ಪುತ್ತೂರು: ಮೆದುಳು ನಿಷ್ಕ್ರೀಯಗೊಂಡ ಯುವತಿಯ ಅಂಗಾಂಗ ದಾನ ಮಾಡಿದ ಕುಟುಂಬ

ಪುತ್ತೂರು: ಮೆದುಳಿನ ರಕ್ತಸ್ರಾವದಿಂದಾಗಿ ‌ಮೃತಪಟ್ಟ ಯುವತಿಯ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಕುಟುಂಬ ಬೇರೆ ಕುಟುಂಬಗಳ ಪಾಲಿಗೆ ಬೆಳಕಾಗಿ ಮಾನವೀಯತೆ ಮೆರೆದಿದೆ. ಸುಳ್ಯದ ರಥಬೀದಿ ‌ನಿವಾಸಿ ಸಿಂಧೂ ಎಂಬ ಯುವತಿ ಪುತ್ತೂರು ಆದರ್ಶ ಸೊಸೈಟಿಯಲ್ಲಿ ಕೆಲಸ ಮಾಡುತ್ತಿದ್ದರು. ಡಿ. 16 ರಂದು ಪುತ್ತೂರಿನಿಂದ ಸುಳ್ಯಕ್ಕೆ ಬಸ್ಸಿನಲ್ಲಿ ಹೋಗುತ್ತಿದ್ದ ವೇಳೆ ಬಸ್ಸಿನ ಸೀಟಿನಿಂದ ಜಾರಿ ಬಿದ್ದಿದ್ದರು. ತಕ್ಷಣವೇ ಅವರಿಗೆ ಸುಳ್ಯದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ನರಕ್ಕೆ ಸಮಸ್ಯೆ ಉಂಟಾಗಿದ್ದ ಕಾರಣದಿಂದ ಸುಳ್ಯದ ಆಸ್ಪತ್ರೆಯಿಂದ ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಗೆ…

Read More

ಉಪ್ಪಿನಂಗಡಿ: ಚಾಲಕನಿಗೆ ಎದೆನೋವು- ಪ್ರಯಾಣಿಕನ ಸಮಯ ಪ್ರಜ್ಞೆಯಿಂದ ತಪ್ಪಿದ ಅಪಘಾತ

ಉಪ್ಪಿನಂಗಡಿ: ಬಸ್ ಚಾಲಕನಿಗೆ ಎದೆ ನೋವು ಕಾಣಿಸಿಕೊಂಡಾಗ ಪ್ರಯಾಣಿಕರೋರ್ವರ ಸಮಯ ಪ್ರಜ್ಞೆಯಿಂದ ಭಾರಿ ಅಪಘಾತ ತಪ್ಪಿಸಿ ಬಸ್ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಿದ ಘಟನೆ ಉಪ್ಪಿನಂಗಡಿಯ ಪೆರ್ನೆ ಎಂಬಲ್ಲಿ ನಡೆದಿದೆ. ಗುರುವಾರ ಸುಬ್ರಹ್ಮಣ್ಯದಿಂದ ಕಾರವಾರಕ್ಕೆ ಕೆಎಸ್ಸಾರ್ಟಿಸಿ ಬಸ್ ಚಾಲನೆ ಮಾಡುತ್ತಿದ್ದ ಚಾಲಕ ಗೋವಿಂದ ನಾಯ್ಕ ಎಂಬವರಿಗೆ ಪೆರ್ನೆ ಗ್ರಾಮದ ಕರ್ವೇಲು ಎಂಬಲ್ಲಿ ಸಮೀಪಿಸುತ್ತಿದ್ದಾಗ ಎದೆನೋವು ಕಾಣಿಸಿಕೊಂಡಿದ್ದು, ಬಸ್ ಚಾಲನೆಯಲ್ಲಿ ವ್ಯತ್ಯಾಸ ಕಂಡು ಬಂದಿತ್ತು. ಇದನ್ನು ಗಮನಿಸಿದ ಬಸ್ಸಿನಲ್ಲಿದ್ದ ವಕೀಲ ನೆಲ್ಯಾಡಿಯ ಇಸ್ಮಾಯಿಲ್ ಅವರ ಪುತ್ರ ಸಲ್ಮಾನುಲ್‌ ಫಾರಿಸ್ ತಕ್ಷಣವೇ…

