ಮಂಗಳೂರು: ಕರ್ನಾಟಕದಲ್ಲಿ ಭಾರತ್‌ ಮಾತಾ ಕೀ ಜೈ ಅಂದ್ರೆ ತಪ್ಪಾ?- ವಿಪಕ್ಷ ನಾಯಕ ಆರ್.ಅಶೋಕ್ 

ಕರ್ನಾಟಕದಲ್ಲಿ ಭಾರತ್‌ ಮಾತಾ ಕೀ ಜೈ, ಜೈ ಶ್ರೀರಾಮ್‌ ಎಂದರೆ ತಪ್ಪು. ಕಾಂಗ್ರೆಸ್‌ ಸರ್ಕಾರ ಗೂಂಡಾಗಳ ಕೈಗೆ ರಾಜ್ಯವನ್ನು ಕೊಟ್ಟಿದ್ದು, ಇಂತಹ ಘೋಷಣೆ ಕೂಗಿದರೆ ಚೂರಿ ಹಾಕುತ್ತಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ದಕ್ಷಿಣ ಕನ್ನಡ ಜಿಲ್ಲೆಯ ಬೊಳಿಯಾರಿನಲ್ಲಿ ಭಾರತ ಮಾತೆಗೆ ಜೈಕಾರ ಕೂಗಿದ್ದಕ್ಕಾಗಿ ಮತಾಂಧರಿಂದ ಹಲ್ಲೆಗೊಳಗಾಗಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿಯ ಗಾಯಾಳು ಕಾರ್ಯಕರ್ತರನ್ನು ಆರ್‌.ಅಶೋಕ ಭೇಟಿ ಮಾಡಿ ಧೈರ್ಯ ಹೇಳಿದರು. ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂತಹ…

Read More

ಮಂಗಳೂರು:  ಬಿಜೆಪಿ ವಿಜಯೋತ್ಸವ ವೇಳೆ ಚೂರಿ ಇರಿತ – ಮತ್ತೆ 7 ಆರೋಪಿಗಳ ಬಂಧನ

ಮಂಗಳೂರು: ಬಿಜೆಪಿ ವಿಜಯೋತ್ಸವ ವೇಳೆ ಇಬ್ಬರಿಗೆ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ 7 ಆರೋಪಿಗಳನ್ನು ಕೊಣಾಜೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಇಮ್ರಾನ್, ಇರ್ಷಾದ್, ಶರ್ವಾನ್, ತಾಜುದ್ದೀನ್, ಮುಬಾರಕ್, ಅಶ್ರಫ್, ತಲ್ಲತ್ ಬಂಧಿತರು. ಆ ಮೂಲಕ ಚೂರಿ ಇರಿತ ಪ್ರಕರಣದಲ್ಲಿ ಇದುವರೆಗೆ 13 ಆರೋಪಿಗಳನ್ನು ಬಂಧಿಸಲಾಗಿದೆ. ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆ ಸಂಭ್ರಮಾಚರಣೆ ನಡೆದಿತ್ತು. ಅದೇ ರೀತಿ ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೋಳಿಯಾರ್‌ನಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವದ ಮೆರವಣಿಗೆ ನಡೆಸಿದ್ದರು. ಆದ್ರೆ…

