ಬೆಳ್ತಂಗಡಿ: ಏಕಾಏಕಿ ಚಿರತೆ ದಾಳಿ- ಅಡಕೆ ಮರ ಏರಿದ ಪ್ರಾಣ ಉಳಿಸಿಕೊಂಡ ವೃದ್ಧ

ಬೆಳ್ತಂಗಡಿ ತಾಲೂಕಿನ ಕನ್ಯಾಡಿ ಗ್ರಾಮದಲ್ಲಿ ಅಂಡಿರುಮಾರು ಪ್ರದೇಶದಲ್ಲಿ ಚಿರತೆ ದಾಳಿ ಮಾಡಿದೆ. ಚಿರತೆಯ ದಾಳಿಯ ವೇಳೆ ಅಡಿಕೆ ಮರವೇರಿ ಮಂಜಪ್ಪ ನಾಯಕ ಎಂಬಾತ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಹೌದು ಇಂದು ಬೆಳಿಗ್ಗೆ 8 ಗಂಟೆಯ ಸುಮಾರಿಗೆ ಮನೆಯ ಮುಂದೆಯೇ ಚಿರತೆ ಪ್ರತ್ಯಕ್ಷವಾಗಿತ್ತು. ಚಿರತೆ ದಾಳಿ ಮಾಡಿದ ತಕ್ಷಣ ಮಂಜಪ್ಪ ಅಡಿಕೆ ಮರವೇರಿದ್ದಾನೆ. ಆದರೂ ಮಂಜಪ್ಪ ನಾಯಕನ ಕಾಲನ್ನು ಕಚ್ಚಿ ಚಿರತೆ ಎಳೆದು ಬಿಸಾಡಿತ್ತು. ಈ ವೇಳೆ ಮಂಜಪ್ಪ ನಾಯಕ ಜೋರಾಗಿ ಹೋಗಿಕೊಂಡಿದ್ದಾನೆ. ಮನೆಯವರು ಹೊರಬಂದು ಕೂಡಿಕೊಂಡಾಗ ಚಿರತೆ ಅಲ್ಲಿಂದ…

Read More

ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾದೇಶಿ ವದಂತಿ: ಓರ್ವನ ಬಂಧನ

ಮಂಗಳೂರು: ನಗರದ ರಾವ್ ಆಂಡ್ ರಾವ್ ಸರ್ಕಲ್ ಬಳಿ ಅಕ್ರಮ ಬಾಂಗ್ಲಾದೇಶಿಗರು ನೆಲೆಸಿದ್ದಾರೆಂದು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡಿ, ಅಮಾಯಕರ ಮೇಲೆ ಹಲ್ಲೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಇತ್ತೀಚೆಗೆ ವಾಟ್ಸಾಪ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ “ಮಂಗಳೂರು ಮಿನಿ ಬಾಂಗ್ಲಾ ಆಗುವ ಮೊದಲು ಎಚ್ಚೆತ್ತುಕೊಳ್ಳಿ” ಎಂಬ ಸಂದೇಶವೊಂದು ವೈರಲ್ ಆಗಿತ್ತು. ಮಂಗಳೂರಿನ ಸ್ಟೇಟ್‌ಬ್ಯಾಂಕ್ ಬಳಿಯ ರಾವ್ ಆಂಡ್ ರಾವ್ ಸರ್ಕಲ್‌ನಲ್ಲಿರುವ ಕುಟುಂಬವೊಂದನ್ನು ಗುರಿಯಾಗಿಸಿ ಈ ಸುಳ್ಳು ಸುದ್ದಿ ಹಬ್ಬಿಸಲಾಗಿತ್ತು. ಆದರೆ…

