ಬಂಟ್ವಾಳ: ಮನೆಯಲ್ಲಿ ಬೆಂಕಿ ಅವಘಡ-ಲಕ್ಷಾಂತರ ಮೌಲ್ಯದ ಸೊತ್ತುಗಳಿಗೆ ಹಾನಿ

ಬಂಟ್ವಾಳದ ಗೂಡಿನಬಳಿಯ ಬಳಕ ಎಂಬಲ್ಲಿ ಮನೆಯಲ್ಲಿ ಬೆಂಕಿ ಅವಘಡ ಸಂಭವಿಸಿ ಲಕ್ಷಾಂತರ ಮೌಲ್ಯದ ಸೊತ್ತುಗಳು ಸುಟ್ಟು ಕರಕಲಾದ ಘಟನೆ ನಡೆದಿದೆ.  ಚಾರ್ಲಿ ಡಿಸೋಜಾ ಎಂಬವರಿಗೆ ಸೇರಿದ ಬಾಡಿಗೆ ಮನೆಯಲ್ಲಿ ಈ ಘಟನೆ ನಡೆದಿದೆ. ಬೆಳಗ್ಗೆ 9.30ಕ್ಕೆ  ಅಗ್ನಿ ಅನಾಹುತ ಸಂಭವಿಸಿದ್ದು, ಮನೆಯಲ್ಲಿ ಅನಾರೋಗ್ಯಪೀಡಿತ ಮನೆ ಯಜಮಾನ ವಿಜಯ್ ಮತ್ತು ಅವರ ಮಗಳು ಮಾತ್ರ ಇದ್ದರು. ವಿಜಯ್ ಅವರ ಮಗಳು ಬಟ್ಟೆಯಂಗಡಿ ನಡೆಸುತ್ತಿದ್ದು, ಮನೆಯಲ್ಲಿ ಬಟ್ಟೆಗಳು ಇದ್ದವು. ಬೆಂಕಿ ಅವಘಡದ ವೇಳೆ ಲಕ್ಷಾಂತರ ರೂ ಮೌಲ್ಯದ ಬಟ್ಟೆ, ಗೃಹೋಪಯೋಗಿ…

Read More

ಬಂಟ್ವಾಳ: ಮನೆಗೆ ಆಕಸ್ಮಿಕ ಬೆಂಕಿ: ಇಬ್ಬರಿಗೆ ಗಂಭೀರ ಗಾಯ

ಬಂಟ್ವಾಳ: ಪುರಸಭಾ ವ್ಯಾಪ್ತಿಯ ಬಿ ಮೂಡ ಗ್ರಾಮದ ಗೂಡಿನಬಳಿಯ-ಕೈಕುಂಜೆ ಬಳಕ(ಕ್ರಿಶ್ಚಿಯನ್ಸ್ ಕಾಲೋನಿ) ದಲ್ಲಿ ಅಗ್ನಿ ದುರಂತದಿಂದಾಗಿ ಮನೆ ಸಂಪೂರ್ಣ ಭಸ್ಮವಾದ ಘಟನೆ ನಡೆದಿದೆ. ಇಂದು ಬೆಳಗ್ಗೆ ಚಾರ್ಲಿ ಡಿಸೋಜ ಎಂಬವರ ಮನೆಲ್ಲಿ ಈ ಅವಘಡ ನಡೆದಿದ್ದು, ಮನೆಯ ಯಜಮಾನ ಮತ್ತು ಇನ್ನೊಬ್ಬ ಸದಸ್ಯ ಗಂಭೀರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪ್ರದೇಶಕ್ಕೆ ಹೋಗುವ ಸಂಪರ್ಕ ರಸ್ತೆಗೆ ರೈಲ್ವೇ ಇಲಾಖೆಯವರು ತಡೆ ಬೇಲಿ ಅಡ್ಡಲಾಗಿ ಹಾಕಿದ್ದ ಕಾರಣ ಅಗ್ನಿ ದುರಂತ ಸಂಭವಿಸಿದ ತಕ್ಷಣ ತುರ್ತು ವಾಹನಗಳು…

Read More

ಮಂಗಳೂರು: ಹತ್ಯೆಗೆ ಯತ್ನಿಸಿದ ಅಪರಾಧಿಗೆ 4 ವರ್ಷ ಜೈಲು ಶಿಕ್ಷೆ..!!

