ಪವರ್‌ ಲಿಫ್ಟಿಂಗ್‌ ಚಾಂಪಿಯನ್‌ ಶಿಪ್‌: ಚಿನ್ನ ಪದಕ ಗೆದ್ದ ಕಾರ್ಕಳದ ಬೋಳ ಅಕ್ಷತಾ ಪೂಜಾರಿ

ಬೆಳ್ಮಣ್ : ದಕ್ಷಿಣ ಆಫ್ರಿಕಾದ ಪೊಟ್‌ಚೆಫ್ಸ್ಟ್ರೂಮ್‌ನಲ್ಲಿ ನಡೆದ ಏಷ್ಯಾ- ಪೆಸಿಫಿಕ್-ಆಫ್ರಿಕನ್ ಪವರ್‌ಲಿಫ್ಟಿಂಗ್‌ ಮತ್ತು ಬೆಂಚ್ಪ್ರೆಸ್ಚಾಂಪಿಯನ್‌ ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸಿದ ಅಕ್ಷತಾ ಪೂಜಾರಿ ಬೋಳ ಅವರು ಚಿನ್ನದ ಪದಕ ಮುಡಿಗೇರಿಸಿಕೊಂಡಿದ್ದಾರೆ.  ಸೀನಿಯರ್‍ಸ್ ವಿಭಾಗದಲ್ಲಿ ಸ್ಪರ್ಧಿಸಿದ್ದ ಅಕ್ಷತಾ ಪೂಜಾರಿ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೋಳ ಗ್ರಾಮದವರು. ಸೀನಿಯರ್ಸ್ ವಿಭಾಗದ 52 ಕೆಜಿ ವಿಭಾಗದಲ್ಲಿ ಅಕ್ಷತಾ ಪೂಜಾರಿ ಬೋಳ ಈ ಸಾಧನೆ ಮಾಡಿದ್ದಾರೆ.ಪವರ್ ಲಿಫ್ಟಿಂಗ್ ಕ್ಷೇತ್ರದಲ್ಲಿ  ಸಾಧನೆ ಮಾಡಿರುವ ಅಕ್ಷತಾ ಪೂಜಾರಿ ಬೋಳ ಅವರು ಹಲವಾರು ಚಿನ್ನದ ಪದಕ ಗೆದ್ದವರು.ಏಷ್ಯಾ ಮಟ್ಟ…

Read More

ದಕ್ಷಿಣ ಕನ್ನಡ: ಬೀಚ್, ಟ್ರಕ್ಕಿಂಗ್, ನದಿಯಲ್ಲಿ ಮೀನು ಹಿಡಿಯುವುದಕ್ಕೂ ನಿಷೇಧ – ಜಿಲ್ಲಾಧಿಕಾರಿ ಆದೇಶ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿ ರುವ ನಿರಂತರ ಮಳೆಯಿಂದಾಗಿ ವಿವಿಧೆಡೆ ಭೂ ಕುಸಿತ, ಗುಡ್ಡ ಕುಸಿತ ಪ್ರಕರಣಗಳು ಹೆಚ್ಚಾಗಿದೆ. ಇನ್ನಷ್ಟು ಪ್ರಾಕೃತಿಕ ವಿಕೋಪದ ಹಿನ್ನೆಲೆಯಲ್ಲಿ ಜಿಲ್ಲೆಯ ಬೀಚ್, ಗಿರಿತಾಣ, ಶಿಖರಗಳಲ್ಲಿ ಚಾರಣಕ್ಕೆ ಪ್ರವಾಸಿಗರು ತೆರಳದಂತೆ ನಿಷೇಧ ಹೇರಲಾಗಿದೆ. ದಕ್ಷಿಣ ಕನ್ನಡ ಡಿಸಿ ಮುನ್ನೈ ಮುಗಿಲನ್ ನಿಷೇಧ ಆದೇಶ ಹೊರಡಿಸಿದ್ದು, ಮಳೆಗಾಲ ಮುಗಿಯುವ ವರೆಗೆ ಹೋಮ್ ಸ್ಟೇ, ರೆಸಾರ್ಟ್ ಸೇರಿದಂತೆ ಅರಣ್ಯ ಇಲಾಖೆ ಏರ್ಪಡಿಸುವ ಟ್ರೆಕ್ಕಿಂಗ್, ಸಾಹಸ ಯಾತ್ರೆಗೂ ನಿಷೇಧ ಹೇರಲಾಗಿದೆ. ಇದರ ಜೊತೆಗೆ ನದಿ, ಸಮುದ್ರ…

