ಕುಳಾಯಿ ಕುಲಾಲ ಸಂಘ ದ ನೂತನ ಅಧ್ಯಕ್ಷರಾಗಿ ಗಂಗಾಧರ್ ಬಂಜನ್ ಆಯ್ಕೆ

ಮಂಗಳೂರು: ಕುಲಾಲ ಸಂಘ (ರಿ) ಕುಳಾಯಿ ಇದರ ನೂತನ ಅಧ್ಯಕ್ಷರಾಗಿ ಗಂಗಾಧರ್ ಬಂಜನ್ ಆಯ್ಕೆಯಾಗಿದ್ದಾರೆ. ಸಂಘದ ನೂತನ ಪದಾಧಿಕಾರಿಗಳ ಸಭೆಯು ಕರಾವಳಿ ಕುಲಾಲ ಕುಂಬಾರರ ಯುವವೇದಿಕೆ ದ ಕ ಜಿಲ್ಲಾ ಅಧ್ಯಕ್ಷ ಜಯೇಶ್ ಜಿ ಅವರ ಉಸ್ತುವಾರಿಯಲ್ಲಿ ನಡೆಯಿತು. ಗೌರವ ಅಧ್ಯಕ್ಷರಾಗಿ ಗಂಗಾಧರ್ ಕೆ ಅಧ್ಯಕ್ಷರಾಗಿ ಗಂಗಾಧರ್ ಬಂಜನ್, ಉಪಾಧ್ಯಕ್ಷರಾಗಿ ಉಮೇಶ್ ಕೆ ಏನ್ ಮತ್ತು ಮೀರಾ ಮೋಹನ್ ಕಾರ್ಯದರ್ಶಿಯಾಗಿ ಗಣೇಶ್ ಎಸ್ ಕುಲಾಲ್ , ಕೋಶಾಧಿಕಾರಿಯಾಗಿ ಹರ್ಷಿತ್ ಕುಲಾಲ್, ಜತೆ ಕಾರ್ಯದರ್ಶಿಯಾಗಿ ಹರೀಶ್ ಕಾವಿನಕಲ್ಲು, ಕ್ರೀಡಾ…

Read More

ಮಂಗಳೂರು: ತೈಲ ಬೆಲೆ ಏರಿಕೆ ಖಂಡಿಸಿ ಬಿಜೆಪಿ ವಿನೂತನ ಪ್ರತಿಭಟನೆ

ಮಂಗಳೂರು: ರಾಜ್ಯ ಸರಕಾರದ ತೈಲ ಬೆಲೆಯೇರಿಕೆಯನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪೆಟ್ರೋಲ್ ಬಂಕ್‌ವರೆಗೆ ಸ್ಕೂಟರ್, ಕಾರನ್ನು ತಳ್ಳಿಕೊಂಡು ಹೋಗಿ ಭಿಕ್ಷೆಯೆತ್ತಿ ವಿನೂತನ ಪ್ರತಿಭಟನೆ ನಡೆಸಿತು. ನಗರದ ಕೊಡಿಯಾಲಬೈಲ್‌ನಲ್ಲಿರುವ ಬಿಜೆಪಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ “ಚೊಂಬು, ಗೆರಟೆ” ಪ್ರದರ್ಶಿಸಿ ರಾಜ್ಯ ಕಾಂಗ್ರೆಸ್ ಸರಕಾರದ ಬೆಲೆಯೇರಿಕೆಯನ್ನು ಖಂಡಿಸಲಾಯಿತು. ಈ ವೇಳೆ “ಚೊಂಬು ಚೊಂಬು ಪಂಡೆರ್ ಒಟ್ಟೆ ತಿಪ್ಪಿ ಕೊರಿಯೆರ್, ಟಕಾ ಟಕ್ ಟಕಾ ಟಕ್ ಪಂಡೆರ್ ಖಾಲಿ ಚೊಂಬು ಕೊರಿಯೆರ್” ಎಂಬ ಘೋಷಣೆಗಳು ಕೇಳಿ…

