ಮಂಗಳೂರು: ಸೈಬರ್ ವಂಚಕರಿಂದ ʼರ್ಯಾಟ್‌ʼ ವಂಚನೆ – ಮೊಬೈಲ್ ಗೆ ಲಿಂಕ್ ಕಳುಹಿಸಿ ಹಣ ವರ್ಗಾವಣೆ

ಮಂಗಳೂರು: ಸೈಬರ್ ವಂಚಕರು ರಿಮೋಟ್ ಆಕ್ಸೆಸ್ ಟೂಲ್‌ಗಳನ್ನು ಬಳಸಿಕೊಂಡು ಎಪಿಕೆ ಫೈಲ್ ಅಥವಾ ಆಂಡ್ರಾಯ್ಡ್ ಆಪ್ ಸಿದ್ಧಪಡಿಸುತ್ತಾರೆ. ಬಳಿಕ ವಾಟ್ಸಾಪ್ ಮೆಸೇಜ್ ಮುಖಾಂತರ ಬ್ಯಾಂಕ್ ಖಾತೆಗಳಿಗೆ ಲಿಂಕ್ ಆಗಿರುವ ಮೊಬೈಲ್ ನಂಬರ್ ಗಳಿಗೆ ಕಳುಹಿಸಿ ಬ್ಯಾಂಕ್ ಖಾತೆಯಲ್ಲಿರುವ ಎಲ್ಲಾ ಹಣವನ್ನು ದೋಚುತ್ತಿದ್ದಾರೆ. ವಂಚಕರು ವಾಟ್ಸಾಪ್ ನಲ್ಲಿ ಕಳುಹಿಸಿದ ಎಪಿಕೆ ಫೈಲ್ ಮೆಸೇಜ್ ಅನ್ನು ಓಪನ್ ಮಾಡಿದಲ್ಲಿ ನಮ್ಮ ಮೊಬೈಲ್ ಗೆ ಬರುವ ಎಲ್ಲಾ ಮೆಸೇಜ್ ಗಳು ವಂಚಕರ ಮೊಬೈಲ್ ಗಳಿಗೆ ತಾನಾಗಿಯೇ ಹೋಗುತ್ತವೆ. ಆ ಮೂಲಕ ವಂಚಕರು ನಮ್ಮ…

Read More

ಸಿದ್ದರಾಮಯ್ಯ, ಡಿಕೆಶಿ ಧರ್ಮಸ್ಥಳಕ್ಕೆ ಆಗಮಿಸುತ್ತಿದ್ದಂತೆ ಭಕ್ತರಿಂದ ಮೋದಿಗೆ ಜೈಕಾರ

ಬೆಳ್ತಂಗಡಿ : ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿಯವರು ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ‌ ಆಗಮಿಸುತ್ತಿದ್ದಂತೆ ಭಕ್ತರಿಂದ ಮೋದಿ ಪರ ಘೋಷಣೆ, ಜೈಶ್ರ್ರೀರಾಂ ಘೋಷಣೆ ಕೇಳಿ ಬಂದಿತು. ಸಿಎಂ, ಡಿಸಿಎಂ ದೇವಸ್ಥಾನಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ಅವಧಿಗೂ ಮುನ್ನವೇ ಭಕ್ತರ ದೇವರ ದರ್ಶನ ಬಂದ್ ಮಾಡಲಾಗಿತ್ತು. ಒಂದು ಗಂಟೆಗೂ ಅಧಿಕ ಸಮಯದಿಂದ ದೇವರ ದರ್ಶನಕ್ಕೆ ಅವಕಾಶ ನೀಡಿರಲಿಲ್ಲ. ಆದ್ದರಿಂದ ಸಾವಿರಾರು ಮಂದಿ ಭಕ್ತರು ಸಾಲುಗಟ್ಟಿ ನಿಂತಿರುವುದು ಕಂಡು ಬಂದಿತ್ತು‌. ಸರತಿ ಸಾಲಿನಲ್ಲಿ ನಿಂತಿದ್ದ ಭಕ್ತರು ಸಿಎಂ, ಡಿಸಿಎಂ ಬಂದು ದೇವಸ್ಥಾನ ಪ್ರವೇಶಿಸುತ್ತಿದ್ದಂತೆ ಜೈಶ್ರೀರಾಂ,…