ಮಂಗಳೂರು: ಮೊಬೈಲ್ ಆನ್‌ಲೈನ್ ಗೇಮ್ ಫ್ರೀ ಫೈರ್‌ನಲ್ಲಿ ಸೋತ ದ್ವೇಷದಿಂದ ಯುವಕನನ್ನು ಚೂರಿಯಿಂದ ಇರಿದು ಕೊಲ್ಲಲು ಯತ್ನಿಸಿದ ಪ್ರಕರಣದ ಅಪರಾಧಿಗೆ ನ್ಯಾಯಾಲಯ ನಾಲ್ಕು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಮಂಗಳೂರು ನಗರದ ಜಪ್ಪು ಬಪ್ಪಾಲ್ ನಿವಾಸಿ ಪ್ರತ್ಯುಶ್ ಸಾಲಿಯಾನ್ ಫ್ರೀ ಫೈರ್ ಮೊಬೈಲ್ ಗೇಮ್‌ನಲ್ಲಿ ಸಂಜಯ್ ಪೂಜಾರಿ ಎಂಬವನನ್ನು ಸೋಲಿಸಿದ್ದರು. ಈ ಕಾರಣದಿಂದಾಗಿ ಸಂಜಯ್ ಪೂಜಾರಿಗೆ ಪ್ರತ್ಯುಶ್ ಮೇಲೇ ದ್ವೇಷ ಇತ್ತು. 17-05-2023 ರಂದು ಮಧ್ಯಾಹ್ನ 3.40ರ ಸುಮಾರಿಗೆ, ಪ್ರತ್ಯುಶ್ ಸಾಲಿಯಾನ್ ಮನೆಯಿಂದ ನಡೆದುಕೊಂಡು ನಂದಿಗುಡ್ಡೆ ಕಡೆಗೆ…

Read More

ಬಂಟ್ವಾಳ: ಕರ್ನಾಟಕ ರಾಜ್ಯ ಕುಂಬಾರ ಕುಲಾಲ ಯುವ ವೇದಿಕೆ ವತಿಯಿಂದ ಶ್ರಮದಾನ

ದ‌‌.ಕ ಜಿಲ್ಲೆಯಲ್ಲಿ ಲ| ಅನಿಲ್ ದಾಸ್ ನೇತ್ರತ್ವದ ಹಾಗೂ ಜಿಲ್ಲಾಧ್ಯಕ್ಷರಾಗಿ ಬಲಿಷ್ಠ ಕುಂಬಾರ ಯುವ ವೇದಿಕೆ ತಂಡವನ್ನು ಕಟ್ಟಿ, ಸಮಾಜದಲ್ಲಿ ಕುಲಾಲ/ ಕುಂಬಾರ ಸಮುದಾಯದ ಬಡ ವರ್ಗದ ಜನರ‌ ಪಾಲಿಗೆ ಬೆಳಕಾಗಿ ನಿಂತಿದೆ. ಶ್ರಮದಾನ, ಸೇವೆ, ಸಂಘಟನೆ ಹಾಗು ಹೋರಾಟಕ್ಕೆ ಮತ್ತೊಂದು ಹೆಸರೇ ಕರ್ನಾಟಕ ರಾಜ್ಯ ಕುಲಾಲ ಕುಂಬಾರರ ಯುವ ವೇದಿಕೆ ಹಾಗೂ ಮಹಿಳಾ ಒಕ್ಕೂಟ ಬಂಟ್ವಾಳ : ಕಳೆದ 2025 ರ ಡಿಸಂಬರ್ ತಿಂಗಳಲ್ಲಿ ಬಾಡಿಗೆ ಮನೆ ಬೆಂಕಿಗಾಹುತಿಯಾಗಿ ಬಡ ಕುಟುಂಬ ನಿರ್ಗತಿಕರಾಗಿದ್ದವರಿಗೆ ಕರ್ನಾಟಕ ರಾಜ್ಯ…

