ಮಂಗಳೂರು : PWD ಗುತ್ತಿಗೆದಾರ ಸೇರಿ ಮನೆಯ ಸದಸ್ಯರನ್ನು ಕಟ್ಟಿ ಹಾಕಿ, ನಗ ನಗದು ದರೋಡೆ

ಮಂಗಳೂರು: ನಗರದ ಹೊರವಲಯದಲ್ಲಿರುವ ಉಳಾಯಿಬೆಟ್ಟು ಎಂಬಲ್ಲಿ ಪಿಡಬ್ಲ್ಯುಡಿ ಗುತ್ತಿಗೆದಾರರೊಬ್ಬರ ಮನೆಗೆ ನುಗ್ಗಿದ ದರೋಡೆಕೋರರ ತಂಡವೊಂದು ಮನೆಗೆ ನುಗ್ಗಿ ಚಾಕು ತೋರಿಸಿ ಮನೆಮಂದಿಯನ್ನು ಕಟ್ಟಿ ಹಾಕಿ ಮನೆಯಲ್ಲಿದ್ದ ನಗ ನಗದನ್ನು ದೋಚಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಉಳಾಯಿಬೆಟ್ಟಿ ನಲ್ಲಿರುವ ಪಿಡಬ್ಲ್ಯುಡಿ ಕಂಟ್ರಾಕ್ಟರ್ ಪದ್ಮನಾಭ ಕೋಟ್ಯಾನ್ ಎಂಬವರ ಫಾರ್ಮ್ ಹೌಸ್ ಮನೆಗೆ ಸುಮಾರು ಏಳು ಎಂಟು ಮಂದಿ ದರೋಡೆಕೋರರ ತಂಡ ಶುಕ್ರವಾರ ರಾತ್ರಿ ಸುಮಾರು ಎಂಟು ಗಂಟೆಯ ಸುಮಾರಿಗೆ ಮನೆಯೊಳಗೆ ಪ್ರವೇಶಿಸಿ ಮನೆ ಮಂದಿಗೆ ಚಾಕು ತೋರಿಸಿ ಬೆದರಿಸಿ ಬಳಿಕ…

Read More

ಪುತ್ತೂರಿನಲ್ಲಿ ತನಿಯ ಮೋಟಾರ್ಸ್ ನ ಪ್ಯೂರ್ ಇ ವಿ ಎಲೆಕ್ಟ್ರಿಕ್ ದ್ವಿಚಕ್ರವಾಹನಗಳ ಮಳಿಗೆ ಶುಭಾರಂಭ

ಪುತ್ತೂರಿನ ದಾರಂದಕುಕ್ಕುವಿನಲ್ಲಿರುವ ಡಿ.ಕೆ ಕಾಂಪ್ಲೆಕ್ಸ್ ನಲ್ಲಿ ತನಿಯ ಮೋಟಾರ್ಸ್ ನ ಪ್ಯೂರ್ ಇ ವಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಮಳಿಗೆ ಜೂ.20 ರಂದು ಶುಭಾರಂಭಗೊಂಡಿತು. ಪ್ಯೂರ್ ಇ ವಿ ಕಂಪನಿಯು ಸ್ವದೇಶಿ ಕಂಪನಿಯಾಗಿದ್ದು,ಇದರ ಉತ್ಪಾದನಾ ಘಟಕವು ಹೈದರಾಬಾದಿನಲ್ಲಿದೆ. ಈ ಶೋರೂಮ್ ನಲ್ಲಿ ಇ-ಟ್ರಾನ್ಸ್, ಈ-ಪ್ಲುಟೊ ಎಂಬ ಎರಡು ಶ್ರೇಣಿಯ ಸ್ಕೂಟರ್ ಗಳಿದ್ದು, ವಿಶೇಷವಾಗಿ 200 ಕಿ.ಮೀ ರೇಂಜ್ ನೀಡುವ ಸಾಮರ್ಥ್ಯವನ್ನು ಹೊಂದಿಕೊಂಡು ಗ್ರಾಹಕರಿಗೆ ಕೈಗೆಟುಕುವ ಅತ್ಯಾಕರ್ಷಕ ಬೆಲೆಯೊಂದಿಗೆ ಲಭ್ಯವಿದೆ. ಇಕೋ ಡ್ರಿಫ್ಟ್ ಮತ್ತು ಇ-ಟ್ರಿಸ್ಟ್ ಎಂಬ ಎರಡು…

Read More

ಮಂಗಳೂರು: ವಿಮಾನ ನಿಲ್ದಾಣಕ್ಕೆ ಮತ್ತೆ ಬಾಂಬ್ ಬೆದರಿಕೆ ಕರೆ..!

