ಶಿಕ್ಷಕ ದಂಪತಿಗಳಿಗೆ ಶಿಕ್ಷಕರತ್ನ ಮತ್ತು ಸಾಧಕ ರತ್ನ ಪ್ರಶಸ್ತಿ ಪ್ರಧಾನ

ಸರಕಾರಿ ಪದವಿಪೂರ್ವ ಕಾಲೇಜು ವೇಣೂರು ಪ್ರೌಢಶಾಲಾ ವಿಭಾಗದಲ್ಲಿ ಸಮಾಜ ವಿಜ್ಞಾನ ಶಿಕ್ಷಕಿಯಾಗಿ ಕರ್ತವ್ಯವನ್ನು ನಿರ್ವಹಿಸುತ್ತಿರುವ ಶ್ರೀಮತಿ ಪ್ರೇಮ ಪ್ರಭಾಕರ್ ರವರಿಗೆ ಶಿಕ್ಷಕರತ್ನ ಪ್ರಶಸ್ತಿ ಹಾಗೂ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ನಾರಾವಿ ಇಲ್ಲಿ ಮುಖ್ಯ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶ್ರೀ ಪ್ರಭಾಕರ್ ನಾರಾವಿ ಇವರಿಗೆ ಆರ್‌ಪಿ ಕಲಾ ಸೇವಾ ಟ್ರಸ್ಟ್ ಪರವಾಗಿ ಸಾಧಕರ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಬಂಟ್ವಾಳ ತಾಲೂಕಿನ ಕೆಂತಲೆ, ಮಾವಿನ ಕಟ್ಟೆಯ ಶ್ರೀ ನೇಮು ಪೂಜಾರಿ ಹಾಗೂ ಗುಲಾಬಿ ದಂಪತಿಗಳ ಪುತ್ರಿ…

Read More

ಮಂಗಳೂರು : ಮನೆ ಬಾಗಿಲು ಮುರಿದು ಕಳ್ಳತನಕ್ಕೆ ಯತ್ನ, ಮನೆಯಜಮಾನನ ಬೊಬ್ಬೆಗೆ ಕಾಲ್ಕಿತ್ತ ಕಳ್ಳರು..!

ಮಂಗಳೂರು : ಮಂಗಳೂರಿನ ಕಾವೂರಿನ ಮಹಾತ್ಮ ನಗರ ಬಡಾವಣೆಯಲ್ಲಿ ಭಾನುವಾರ ಬೆಳಗ್ಗಿನ ಜಾವ ಮನೆ ಬಾಗಿಲು ಮುರಿದು ಕಳ್ಳತನಕ್ಕೆ ಯತ್ನಿಸಿದ್ದ ಘಟನೆ ಬೆಳಕಿಗೆ ಬಂದಿದೆ. ಸುಮಾರು 1.30 ಯಿಂದ 2.00 ಗಂಟೆ ಸುಮಾರಿಗೆ  ಮನೆಯ ಕಡೆ ಬಂದ ನಾಲ್ವರ ತಂಡ  ಗೇಟಿನ ಬೀಗ  ಮುರಿದು ಮನೆಯ ಮುಂಬಾಗಿಲ ಬೀಗವನ್ನು ರಾಡಿನಿಂದ ಮುರಿಯಲು ಯತ್ನಿಸಿದ್ದಾರೆ. ಈ ಸಂದರ್ಭ ಮನೆ ಯಜಮಾನರಿಗೆ ಎಚ್ಚರಿಕೆಯಾಗಿ ಬೊಬ್ಬೆ ಹಾಕಿದಾಗ ಕಳ್ಳರು ಕಾಲ್ಕಿತ್ತಿದ್ದಾರೆ. ಈ ಬಗ್ಗೆ ಕಾವೂರು ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು ಪೊಲೀಸ್…

Read More

ಬಂಟ್ವಾಳ : ಶಾಮಿಯಾನ ಹಾಕುತಿದ್ದ ವೇಳೆ ವಿದ್ಯುತ್ ತಂತಿಗೆ ಸ್ಪರ್ಶಿಸಿ ಓರ್ವ ಸಾವು- 4 ಮಂದಿ ಆಸ್ಪತ್ರೆಗೆ ದಾಖಲು

