ಪುತ್ತೂರು: ನಿವೃತ್ತ ಪ್ರಾಂಶುಪಾಲರ ಮನೆ ದರೋಡೆಗೆ ಯತ್ನ- ಇಬ್ಬರು ಆರೋಪಿಗಳ ಬಂಧನ

ಪುತ್ತೂರು ವಿವೇಕಾನಂದ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಎ.ವಿ ನಾರಾಯಣ ಅವರ ಮನೆ ದರೋಡೆಗೆ ಯತ್ನಿಸಿರುವ ಇಬ್ಬರು ಆರೋಪಿಗಳನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ.  ಬಂಧಿತರನ್ನು ಪುತ್ತೂರಿನ ಮುಡೂರು ನಿವಾಸಿ ಕಾರ್ತಿಕ್ ರಾವ್ (31), ಪತ್ನಿ ಕೆ.ಎಸ್.ಸ್ವಾತಿ ರಾವ್ (25) ಎಂದು ಗುರುತಿಸಲಾಗಿದೆ. ಆರೋಪಿ ಕಾರ್ತಿಕ್ ರಾವ್ ಸಹಾಯಕ ಅರ್ಚಕನಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.  ಡಿ. 17 ರ ಮಧ್ಯರಾತ್ರಿ ಹೆಲ್ಮೆಟ್ ಧರಿಸಿದ್ದ ಇಬ್ಬರು ಅಪರಿಚಿತರು ಪುತ್ತೂರು ಕಸಬಾ ನಿವಾಸಿ, ನಿವೃತ್ತ ಪ್ರಾಂಶುಪಾಲರಾದ ಎ.ವಿ.ನಾರಾಯಣ (84) ಎಂಬುವವರ ಮನೆಗೆ…

Read More

ಶಿಕ್ಷಣ ತಜ್ಞ, ನಿಟ್ಟೆ ಶೈಕ್ಷಣಿಕ ಸಂಸ್ಥೆಗಳ ಕುಲಾಧಿಪತಿ ವಿನಯ್ ಹೆಗ್ಡೆ ನಿಧನ

ಶಿಕ್ಷಣ ತಜ್ಞ, ನಿಟ್ಟೆ ವಿಶ್ವವಿದ್ಯಾಲಯದ ಕುಲಾಧಿಪತಿ ವಿನಯ್ ಹೆಗ್ಡೆ (86) ಹೃದಯಾಘಾತದಿಂದ ಗುರುವಾರ ನಿಧನರಾದರು. ಅವರು ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ. ಮೃತದೇಹದ ಸಾರ್ವಜನಿಕ ದರ್ಶನಕ್ಕೆ ಶಿವಭಾಗ್‌ನಲ್ಲಿರುವ ಅವರ ನಿವಾಸದಲ್ಲಿ ಬೆಳಿಗ್ಗೆ 8.30ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಹಾಗೂ ದೇರಳಕಟ್ಟೆಯ ನಿಟ್ಟೆ ಕ್ಯಾಂಪಸ್‌ನಲ್ಲಿ ಸಂಜೆ 4.30ರಿಂದ 6 ರವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಸುಪ್ರೀಂ ಕೋರ್ಟ್ ಮಾಜಿ ನ್ಯಾಯಮೂರ್ತಿ ದಿ. ಕೆ.ಎಸ್. ಹೆಗ್ಡೆ ಅವರ ಎರಡನೇ ಪುತ್ರ ವಿನಯ್ ಹೆಗ್ಡೆ ಅವರು ದಕ್ಷಿಣ…

Read More

ಹೊಸ ವರ್ಷಾಚರಣೆ: ಮಂಗಳೂರು ಕಮೀಷನರೇಟ್ ವ್ಯಾಪ್ತಿಯಲ್ಲಿ ಮಾರ್ಗಸೂಚಿ ಬಿಡುಗಡೆ

ಮಂಗಳೂರು ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಹೊಸ ವರ್ಷಾಚರಣೆ ಮಾಡುವವರಿಗೆ ಪೊಲೀಸರು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದಾರೆ.  1. 2026 ರ ಹೊಸ ವರ್ಷಾಚರಣೆ ಬಗ್ಗೆ ಈಗಾಗಲೇ ಪೊಲೀಸ್ ಇಲಾಖೆಯ ವತಿಯಿಂದ ಮಾರ್ಗ ಸೂಚಿಗಳನ್ನು ಹೊರಡಿಸಲಾಗಿದ್ದು, ಎಲ್ಲಾ ಕಾರ್ಯಕ್ರಮಗಳ ಆಯೋಜಕರು, ಸಾರ್ವಜನಿಕರು ನೀಡಲಾದ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸುವುದು. 2. ಅನುಮತಿ ಪಡೆಯದೇ ಸಾರ್ವಜನಿಕವಾಗಿ ಯಾವುದೇ ಆಚರಣೆಗಳನ್ನು ಮಾಡಲು ಅವಕಾಶ ಇರುವುದಿಲ್ಲ. 3. ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಗಳು/ಕಿರುಕುಳ ಆಗದಂತೆ ಜವಾಬ್ದಾರಿತಯತವಾಗಿ ಸಂಭ್ರಮಾಚರಣೆ ನಡೆಸುವಂತೆ ಸೂಚಿಸಲಾಗಿದೆ. 4. ಸಂಭ್ರಮಾಚರಣೆ ಹೆಸರಿನಲ್ಲಿ ಅತೀವೇಗದ…