Read More

ಬಂಟ್ವಾಳ: ಗೂಡ್ಸ್ ಮಿನಿಲಾರಿ, ಸ್ಕೂಟರ್ ನಡುವೆ ನಡೆದ ಅಪಘಾತ..! ಓರ್ವ ಸಾವು

ಬಂಟ್ವಾಳ: ಗೂಡ್ಸ್ ಮಿನಿಲಾರಿ ಹಾಗೂ ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸಹ ಸವಾರ ಸಾವನ್ನಪ್ಪಿದ್ದು, ಸವಾರ ಗಂಭೀರ ಗಾಯಗೊಂಡ ಘಟನೆ ಬಂಟ್ವಾಳ-ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿಯ ಕಾವಳಪಡೂರು ಗ್ರಾಮದ ವಗ್ಗದಲ್ಲಿ ಶನಿವಾರ ಸಂಜೆ ಸಂಭವಿಸಿದೆ. ಕಾಸರಗೋಡು ಸಮೀಪದ ಬೇಕಲ ನಿವಾಸಿ ನಿಖಿಲ್(೨೪) ಮೃತಪಟ್ಟ‌ ದುರ್ದೈವಿಯಾಗಿದ್ದಾರೆ. ಸ್ಕೂಟರ್‌ಸವಾರ ಗುರುಪ್ರೀತ್ ಗಂಭೀರ ಗಾಯಗೊಂಡಿದ್ದು, ಮಂಗಳೂರಿನ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ.ಪುಂಜಾಲಕಟ್ಟೆ ಕಡೆಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಸ್ಕೂಟರ್ ಗೆ ಎದುರು ಕಡೆಯಿಂದ ಬರುತ್ತಿದ್ದ ಮಿನಿಲಾರಿ ಢಿಕ್ಕಿಯಾಗಿದೆ. ಪಿಕಪ್ ವಾಹನವೊಂದನ್ನು ಓವರ್‌ಟೇಕ್ ಮಾಡುವ ಭರದಲ್ಲಿ ಮಿನಿಲಾರಿ…

Read More

ಉಳ್ಳಾಲ: ಶೋಕಿ ಜೀವನಕ್ಕಾಗಿ ತನ್ನ ಮನೆಯಿಂದಲೇ ಚಿನ್ನಾಭರಣ ಕಳವುಗೈದ ಬಾಲಕ..! 5 ಮಂದಿಯ ಬಂಧನ

ಉಳ್ಳಾಲ: ಶೋಕಿ ಜೀವನಕ್ಕಾಗಿ ಮನೆಯ ಕಪಾಟಿನಲ್ಲಿದ್ದ ಹದಿನೈದು ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣಗಳನ್ನ ಮನೆ ಮಕ್ಕಳೇ ಎಗರಿಸಿರುವ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಇಬ್ಬರು ಅಪ್ರಾಪ್ತರು ಸೇರಿ ಐದು ಮಂದಿಯನ್ನ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಆದರೆ, ಈ ಬಗ್ಗೆ ಉಳ್ಳಾಲ ಪೊಲೀಸ್ ಇನ್ಸ್ ಪೆಕ್ಟರ್ ಮಾತ್ರ ಮಾಧ್ಯಮಗಳಿಗೆ ಮಾಹಿತಿ ಕೊಡದೆ ಮುಚ್ಚಿಟ್ಟಿದ್ದಾರೆ. ಜೂನ್ 8ರ ಬೆಳಗ್ಗೆ 8 ಗಂಟೆಯಿಂದ 16ರ ಮಧ್ಯಾಹ್ನ 12 ಗಂಟೆಯ ನಡುವೆ ಚಿನ್ನಾಭರಣ ಕಳವಾಗಿರುವ ಬಗ್ಗೆ ಉಳ್ಳಾಲ ಠಾಣೆಗೆ…

