆ. ಕಾಲೇಜು ಬಿಟ್ಟ ಬಳಿಕ ಕ್ಷುಲ್ಲಕ ಕಾರಣಕ್ಕಾಗಿ ವಿದ್ಯಾರ್ಥಿಗಳ ಗುಂಪಿನ ನಡುವೆ ಹೊಡೆದಾಟ ನಡೆದಿದೆ ಎನ್ನಲಾಗಿದೆ. ಆದರೆ ವಿದ್ಯಾರ್ಥಿಗಳ ನಡುವೆ ಹಿಗ್ಗಾಮುಗ್ಗಾವಾಗಿ ಹಲ್ಲೆ ನಡೆಸುತ್ತಿರುವುದು ವೀಡಿಯೋದಲ್ಲಿ ದಾಖಲಾಗಿದೆ. ಸದ್ಯ ಹೊಡೆದಾಟದ ವಿಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗುತ್ತಿದೆ.

Read More

ಮಂಗಳೂರು : ಕೆತ್ತಿಕಲ್ ಗುಡ್ಡ ಪ್ರದೇಶದಲ್ಲಿ ಭೂ ಮಾಫಿಯಾ ಶಂಕೆ- ಉನ್ನತ ಮಟ್ಟದ ತನಿಖೆಗೆ ಆದೇಶ

ಮಂಗಳೂರು : ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿರುವ ಕೆತ್ತಿಕಲ್ ಗುಡ್ಡ ಪ್ರದೇಶ ಕುಸಿಯುವ ಭೀತಿ ಎದುರಾಗಿದ್ದು, ಭಯದ ವಾತಾವರಣ ನಿರ್ಮಾಣವಾಗಿದೆ. ಇಲ್ಲಿ ಭೂ ಮಾಫಿಯಾದ ವಾಸನೆ ಇದೆ. ಉನ್ನತ ಮಟ್ಟದ ತನಿಖೆಗೆ ಆದೇಶ ನೀಡುತ್ತಿದ್ದೇನೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಅಪಾಯದ ಅಂಚಿನಲ್ಲಿರುವ ಕೆತ್ತಿಕಲ್ ರಾ.ಹೆದ್ದಾರಿಯಲ್ಲಿ ಗುಡ್ಡವನ್ನು ಶುಕ್ರವಾರ ಬೆಳಗ್ಗೆ ವೀಕ್ಷಣೆ ಮಾಡಿದ ಬಳಿಕ ಸಚಿವರು ಸುದ್ದಿಗಾರರ ಜೊತೆ ಮಾತನಾಡುತ್ತಿದ್ದರು. ಕೆತ್ತಿಕಲ್ ನಲ್ಲಿ ಹೆದ್ದಾರಿ ಕಾಮಗಾರಿ ಹೆಸರಿನಲ್ಲಿ ಮಣ್ಣು ಗಣಿಗಾರಿಕೆ ಮಾಡಲಾಗಿದೆ….

Read More

ಮುದ್ರಾ ಯೋಜನೆಯಲ್ಲಿ ಸಾಲ ಕೊಡಿಸುವುದಾಗಿ ನಂಬಿಸಿ ಹಲವರಿಗೆ ವಂಚನೆ

ಮಂಗಳೂರು: ವ್ಯಕ್ತಿಯೋರ್ವ ಕೇಂದ್ರ ಸರಕಾರದ ಮುದ್ರಾ ಯೋಜನೆಯಲ್ಲಿ ಸಾಲ ಕೊಡಿಸುವುದಾಗಿ ನಂಬಿಸಿ ಸಾರ್ವಜನಿಕರಿಗೆ 20.50 ಲಕ್ಷ ರೂ. ಪಡೆದು ವಂಚಿಸಿರುವ ಕುರಿತು ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಗರದ ಐಸ್‌ಕ್ರೀಂ ಪಾರ್ಲರ್‌ನಲ್ಲಿ ಕೆಲಸ ಮಾಡುತ್ತಿದ್ದ ಅನಿಲ್‌ ಎನ್ನುವವರಿಗೆ ಪರಿಚಯವಾಗಿದ್ದ ಪ್ರಕಾಶ್ ಪೂಜಾರಿ ಎಂಬಾತ ತಾನು ಮುದ್ರಾ ಯೋಜನೆಯ ಏಜೆಂಟ್ ಎಂದು ಪರಿಚಯಿಸಿ ಸಾಲ ಕೊಡಿಸುತ್ತೇನೆ ಎಂದು ತಿಳಿಸಿದ್ದಾನೆ. ಅನಿಲ್ ಅವರು ಬೇಡ ಎಂದರೂ, ವಿನಯದಿಂದ ಮಾತನಾಡಿ ಹಲವರಿಗೆ 15 ಲಕ್ಷ ರೂ. ವರೆಗೆ ಸಾಲ ತೆಗೆಸಿಕೊಟ್ಟಿದ್ದೇನೆ…