Read More

ವಿಟ್ಲ: ಆಕಸ್ಮಿಕ ಬೆಂಕಿ ಬಿದ್ದು ಸುಟ್ಟು ಕರಕಲಾದ ಮನೆ – ಸಂತ್ರಸ್ತರನ್ನು ಭೇಟಿಯಾಗಿ ಮನೆ ನಿರ್ಮಾಣದ ಭರವಸೆ ನೀಡಿದ ಲ.ಅನಿಲ್‌ ದಾಸ್‌ ಮತ್ತು ತಂಡ

ವಿಟ್ಲ: ಕನ್ಯಾನ ಗ್ರಾಮದ ಕಡು ಬಡ ಕಟುಂಬ ಹರಿಣಾಕ್ಷಿ ಯವರ ಬಾಡಿಗೆ ಮನೆ ಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕರ್ನಾಟಕ ರಾಜ್ಯ ಕುಲಾಲ ಕುಂಬಾರರ ಯುವ ವೇದಿಕೆ ಯ ಜಿಲ್ಲಾಧ್ಯಕ್ಷರಾದ ಲಯನ್ ಅನಿಲ್ ದಾಸ್ ಮತ್ತು ಅವರ ತಂಡವು ಮಂಗಳವಾರ ಭೇಟಿ ನೀಡಿದರು.ಹರಿಣಾಕ್ಷಿ ನಾರಾಯಣ ದಂಪತಿಯವರು ಇಬ್ಬರು ಮಕ್ಕಳೊಂದಿಗೆ ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದು, ಇತ್ತೀಚೆಗೆ ಬೆಂಕಿ ಆಕಸ್ಮಿಕದಿಂದಾಗಿ ಆ ಮನೆ ಮತ್ತು ಮನೆಯಲ್ಲಿದ್ದ ಬೆಲೆಬಾಳುವ ಎಲ್ಲಾ ವಸ್ತುಗಳು ಸುಟ್ಟು ಕರಕಲಾಗಿದ್ದವು. ಅಷ್ಠೇ ಅಲ್ಲದೇ ಮಗಳ ಮದುವೆ…

Read More

ಮಂಗಳೂರು ಕಾರಾಗೃಹಕ್ಕೆ ದಿಢೀರ್ ದಾಳಿ: ಮೊಬೈಲ್, ಸಿಮ್ ಕಾರ್ಡ್ ಪತ್ತೆ..!!

ಮಂಗಳೂರಿನ ಕಾರಾಗೃಹಕ್ಕೆ ತಡರಾತ್ರಿ ನಗರ ಕಾರಾಗೃಹದ ಅಧೀಕ್ಷಕರ ನೇತೃತ್ವದಲ್ಲಿ ಕಾರಾಗೃಹದ ಅಧಿಕಾರಿ ಹಾಗೂ ಸಿಬ್ಬಂದಿಗಳು ದಿಢೀರ್ ದಾಳಿ ನಡೆಸಿದ್ದಾರೆ.  ಈ ವೇಳೆ 2 ಮೊಬೈಲ್‌ಗಳು, 1 ಸಿಮ್ ಕಾರ್ಡ್ ಮತ್ತು 1 ಕೇಬಲ್ ರಹಿತ ಮೊಬೈಲ್ ಚಾರ್ಜರ್ ಜಪ್ತಿ ಮಾಡಿ ವಶಕ್ಕೆ ತೆಗೆದುಕೊಳ್ಳಲಾಗಿದೆ. ಕಾರಾಗೃಹದಲ್ಲಿ ಈ ವಸ್ತುಗಳು ನಿಷೇಧಿತವಾಗಿರುವುದರಿಂದ ಮಂಗಳೂರು ಬರ್ಕೆ ಪೊಲೀಸ್ ಠಾಣೆಗೆ ನೀಡಿ ಪ್ರಕರಣ ದಾಖಲಿಸಲಾಗಿದೆ. ಕಾರಾಗೃಹ ಇಲಾಖೆಯ ಮುಖ್ಯಸ್ಥ ಅಲೋಕ್ ಕುಮಾರ್ ಇವರಿಗೆ ದೂರವಾಣಿ ಮುಖಾಂತರ ವಿಷಯವನ್ನು ತಿಳಿಸಲಾಗಿದೆ ಎಂದು ಜಿಲ್ಲಾ ಕಾರಾಗೃಹ…