Read More

ಚರಂಡಿಗೆ ಆಟೋರಿಕ್ಷಾ ಬಿದ್ದು ಚಾಲಕ ಸಾವು- ಮಹಾನಗರ ಪಾಲಿಕೆ ಅಧಿಕಾರಿಗಳ ವಿರುದ್ದ ಎಫ್ಐಆರ್

ಮಂಗಳೂರು : ಮಂಗಳೂರು ರಾತ್ರಿ ಸುರಿದ ಮಳೆಗೆ ಕೊಟ್ಟಾರ ಬಳಿ ರಾಜಕಾಲುವೆಯಲ್ಲಿ ರಿಕ್ಷಾವೊಂದು ಕೊಚ್ಚಿ ಹೋಗಿ ಚಾಲಕ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ ನಡೆದಿದ್ದು, ಇದೀಗ ರಾಜಕಾಲುವೆ ಸರಿಯಾಗಿ ಕ್ಲಿನ್ ಮಾಡದೆ ನಿರ್ಲಕ್ಷ ತೋರಿಸಿರುವ ಮಹಾನಗರ ಪಾಲಿಕೆ ಅಧಿಕಾರಿಗಳ ವಿರುದ್ದ ಎಫ್ಐಆರ್ ದಾಖಲಾಗಿದೆ. ನಗರದಲ್ಲಿ ಶುಕ್ರವಾರ ರಾತ್ರಿ ಇಡೀ ಧಾರಾಕಾರ ಮಳೆಯಾಗಿದ್ದು ಕೊಟ್ಟಾರ ಚೌಕಿಯಲ್ಲಿ ತಗ್ಗು ಪ್ರದೇಶದ 20ಕ್ಕೂ ಅಧಿಕ ಮನೆಗಳಿಗೆ ನೀರು ನುಗ್ಗಿದೆ.‌ ಮಳೆ ನೀರು ಹರಿಯುವ ಕಾಲುವೆಯಲ್ಲಿ ರಿಕ್ಷಾವೊಂದು ಕೊಚ್ಚಿ ಹೋಗಿದ್ದು, ಚಾಲಕ ಕೊಟ್ಟಾರ…

Read More

“ಪತ್ತನಾಜೆ” ತುಳುನಾಡಿನ ಉತ್ಸವ, ಜಾತ್ರೆ, ನೇಮ, ಯಕ್ಷಗಾನಕ್ಕೆ ಸಾಂಪ್ರದಾಯಿಕ ತೆರೆ

ಮಂಗಳೂರು: ತುಳುವರು ಮೂಲತಃ ಕೃಷಿಕರು. ಆದ್ದರಿಂದ ತುಳುನಾಡಿನಲ್ಲಿ ಎಲ್ಲಾ ಆಚರಣೆ, ಆರಾಧನೆಗಳಲ್ಲಿ ಕೃಷಿ ಬದುಕು ಒಂದಿಲ್ಲೊಂದು ರೀತಿ ತಳುಕಿ ಹಾಕಿಕೊಂಡಿರುತ್ತದೆ. ಇದಕ್ಕೆ “ಪತ್ತನಾಜೆ”ಯೂ ಹೊರತಲ್ಲ. ಪತ್ತನಾಜೆ ಎಂದರೆ ಪ್ರಸ್ತುತ ಸಾಲಿನ ಜಾತ್ರೆ, ಅಂಕ, ಆಯನ, ನೇಮ, ಯಕ್ಷಗಾನಕ್ಕೆ ಸಾಂಪ್ರದಾಯಿಕ ತೆರೆಬೀಳುವ ದಿನವೆಂದೇ ನಂಬಿಕೆ ತುಳುವರಲ್ಲಿದೆ. ಇಂದಿಗೂ ಅದೇ ನಿಯಮ ಚಾಲ್ತಿಯಲ್ಲಿದೆ. ವೃಷಭ ಸಂಕ್ರಮಣ ಬಳಿಕದ ಹತ್ತನೇ ದಿನವನ್ನೇ ಪತ್ತನಾಜೆ ಎನ್ನಲಾಗುತ್ತದೆ. ಸಾಮಾನ್ಯವಾಗಿ ಪತ್ತನಾಜೆ ಪ್ರತೀವರ್ಷ ಮೇ 24 ಅಥವಾ 25ರಂದು ಬರುತ್ತದೆ‌. ಇಂದಿನ ದಿನವೇ “ಪತ್ತನಾಜೆ”. ಕೃಷಿಕರಾದ…