Read More

ಆಶಾ–ಪ್ರಕಾಶ್ ಶೆಟ್ಟಿ ಸಹಾಯ ಹಸ್ತ: ಪುಟ್ಟಣ್ಣ ಕುಲಾಲ ಪ್ರತಿಷ್ಠಾನದ ಮೂಲಕ 20 ಫಲಾನುಭವಿ ಕುಟುಂಬಗಳಿಗೆ ನೆರವು

ಮಂಗಳೂರು: ಪುಟ್ಟಣ್ಣ ಕುಲಾಲ ಪ್ರತಿಷ್ಠಾನ ಮಂಗಳೂರು ಡಾ ಅಣ್ಣಯ್ಯ ಕುಲಾಲರ ಮೂಲಕ ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಯೋಜನೆಯಡಿಯಲ್ಲಿ ಅವಿಭಜಿತ ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲೆಯ ಕುಲಾಲ ಸಮಾಜದ 20 ಫಲಾನುಭವಿ ಕುಟುಂಬಗಳಿಗೆ ಸಹಾಯ ನಿಧಿಯನ್ನು ಹಸ್ತಾಂತರಿಸಲಾಯಿತು. ಪುಟ್ಟಣ್ಣ ಕುಲಾಲ ಪ್ರತಿಷ್ಠಾನದ ಸಮಾಜ ಸೇವೆಯನ್ನು ಪರಿಗಣಿಸಿ ಡಾ| ಅಣ್ಣಯ್ಯ ಕುಲಾಲರ ಆತ್ಮೀಯ ಹಿತೈಷಿಗಳಾದ ಪ್ರಕಾಶ್ ಶೆಟ್ಟಿ ಯವರು “ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ “ಯೋಜನೆಯಡಿಯಲ್ಲಿ ಕುಲಾಲ ಸಮಾಜದ ಬಡವರು ಹಾಗೂ ಅರ್ಹಫಲಾನುಭವಿಗಳಾದ20 ಕುಟುಂಬಗಳನ್ನು…

Read More

ಬಜ್ಪೆ: ಜಾನುವಾರು ಕಳ್ಳತನ ಪ್ರಕರಣ- 8 ಮಂದಿ ದನಗಳ್ಳರ ಬಂಧನ

ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಜಾರು, ಕರಂಬಾರು, ಭಟ್ರಕೆರೆ ಸೇರಿದಂತೆ ವಿವಿಧ ಪ್ರದೇಶಗಳಿಂದ ಜಾನುವಾರುಗಳನ್ನು ಕಳ್ಳತನ ಮಾಡಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 8 ಮಂದಿ ಆರೋಪಿಗಳನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ಇತ್ತೀಚೆಗೆ ಬಜ್ಜೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಜಾನುವಾರು ಕಳ್ಳತನ ಹಾಗೂ ಮಾಂಸ ಮಾರಾಟ-ಸಾಗಾಟಕ್ಕೆ ಸಂಬOಧಿಸಿದ ಮೂರು ಪ್ರತ್ಯೇಕ ಪ್ರಕರಣಗಳ ಕುರಿತು ತನಿಖೆ ನಡೆಸಿದ ಪೊಲೀಸರು, ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಜುಲೈ ತಿಂಗಳಲ್ಲಿ ಬಜ್ಪೆ ಸಮೀಪದ ಭಟ್ರಕೆರೆ ಮಸೀದಿಯ ಬಳಿ ಸುಮಾರು 50 ಸಾವಿರ ರೂ….