Read More

ಎಚ್ಚರ: ವಿದ್ಯಾರ್ಥಿಗಳ ಪೋಷಕರಿಗೆ ಪೊಲೀಸ್ ಅಧಿಕಾರಿಗಳ ಸೋಗಿನಲ್ಲಿ ಕರೆ..! ಹಣಕ್ಕೆ ಬೇಡಿಕೆ

ಸುರತ್ಕಲ್: ಪೊಲೀಸ್ ಅಧಿಕಾರಿಗಳೆಂದು ಹೇಳಿ ವಿದ್ಯಾರ್ಥಿಗಳ ಹೆತ್ತವರಿಗೆಗೆ ಕರೆ ಮಾಡಿ ಹಣ ಪೀಕಿಸುವ ತಂಡದಿಂದ ಸುರತ್ಕಲ್‌ನಲ್ಲಿ ಹಲವರಿಗೆ ಕರೆ ಬಂದಿದೆ. ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ನಿಮ್ಮ ಮಕ್ಕಳು (ಮಗ) ಸಿಕ್ಕಿ ಹಾಕಿಕೊಂಡಿದ್ದಾರೆ. ಅವರನ್ನು ಬಿಡುಗಡೆ ಮಾಡ ಬೇಕಾದರೆ 5 ಲಕ್ಷ ರೂಪಾಯಿ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ. ಸುರತ್ಕಲ್‌ನ ವಿದ್ಯಾರ್ಥಿಗಳ ಕೆಲವು ಪೋಷಕರಿಗೆ ಈ ಕರೆ ಬಂದಿದ್ದು ಕೂಡಲೇ ಪೋಷಕರು ಕಾಲೇಜಿಗೆ ಕರೆ ಮಾಡಿ ತಮ್ಮ ಮಕ್ಕಳ ಬಗ್ಗೆ ವಿಚಾರಿಸಿದ್ದಾರೆ. ಆ ಸಂದರ್ಭ ವಿದ್ಯಾರ್ಥಿಗಳು ಕಾಲೇಜಿನಲ್ಲೇ ಇದ್ದ ಕಾರಣ….

Read More

ಮಂಗಳೂರು: ಅನ್ಯಕೋಮಿನ ಇಬ್ಬರು ವಿದ್ಯಾರ್ಥಿಗಳ ಜೊತೆ ಹಿಂದೂ ಯುವತಿ ಸುತ್ತಾಟ..! ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು

ಮಂಗಳೂರು: ಅನ್ಯಕೋಮಿನ ಇಬ್ಬರು ವಿದ್ಯಾರ್ಥಿಗಳ ಜೊತೆ ಹಿಂದೂ ಯುವತಿ ಸುತ್ತಾಟ ಆರೋಪ ಮಾಡಲಾಗಿದ್ದು, ಕಾರಿನಲ್ಲಿದ್ದ ತಂಡವನ್ನು ಸಾರ್ವಜನಿಕರು ಪೊಲೀಸರಿಗೆ ಒಪ್ಪಿಸಿರುವಂತಹ ಘಟನೆ ಮಂಗಳೂರು  ಹೊರವಲಯದ ಮುಕ್ಕ ಎಂಬಲ್ಲಿ ನಡೆದಿದೆ. ಮುಕ್ಕ ಸಮೀಪ ಕಾರಿನಲ್ಲಿ ಇಬ್ಬರು ಅನ್ಯಕೋಮಿನ ಯುವಕರೊಂದಿಗೆ ಹಿಂದೂ ಯುವತಿ ಇದ್ದಳು ಎನ್ನಲಾಗಿದೆ. ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳೂರಿನ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ಯುವತಿಯೊಂದಿಗೆ ಬಿಎಂಡಬ್ಲ್ಯು ಕಾರಿನಲ್ಲಿ ಹೊಗುತ್ತಿರಬೇಕಾದರೆ, ಸ್ಕೂಲ್​​ ಬಸ್​ಗೆ ಡಿಕ್ಕಿ ಹೊಡೆದಿದ್ದಾರೆ. ಹೀಗಾಗಿ ಬಸ್ ಚಾಲಕ‌ನ ಜೊತೆ…

Read More

ಜುಲೈ 22ರಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಮಂಗಳೂರಿನಿಂದ ಅಬುಧಾಬಿಗೆ ದಿನಂಪ್ರತಿ ಸಂಚಾರ