Read More

ಬಿ.ಸಿ ರೋಡ್ ಟೋಲ್ ಸಿಬ್ಬಂದಿಗಳಿಗೆ ಹಲ್ಲೆಗೈದ ಆರೋಪಿಗಳಿಬ್ಬರ ಬಂಧನ

ಬಂಟ್ವಾಳ: ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಲಾರಿ ಚಾಲಕ ಹಾಗೂ ಕ್ಲೀನರ್ ನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ಮೂಲದ ನಿವಾಸಿಗಳಾದ ಲಾರಿ ಚಾಲಕ ಭರತ್ (23) ಹಾಗೂ ಕ್ಲೀನರ್ ತೇಜಸ್ (26) ಬಂಧಿತ ಆರೋಪಿಗಳು. ಡಿ 29 ರಂದು ಮುಂಜಾನೆ ಲಾರಿಯಲ್ಲಿ ಬಂದ ಆರೋಪಿಗಳು ಬ್ರಹ್ಮರಕೂಟ್ಲು ಟೋಲ್ ಬಳಿ ರಸ್ತೆಯ ವಿರುದ್ದ ಧಿಕ್ಕಿನಿಂದ ಬಂದ್ದಿದ್ದು, ಟೋಲ್ ಸಿಬ್ಬಂದಿಗಳು ಟೋಲ್ ಹಣ ಕೇಳಿದಾಗ ಹಣ ನೀಡಲು ನಿರಾಕರಿಸಿ ಲಾರಿಯನ್ನು ಮುಂದಕ್ಕೆ ಚಲಾಯಿಸಿ…

Read More

ಪುಂಜಾಲಕಟ್ಟೆ: ಕಾರು- ಬೈಕ್ ಅಪಘಾತ- ಬೈಕ್ ಸವಾರ ಮೃತ್ಯು

ಪುಂಜಾಲಕಟ್ಟೆ : ಕಾರು ಮತ್ತು ಬೈಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಠಾಣೆ ವ್ಯಾಪ್ತಿಯ ಪಿಲಾತಬೆಟ್ಟು ಕಟ್ಟೆಮನೆ ಎಂಬಲ್ಲಿ ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರ ಮಾರ್ನಬೈಲು ನಿವಾಸಿ ಇಮ್ರಾನ್ ಮೊಹಮ್ಮದ್ ತಾಹ ಎಂಬವರು ಸ್ಥಳದಲ್ಲೇ ತೀವ್ರ ಗಾಯಗೊಂಡು ಮೃತಪಟ್ಟಿದ್ದಾರೆ. ಕಾರು ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾಗಿದ್ದು, ಬೈಕ್ ಸವಾರ ಕಾರಿನ ಎದುರಿನ ಗ್ಲಾಸಿಗೆ ಬಿದ್ದು ಹೊರಗಡೆ ಎಸೆಯಲ್ಪಟ್ಟಿದ್ದಾರೆ.  ಈ ವೇಳೆ, ಕಾಲು ತುಂಡಾಗಿದ್ದು, ತಲೆಗೆ…