Read More

ಮಂಗಳೂರು: ವಿದ್ಯಾರ್ಥಿ‌ನಿಯ ಜೀವ ರಕ್ಷಣೆ ಮಾಡಿದ ಚಾಲಕ, ನಿರ್ವಾಹಕರಿಗೆ ಸನ್ಮಾನ

ಮಂಗಳೂರು : ಬಸ್ ಸಿಬ್ಬಂದಿ ಮಾನವೀಯ ಸೇವೆಗಳಿಗೆ ಇತಿಹಾಸವಿದೆ. ಗ್ರಾಮಾಂತರ ಭಾಗದಲ್ಲಿ ವಿಷದ ಹಾವು ಕಚ್ಚಿದ ರೋಗಿಯನ್ನು ಮಧ್ಯರಾತ್ರಿ ಆಸ್ಪತ್ರೆಗೆ ದಾಖಲಿಸಿದ ಚರಿತ್ರೆಯಿದೆ. ಸಿಬ್ಬಂದಿಯ ಮಾನವೀಯ ಸೇವೆಗೆ ಸಾರ್ವಜನಿಕವಾಗಿ ಸಿಕ್ಕಿರುವ ಪ್ರೋತ್ಸಾಹ ಪ್ರಶಂಸನೀಯ. ಸಿಬ್ಬಂದಿ ಮೆರೆದ ಮಾನವೀಯ ಸೇವೆ ಎಲ್ಲರಿಗೂ ಮಾದರಿಎಂದು ದ.ಕ ಜಿಲ್ಲಾ ಖಾಸಗಿ ಬಸ್ ಮಾಲಕರ ಸಂಘದ ಅಧ್ಯಕ್ಷ ಅಝೀಝ್ ಪರ್ತಿಪ್ಪಾಡಿ ಹೇಳಿದರು‌. ಅವರು ದ.ಕ ಬಸ್ಸು ಮಾಲಕರ ಸಂಘ ಮಂಗಳೂರು‌ ಇವರ ಹಂಪನಕಟ್ಟೆ ಕಚೇರಿಯ ಪಿ.ಭಾಸ್ಕರ್ ಸಾಲಿಯಾನ್ ವೇದಿಕೆಯಲ್ಲಿ ಬಸ್ಸಿನಲ್ಲಿ ಎದೆ ನೋವಿಗೆ…

Read More

ಮುಂದುವರೆದ ಮಳೆ: ನಾಳೆಯೂ (ಆ. 2)ದ.ಕ ಜಿಲ್ಲಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ

ಮಂಗಳೂರು: ದ.ಕ. ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರಕಾರಿ, ಖಾಸಗಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪಿಯು ಕಾಲೇಜುಗಳಿಗೆ (ಆಗಸ್ಟ್ 2) ಶುಕ್ರವಾರದಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಮುಲೈ ಮುಗಿಲನ್ ರಜೆ ಘೋಷಿಸಿದ್ದಾರೆ.

Read More

ಬೆಳ್ತಂಗಡಿ: ಭಾರಿ ಮಳೆಗೆ ಗುಡ್ಡ ಕುಸಿದು ದೇವಸ್ಥಾನಕ್ಕೆ ಹಾನಿ..!

ಬೆಳ್ತಂಗಡಿ :ಭಾರಿ ಮಳೆಗೆ ಗುಡ್ಡ ಕುಸಿದು ದೇವಸ್ಥಾನಕ್ಕೆ ಹಾನಿಯಾದ ಘಟನೆ ಬೆಳ್ತಂಗಡಿ ತಾಲೂಕಿನ ರೆಖ್ಯಾ ಗ್ರಾಮದ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಡೆದಿದೆ. ಭಾರೀ ಮಳೆಯಾಗುತ್ತಿರುವ ಕಾರಣ ದೇವಸ್ಥಾನದ ಸುತ್ತಿ ಇರುವ ಗುಡ್ಡ ಏಕಾಏಕಿ ದೇವಸ್ಥಾನದ ಮೇಲೆ ಬಿದ್ದಿದೆ. ದೇವಸ್ಥಾನದ ಗರ್ಭಗುಡಿ ಮತ್ತು‌ ಸುತ್ತು ಪೌಳಿಗೆ ಭಾರಿ ಪ್ರಮಾಣದಲ್ಲಿ ಹಾನಿಯಾಗಿದೆ. ನೀರಿನ ಜೊತೆಗೆ ದೇವಸ್ಥಾನದ ಒಳಗಡೆ ಮಣ್ಣು ನುಗ್ಗಿದ್ದು. ಮಳೆ ಜಾಸ್ತಿಯಾದರೆ ಮತ್ತಷ್ಟು ಗುಡ್ಡ ಕುಸಿಯುವ ಸಾಧ್ಯತೆ ಇದೆ.

Read More