ಮಂಗಳೂರು : ಮಂಗಳೂರಿನಿಂದ ಅಬುಧಾಬಿಗೆ ಸಂಚರಿಸುವ ವಿಮಾನಗಳ ಸಂಖ್ಯೆ ಹೆಚ್ಚಿಸಲು ಏರ್ ಇಂಡಿಯಾ ಎಕ್ಸ್‌ಪ್ರೆಸ್ ನಿರ್ಧರಿಸಿದ್ದು, ವಾರದಲ್ಲಿ 4 ದಿನಗಳ ಸಂಚರಿಸುತ್ತಿದ್ದ ವಿಮಾನಗಳು ಜುಲೈ 22ರಿಂದ ದಿನಂಪ್ರತಿ ಕಾರ್ಯಾಚರಿಸಲಿದೆ. ಇಂಡಿಗೋ 4 ಮತ್ತು ಏರ್ ಇಂಡಿಯಾ ಎಕ್ಸ್‌ಪ್ರೆಸ್ 1 ವಿಮಾನ ಸೇರಿದಂತೆ ದಿನನಿತ್ಯ 5 ವಿಮಾನಗಳು ಬೆಂಗಳೂರು – ಮಂಗಳೂರು ನಡುವೆ ಕಾರ್ಯಾಚರಿಸಲಿವೆ. ಜುಲೈ 8ರಿಂದ ಈ ಸಂಖ್ಯೆ 6ಕ್ಕೆ ಏರಿಕೆಯಾಗಲಿದೆ. ಏರ್ ಇಂಡಿಯಾ ಎಕ್ಸ್‌ಪ್ರೆಸ್ 2ನೇ ವಿಮಾನ ಬೆಂಗಳೂರಿನಿಂದ ಮಂಗಳೂರಿಗೆ ಯಾನ ಆರಂಭಿಸುತ್ತಿದೆ. ಇದು ಜು.22ರಿಂದ…

Read More

ಕ.ರ. ವೇ ರಾಜ್ಯಾಧ್ಯಕ್ಷರಾದ ಟಿ. ಎ. ನಾರಾಯಣ ಗೌಡರವರಿಗೆ ‘ಅವನಿ’ ಕಿರು ಚಿತ್ರತಂಡದ ವತಿಯಿಂದ ಶಾಲು ಹೊದಿಸಿ ಸನ್ಮಾನ

ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಟಿ. ಎ. ನಾರಾಯಣ ಗೌಡ ರವರನ್ನು ಇಂದು ರಾಜ್ಯ ಕೇಂದ್ರ ಕಚೇರಿಯಲ್ಲಿ ‘ಅವನಿ’ ಕಿರು ಚಿತ್ರತಂಡದ ವತಿಯಿಂದ ಶಾಲು ಹೊದಿಸಿ ಫಲ ಪುಷ್ಪ ನೀಡಿ 58 ನೇ ಹುಟ್ಟುಹಬ್ಬದ ಶುಭಾಶಯದೊಂದಿಗೆ ಸನ್ಮಾನಿಸಲಾಯಿತು. ಅವನಿ ಕಿರು ಚಿತ್ರವು ಶಶಿ ಬೆಳ್ಳಾಯರು ಅವರ ಕಥೆ, ಸಾಹಿತ್ಯ,ನಿರ್ದೇಶನದಲ್ಲಿ ಮೂಡಿಬರಲಿದ್ದು ಎಸ್.ಆರ್.ಎಸ್ ಪ್ರೊಡಕ್ಷನ್ ಹೌಸಿನ ಹಾಗೂ ಧಾರವಾಹಿಯ ನಿರ್ವಹಣೆ, ಕಾರ್ಯಕಾರಿ ನಿರ್ಮಾಪಕರುಗಳಾದ ಸುಜಿತ್ ಕುಮಾರ್ ಫರಂಗಿಪೇಟೆ, ಲಯನ್ ಅನಿಲ್ ದಾಸ್ ಮಂಗಳೂರು, ದಿನೇಶ್ ಸುವರ್ಣ ಪಡುಪಣಂಬೂರು ಇವರ…