Read More

ಬಜಪೆ ಪಟ್ಟಣ ಪಂಚಾಯತ್ ಚುನಾವಣೆ : ಬಿಜೆಪಿ ಜಯಭೇರಿ

ಮಂಗಳೂರು : ತಾಲೂಕಿನ ಬಜಪೆ ಪಟ್ಟಣ ಪಂಚಾಯತ್‌ಗೆ ಡಿ.21ರಂದು ನಡೆದ ಚುನಾವಣೆಯಲ್ಲಿ ಬಿಜೆಪಿಗೆ ನಿಚ್ಚಳ ಬಹುಮತ ಲಭಿಸಿದೆ.ಒಟ್ಟು 19 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 11 ಸ್ಥಾನಗಳನ್ನು ಗೆದ್ದುಕೊಂಡು ಬೀಗಿದೆ. ಕಾಂಗ್ರೆಸ್-4, ಎಸ್‌ಡಿಪಿಐ-3 ಮತ್ತು ಪಕ್ಷೇತರರು 1 ಸ್ಥಾನಗಳನ್ನು ಪಡೆದಿದ್ದಾರೆ.ಬುಧವಾರ ಮಂಗಳೂರು ಮಿನಿ ವಿಧಾನಸೌಧದಲ್ಲಿ ಮಾತಗಳ ಎಣಿಕೆ ನಡಯಿತು. ಬಜಪೆಯನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿಸಿದ ಬಳಿಕ ನಡೆದ ಮೊದಲ ಚುನಾವಣೆ ಇದಾಗಿತ್ತು. ವಿಜೇತರ ವಿವರ:ವಾರ್ಡ್ 1. ಯಶೋದ (ಬಿಜೆಪಿ)ವಾರ್ಡ್ 2. ಪದ್ಮನಾಭ ಪೂಜಾರಿ (ಬಿಜೆಪಿ)ವಾರ್ಡ್ 3. ಜಾಕೋಬ್…

Read More

ಕುಂಭ ಕಲಾವಳಿ ಕಾರ್ಯಕ್ರಮಕ್ಕೆ “ಉದ್ಯಮ ಸಿಂಧೂರ ಬಿರುದು” ಸನ್ಮಾನ ಸ್ವೀಕರಿಸಲಿರುವ “ವಿಠ್ಠಲ್ ಕುಲಾಲ್ “ರವರಿಗೆ ಆಹ್ವಾನ

ಮಂಗಳೂರು: ಉದ್ಯಮ ಸಿಂಧೂರ ಬಿರುದು ಸನ್ಮಾನ ಸ್ವೀಕರಿಸಲಿರುವ VK ಫರ್ನಿಚರ್ & ಎಲೆಕ್ಟ್ರಾನಿಕ್ಸ್ ಇದರ ಮಾಲೀಕರಾದ ಶ್ರೀ ವಿಠ್ಠಲ್ ಕುಲಾಲ್ ಇವರಿಗೆ ಕುಂಭ ಕಲಾವಳಿ ಕಾರ್ಯಕ್ರಮದ ಆಮಂತ್ರಣ ನೀಡಿ ಗೌರವ ಪೂರಕವಾಗಿ ಆಮಂತ್ರಿಸಲಾಯಿತು. ಈ ಸಮಯದಲ್ಲಿ ಜಿಲ್ಲಾ ಅಧ್ಯಕ್ಷರು ಲಯನ್ ಅನಿಲ್ ದಾಸ್, ವಿಭಾಗೀಯ ಅಧ್ಯಕ್ಷರು ಶ್ರೀ ಸುಕುಮಾರ್ ಬಂಟ್ವಾಳ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನವೀನ್ ಕುಮಾರ್ ಮಜಲ್ ಮತ್ತು ಕಿಶೋರ್ ಕುಮಾರ್ ಮಂಜೇಶ್ವರ, ಸುಕುಮಾರ್ ಬಂಟ್ವಾಳ, ಶ್ರೀನಿವಾಸ್ ಕಾವೂರ್ ಮುಂತಾದವರು ಉಪಸ್ಥಿತರಿದ್ದರು.