ಮಂಗಳೂರು: ನಗರದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮತ್ತೆ ಬಾಂಬ್ ಬೆದರಿಕೆಯ ಇ-ಮೇಲ್ ಬಂದಿದೆ. ಜೂ.18ರಂದು ಮಧ್ಯಾಹ್ನ 12:43ಕ್ಕೆ ವಿಮಾನ ನಿಲ್ದಾಣದ ಇ- ಮೇಲ್‌ಗೆ ಬೆದರಿಕೆ ಸಂದೇಶ ರವಾನೆಯಾಗಿದೆ. ಕೆಲವೇ ಕ್ಷಣಗಳಲ್ಲಿ ಬಾಂಬ್ ಸ್ಪೋಟಗೊಳ್ಳಲಿದೆ ಎಂದು ಸಂದೇಶ ರವಾನೆಯಾಗಿತ್ತು. ಆದ್ದರಿಂದ ವಿಮಾನ ನಿಲ್ದಾಣದ ಮುಖ್ಯ ಭದ್ರತಾ ಅಧಿಕಾರಿ ಬಜ್ಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ. ಅಲ್ಲದೆ‌‌ ಭದ್ರತಾ ಅಧಿಕಾರಿಗಳು ವಿಮಾನ ನಿಲ್ದಾಣದ ಆವರಣದಲ್ಲಿ ತಪಾಸಣೆ ನಡೆಸಿ, ಯಾವುದೇ ಆತಂಕವಿಲ್ಲ ಎಂದು ದೃಢಪಡಿಸಿದ್ದಾರೆ. ದೇಶದ…

Read More

ಕಟೀಲು ದೇವರಿಗೆ ಸ್ವರ್ಣಪಾದುಕೆ ಸಮರ್ಪಣೆ

ಕಟೀಲು: ದಕ್ಷಿಣಾಮ್ನಾಯ ಶೃಂಗೇರಿ ಶಾರದಾ ಪೀಠದ 36ನೆಯ ಅಧಿಪತಿಗಳಾದ ಜಗದ್ಗುರು ಶ್ರೀ ಭಾರತೀತೀರ್ಥ ಮಹಾಸ್ವಾಮಿಗಳವರ ಸನ್ಯಾಸ ಸ್ವೀಕಾರ ಸುವರ್ಣ ಮಹೋತ್ಸವ (1974-2024)ದ ಸಂಸ್ಮರಣಾರ್ಥ ಶ್ರೀಕ್ಷೇತ್ರ ಕಟೀಲು ಶ್ರೀ ದುರ್ಗಾಪರಮೇಶ್ವರೀ ಅಮ್ಮನವರಿಗೆ ಶೃಂಗೇರಿ ಶಾರದಾ ಪೀಠದ ವತಿಯಿಂದ 40 ಲಕ್ಷ ರೂ. ಮೌಲ್ಯದ ಸ್ವರ್ಣಪಾದುಕೆ ಹಾಗೂ ಒಡ್ಯಾಣವನ್ನು ಸಮರ್ಪಿಸಲಾಯಿತು. ಶೃಂಗೇರಿಯಲ್ಲಿ ಉಭಯ ಜಗದ್ಗುರುಗಳು ಈ ಪಾದುಕೆ ಹಾಗೂ ಒಡ್ಯಾಣವನ್ನು ಕಟೀಲು ದೇಗುಲದ ಆನುವಂಶಿಕ ಅರ್ಚಕರಾದ ಹರಿನಾರಾಯಣದಾಸ ಆಸ್ರಣ್ಣರಿಗೆ ಹಸ್ತಾಂತರಿಸಿದರು. ಈ ಪಾದುಕೆ ಮತ್ತು ಒಡ್ಯಾಣವನ್ನು ಬುಧವಾರ ಶ್ರೀದೇವಿಗೆ ತೊಡಿಸಿ ಅಲಂಕಾರ…