Read More

ಮೇ 26 ರಂದು ಕುಲಾಲ ಸುಧಾರಕ ಸಂಘ (ರಿ.) ಬಂಟ್ವಾಳ ಇದರ ವಾರ್ಷಿಕೋತ್ಸವ

ಬಂಟ್ವಾಳ: ಕುಲಾಲ ಸುಧಾರಕ ಸಂಘ (ರಿ.) ಬಂಟ್ವಾಳ ಇದರ 44 ನೇ ವಾರ್ಷಿಕ ಮಹಾಸಭೆ ಮತ್ತು ವಾರ್ಷಿಕೋತ್ಸವವು ದಿನಾಂಕ ಮೇ 26 ರಂದು ಕುಲಾಲ ಸಮುದಾಯ ಭವನ ಪೊಸಳ್ಳಿ ಬಿ.ಸಿ ರೋಡು ಇಲ್ಲಿ ನಡೆಯಲಿದೆ. ಬೆಳ್ಳಗೆ 9 ಗಂಟೆಯಿಂದ 11 ಗಂಟೆಯ ವರೆಗೆ ಸ್ವಜಾತಿ ಬಾಂಧವರಿಗಾಗಿ ವಿವಿಧ ಸ್ಪರ್ಧೆಗಳು ನಡೆಯಲಿದೆ. ವಿಶೇಷ ಆಕರ್ಷಣೆಯಾಗಿ ಸಂಜೆ 4 ಗಂಟೆಯಿಂದ ಕುಲಾಲ ಸಂಗೀತ ಸಂಜೆ, ಕುಸಾಲ್ದ ಗೊಂಚಿಲ್ ಹಾಸ್ಯ ನಾಟಕ, ಮತ್ತು ವಿವಿಧ ವಿನೋದಾವಳಿಗಳು ನಡೆಯಲಿದೆ.

Read More

ಮಂಗಳೂರು: ಮೇ 27 ರಂದು ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಮತದಾರರ ಸಂವಾದ ಕಾರ್ಯಕ್ರಮ

ಮಂಗಳೂರು: ಭಾರತೀಯ ಜನತಾ ಪಾರ್ಟಿಯ ನೈರುತ್ಯ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಮತದಾರರ ಸಂವಾದ ಕಾರ್ಯಕ್ರಮವು ದಿನಾಂಕ ಮೇ 27 ರಂದು ಬೆಳ್ಳಗೆ 10 ಗಂಟೆಗೆ ಸುಧೀಂದ್ರ ಸಭಾಭವನ ಡೊಂಗರಕೇರಿ ಇಲ್ಲಿ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಮಂಗಳೂರು: ನಾಗರಿಕರೇ ಗಮನಿಸಿ ನಾಳೆ (ಮೇ 25) ನಗರದಲ್ಲಿ ರಸ್ತೆ ಸಂಚಾರದಲ್ಲಿ ಬದಲಾವಣೆ