Read More

ಮಂಗಳೂರು: ನಕಲಿ ಷೇರು ಟ್ರೇಡಿಂಗ್‌ನಲ್ಲಿ ವ್ಯಕ್ತಿಗೆ 74 ಲಕ್ಷ ರೂ ವಂಚನೆ

ಮಂಗಳೂರು: ಇನ್‌ಸ್ಟಾಗ್ರಾಂನಲ್ಲಿ ಬಂದ ಜಾಹೀರಾತು ಗಮನಿಸಿ ಷೇರು ಟ್ರೇಡಿಂಗ್‌ನಲ್ಲಿ ವ್ಯವಹಾರ ಮಾಡಲು ಹೋಗಿ ವ್ಯಕ್ತಿಯೊಬ್ಬರು 74,18,952 ರೂಪಾಯಿ ವಂಚನೆಗೊಳಗಾದ ಬಗ್ಗೆ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರ ವ್ಯಕ್ತಿ ಮಾರ್ಚ್ 15ರಂದು ಇನ್‌ಸ್ಟಾಗ್ರಾಂ ವೀಕ್ಷಿಸುತ್ತಿದ್ದ ವೇಳೆ ಷೇರು ಟ್ರೇಡಿಂಗ್ ಜಾಹೀರಾತು ಗಮನಿಸಿದ್ದಾರೆ. ಜಾಹೀರಾತನ್ನು ಕ್ಲಿಕ್ ಮಾಡಿದಾಗ ಷೇರು ಟ್ರೇಡಿಂಗ್ ಮಾಹಿತಿ ದೊರಕಿದೆ. ಬಳಿಕ ಅಪರಿಚಿತ ವ್ಯಕ್ತಿಯಿಂದ ವಾಟ್ಸಾಪ್ ಲಿಂಕ್ ಬಂದಿದೆ. ಲಿಂಕ್‌ ತೆರೆದು ನೋಡಿದಾಗ ಅದರಲ್ಲಿ ಗ್ರೂಪ್‌ನ ಲಿಂಕ್ ಕಂಡಿದೆ. ಈ ಮೂಲಕ ದೂರುದಾರ ಗ್ರೂಪ್‌ಗೆ ಸೇರಿಕೊಂಡಿದ್ದಾರೆ….

Read More

ಭಾರೀ ಮಳೆ ಹಿನ್ನೆಲೆ – ಇಂದು (ಜು.6) ದ.ಕ ಜಿಲ್ಲೆಯ ಶಾಲೆ, ಪ.ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ

ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು ಭಾರತೀಯ ಹವಾಮಾನ ಇಲಾಖೆ ಮುಂದಿನ 48 ಗಂಟೆಗಳ ಕಾಲ ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ ಹಾಗೂ ಪ.ಪೂರ್ವ ಕಾಲೇಜುಗಳಿಗೆ ಜುಲೈ 06ರ ಶನಿವಾರ ರಜೆ ಘೋಷಿಸಲಾಗಿದೆ. ದ.ಕ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಖಾಸಗಿ ಪ್ರಾಥಮಿಕ ಪ್ರೌಢಶಾಲೆಗಳಿಗೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ( 12 ನೇ ತರಗತಿ) ಭಾರೀ ಮಳೆ ಹಿನ್ನೆಲೆಯಲ್ಲಿ…