Read More

ಪುತ್ತೂರು : ಪೆಟ್ರೋಲ್‌- ಡೀಸೆಲ್‌ ದರ ಏರಿಕೆ ವಿರುದ್ದ ಬಿಜೆಪಿ ಪ್ರತಿಭಟನೆ

ಪುತ್ತೂರು: ಕಾಂಗ್ರೇಸ್ ಸರಕಾರದ ಜನ ವಿರೋಧಿ ನೀತಿ ಖಂಡಿಸಿ ಪುತ್ತೂರು ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಯಿತು. ಪುತ್ತೂರಿನ ಖಾಸಗಿ ಬಸ್ ನಿಲ್ದಾಣದಿಂದ ಎಸಿ ಕಛೇರಿ ತನಕ ಪಾದಾಯಾತ್ರೆಯ ಮೂಲಕ ಸಾಗಿದ ಬಿಜೆಪಿ ಕಾರ್ಯಕರ್ತರು, ರಾಜ್ಯದಲ್ಲಿ ಕಾಂಗ್ರೇಸ್ ಪಕ್ಷ ಅಧಿಕಾರಕ್ಕೆ ಬಂದ ಬಳಿಕ ಜನರು ಕಂಗಾಲಾಗಿದ್ದಾರೆ. ಡಿಸೀಲ್,ಪೆಟ್ರೋಲ್ ಬೆಲೆ ಏರಿಕೆಯಿಂದ ಇತರ ವಸ್ತುಗಳಿಗೂ ಬೆಲೆ ಏರಿಕೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ಸರಕಾರದ ಈ ನಡೆಯನ್ನು ಕೇಂದ್ರ ಸರಕಾರದ ಗಮನಕ್ಕೆ ತರಬೇಕು ಎಂದು ರಾಜ್ಯಪಾಲರ ಮೂಲಕ ಮನವಿ ಸಲ್ಲಿಸಿದರು.

Read More

ಉಪ್ಪಿನಂಗಡಿ: ಮಹಿಳೆಯ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಟ್ವಿಸ್ಟ್- ಬಾಲಕ ಬಂಧನ

ಉಪ್ಪಿನಂಗಡಿ ಸಮೀಪದ ಪೆರ್ನೆ ಗ್ರಾಮದ ಬಿಳಿಯೂರಿನ ದರ್ಖಾಸು ನಿವಾಸಿ ಹೇಮಾವತಿ (37) ಎಂಬವರು ರವಿವಾರ ತಡರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದರು. ಪ್ರಕರಣದ ಬೆನ್ನು ಹತ್ತಿದ ಪೊಲೀಸರು ಇದೀಗ ಮೃತ ಮಹಿಳೆಯ ಸಂಬಂಧಿ ಎಸ್ಎಸ್ಎಲ್‌ಸಿ ವಿದ್ಯಾರ್ಥಿಯನ್ನು ಬಂಧಿಸಿದ್ದಾರೆ. ಹೇಮಾವತಿ ಅವರ ಮನೆಗೆ ಬಂದಿದ್ದ ಅವರ ಸಹೋದರಿಯ ಪುತ್ರ, ಎಸ್ಎಸ್ಎಲ್‌ಸಿ ವಿದ್ಯಾರ್ಥಿ ರವಿವಾರ ರಾತ್ರಿ ತಂಗಿದ್ದ. ತಡರಾತ್ರಿ ವೇಳೆ ಈ ಅಪ್ರಾಪ್ತ ಹೇಮಾವತಿ ಮಲಗಿದಲ್ಲಿಗೆ ಹೋಗಿ ದೇಹಸುಖ ಬಯಸಿದ್ದಾನೆ. ಇದಕ್ಕೆ ಹೇಮಾವತಿ ಪ್ರತಿರೋಧ ವ್ಯಕ್ತಪಡಿಸಿದ್ದಾರೆ. ಈ ವೇಳೆ ಆರೋಪಿ ಬಾಲಕ…

Read More

ಪುತ್ತೂರು : ಮನೆಯೊಂದರಲ್ಲಿ ಸ್ಪೋಟಗೊಂಡ ರೆಫ್ರಿಜರೇಟರ್..!