Read More

ರೋಟರಿ ಕ್ಲಬ್ ಬೈಕಂಪಾಡಿಗೆ “ಪ್ಲಾಟಿನಮ್ ಪ್ಲಸ್ ಪ್ರಶಸ್ತಿ”

ಮಂಗಳೂರು: ರೋಟರಿ ಕ್ಲಬ್ ಬೈಕಂಪಾಡಿಯ ವಿವಿಧ ಸೇವೆಗೆ ರೋಟರಿ ಜಿಲ್ಲಾ ಅತ್ಯುತ್ತಮ ಪ್ಲಾಟಿನಮ್ ಪ್ಲಸ್ ಪ್ರಶಸ್ತಿ ಲಭಿಸಿದೆ.ಮೈಸೂರುನಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಜಿಲ್ಲಾ ರೋಟರಿ 3181 ರ ಗವರ್ನರ್ ಎಚ್ ಆರ್ ಕೇಶವ್ ಅವರಿಂದ ರೋಟರಿ ಕ್ಲಬ್ ನ ಅಧ್ಯಕ್ಷ ಸುಧಾಕರ್ ಸಾಲಿಯಾನ್ ಪ್ರಶಸ್ತಿ ಸ್ವೀಕರಿಸಿದರು.ಈ ಸಂದರ್ಭದಲ್ಲಿ ರೋಟರಿ ಜಿಲ್ಲಾ ನಿಯೋಜಿತಾ ಗವರ್ನರ್ ವಿಕ್ರಂ ದತ್ತ, ಅಸಿಸ್ಟೆಂಟ್ ಗವರ್ನರ್ ಸುಭೋದ್ ಕುಮಾರ್ ದಾಸ್,ಕಾರ್ಯದರ್ಶಿ ದಿನೇಶ್ ಬಂಗೇರ, ಕಿರಣ್ ಪ್ರಸಾದ್ ರೈ, ಭರತ್ ಶೆಟ್ಟಿ, ಪ್ರಸಾದ್ ಪ್ರಭು,…

Read More

ಉಳ್ಳಾಲ: ಬಿಜೆಪಿ ವಿಜಯೋತ್ಸವ ಬಳಿಕ ಚೂರಿ ಇರಿತ – ಮೂವರು ಅರೆಸ್ಟ್

ಉಳ್ಳಾಲ: ನಗರದ ಬೋಳಿಯಾರು ಎಂಬಲ್ಲಿ ಬಿಜೆಪಿ ವಿಜಯೋತ್ಸವದ ಮೆರವಣಿಗೆ ಬಳಿಕ ಇಬ್ಬರಿಗೆ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಗೂ ಮೊದಲು ಮಸೀದಿ ಮುಂಭಾಗ ನಡೆದ ಗಲಾಟೆಯ ದೃಶ್ಯ ಇದೀಗ ಲಭ್ಯವಾಗಿದೆ‌. ಮೋದಿಯವರು ಮೂರನೇ ಬಾರಿ ಪ್ರಧಾನಿಯಾಗಿ ಪದಗ್ರಹಣ ಮಾಡಿರುವ ಹಿನ್ನಲೆಯಲ್ಲಿ ವಿಜಯೋತ್ಸವ ನಡೆದಿತ್ತು. ಅದರಂತೆ ಮಸೀದಿ ಮುಂದೆ ವಿಜಯೋತ್ಸವ ಮೆರವಣಿಗೆ ಸಾಗಿತ್ತು. ವಿಜಯೋತ್ಸವದ ಬಳಿಕ ಮಸೀದಿಯ ಬಳಿ ಬೈಕ್ ನಲ್ಲಿ ಬಂದ ಮೂವರು ಬಿಜೆಪಿ ಕಾರ್ಯಕರ್ತರು ‘ಬೋಲೋ ಭಾರತ್ ಮಾತಾ ಕೀ ಜೈ’…