Read More

ಶ್ರೀ ಅನಂತಪುರ ದೇವಸ್ಥಾನದ ಭಕ್ತರಿಗೆ ಸಂಪೂರ್ಣ ದರ್ಶನ ನೀಡಿದ ಮೊಸಳೆ ಮರಿ ಬಬಿಯಾ

ಕಾಸರಗೋಡು: ಸರೋವರ ಕ್ಷೇತ್ರ ಅನಂತಪುರ ಶ್ರೀ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದಲ್ಲಿ ತಿಂಗಳ ಹಿಂದೆ ಪ್ರಥಮ ಬಾರಿಗೆ ಕಾಣಿಸಿಕೊಂಡ ಬಬಿಯಾ-3 ಹೆಸರಿನ ಮೊಸಳೆ ಮರಿ ಜೂನ್ 14ರ ಸಂಜೆ ಇಲ್ಲಿನ ಎತ್ತರದ ಜಾಗದಲ್ಲಿ ಭಕ್ತರಿಗೆ ಮೊದಲ ಸಲ ಸಂಪೂರ್ಣ ದರ್ಶನ ನೀಡಿತು. ದೇವಾಲಯದ ಕೊಳದಲ್ಲಿ ಸುಮಾರು 80 ವರ್ಷಗಳ ಕಾಲ ವಾಸಿಸುತ್ತಿದ್ದ ಮೂಲ ಬಬಿಯಾ ಮೊಸಳೆ 2022ರ ಅಕ್ಟೋಬರ್ 9 ರಂದು ಸಾವನ್ನಪ್ಪಿತು. ಬಬಿಯಾ ಸಾವನ್ನಪ್ಪಿದ ಒಂದು ವರ್ಷದ ನಂತರ, ದೇವಾಲಯದ ಕೊಳದಲ್ಲಿ ಈ ಮೊಸಳೆ ಮರಿ ಕಾಣಿಸಿಕೊಂಡಿದೆ. ಆದರೆ,…

Read More

ಮಂಗಳೂರು: ಮಾಜಿ ಸಂಸದ ನಳಿನ್ ಕುಮಾರ್ ಕಟೀಲು ವಿರುದ್ದ ಸುಳ್ಳು ಸಂದೇಶ – ದೂರು ದಾಖಲು

ಮಂಗಳೂರು : ಮಾಜಿ ಸಂಸದ ನಳಿನ್ ಕುಮಾರ್ ಕಟೀಲು ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ‌ ಸುಳ್ಳು ಸಂದೇಶ ರವಾನಿಸುತ್ತಿರುವ ಬಗ್ಗೆ ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ ಉದ್ಯಮಿ, ನಳಿನ್ ಆಪ್ತ ಸೀತಾರಾಮ ರೈ ಕೆದಂಬಾಡಿಗುತ್ತು ದೂರು ನೀಡಿದ್ದಾರೆ. ಅಝೀಜ್ ಹಾಗೂ ಇನ್ನಿತರರು ನಳಿನ್ ಕುಮಾರ್ ಕಟೀಲು ಅವರ ವಿರುದ್ಧ ವಾಟ್ಸ್ಆ್ಯಪ್‌ನಲ್ಲಿ ತಪ್ಪು ಸಂದೇಶ ರವಾನಿಸುತ್ತಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.‌ ಮೇ 14ರಿಂದ ವಾಟ್ಸ್ಆ್ಯಪ್‌ನಲ್ಲಿ ನಿರಂತರವಾಗಿ ನಳಿನ್ ಕುಮಾರ್ ಕಟೀಲು ವಿರುದ್ಧ ಮಾನಹಾನಿಯಾಗುವಂತೆ ಸಂದೇಶವನ್ನು ಹರಿಯಬಿಡಲಾಗಿದೆ. ಅಜೀಜ್ ಎಂಬಾತ “ಪ್ರವೀಣ್…

