ಬಜಪೆ : ದನದ ಮಾಂಸ ಸಾಗಾಟ – ಇಬ್ಬರ ಬಂಧನ
ಬಜಪೆ: ಬಜಪೆ ಪೋಲಿಸ್ ಠಾಣಾ ವ್ಯಾಪ್ತಿಯ ಬಡಗ ಎಡಪದವು ಗ್ರಾಮದ ಬೈತಾರಿ ಎಂಬಲ್ಲಿನ ಗೋಪಾಲಕೃಷ್ಣ ಭಜನಾ ಮಂದಿರದ ಬಳಿ ವಾಹನದಲ್ಲಿ ದನದ ಮಾಂಸ ಸಾಗಾಟ ಮಾಡುತಿದ್ದ ಇಬ್ಬರನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮೂಡುಬಿದ್ರೆಯ ಹಂಡೇಲು ನಿವಾಸಿಗಳಾದ ಮೊಹಮ್ಮದ್ ಆರೀಫ್ (24) ಹಾಗೂ ಮೊಹಮ್ಮದ್ ಸುಲ್ತಾನ್ (19) ಎಂದು ಗುರುತಿಸಲಾಗಿದೆ. ಬಜಪೆ ಪೊಲೀಸ್ ಠಾಣೆಯ ಪಿ.ಎಸ್.ಐ ರೇವಣಸಿದ್ದಪ್ಪ ರವರು ಸಿಬ್ಬಂದಿಯೊಂದಿಗೆ ಮಂಗಳೂರು ತಾಲೂಕು ಬಡಗ ಎಡಪದವು ಗ್ರಾಮದ ಬೈತಾರಿ ಎಂಬಲ್ಲಿ ಗೋಪಾಲಕೃಷ್ಣ ಭಜನಾ ಮಂದಿರದ ಬಳಿ ತಪಾಸಣೆ…