Read More

ಹಿರಿಯ ಯಕ್ಷಗಾನ ಕಲಾವಿದರಾದ ಕುಂಬಳೆ ಶ್ರೀಧರ್ ರಾವ್ ಹೃದಯಾಘಾತದಿಂದ ನಿಧನ

 ಮಂಗಳೂರು: ಹಿರಿಯ ಯಕ್ಷಗಾನ ಕಲಾವಿದರಾದ ಕುಂಬಳೆ ಶ್ರೀಧರ್ ರಾವ್  ಹೃದಯಾಘಾತಕ್ಕೀಡಾಗಿ ಜುಲೈ 5ರಂದು ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ ‌ ನೆಕ್ಕಿಲಾಡಿ ಗ್ರಾಮದ ಶಾಂತಿನಗರ ಸಮೀಪದ ಬೇರಿಕೆ ನಿವಾಸಿ ಶ್ರೀಧರ ರಾವ್ ಅವರಿಗೆ ಬೆಳಿಗ್ಗೆ ತೀವು ಎದೆ ನೋವು ಕಾಣಿಸಿಕೊಂಡಿದ್ದು ಪುತ್ತೂರಿನ ಮಹಾವೀರ ಆಸ್ಪತ್ರೆಗೆ ದಾಖಲಿಸಲಾಗಿತ್ತು.  ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಇವರು 1949ರ ಮಾರ್ಚ್ ನಲ್ಲಿ ಕುಂಬಳೆ, ಕಾಸರಗೋಡು ಜಿಲ್ಲೆ, ಕೇರಳ ರಾಜ್ಯದಲ್ಲಿ ಜನಿಸಿದರು. ಮೂಲ್ಕಿ, ಇರಾ, ಕರ್ನಾಟಕ ಧರ್ಮಸ್ಥಳ ಮೇಳಗಲ್ಲಿ ನಾಲ್ಕು ದಶಕಗಳಿ೦ದ, ತೆ೦ಕು ತಿಟ್ಟಿನ ಅಪ್ರತಿಮ…

Read More

ಸೌಜನ್ಯ ಕೊಲೆ ಪ್ರಕರಣ – ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಮಂಗಳೂರು : ವಿಧ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ ಕೋರಿದ ಪ್ರತ್ಯೇಕ ಅರ್ಜಿಗಳ ವಿಚಾರಣೆಯ ನ್ನು ಕರ್ನಾಟಕ ಹೈಕೋರ್ಟ್ ಪೂರ್ಣಗೊಳಿಸಿದ್ದು, ಆದೇಶವನ್ನು ಕಾಯ್ದಿರಿಸಿದೆ. ಬೆಳ್ತಂಗಡಿ ತಾಲ್ಲೂಕಿನ ಪಾಂಗಳದ ವಿದ್ಯಾರ್ಥಿನಿ ಸೌಜನ್ಯಾ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರು ತನಿಖೆಗೆ ಕೋರಿ ಸೌಜನ್ಯಾಳ ತಂದೆ ಚಂದಪ್ಪ ಗೌಡ, ಖುಲಾಸೆಗೊಂಡಿರುವ ಆರೋಪಿ ಕಾರ್ಕಳ ತಾಲ್ಲೂಕಿನ ಕುಕುಂದೂರಿನ ಸಂತೋಷ್‌ ರಾವ್‌ ಹಾಗೂ ಸಿಬಿಐ ಪ್ರತ್ಯೇಕವಾಗಿ ಸಲ್ಲಿಸಿದ್ದ ಮೂರು ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿ ಶ್ರೀನಿವಾಸ್‌ ಹರೀಶ್‌ ಕುಮಾರ್ ಮತ್ತು…

Read More

‘ಇಂಟರ್ನ್ ವಿಥ್ ಕ್ಯಾಪ್ಟನ್’; ಉತ್ಸಾಹಿ ವಿದ್ಯಾವಂತ ಯುವಕರಿಗೆ ದಕ್ಷಿಣ ಕನ್ನಡ ಸಂಸದರ ಜೊತೆ ಕೆಲಸ ಮಾಡಲು ಅವಕಾಶ