Read More

ಮಂಗಳೂರು ಪೊಲೀಸ್ ಕಮಿಷನರ್ ಪಾಕ್ ಕಮಿಷನರ್ ರೀತಿ ಏಕೆ ವರ್ತಿಸುತ್ತಿದ್ದಾರೆ..? – ಸಿ.ಟಿ.ರವಿ

ಮಂಗಳೂರು: ಪಾಕಿಸ್ತಾನದ ಕುನ್ನಿಗಳೆಂದರೆ ಪಾಕ್ ಕುನ್ನಿಗಳು ಪ್ರಚೋದನೆಗೆ ಒಳಗಾಗಬೇಕು. ಹಾಗಾದರೆ ಸ್ಪೀಕರ್ ಖಾದರ್ ಸಾಮ್ರಾಜ್ಯ ಉಳ್ಳಾಲದಲ್ಲಿ ಪಾಕ್ ಕುನ್ನಿಗಳು ಇನ್ನೂ ಇದ್ದಾರೆ ಅಂದಾಯ್ತು. ಆದ್ದರಿಂದ ಮಂಗಳೂರು ಪೊಲೀಸ್ ಕಮಿಷನರ್ ಪಾಕಿಸ್ತಾನದ ಕುನ್ನಿಗಳನ್ನ ಗುರುತಿಸಿ, ಅವರ ಮೇಲೆ ಕೇಸು ಹಾಕಿ ಅವರನ್ನ ಗಡೀಪಾರು ಮಾಡಲಿ. ಖಾದರ್ ಅವರೇ ಗುರುತಿಸಿ ಅವರನ್ನು ಪಾಕಿಸ್ತಾನಕ್ಕೆ ಕಳುಹಿಸಲಿ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಆಗ್ರಹಿಸಿದರು. ಮಂಗಳೂರು ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಪಾಕಿಸ್ತಾನಕ್ಕೆ ಹುಟ್ಟಿದವರಿಗೆ ಮಾತ್ರ ಭಾರತ್ ಮಾತಕೀ‌ ಜೈ ಅಂದರೆ ಪ್ರಚೋದನೆಯಾಗುತ್ತದೆ….

Read More

ಮಂಗಳೂರು: ಜುಲೈ 7 ರಂದು ದ್ರಾವಿಡ ಬ್ರಾಹ್ಮಣ ವಟುಗಳಿಗೆ ಸಾಮೂಹಿಕ ಉಚಿತ ಉಪನಯನ

ಮಂಗಳೂರು: ಪರಮಪೂಜ್ಯ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಸಂಸ್ಮರಣೆಯೊಂದಿಗೆ, ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ ಆಶೀರ್ವಾದ ಮತ್ತು ಮಾರ್ಗದರ್ಶನ ದಿಂದ ಕದ್ರಿ ಶ್ರೀ ಕೃಷ್ಣ ಕಲ್ಯಾಣ ಮಂದಿರದಲ್ಲಿ ಇರುವ ಶ್ರೀ ಕೃಷ್ಣ ಧರ್ಮೋಪನಯನ ಸಮಿತಿ ವತಿಯಿಂದ ಜುಲೈ 7 ರವಿವಾರ ದ್ರಾವಿಡ ಬ್ರಾಹ್ಮಣ ವಟುಗಳಿಗೆ ಸಾಮೂಹಿಕ ಉಚಿತ ಉಪನಯನ ಕಾರ್ಯಕ್ರಮ ಜರುಗಲಿದೆ.ಆಸಕ್ತರು ವಟುಗಳ ಹೆ‌ಸರನ್ನ ಪ್ರಧಾನ ಕಾರ್ಯದರ್ಶಿ ಸುಧಾಕರ ರಾವ್ ಪೇಜಾವರ 9448546051 ಇವರಲ್ಲಿ ನೋಂದಣಿ ಮಾಡಬೇಕೆಂದು ಪ್ರಕಟಣೆ ಯಲಿ ತಿಳಿಸಿದ್ದಾರೆ. ವಿಳಾಸ ಶ್ರೀ ಕೃಷ್ಣ ಕಲ್ಯಾಣ…

