ಮಂಗಳೂರು: ಯುವಕನ ಅಪಹರಿಸಿ ಚಿನ್ನದ ಗಟ್ಟಿ ದರೋಡೆ ಪ್ರಕರಣ-ಓರ್ವ ಬಾಲಕ ಸಹಿತ ಐವರ ಬಂಧನ
ಮಂಗಳೂರು: ನಗರದ ಹೃದಯ ಭಾಗದಲ್ಲಿರುವ ಕಾರ್ ಸ್ಟ್ರೀಟ್ ಬಳಿ ಸೆಪ್ಟೆಂಬರ್ 26ರಂದು ನಡೆದ ಸಿನಿಮೀಯ ಶೈಲಿಯ ಚಿನ್ನದ ಗಟ್ಟಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಉತ್ತರ ಠಾಣೆ ಪೊಲೀಸರು ನಾಲ್ವರು ಆರೋಪಿಗಳು ಮತ್ತು ಕಾನೂನು ಸಂಘರ್ಷಕ್ಕೊಳಗಾದ ಒಬ್ಬ ಬಾಲಕನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ದರೋಡೆಗೆ ಬಳಸಿದ ಒಂದು ಸ್ಕೂಟರ್ ಅನ್ನು ಸಹ ವಶಪಡಿಸಿಕೊಳ್ಳಲಾಗಿದೆ. ಸೆ. 26ರಂದು ರಾತ್ರಿ ಸುಮಾರು 8:45 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಹಂಪನಕಟ್ಟೆಯಲ್ಲಿರುವ ಚಾಯ್ಸ್ ಗೋಲ್ಡ್ ಚಿನ್ನಾಭರಣದ ಅಂಗಡಿಯ ಕೆಲಸಗಾರರಾದ ಮುಸ್ತಾಫಾ ಎಂಬವರು…