Read More

ಬಂಟ್ವಾಳ: ಕುಲಾಲ ಸುಧಾರಕ ಸಂಘ (ರಿ) ಇದರ ನೂತನ ಅಧ್ಯಕ್ಷರಾಗಿ ಉದ್ಯಮಿ ಕೃಷ್ಣಪ್ಪ ಬಿ ಆಯ್ಕೆ

ಮಂಗಳೂರು : ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘ (ರಿ) ಇದರ 2024-2025ನೇ ಸಾಲಿನ ಅಧ್ಯಕ್ಷರಾಗಿ ಉದ್ಯಮಿ ಕೃಷ್ಣಪ್ಪ ಬಿ ಆಯ್ಕೆಗೊಂಡಿದ್ದಾರೆ. ಉಪಾಧ್ಯಕ್ಷೆ ಜಲಜಾಕ್ಷಿ ಕುಲಾಲ್ ಪಾಣೆಮಂಗಳೂರು, ಪ್ರಧಾನ ಕಾರ್ಯದರ್ಶಿ ರಮೇಶ್ ಸಂಚಯಗಿರಿ, ಜೊತೆ ಕಾರ್ಯದರ್ಶಿ ಮೀನಾಕ್ಷಿ ಪದ್ಮನಾಭ ಅಲೆತ್ತೂರು & ಗಣೇಶ ಮರ್ದೋಳಿ, ಕೋಶಾ ಧಿಕಾರಿ ಸೋಮನಾಥ್ ಸಾಲಿಯಾನ್ ರಾಮನಗರ, ಸಂಘಟನಾ ಕಾರ್ಯದರ್ಶಿ ಸತೀಶ್ ಸಂಪಾಜೆ, ಮಹಿಳಾ ಘಟಕದ ಅಧ್ಯಕ್ಷೆಯಾಗಿ ಮಾಲತಿ ಮಚೆಂದ್ರ, ಸೇವಾ ದಳಪತಿ ಗಣೇಶ್ ಬೆದ್ರಗುಡ್ಡೆ ಆಯ್ಕೆಗೊಂಡಿದ್ದಾರೆ.

Read More

ಯುವತಿಯೊಂದಿಗೆ ಬಸ್ ನಲ್ಲಿ ಅಸಭ್ಯ ವರ್ತನೆ; ಯುವಕನಿಗೆ ಧರ್ಮದೇಟು ನೀಡಿದ ಸಾರ್ವಜನಿಕರು

ಮಂಗಳೂರು: ಖಾಸಗಿ ಬಸ್ ನಲ್ಲಿ ಯುವಕನೊಬ್ಬ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದು, ಕಾಮುಕನನ್ನು ಹಿಡಿದ ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ಮಂಗಳೂರಿನ ಬಲ್ಲಾಳ್ ಬಾಗ್ ಎಂಬಲ್ಲಿ ನಡೆದಿದೆ. ಯುವತಿ ನಾಗನೂರಿನಿಂದ ಬಸ್ ಹತ್ತಿ ಸ್ಟೇಟ್ ಬ್ಯಾಂಕ್ ಬಳಿ ಇಳಿದು ಬಳಿಕ ಮರೋಳಿ ಎಂಬ ಹೆಸರಿನ ಬಸ್ ನಲ್ಲಿ ಬಜಪೆ ಕಡೆ ತೆರಳುತ್ತಿದ್ದಳು. ಯುವತಿಯನ್ನು ಹಿಂಬಾಲಿಸಿಕೊಂಡು ಬಂದಿದ್ದ ಯುವಕ, ಯುವತಿ ಕುಳಿತಿದ್ದ ಹಿಂಬದಿಯ ಸೀಟಿನಲ್ಲಿ ಕುಳಿತುಕೊಂಡಿದ್ದ. ಅಲ್ಲದೇ ಯುವತಿಯ ಸೊಂಟಕ್ಕೆ ಕೈ ಹಾಕಿ ಕಿರುಕುಳ ನೀಡುತ್ತಿದ್ದ. ಯುವತಿ ಈ…

Read More