ಮಂಗಳೂರು : ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಅವರ ಕುಟುಂಬಿಕರೊಬ್ಬರ ವಿವಾಹ ಮೇ 25ರಂದು ಎಂ.ಜಿ.ರಸ್ತೆಯ ಟಿಎಂಎ ಪೈ ಸಭಾಂಗಣದಲ್ಲಿ ನಡೆಯಲಿದೆ. ಈ ವಿವಾಹ ಕಾರ್ಯಕ್ರಮದಲ್ಲಿ ರಾಜ್ಯಪಾಲರು, ಸಿಎಂ ಹಾಗೂ ಹಲವಾರು ಪ್ರಮುಖ ವಿವಿಐಪಿಗಳು ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಇಲ್ಲಿನ ರಸ್ತೆಯಲ್ಲಿ ವಾಹನ ದಟ್ಟಣೆ ಅಧಿಕವಾಗುವ ಸಾಧ್ಯತೆಯಿದೆ. ಆದ್ದರಿಂದ ಪಿವಿಎಸ್ ನಿಂದ ಲೇಡಿಹಿಲ್ ಸರ್ಕಲ್ ಕಡೆಗೆ ಹೋಗುವ ಎಂ.ಜಿ.ರಸ್ತೆಯಲ್ಲಿನ ಎಲ್ಲಾ ಮೀಡಿಯನ್‌ಗಳನ್ನು ಮುಚ್ಚಲಾಗುತ್ತದೆ. (ಬೆಸೆಂಟ್ ಜಂಕ್ಷನ್, ಕೋಡಿಯಾಲ್‌ಗುತ್ತು ಕ್ರಾಸ್, ಬಲ್ಲಾಳ್‌ಬಾಗ್ ಜಂಕ್ಷನ್, ನೆಹರೂ ಅವೆನ್ಯೂ ಜಂಕ್ಷನ್). ಆದ್ದರಿಂದ ವಾಹನ…

Read More

ಹಿರಿಯ ಪತ್ರಕರ್ತ ಚಿದಂಬರ ಬೈಕಂಪಾಡಿಗೆ ಯಕ್ಷಧ್ರುವ ಕಲಾ ಗೌರವ

ಮಂಗಳೂರು: ಹಿರಿಯ ಪತ್ರಕರ್ತ, ಸಾಹಿತಿ ಚಿದಂಬರ ಬೈಕಂಪಾಡಿ ಅವರು 2024 ಯಕ್ಷಧ್ರುವ ಕಲಾ ಗೌರವ ಪುರಸ್ಕಾರ ಪಡೆಯಲಿದ್ದಾರೆ. ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆಯುವ ಪಟ್ಲ ಸಂಭ್ರಮದಲ್ಲಿ ಚಿದಂಬರ ಬೈಕಂಪಾಡಿ ಕಲಾ ಗೌರವ ಪುರಸ್ಕಾರ ಸ್ವೀಕರಿಸಲಿದ್ದಾರೆ. ಚಿದಂಬರ ಬೈಕಂಪಾಡಿ ಅವರು ವಡ್ಡರ್ಸೆ ರಘುರಾಮ ಶೆಟ್ಟಿಯವರ ಮುಂಗಾರು ಪತ್ರಿಕೆ, ಬಳಿಕ ಕನ್ನಡ ಪ್ರಭ ಹಾಗೂ ವಿವಿಧ ಮಾಧ್ಯಮದಲ್ಲಿ ದುಡಿದಿದ್ದಾರೆ. 40 ವರ್ಷಕ್ಕೂ ಮಿಕ್ಕಿ ಮಾಧ್ಯಮ ಕ್ಷೇತ್ರದಲ್ಲಿ ದುಡಿದಿರುವ ಚಿದಂಬರ್ ಬೈಕಂಪಾಡಿ ಅವರ ಹಿರಿತನ ಮತ್ತು ಪತ್ರಿಕೋದ್ಯಮ…