Read More

 ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್ ತಡೆ

ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಕಮಿಷನರ್ ಅವರು ನೀಡಿದ್ದ ಆದೇಶಕ್ಕೆ ರಾಜ್ಯ ಹೈಕೋರ್ಟ್ ತಡೆ ನೀಡಿದೆ. ಪುತ್ತೂರು ಸಹಾಯಕ ಕಮಿಷನರ್ ಅವರ ಆದೇಶವನ್ನು ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಅವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು ಆದೇಶಕ್ಕೆ ತಾತ್ಕಾಲಿಕ ತಡೆಯಾಜ್ಞೆ ನೀಡಿದ್ದು, ಸಹಾಯಕ ಕಮಿಷನರ್ ನೀಡಿರುವ ಆದೇಶ ಸಮರ್ಪಕವಾಗಿಲ್ಲ ಎಂದು ಹೇಳಿದೆ. ಅಲ್ಲದೇ 21 ದಿನದೊಳಗೆ…

Read More

ಬೆಳ್ತಂಗಡಿ: ಕಾಮಗಾರಿ ವೇಳೆ ತಡೆಗೋಡೆ ಕುಸಿದು ಕಾರ್ಮಿಕ ಸಾವು

ಬೆಳ್ತಂಗಡಿ: ಉಜಿರೆ-ಸೂರ್ಯ ರಸ್ತೆಯಲ್ಲಿ ಕಾಮಗಾರಿ ನಡೆಯುತ್ತಿದ್ದ ಸಂದರ್ಭದಲ್ಲಿ ತಡೆಗೋಡೆ ಏಕಾಏಕಿ ಕುಸಿದು ಬಿದ್ದ ಪರಿಣಾಮ ಕಾರ್ಮಿಕನೋರ್ವ ಮೃತಪಟ್ಟಿರುವ ಘಟನೆ ನಡೆದಿದೆ. ಬಿಹಾರ ಮೂಲದ ರಾಕೇಶ್ ಕುಮಾರ್ (25) ಮೃತ ಕಾರ್ಮಿಕ. ಬೆಳ್ತಂಗಡಿ ತಾಲೂಕಿನ ಉಜಿರೆ-ಸೂರ್ಯ ರಸ್ತೆಯಲ್ಲಿ ಜ.31ರ ಬೆಳಗ್ಗೆ ನಿರ್ಮಾಣ ಹಂತದಲ್ಲಿದ್ದ ತಡೆಗೋಡೆ ಕುಸಿದು ಬಿದ್ದು, ರಾಕೇಶ್ ಕುಮಾ‌ರ್ ಮಣ್ಣಿನಡಿ ಸಿಲುಕಿಕೊಂಡಿದ್ದರು. ಸ್ಥಳೀಯರು ತಕ್ಷಣ ರಕ್ಷಣೆಗೆ ಧಾವಿಸಿ ಅವರನ್ನು ಹೊರತೆಗೆದು ತುರ್ತು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ಸಾಗಿಸುವ ವೇಳೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ…

Read More

ಮಂಗಳೂರಿನ ಪೊಲೀಸರ ವಸತಿ ಗೃಹಕ್ಕೇ ನುಗ್ಗಿದ ಕಳ್ಳರು..!