ಪುತ್ತೂರು : ನಗರದ ಹೊರವಲಯದ ಜಿಡೆಕಲ್ಲು ಕಾಲೇಜು ಸಮೀಪದ ಮನೆಯೊಂದರಲ್ಲಿ ರೆಫ್ರಿಜರೇಟರ್ ಸ್ಪೋಟಗೊಂಡ ಘಟನೆ ಸಂಭವಿಸಿದೆ. ಜಿಡೆಕಲ್ಲು ಕಾಲೇಜು ಸಮೀಪದ ಮೋನಪ್ಪ ಅವರ ಮನೆಯಲ್ಲಿ ಘಟನೆ‌ ನಡೆದಿದೆ. ರೆಫ್ರಿಜರೇಟರ್ ಸ್ಫೋಟಗೊಂಡ ಹಿನ್ನೆಲೆ ಅಗ್ನಿ ಅವಘಡ ಸಂಭವಿಸಿದ್ದು, ಮನೆಯಲ್ಲಿ ಯಾರು ಇಲ್ಲದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.ಕಾಲೇಜು ವಿದ್ಯಾರ್ಥಿಗಳು ಹಾಗೂ ಸ್ಥಳೀಯರು ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಅಗ್ನಿಶಾಮಕ ದಳದವರೂ ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ನಡೆಸಿದ್ದಾರೆ.

Read More

ಮಂಗಳೂರು: ಪುಟ್ಟಣ್ಣ ಕುಲಾಲ್ ಪ್ರತಿಷ್ಠಾನ (ರಿ.) ಮಂಗಳೂರು ಇದರ ನೇತ್ರತ್ವದಲ್ಲಿ ಜುಲೈ 7 ರಂದು “ಬೃಹತ್ ವೈದ್ಯಕೀಯ ತಪಾಸಣೆ ಮತ್ತು ಸಲಹಾ ಶಿಬಿರ”

ಮಂಗಳೂರು: ಪುಟ್ಟಣ್ಣ ಕುಲಾಲ್ ಪ್ರತಿಷ್ಠಾನ (ರಿ.) ಮಂಗಳೂರು ಇದರ ನೇತ್ರತ್ವದಲ್ಲಿ 25 ನೇ ವರ್ಷದ ಸೇವಾ ಸವಿ ನೆನಪು ಹಾಗೂ ವೈದ್ಯರ ದಿನದ ಅಂಗವಾಗಿ ಭಾರತೀಯ ವೈದ್ಯಕೀಯ ಸಂಘ(ರಿ.) ಮಂಗಳೂರು, ಕೆನರಾ ಅರ್ಥೋಪೆಡಿಕ್ ಸೊಸೈಟಿ (ರಿ.) ಮಂಗಳೂರು ಮತ್ತು ಕುಟುಂಬ ವೈದ್ಯರ ಸಂಘ (ರಿ.) ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ತಜ್ಞ ವೈದ್ಯರಿಂದ ಬೃಹತ್ ವೈದ್ಯಕೀಯ ತಪಾಸಣೆ ಮತ್ತು ಸಲಹಾ ಶಿಬಿರವು ದಿನಾಂಕ ಜುಲೈ 7 ರಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ಗಂಟೆಯ…

Read More

ಕುಲಾಲ ಸಂಘಟನೆಗೆ ಕುಲಾಲ ಸೇವಾದಳದ ಅಮೋಘ ಕೊಡುಗೆ – ಕೃಷ್ಣಪ್ಪ ಬಿ.