ಚುನಾವಣೆಯ ಪೂರ್ವದಲ್ಲಿ ತನಗೆ ತಾನೇ ಹಾಕಿಕೊಂಡಿದ್ದ ‘ನವಯುಗ – ನವಪಥ’ ದ ಕಾರ್ಯಸೂಚಿಯನ್ನು ಪೂರೈಸಲು ಈಗಾಗಲೇ ಹಲವಾರು ಯೋಜನೆಗಳನ್ನು ರೂಪಿಸಿರುವ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಇದೀಗ ಕ್ಯಾಪ್ಟನ್ಸ್ ಪಲ್ಟನ್ ಎಂಬ ಕಲ್ಪನೆಯೊಂದಿಗೆ ‘ಇಂಟರ್ನ್ ವಿಥ್ ಕ್ಯಾಪ್ಟನ್’ ಎಂಬ ನೂತನ ಕಾರ್ಯಕ್ರಮದ ಮೂಲಕ ಮತ್ತೆ ಸುದ್ದಿಗೆ ಬಂದಿದ್ದಾರೆ. ಏನಿದು ಇಂಟರ್ನ್‌ ವಿಥ್ ಕ್ಯಾಪ್ಟನ್ ? ಇಂಟರ್ನ್ ವಿಥ್ ಕ್ಯಾಪ್ಟನ್ ಸಾಮಾಜಿಕ ಚಟುವಟಿಕೆಗಳಲ್ಲಿ ಆಸಕ್ತಿ ಹೊಂದಿರುವ ಯುವ ಮನಸ್ಸುಗಳಿಗೆ ನಿರ್ಮಿಸಲಾದ ಒಂದು…

Read More

ಮಂಗಳೂರು: ಪ್ರತ್ಯೇಕ ರೈಲ್ವೇ ವಿಭಾಗಕ್ಕೆ ಅಭಿಯಾನ ಆರಂಭ

ಮಂಗಳೂರು: ನೈಋತ್ಯ ರೈಲ್ವೆ ದಕ್ಷಿಣ ರೈಲ್ವೆ ಮತ್ತು ಕೊಂಕಣ ರೈಲು ನಿಗಮದ ಮಧ್ಯೆ ಹಂಚಿ ಹೋಗಿರುವುದರಿಂದ ರೈಲ್ವೇ ಮೂಲಸೌಲಭ್ಯಗಳಿಂದ ವಂಚಿತ ವಾಗಿರುವ ಮಂಗಳೂರಿಗೆ ಪ್ರತ್ಯೇಕ ರೈಲ್ವೆ ವಿಭಾಗ ಬೇಕು ಎನ್ನುವ ಅಭಿಯಾನ ಮತ್ತೆ ಚುರುಕುಗೊಂಡಿದೆ. ಇದಕ್ಕಾಗಿಯೇ ರೈಲು ಪ್ರಯಾಣಿಕರು, ಸಂಘಟನೆಗಳೂ ಸೇರಿಕೊಂಡು ದಕ್ಷಿಣ ಕನ್ನಡ ಜಿಲ್ಲಾ ರೈಲ್ವೇ ಬಳಕೆದಾರರ ಸಮಿತಿ ನೇತೃತ್ವದಲ್ಲಿ ಸಹಿ ಅಭಿಯಾನವನ್ನುಕೈಗೊಂಡಿದ್ದು, ಆಗಸ್ಟ್ 2ರ ವರೆಗೂ ಮುಂದುವರಿಯಲಿದೆ. ಮಮತಾ ಬ್ಯಾನರ್ಜಿ ಅವರು ರೈಲು ಸಚಿವರಾಗಿದ್ದ ಸಂದರ್ಭದಲ್ಲಿ ಕೇಳಿ ಬಂದಿದ್ದ ಈ ಬೇಡಿಕೆ ಡಿ.ವಿ.ಸದಾನಂದ ಗೌಡ…

Read More