ಮಂಗಳೂರಿನ ಪುರಭವನದ ಸಮೀಪವಿರುವ ಪೋಲಿಸ್ ವಸತಿ ಗೃಹಕ್ಕೆ ನುಗ್ಗಿದ ಕಳ್ಳರು ಬೆಲೆಬಾಳುವ ವಸ್ತುಗಳನ್ನು ಕಳವುಗೈದಿದ್ದಾರೆ.  ಪೊಲೀಸ್ ಲೇನಿನ ಎ1 ಬ್ಲಾಕ್‌ನಲ್ಲಿರುವ ಮನೆಯಲ್ಲಿ ಕಳ್ಳತನ ನಡೆದಿದೆ. ದ.ಕ ಜಿಲ್ಲೆಯ ಕಂಟ್ರೋಲ್ ರೂಮಲ್ಲಿ ಕೆಲಸ ಮಾಡುತ್ತಿರುವ ಸಮರ್ಥ್ ಎಂಬವರು ರಜೆ ಮೇಲೆ ಊರಿಗೆ ತೆರಳಿದ್ದ ವೇಳೆ ಅವರ ಮನೆಯ ಬಾಗಿಲು ಮುರಿದು ಕಳ್ಳರು ಒಳನುಗ್ಗಿದ್ದಾರೆ. ಮನೆಯ ಗೋಡ್ರೇಜ್ ಚೆಲ್ಲಾಪಿಲ್ಲಿ ಮಾಡಿ ಹೋಗಿದ್ದು ಹಲವು ಬೆಲೆಬಾಳುವ ವಸ್ತುಗಳನ್ನು ಕಳವು ಮಾಡಿದ್ದಾರೆ. ಸ್ಥಳಕ್ಕೆ ದಕ್ಷಿಣ ಪೊಲೀಸ್ ಠಾಣೆಯ ಪಿಎಸ್‌ಐ ಹಾಗೂ  ಕ್ರೈಂ ಸಿಬ್ಬಂದಿಗಳು…

Read More

ಫೆ.1ರಿಂದ 6ರವರೆಗೆ ಕಾಪಿಕಾಡು ಶ್ರೀ ಉಮಾಮಹೇಶ್ವರಿ ದೇವಸ್ಥಾನದಲ್ಲಿ ಅಷ್ಟ ಬಂಧ ಬ್ರಹ್ಮಕಲಶೋತ್ಸವ

ಮಂಗಳೂರು: ಉಳ್ಳಾಲ ಕಾಪಿಕಾಡಿನ ಶ್ರೀ ಉಮಾಮಹೇಶ್ವರಿ ದೇವಸ್ಥಾನದಲ್ಲಿ ಫೆ.1ರಿಂದ 6ರವರೆಗೆ ಅಷ್ಟ ಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮಗಳು ನಡೆಯಲಿರುವ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಮಂಗಳೂರಿನ ಶ್ರೀ ಶರವು ಮಹಾಗಣಪತಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ನೆರವೇರಿಸಿದ ಬಳಿಕ ಹೊರೆಕಾಣಿಕೆ ಕೇಂದ್ರವನ್ನು ಉದ್ಘಾಟಿಸಲಾಯಿತು. ಶರವು ಕ್ಷೇತ್ರದ ಶಿಲೆ ಶಿಲೆ ಮೊಕ್ತೇಸರ ಶರವು ರಾಘವೇಂಧ್ರ ಶಾಸ್ತ್ರಿಗಳು ಗಣಪತಿ ದೇವರ ಮುಂಭಾಗದಲ್ಲಿ ಪ್ರಾರ್ಥನೆ ನೆರವೇರಿಸಿ ಪ್ರಸಾದ ವಿತರಣೆ ಮಾಡಿದರು. ಮಂಗಳೂರು ಭಾಗದ ಜನತೆಗೆ ಹೊರೆಕಾಣಿಕೆ ಅರ್ಪಣೆ ಮಾಡಲು ಅನುಕೂಲವಾಗುವಂತೆ ಕ್ಷೇತ್ರ ವಠಾರದಲ್ಲಿ ಹೊರೆಕಾಣಿಕೆ ಕೇಂದ್ರವನ್ನು…