ಬಂಟ್ವಾಳ : ಶಾಮಿಯಾನ  ಹಾಕುತಿದ್ದ ವೇಳೆ ಕಬ್ಬಿಣದ ರಾಡ್ ವಿದ್ಯುತ್ ತಂತಿಗೆ ಸ್ಪರ್ಶಿಸಿದ ಕರೆಂಟ್ ಶಾಕಿಗೆ ಓರ್ವ ಮೃತಪಟ್ಟರೆ ಇತರ ನಾಲ್ವರು ಗಂಭೀರ ಗಾಯಗೊಂಡ ಘಟನೆ ಬಂಟ್ವಾಳಲ್ಲಿ ಇಂದು ಮಧ್ಯಾಹ್ನ ಸಂಭವಿಸಿದೆ. ಕಡೇಶ್ವಾಲ್ಯ ಗ್ರಾಮದ ಕಾಡಬೆಟ್ಟು ಎಂಬಲ್ಲಿ ಕೋಳಿ ಅಂಕದ ಸಲುವಾಗಿ ಈ ಶಾಮಿಯಾನ ಹಾಕುತ್ತಿದ್ದಾಗ ದುರ್ಘಟನೆ ಸಂಭವಿಸಿದ್ದು ಬಿಹಾರ ಮೂಲದ ಕುಂದನ್ ಕುಮಾರ್ ಮಂಡಲ್ (18) ಎಂಬಾತ ಮೃತಪಟ್ಟಿದ್ದಾನೆ. ಪ್ರಸನ್ನ , ಜಾರ್ಖಂಡ್ ಮೂಲದ ಬಬ್ಲು, ಪ್ರದೀಪ್, ಪಶ್ಚಿಮ ಬಂಗಾಳದ ರೋಹಿತ್ ಎಂಬವರು ಗಾಯಗೊಂಡು ಮಂಗಳೂರಿನ…

Read More

ಇಂದಿನಿಂದ ಮೂರು ದಿನಗಳ ಕಾಲ ಮಡಗಾಂವ್‌ – ಮಂಗಳೂರು ಜಂಕ್ಷನ್ ನಡುವೆ ಮೇಮು ರೈಲು ಸಂಚಾರ

ಮಂಗಳೂರು: ಮಡಗಾಂವ್‌ ಜಂಕ್ಷನ್ ಹಾಗೂ ಮಂಗಳೂರು ಜಂಕ್ಷನ್ ನಡುವೆ ಇಂದಿನಿಂದ ಮೂರು ದಿನಗಳ ಕಾಲ ಮೀಸಲು ರಹಿತ ವಿಶೇಷ ಮೇಮು ರೈಲನ್ನು ಓಡಿಸಲು ಕೊಂಕಣ ರೈಲ್ವೆ ನಿರ್ಧರಿಸಿದೆ. ಮೇಮು ರೈಲು ಜು.20, 21, 22ರಂದು ಎರಡು ಕೇಂದ್ರಗಳ ನಡುವೆ ಸಂಚರಿಸಲಿದೆ. ಇಂದು ಬೆಳಗ್ಗೆ 6ಗಂಟೆಗೆ ಮಡಗಾಂವ್ ಜಂಕ್ಷನ್‌ನಿಂದ ಹೊರಟಿರುವ ಮೆಮು ರೈಲು ಮಧ್ಯಾಹ್ನ 12:15ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ. ಮರು ಪ್ರಯಾಣದಲ್ಲಿ 12:40ಕ್ಕೆ ಮಂಗಳೂರು ಜಂಕ್ಷನ್ ನಿಂದ ಹೊರಡುವ ರೈಲು ಸಂಜೆ 7ಕ್ಕೆ ಮಡಗಾಂವ್ ಜಂಕ್ಷನ್ ತಲುಪಲಿದೆ….

Read More

ಚಾರ್ಮಾಡಿ ಘಾಟ್ ನಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ..!