ಬಂಟ್ವಾಳ : ಬಂಟ್ವಾಳ ತಾಲೂಕು ಕುಲಾಲ ಸಂಘದ ಆಶ್ರಯದಲ್ಲಿರುವ ಕುಲಾಲ ಸೇವಾದಳದ ಸಮಿತಿ ಸದಸ್ಯರ ಸಭೆ ಪೊಸಳ್ಳಿಯ ಕುಲಾಲ ಸಮುದಾಯ ಭವನಯಲ್ಲಿ ಭಾನುವಾರ ನಡೆಯಿತು.ಬಂಟ್ವಾಳ ಕುಲಾಲ ಸುಧಾರಕ ಸಂಘದ ಅಧ್ಯಕ್ಷ ಕೃಷ್ಣಪ್ಪ ಬಿ. ಆಧ್ಯಕ್ಷತೆ ವಹಿಸಿ ಮಾತನಾಡಿ ಯುವಕರು ಸಂಘಟನೆಯಲ್ಲಿ ಪಾಲ್ಗೊಂಡರೆ ಸಂಘಟನೆಗೆ ಬಲ ಬರುತ್ತದೆ. ಅದೇ ರೀತಿ ಕುಲಾಲ ಸೇವಾದಳದಿಂದ ಕುಲಾಲ ಸಮಾಜದವರನ್ನು ಒಗ್ಗೂಡುವ ಕಲಸ ಮಾಡಿರುವುದರಿಂದ ಬಂಟ್ವಾಳ ಕುಲಾಲ ಸಂಘಕ್ಕೊಂದು ಬಲ ಬಂದಂತಾಗಿದೆ ಎಂದು ತಿಳಿಸಿದರು.ಕಾರ್ಯಕಾರಿ ಸಮಿತಿಯ ಪ್ರಧಾನ ಕಾರ್ಯದರ್ಶಿ ರಮೇಶ್ ಸಂಚಯಗಿರಿ ಮಾತನಾಡಿ…

Read More

ಕುಲಾಲ ಸೇವಾದಳದ ದಳಪತಿಯಾಗಿ ಗಣೇಶ್ ಕುಲಾಲ್ ಬೆದ್ರಗುಡ್ಡೆ ಆಯ್ಕೆ

ಬಿ.ಸಿ.ರೋಡ್ : ಬಂಟ್ವಾಳ ತಾಲೂಕು ಕುಲಾಲ ಸಂಘದ ಆಶ್ರಯದಲ್ಲಿರುವ ಕುಲಾಲ ಸೇವಾದಳದ ೨೦೨೪-೨೫ನೇ ಸಾಲಿನ ದಳಪತಿಯಾಗಿ ಗಣೇಶ್ ಕುಲಾಲ್ ಬೆದ್ರಗುಡ್ಡೆ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಚಂದ್ರಶೇಖರ ಕಾಮಾಜೆ, ಜತೆಕಾರ್ಯದರ್ಶಿಯಾಗಿ ರಾಜೇಶ್ ಕುಲಾಲ್ ರಾಯಿ, ಸೋಶಿಯಲ್ ಮೀಡಿಯಾ ಪ್ರತಿನಿಧಿ ಜಯಂತ್ ಕುಲಾಲ್ ಅಗ್ರಬೈಲು, ಮಾಧ್ಯಮ ಪ್ರತಿನಿಧಿಯಾಗಿ ದೇವದಾಸ ಅಗ್ರಬೈಲು, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಪ್ರೇಮ್‌ನಾಥ ನೇರಂಬೋಳು, ಮಹೇಶ್ ಕುಲಾಲ್ ಕಡೇಶ್ವಾಲಯ, ಗಣೇಶ್ ಕುಲಾಲ್ ದುಗನಕೋಡಿ, ಚಿರಾಗ್ ಕಾಮಾಜೆ, ಕೃತಿಕ್ ಕುಮಾರ್ ವೈ ಎಸ್., ಸಂಘಟನಾ ಕಾರ್ಯದರ್ಶಿಗಳಾಗಿ ರಾಜೇಶ್ ಭಂಡಾರಿಬೆಟ್ಟು, ರಾಘವೇಂದ್ರ ಕಾಮಾಜೆ,…

Read More