Read More

ಮಂಗಳೂರು: ಮಹಿಳೆಯ ಕತ್ತಿನಿಂದ ಕರಿಮಣಿ ಸರ ಕಸಿದು ಪರಾರಿ- ಆರೋಪಿ ಅರೆಸ್ಟ್

ಮಂಗಳೂರು: ನಗರದ ಕೊಂಚಾಡಿ ಕೊಪ್ಪಳಕಾಡು ಎಂಬಲ್ಲಿ ಮಹಿಳೆಯ ಕುತ್ತಿಗೆಯಿಂದ 32 ಗ್ರಾಂ ತೂಕದ ಕರಿಮಣಿ ಸರ ಕಸಿದು ಪರಾರಿಯಾಗಿದ್ದ ಆರೋಪಿಯನ್ನು ಮಂಗಳೂರು ಗ್ರಾಮಾಂತರ ಠಾಣೆಯ ಪೊಲೀಸರು ಬಂಧಸಿದ್ದಾರೆ. ಬಂಟ್ವಾಳ ತಾಲೂಕಿನ ರೋಹಿತ್ (25) ಬಂಧಿತ ಆರೋಪಿಯಾಗಿದ್ದಾನೆ. ಡಿ.25ರಂದು ಸಂಜೆ 6.30ಕ್ಕೆ ಕೊಂಚಾಡಿ ಗುರುನಗರದ ನಿವಾಸಿಗಳಾದ ರತ್ನಾವತಿ ಮತ್ತು ಅವರ ಮಗಳು ರಶ್ಮಿ ಯೆಯ್ಯಾಡಿಯಲ್ಲಿ ಮನೆಗೆ ನಡೆದುಕೊಂಡು ಹೋಗುತ್ತಿದ್ದರು. ಕೊಪ್ಪಳಕಾಡು ರಸ್ತೆಯಲ್ಲಿ ಅಪರಿಚಿತ ವ್ಯಕ್ತಿ ರತ್ನಾವತಿಯ ಕುತ್ತಿಗೆಗೆ ಕೈ ಹಾಕಿ ಕರಿಮಣಿ ಸರ ಕಸಿದು ಪರಾರಿಯಾಗಿದ್ದರು. ಸಿಸಿ ಕ್ಯಾಮರಾ…

Read More

ಮಂಗಳೂರು: ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಪಾಂಡೇಶ್ವರ ಠಾಣೆ ಎಎಸ್ಐ ಆ*ತ್ಮಹ*ತ್ಯೆಗೆ ಯತ್ನ..!!

ಮಂಗಳೂರು :  ಪಾಂಡೇಶ್ವರ ಠಾಣೆಯ ಎಎಸ್ಐ ಒಬ್ಬರು ತನ್ನ ಮನೆಯಲ್ಲೇ ಮೈಗೆ ಪೆಟ್ರೋಲ್ ಸುರಿದು ಬೆಂ*ಕಿ ಹಚ್ಚಿಕೊಂಡು ಆ*ತ್ಮಹ*ತ್ಯೆಗೆ ಯತ್ನಿಸಿದ ಘಟನೆ ಕದ್ರಿ ವ್ಯಾಸನಗರದಲ್ಲಿ ನಡೆದಿದೆ. ಪಾಂಡೇಶ್ವರ ಠಾಣೆಯ ಎಎಸ್ಐ ಹರಿಶ್ಚಂದ್ರ ಬೇರಿಕೆ ಆ*ತ್ಮಹ*ತ್ಯೆಗೆ ಯತ್ನಿಸಿದ ಎಎಸ್ಐ. ಮನೆಯಲ್ಲಿ ಯಾರೂ ಇಲ್ಲದಾಗ ಕೃ*ತ್ಯ: ಕಾಸರಗೋಡು ಜಿಲ್ಲೆಯ ಮುಳ್ಳೇರಿಯಾ ಮೂಲದವರಾದ ಹರಿಶ್ಚಂದ್ರ  ಮಂಗಳೂರು, ಉಡುಪಿ ಜಿಲ್ಲೆಯಲ್ಲಿ ಕಳೆದ 27 ವರ್ಷಗಳಿಂದ ಹಲವಾರು ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ಮೂರು ವರ್ಷಗಳ ಹಿಂದೆ ಕದ್ರಿ ವ್ಯಾಸನಗರದಲ್ಲಿ ಹೊಸ ಮನೆ ಮಾಡಿ…

Read More

ಮಂಗಳೂರು: ಅನಧಿಕೃತವಾಗಿ ಬೀಫ್ ಸಾಗಿಸುತ್ತಿದ್ದ ತಂದೆ,ಮಗಳಿಗೆ ಹಲ್ಲೆ- ಇಬ್ಬರು ವಶಕ್ಕೆ

ಮಂಗಳೂರು: ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಮಳಲಿ ನಾರ್ಲಪದವು ರಸ್ತೆಯಲ್ಲಿ ಶನಿವಾರ ಬೆಳಿಗ್ಗೆ ಬೀಫ್ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ತಡೆದು ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರು ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಘಟನೆಯಲ್ಲಿ 11 ವರ್ಷದ ಬಾಲಕಿಯೊಬ್ಬಳು ಗಾಯಗೊಂಡಿದ್ದಾಳೆ. ಶನಿವಾರ ಬೆಳಿಗ್ಗೆ ಸುಮಾರು 10 ಗಂಟೆಯ ವೇಳೆಗೆ ಅಬ್ದುಲ್ ಸತ್ತಾರ್ ಮುಲ್ಲರ್ ಪಟ್ನ ಎಂಬುವವರು ತಮ್ಮ 11 ವರ್ಷದ ಮಗಳೊಂದಿಗೆ ಬೈಕ್‌ನಲ್ಲಿ ಸುಮಾರು 19 ಕೆಜಿ ದನದ ಮಾಂಸವನ್ನು ಯಾವುದೇ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದರು. ಮಳಲಿ…

Read More