ರಾಜ್ಯದ ಮಲೆನಾಡು, ಕರಾವಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯಾಗಿರುವ ಚಾರ್ಮಾಡಿ ಘಾಟ್ ನಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧಿಸಲಾಗಿದೆ. ಕಳೆದ ಒಂದು ವಾರದಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಜನಜೀವನ ಅಷ್ಟವ್ಯಸ್ತಗೊಂಡಿದೆ. ಅತಿಯಾದ ಮಳೆಯ ಕಾರಣ ಸಂಪಾಚೆ ಘಾಟ್, ಶಿರಾಡಿ ಘಾಟ್ ಗಳಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಚಾರ್ಮಾಡಿ ಘಾಟ್ ಮೇಲೆ ಹೆಚ್ಚಿನ ಸಂಚಾರ ಒತ್ತಡ ಇರುವುದರಿಂದ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ಅಧೀಕ್ಷಕರು ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅಧಿಕಾರಿಗಳು ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಂತರ…

Read More

ಜು.20: ದ.ಕ ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, (12ನೇ ತರಗತಿವರೆಗೆ) ದಿನಾಂಕ: 20-07-2024 ರಂದು ರಜೆಯನ್ನು ಘೋಷಿಸಲಾಗಿದೆ.

Read More

ಸಂಸದ ಬ್ರಿಜೇಶ್ ಚೌಟ ಮನವಿಗೆ ಸ್ಪಂದಿಸಿದ ರೈಲ್ವೆ ಇಲಾಖೆ: ಮಂಗಳೂರು – ಬೆಂಗಳೂರಿಗೆ ವಿಶೇಷ ರೈಲು ಸಂಚಾರ

ಮಂಗಳೂರು: ಕೆಲವು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕರಾವಳಿಯನ್ನು ಹೊರ ಜಿಲ್ಲೆಗಳ ಜತೆಗೆ ಬೆಸೆಯುವ ಎಲ್ಲ ಘಾಟಿ ರಸ್ತೆಗಳಲ್ಲಿ ಗುಡ್ಡ ಕುಸಿತ ಉಂಟಾದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ನೈಋತ್ಯ ರೈಲ್ವೆ ಜನರಲ್ ಮ್ಯಾನೇಜರ್ ಮತ್ತು ಮೈಸೂರು ಡಿಆರ್‌ಎಮ್ ಅವರಿಗೆ ಮಂಗಳೂರು- ಬೆಂಗಳೂರು ನಡುವೆ ಹೆಚ್ಚುವರಿ ರೈಲು ಸೇವೆಯನ್ನು ತುರ್ತಾಗಿ ಪ್ರಾರಂಭಿಸುವಂತೆ ಪತ್ರ ಬರೆದು ವಿನಂತಿಸಿದ್ದಾರೆ. ಕರಾವಳಿಯ ಬಹಳಷ್ಟು ಜನ ಮಂಗಳೂರು-ಬೆಂಗಳೂರು ನಗರಗಳ ನಡುವೆ ನಿತ್ಯ ಪ್ರಯಾಣಿಸುತ್ತಾರೆ ಎಂಬುದನ್ನು ಗಮನದಲ್ಲಿಟ್ಟುಕೊಂಡು, ಯಾವುದೇ…

Read More

ಮಂಗಳೂರು: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಸಿ.ಎ ವಿದ್ಯಾರ್ಥಿನಿ ಸಾವು..!

ಮಂಗಳೂರು: ಗದ್ದೆಯಲ್ಲಿ ದನ ಕಟ್ಟಿ ಹಾಕಲು ಮನೆಯಿಂದ ತೆರಳಿದ್ದ ವೇಳೆ ಮಳೆಯಿಂದಾಗಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಸಿ. ಎ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮೃತಪಟ್ಟ ಸಿ. ಎ ವಿದ್ಯಾರ್ಥಿನಿ ಆಶ್ನಿ (21) ಎಂದು ಗುರುತಿಸಲಾಗಿದೆ. ತಂದೆಯೊಂದಿಗೆ ಗದ್ದೆಗೆ ಹೋಗಿದ್ದ ಆಶ್ನಿ ಜೊತೆಗೆ ಮನೆಯ ಸಾಕು ನಾಯಿ ಕೂಡಾ ತೆರಳಿದ್ದು, ನಾಯಿಗೆ ಮೊದಲು ವಿದ್ಯುತ್ ಶಾಕ್ ತಗುಲಿದೆ. ಶಾಕ್ ಹೊಡೆದಿದ್ದರಿಂದ ನಾಯಿ ಗದ್ದೆಯಲ್ಲಿ ಬಿದ್ದು ಹೊರಳಾಡುವುದನ್ನು ನೋಡಿ ಆಶ್ನಿ ನಾಯಿಯ ರಕ್ಷಣೆಗೆ ಮುಂದಾಗಿದ್ದು…