Read More

ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುವುದರೊಂದಿಗೆ ಮಕ್ಕಳಲ್ಲಿ ಕ್ರೀಡಾಸಕ್ತಿ ಬೆಳೆಸಿ ಸಾಧನೆಗೆ ನೆರವಾಗಿ- ಲಯನ್ ಅನಿಲ್ ದಾಸ್

ಉಳ್ಳಾಲ: ಸೈಯದ್ ಮದನಿ ಚಾರಿಟೇಬಲ್ ಟ್ರಸ್ಟ್ ಉಳ್ಳಾಲ ಹಳೇಕೋಟೆ ಇದರ ಆಶ್ರಯದಲ್ಲಿ ನಡೆಯುವ ಅನುದಾನಿತ ಶಾಲೆ ಸೈಯದ್ ಮದನಿ ಶಾಲೆ ಇದರ ಕ್ರೀಡೋತ್ಸವ ದ ಬಹುಮಾನ ವಿತರಣಾ ಸಮಾರಂಭವು ಡಿ.23ರಂದು ಹೊಸಕೋಟೆ ಉಳ್ಳಾಲದಲ್ಲಿ ನಡೆಯಿತು. ಸೈಯದ್ ಮದನಿ ದರ್ಗಾದ ಅಧ್ಯಕ್ಷರಾದ ಜನಾಬ್ ಹಾಜಿ ಬಿ.ಜಿ. ಹನೀಪ್ ರವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ದಕ್ಷಿಣ ಕನ್ನಡ ಜಿಲ್ಲಾರಾಜೋತ್ಸವ ಪ್ರಶಸ್ತಿ ಪುರಸ್ಕೃತರಾದ ಶ್ರೀ ಅನಿಲ್ ದಾಸ್ ಅವರನ್ನು ವೇದಿಕೆಯಲ್ಲಿ ಸನ್ಮಾನಿಸಲಾಯಿತು. ಸಯ್ಯದ್ ಮದನಿ ಪ್ರೌಢಶಾಲಾ ವಾರ್ಷಿಕ ಕ್ರೀಡಾಕೂಟದಲ್ಲಿ ಭಾಗವಹಿಸಿ ವಿಜೇತರಾದ…

Read More

ಜ. 04ರಂದು ಮಂಗಳೂರಿನ ಪುರಭವನದಲ್ಲಿ ಕುಂಭಕಲಾವಳಿ: ಕಾರ್ಯಕ್ರಮಕ್ಕೆ ಕ್ಯಾಪ್ಟನ್ ಬ್ರಿಜೇಶ್ ಚೌಟ ಸೇರಿದಂತೆ ಹಲವಾರು ಗಣ್ಯರಿಗೆ ಆಹ್ವಾನ

ಮಂಗಳೂರು: 2026ರ ಜ. 4ರಂದು ಮಂಗಳೂರಿನ ಪುರಭವನದಲ್ಲಿ ರಾಜ್ಯ ಕುಲಾಲ ಕುಂಬಾರರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ ಜಿಲ್ಲಾ ಸಮಿತಿ ಹಾಗೂ ದಾಸ್ ಚಾರಿಟೇಬಲ್ ಸೇವಾ ಟ್ರಸ್ಟ್ (ರಿ.) ಸಹಯೋಗದಲ್ಲಿ ನಡೆಯಲಿರುವ ಕುಂಭ ಕಲಾವಳಿ ಕುಲಾಲ ಕಲಾ ಸೇವಾಂಜಲಿ ಕಾರ್ಯಕ್ರಮಕ್ಕೆ ಬಿಜೆಪಿ ಕಛೇರಿಗೆ ಭೇಟಿ ನೀಡಿ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸೇರಿದಂತೆ ಶಾಸಕ ಭರತ್ ಶೆಟ್ಟಿ, ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಬೊಟ್ಯಾಡಿ, ಮಾಜಿ ಮೇಯರ್…