Read More

ಡಾ.ರೊನಾಲ್ಡ್ ಕೊಲಾಸೊ, ಡಾ.ತುಂಬೆ ಮೊಯ್ದಿನ್, ಪ್ರಕಾಶ್ ಶೆಟ್ಟಿಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್

ಮಂಗಳೂರು: ಅನಿವಾಸಿ ಭಾರತೀಯ ಉದ್ಯಮಿ, ಸಮಾಜ ಸೇವಕ ಡಾ.ರೊನಾಲ್ಡ್ ಕೊಲಾಸೊ, ತುಂಬೆ ಗ್ರೂಪ್ ಸ್ಥಾಪಕಾಧ್ಯಕ್ಷ ಡಾ.ತುಂಬೆ ಮೊಯ್ದಿನ್ ಹಾಗೂ ಎಂ.ಆರ್.ಜಿ. ಗ್ರೂಪ್ ಸ್ಥಾಪಕಾಧ್ಯಕ್ಷ ಕೆ.ಪ್ರಕಾಶ್ ಶೆಟ್ಟಿಯವರಿಗೆ ಮಂಗಳೂರು ವಿಶ್ವವಿದ್ಯಾನಿಲಯದ ಈ ಬಾರಿಯ ಗೌರವ ಡಾಕ್ಟರೇಟ್​ ಘೋಷಿಸಲಾಗಿದೆ. ಮಂಗಳೂರು ವಿಶ್ವವಿದ್ಯಾನಿಲಯದ 42ನೇ ವಾರ್ಷಿಕ ಘಟಿಕೋತ್ಸವವು ಜೂ.15ರಂದು ಮಧ್ಯಾಹ್ನ 12.15 ಕ್ಕೆ ವಿವಿ ಆವರಣದಲ್ಲಿ ನಡೆಯಲಿದ್ದು ಈ ವೇಳೆ ಈ ಮೂವರು ಸಾಧಕರಿಗೆ ಗೌರವ ಡಾಕ್ಟರೇಟ್ ಪದವಿ ಪ್ರಧಾನ ಮಾಡಲಾಗುವುದು ಎಂದು ವಿವಿಯ ಕುಲಪತಿ ಪ್ರೊ.ಪಿ.ಎಲ್.ಧರ್ಮ ತಿಳಿಸಿದ್ದಾರೆ.ಮಂಗಳೂರಿನ ವಿವಿ ಕಾಲೇಜಿನಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ…

Read More

ಮಂಗಳೂರು: ಮರವೂರು ಹಳೆ ಸೇತುವೆ ಮೇಲೆ ವಾಹನ ಸಂಚಾರ ನಿಷೇಧ – ಜಿಲ್ಲಾಧಿಕಾರಿ ಆದೇಶ

ಮಂಗಳೂರು: ಮರವೂರು ಹಳೆ ಸೇತುವೆ ಮೇಲೆ ವಾಹನ ಸಂಚಾರ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಮಂಗಳೂರು-ಅತ್ರಾಡಿ ರಾಜ್ಯ ಹೆದ್ದಾರಿ 67 ರಸ್ತೆಯು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮಂಗಳೂರು ಇಲ್ಲಿಗೆ ಸಂಪರ್ಕಿಸುವ ರಸ್ತೆಯಲ್ಲಿ ಹಲವಾರು ಘನವಾಹನಗಳು ಲಘುವಾಹನಗಳು ಹಳೇ ಸೇತುವೆ ಮೂಲಕ ಚಲಿಸುತ್ತಿರುವುದರಿಂದ ಸದ್ರಿ ಸೇತುವೆಯ ಎರಡನೇ ಪಿಯರ್ ನ ತಳಪಾಯವನ್ನು ಭದ್ರಪಡಿಸಿ ಸಂಪೂರ್ಣ ಸೇತುವೆ ದುರಸ್ತಿ ಪಡಿಸುವವರೆಗೆ ಮರವೂರು ಹಳೆಸೇತುವೆಯಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಿ ಹಳೆ ಸೇತುವೆಯಲ್ಲಿ ಸಂಚರಿಸುವ ವಾಹನಗಳು ಹೊಸ ಸೇತುವೆಯಲ್ಲಿ ಸಂಚರಿಸುವಂತೆ ಜಿಲ್ಲಾಧಿಕಾರಿ…