Read More

ದ.ಕ ಜಿಲ್ಲೆಯಲ್ಲಿ ನಾಳೆ(ಜು.19) 5 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಕರಾವಳಿಯಲ್ಲಿ ಭಾರೀ ಮಳೆ & ರೆಡ್‌ ಅಲರ್ಟ್‌ ಇರುವ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ನಾಳೆ ಅಂದರೆ ಜು.19ರಂದು ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕುಗಳ ಶಾಲಾ-ಕಾಲೇಜುಗಳಿಗೆ ಮಾತ್ರ ರಜೆ ಘೋಷಣೆ ಮಾಡಿಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಅವರು ಇದೀಗ ಆದೇಶ ಹೊರಡಿಸಿದ್ದಾರೆ. ಅದರಂತೆ ಈ ಐದು ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ & ಪಿಯು ಕಾಲೇಜುಗಳಿಗೆ ಶುಕ್ರವಾರ ರಜೆಯನ್ನು ನೀಡಲಾಗಿದೆ. ಆದರೆ, ಮಂಗಳೂರು, ಉಳ್ಳಾಲ, ಮೂಡಬಿದಿರೆ, ಮೂಲ್ಕಿ ತಾಲೂಕಿನ ಶಾಲಾ-ಕಾಲೇಜುಗಳಿಗೆ ಶುಕ್ರವಾರ ರಜೆ ಇರುವುದಿಲ್ಲ.

Read More

‘ಸ್ವ-ಉದ್ಯೋಗಾಕಾಂಕ್ಷಿ’ಗಳೇ ಗಮನಿಸಿ: ‘CCTV ಕ್ಯಾಮೆರಾ’ ಅಳವಡಿಕೆ, ದುರಸ್ಥಿ ‘ಉಚಿತ ತರಬೇತಿ’ಗೆ ಅರ್ಜಿ ಆಹ್ವಾನ

ದಕ್ಷಿಣ ಕನ್ನಡ: ಸ್ವ ಉದ್ಯೋಗ ಕೈಗೊಳ್ಳೋ ಆಸಕ್ತಿ ಇರುವವರಿಗೆ ಗುಡ್ ನ್ಯೂಸ್ ಎನ್ನುವಂತೆ ಉಚಿತವಾಗಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆ ತರಬೇತಿ ನೀಡಲು ಉಜಿರೆಯ ರುಡ್ ಸೆಟ್ ಸಂಸ್ಥೆಯಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಸಂಬಂಧ ಪತ್ರಿಕಾ ಪ್ರಕಟಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯ ರುಡ್ ಸೆಟ್ ಸಂಸ್ಥೆ ಮಾಹಿತಿ ನೀಡಿದ್ದು, ದಿನಾಂಕ 05-08-2024ರಿಂದ 17-08-2024ರವರೆಗೆ ಸಿಸಿ ಕ್ಯಾಮೆರಾ ಅಳವಡಿಸುವಿಕೆ ಮತ್ತು ದುರಸ್ಥಿಯ ಉಚಿತ ತರಬೇತಿ ನೀಡಲಾಗುತ್ತಿದೆ ಅಂತ ತಿಳಿಸಿದೆ. ಧರ್ಮಸ್ಥಳ ಸಮೀಪದ ಉಜಿರೆಯ ರುಡ್ ಸೆಟ್ ಸಂಸ್ಥೆಯಲ್ಲಿ ಸ್ವ…

Read More