Read More

ಬಸ್ ಗಳಿಗೆ ಬಾಗಿಲು ಅಳವಡಿಕೆಗೆ ಜೂ. 1ರವರೆಗೆ ಕಾಲಾವಕಾಶ: ಎಸ್ಪಿ

ಉಡುಪಿ ಜಿಲ್ಲೆಯಲ್ಲಿ ಸಂಚರಿಸುವ ಖಾಸಗಿ ಬಸ್‌ಗಳು ಸೇರಿದಂತೆ ಎಲ್ಲಾ ಬಸ್‌ಗಳಿಗೆ ಕಡ್ಡಾಯವಾಗಿ ಬಾಗಿಲು ಅಳವಡಿಕೆಗೆ ನೀಡಿರುವ ಕಾಲಾವಕಾಶವನ್ನು ಜೂ. 1ರವರೆಗೆ ವಿಸ್ತರಿಸಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹರಿರಾಮ್ ಶಂಕರ್ ಹೇಳಿದ್ದಾರೆ.  ಬಸ್ ಮಾಲಕರ ಸಂಘದೊಂದಿಗೆ ಇಂದು ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಅಧ್ಯಕ್ಷತೆಯಲ್ಲಿ ಇಂದು ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರೆಯಲಾದ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ.  ಸಾರ್ವಜನಿಕರ ಹಾಗೂ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಎಲ್ಲಾ ಬಸ್ಸುಗಳಿಗೆ ಡೋರ್‌ಗಳನ್ನು ಶೀಘ್ರವಾಗಿ ಅಳವಡಿಸಬೇಕಾಗಿರುತ್ತದೆ, ಆದರೆ ಮಾರ್ಚ್ ವರೆಗೆ…

Read More

ಮಂಗಳೂರು: ಕದ್ರಿ ಜೋಗಿ ಮಠದ ಕಚೇರಿಯಲ್ಲಿ ಬೆಳ್ಳಿ ,ಆಭರಣ, ನಗದು ಕಳ್ಳತನ

ಮಂಗಳೂರು : ಕದ್ರಿ ಜೋಗಿ ಮಠದ ಆವರಣದಲ್ಲಿರುವ ಜೋಗಿ ಮಠದ ನವೀಕರಣ ಮತ್ತು ನಿರ್ವಹಣಾ ಸಮಿತಿಯ ಕಚೇರಿಯಲ್ಲಿ ನಡೆದ ಕಳ್ಳತನದಲ್ಲಿ ದುಷ್ಕರ್ಮಿಗಳು ಬಾಗಿಲಿನ ಬೀಗ ಮುರಿದು ಚಿನ್ನಾಭರಣ ಮತ್ತು ನಗದು ಕಳವು ಮಾಡಿದ್ದಾರೆ. ದೂರಿನಲ್ಲಿ ಹೇಳಿರುವ ಪ್ರಕಾರ, ಕಳ್ಳರು ಕಚೇರಿಗೆ ನುಗ್ಗಿ ಕಬೋರ್ಡ್‌ನಲ್ಲಿ ಇರಿಸಲಾಗಿದ್ದ ಧೂಮಾವತಿ ದೈವ ಮತ್ತು ಗಣಪತಿಗೆ ಸೇರಿದ ಆಭರಣಗಳನ್ನು ಕದ್ದಿದ್ದಾರೆ. ಧೂಮಾವತಿ ದೈವದ ಆಭರಣಗಳನ್ನು ಹೊಂದಿರುವ ಚೀಲದಿಂದ, ಕಳ್ಳರು ಎಂಟು ಬೆಳ್ಳಿ ಗುಬ್ಬೆಗಳಲ್ಲಿ ಏಳು, ಅರ್ಧಚಂದ್ರಾಕಾರದಲ್ಲಿರುವ ಎರಡು ಬೆಳ್ಳಿ ಆಭರಣಗಳಲ್ಲಿ ಒಂದು, ಎರಡು ದೊಡ್ಡ…

Read More