Read More

ಬಿಜೆಪಿ ಯುವ ಮೋರ್ಚಾ ನಾಯಕರಿಗೆ ನ್ಯಾಯಾಲಯದಿಂದ ಜಾಮೀನು ಮಂಜೂರು “ಸತ್ಯ ಧರ್ಮಕ್ಕೆ ಸಂದ ಜಯ” – ಹರೀಶ್ ಪೂಂಜ

ಬೆಳ್ತಂಗಡಿ: ರಾಜಕೀಯ ಪ್ರೇರಿತವಾಗಿ ಬಿಜೆಪಿ ಯುವ ಮೋರ್ಚಾ ನಾಯಕರಾದ ಶಶಿರಾಜ್ ಶೆಟ್ಟಿಮತ್ತು ಪ್ರಮೋದ್ ಮೇಲೆ ತಾಲೂಕು ಆಡಳಿತ ವ್ಯವಸ್ಥೆ ದಾಖಲಿಸಿದ್ದ ಸುಳ್ಳು ಪ್ರಕರಣಕ್ಕೆ ಜಿಲ್ಲಾ ನ್ಯಾಯಾಲಯವು ಜಾಮೀನು ಮಂಜೂರು ಮಾಡಿರುವುದು ಸತ್ಯ ಧರ್ಮಕ್ಕೆ ಸಂದ ಜಯವೆಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಪ್ರತಿಕ್ರಿಯಿಸಿದ್ದಾರೆ. ರಾಜಕೀಯವಾಗಿ ಮುಂಚೂಣಿಗೆ ಬರುತ್ತಿರುವ ಉದಯೋನ್ಮಖ ನಾಯಕರ ಮನೋಸ್ಥೈರ್ಯವನ್ನು ಕುಗ್ಗಿಸುವ ದುರುದ್ದೇಶದಿಂದ ಕಾಂಗ್ರೆಸ್ ದ್ವೇಷ ರಾಜಕೀಯ ಪ್ರೇರಿತ ಬಂಧನದಿಂದ ಯಾರೂ ವಿಚಲಿತರಾಗುವ ಅಗತ್ಯವಿಲ್ಲ. ರಾತ್ರಿ ಕಳೆದ ಮೇಲೆ ಬೆಳಕು ಹರಿಯುವಂತೆ ಒಂದಲ್ಲ ಒಂದು ದಿನ…

Read More

ಸುಳ್ಯ: ಮಹಿಳೆ ಕೊಲೆ ಆರೋಪಿಗೆ ನ್ಯಾಯಾಂಗ ಬಂಧನ

ಸುಳ್ಯ: ಬೆಳ್ಳಾರೆಯಲ್ಲಿ ನಡೆದಿದ್ದ ಮಹಿಳೆಯ ಕೊಲೆ ಆರೋಪಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ. ಪಾಟಾಜೆಯ ಸುಂದರ ಅವರ ಪತ್ನಿ ನಳಿನಿ ಅವರನ್ನು ಜೂ. 9ರ ರಾತ್ರಿ ಕುಡಿದ ಮತ್ತಿನಲ್ಲಿ ಕಲ್ಮಡ್ಕದ ಜಯಕುಮಾರ್ ಎಂಬಾತ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿ ಬೆಳಗ್ಗೆ ಪರಾರಿಯಾಗಿದ್ದ ತನಿಖೆ ಆರಂಭಿಸಿದ್ದ ಪೊಲೀಸರು ಆರೋಪಿಯನ್ನು ಮಂಗಳವಾರ ಬಂಧಿಸಿದ್ದರು. ಬಳಿಕ ಪೊಲೀಸರು ಆರೋಪಿಯ ಸ್ಥಳ ಮಹಜರು ನಡೆಸಿದ್ದರು. ಬುಧವಾರ ಆರೋಪಿಯನ್ನು ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Read More