Read More

ಮಂಗಳೂರು: ಟೋನಿ & ಗೈ ಐದನೇ ಮಳಿಗೆ ಉದ್ಘಾಟನೆ- ಲ.ಅನಿಲ್ ದಾಸ್ ಹಾಗೂ ಪದಾಧಿಕಾರಿಗಳು ಗಣ್ಯರಿಗೆ ಕುಂಭಕಲಾವಳಿಯ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

ಮಂಗಳೂರು: ಪ್ರಸಿದ್ಧ ಅಂತರರಾಷ್ಟ್ರೀಯ ಸಲೂನ್ ಬ್ರ್ಯಾಂಡ್ ಟೋನಿ & ಗೈ ಎಸೆನ್ಸುಯಲ್ಸ್, ಡಿಸೆಂಬರ್ 22 ರ ಭಾನುವಾರ ಸಂಜೆ ಕೆಎಫ್‌ಸಿ ಮತ್ತು ವೈನ್ ಗೇಟ್‌ನ ಮೇಲಿರುವ ಉರ್ವಾದ ಅಶೋಕ್ ನಗರದ ಬಿಂಬಿಸ್ ಕಟ್ಟಡದಲ್ಲಿ ತನ್ನ ಐದನೇ ಶಾಖೆಯನ್ನು ಅದ್ಧೂರಿಯಾಗಿ ಉದ್ಘಾಟಿಸುವ ಮೂಲಕ ಮತ್ತೊಂದು ಮೈಲಿಗಲ್ಲನ್ನು ಸಾಧಿಸಿತು. ಹೊಸದಾಗಿ ತೆರೆಯಲಾದ ಟೋನಿ & ಗೈ ಎಸೆನ್ಸುಯಲ್ಸ್ ಉರ್ವಾ ಸ್ಟುಡಿಯೋವನ್ನು ರಿಬ್ಬನ್ ಕತ್ತರಿಸುವ ಸಮಾರಂಭದೊಂದಿಗೆ ಉದ್ಘಾಟಿಸಲಾಯಿತು, ನಂತರ ಗಣ್ಯ ಅತಿಥಿಗಳು ಸಾಂಪ್ರದಾಯಿಕ ದೀಪ ಬೆಳಗಿಸಿದರು. ಈ ವೇಳೆ ನೂತನ ಮಳಿಗೆಗೆ…

Read More

ಜ. 04ರಂದು ಮಂಗಳೂರಿನ ಪುರಭವನದಲ್ಲಿ ಕುಂಭಕಲಾವಳಿ: ಕಾರ್ಯಕ್ರಮಕ್ಕೆ ಸ್ಪೀಕರ್ ಯು.ಟಿ. ಖಾದರ್‌ ರವರನ್ನು ಬೇಟಿ ನೀಡಿ ಆಹ್ವಾನಿಸಿದ ಸಮಿತಿ ಪದಾಧಿಕಾರಿಗಳು

ಮಂಗಳೂರು: ಜ. 4, 2026ರಂದು ಮಂಗಳೂರಿನ ಕುದ್ಮುಲ್ ರಂಗರಾವ್, ಪುರಭವನದಲ್ಲಿ ನಡೆಯಲಿರುವ ಕುಂಭ ಕಲಾವಳಿ ಕುಲಾಲ ಕಲಾ ಸೇವಾಂಜಲಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಉಳ್ಳಾಲ ಜನಪ್ರಿಯ ಶಾಸಕರು, ರಾಜ್ಯ ವಿಧಾನಸಭಾ ಅಧ್ಯಕ್ಷ ಯು.ಟಿ. ಖಾದರ್ ಅವರನ್ನು ಸಮಿತಿ ಪದಾಧಿಕಾರಿಗಳು ಭೇಟಿಯಾಗಿ ಆಹ್ವಾನ ನೀಡಿದರು. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕರ್ನಾಟಕ ರಾಜ್ಯ ಕುಲಾಲ ಕುಂಬಾರರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ (ರಿ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಹಾಗೂ ದಾಸ್ ಚಾರಿಟೇಬಲ್ ಸೇವಾ ಟ್ರಸ್ಟ್…

Read More