Read More

ಮೇ 26ರಂದು ಕಾಸರಗೋಡು ಜಿಲ್ಲಾ ಕುಲಾಲ ಸಂಘದ ಪ್ರಧಾನ ಕಚೇರಿ ಉದ್ಭಾಟನೆ

ಮಂಜೇಶ್ವರ: ಕುಂಜತ್ತೂರು ತೂಮಿನಾಡು ಶ್ರೀ ಮಹಾಕಾಳಿ ರಸ್ತೆ ಪರಿಸರದಲ್ಲಿರುವ ಕಾಸರಗೋಡು ಜಿಲ್ಲಾ ಕುಲಾಲ ಸಂಘದಜಿಲ್ಲಾ ಕುಲಾಲ ಸಮುದಾಯ ಭವನದ ನೆಲಮಹಡಿಯಲ್ಲಿ ಜಿಲ್ಲಾ ಕುಲಾಲಸಂಘದ ಪ್ರಧಾನ ಕಚೇರಿಯ. ಉದ್ಭಾಟನಾ ಸಮಾರಂಭವು ಮೇ26ರಂದು ಜರಗಲಿದೆ. ಜಿಲ್ಲಾ ಕುಲಾಲ ಸಂಘದ ಅಧ್ಯಕ್ಷ ರವೀಂದ್ರ ಮುನ್ನಿಪ್ಪಾಡಿ ಅಧ್ಯಕ್ಷತೆ ವಹಿಸುವರು. ಪುರುಷೋತ್ತಮ ಕುಲಾಲ್‌ ಕಲ್ಬಾವಿ ದೀಪ ಬೆಳಗಿಸುವರು. ಕಾರ್ಯಕ್ರಮದಲ್ಲಿ ಉದ್ಯಮಿ ಕಲ್ಬಾವಿ ಕುಲಾಲ್‌ ಮಂಗಳೂರು, ಪುಂಡರೀಕಾಕ್ಷ ಕೈರಂಗಳ, ನರಸಿಂಹ ಕುಲಾಲ್‌ ಕಡಂಬಾರು, ಹರೀಶ್‌ ಬಂಗೇರ, ಲೀಲಾವತಿ ಶಲಪಾಡಿ ಭಾಗವಹಿಸಿ ಶುಭಕೋರುವರು. ಬೆಳಗ್ಗೆ 9.30ರಿಂದ ಶ್ರೀ…

Read More

ಇಂದು ಮಂಗಳೂರಿನ ಪುರಭವನದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿನ ‘ಪಂಚಮ ವಾರ್ಷಿಕ ಸಂಭ್ರಮ’

ಮಂಗಳೂರು : ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಇದರ ಮಂಗಳೂರು ನಗರ ಘಟಕದ ‘ಪಂಚಮ ವಾರ್ಷಿಕ ಸಂಭ್ರಮ’ವು ಇಂದು (ದಿನಾಂಕ 23-05-2024) ರಂದು ಸಂಜೆ ಗಂಟೆ 3-00ರಿಂದ ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ. ಸಂಜೆ ಗಂಟೆ 3-00ರಿಂದ ‘ಯಕ್ಷ ಹಾಸ್ಯ ವೈಭವ’ದಲ್ಲಿ ಭಾಗವತರಾಗಿ ಡಾ. ಪ್ರಖ್ಯಾತ್ ಶೆಟ್ಟಿ ಅಳಿಕೆ, ಮದ್ದಳೆ – ಶ್ರೀ ಗುರುಪ್ರಸಾದ್ ಬೊಳಿಂಜಡ್ಕ, ಚಂಡೆ – ಶ್ರೀ ಪ್ರಶಾಂತ್ ವಗೆನಾಡು, ಚಕ್ರತಾಳ – ಪೂರ್ಣೇಶ್ ಆಚಾರ್ಯ ಮತ್ತು ಮುಮ್ಮೇಳದಲ್ಲಿ ದಿನೇಶ್ ಶೆಟ್ಟಿಗಾರ್ ಕೋಡಪದವು, ದಿನೇಶ್ ರೈ…

Read More