Read More

ತುಳು ಕ್ರೈಂ ಥ್ರಿಲ್ಲರ್ ‘ಕಟ್ಟೆಮಾರ್’ ಟ್ರೇಲರ್‌ಗೆ ಅದ್ಧೂರಿ ಬಿಡುಗಡೆ: ಜ.23ರಂದು ತೆರೆಗೆ

ಮಂಗಳೂರು: ಅಸ್ತ್ರ ಪ್ರೊಡಕ್ಷನ್ ಸಂಸ್ಥೆಯ ಲಂಚುಲಾಲ್ ಕೆ.ಎಸ್. ನಿರ್ಮಾಣದ ಬಹುನಿರೀಕ್ಷಿತ ಕ್ರೈಂ ಥ್ರಿಲ್ಲರ್ ತುಳು ಸಿನಿಮಾ ‘ಕಟ್ಟೆಮಾರ್’ ಇದೇ ಜನವರಿ 23ರಂದು ತೆರೆಗೆ ಬರಲಿದ್ದು, ಅದರ ಟ್ರೇಲರ್ ಬಿಡುಗಡೆ ಸಮಾರಂಭ ಮಂಗಳೂರಿನ ಬಿಗ್ ಸಿನಿಮಾಸ್‌ನಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ಅದ್ಧೂರಿಯಾಗಿ ನೆರವೇರಿತು. ಟ್ರೇಲರ್ ಬಿಡುಗಡೆ ಮಾಡಿ ಮಾತನಾಡಿದ ನಿರ್ಮಾಪಕ ಲಂಚುಲಾಲ್ ಕೆ.ಎಸ್., “ಜನವರಿ 23ರಂದು ಕಟ್ಟೆಮಾರ್ ಸಿನಿಮಾ ಬಿಡುಗಡೆಯಾಗುತ್ತಿದೆ. ಬೇರೆ ಭಾಷೆಗಳ ಸಿನಿಮಾಗಳಿಗಿಂತ ತುಳು ಚಿತ್ರವೂ ಯಾವುದಕ್ಕೂ ಕಡಿಮೆಯಾಗಬಾರದು ಎಂಬ ಉದ್ದೇಶದಿಂದ ಈ ಚಿತ್ರವನ್ನು ಭರ್ಜರಿಯಾಗಿ ನಿರ್ಮಿಸಿದ್ದೇವೆ. ತುಳು…

Read More

Update ಬೆಳ್ತಂಗಡಿ: ನಾಪತ್ತೆಯಾಗಿದ್ದ ಬಾಲಕ ಶವವಾಗಿ ಪತ್ತೆ..!!

ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಸಂಬೋಳ್ಯ ಬರಮೇಲು ಪ್ರದೇಶದಿಂದ ಮುಂಜಾನೆ 4 ಗಂಟೆ ಸುಮಾರಿಗೆ ನಾಪತ್ತೆಯಾದ ಬಾಲಕನ ಮೃತದೇಹ ಮನೆ ಸಮೀಪದ ಕೆರೆಯಲ್ಲಿ ಪತ್ತೆಯಾಗಿದೆ.  ಮೃತ ಬಾಲಕನನ್ನು ಕುವೆಟ್ಟು ಗ್ರಾಮದ ಸಂಬೋಳ್ಯ ಬರಮೇಲು ನಿವಾಸಿ ಸುಬ್ರಹ್ಮಣ್ಯ ನಾಯಕ್ ಅವರ ಪುತ್ರ, ಗೇರುಕಟ್ಟೆ ಸರ್ಕಾರಿ ಪ್ರೌಢ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಸುಮಂತ್ (15) ಎಂದು ಗುರುತಿಸಲಾಗಿದೆ.  ಸುಮಂತ್ ಸೇರಿದಂತೆ ಮೂವರು ಬಾಲಕರು ಪ್ರತಿದಿನ ಮುಂಜಾನೆ 4 ಗಂಟೆ ಸುಮಾರಿಗೆ ಬೆಳ್ತಂಗಡಿ ಕಳಿಯ ಗ್ರಾಮದ ನಾಳ ದೇವಸ್ಥಾನದಲ್ಲಿ ನಡೆಯುವ…

Read More

ಬೆಳ್ತಂಗಡಿ: ಧನು ಪೂಜೆಗೆಂದು ತೆರಳಿದ ಬಾಲಕ ನಾಪತ್ತೆ..!!

ಬೆಳ್ತಂಗಡಿ: ಬೆಳಗ್ಗೆ ಧನು ಪೂಜೆಗೆಂದು ಹೋದ 9 ನೇ ತರಗತಿಯ ವಿದ್ಯಾರ್ಥಿಯೊಬ್ಬ ನಾಪತ್ತೆಯಾದ ಘಟನೆ ಒಡಿಲ್ನಾಳ ಗ್ರಾಮದ ಸಂಭೋಳ್ಯದಲ್ಲಿ ನಡೆದಿದೆ. ಸುಮಂತ್ (16) ಎಂಬವನೇ ನಾಪತ್ತೆಯಾದ ವಿದ್ಯಾರ್ಥಿ. ಪ್ರತಿದಿನವೂ ಗೆಳೆಯರ ಜೊತೆಗೆ ಹೋಗುತ್ತಿದ್ದ ಬಾಲಕ ಇಂದು ಬಂದಿಲ್ಲ ಎನ್ನುವ ಮಾಹಿತಿ ಸ್ನೇಹಿತರಿಂದ ದೊರೆತಿದ್ದು, ಈ ವೇಳೆ ನಾಪತ್ತೆಯಾಗಿರುವ ವಿಚಾರ ತಿಳಿದಿದೆ. ತೋಟದ ಬದಿಯ ಪ್ರದೇಶದಲ್ಲಿ ರಕ್ತದ ಕಲೆಗಳು ಕಂಡು ಬಂದಿದ್ದು, ಚಿರತೆಗಳು ಓಡಾಡುತ್ತಿವೆ ಎಂದು ಹೇಳಲಾಗುತ್ತಿದೆ. ಆದ್ದರಿಂದ ಬಾಲಕ ನಾಪತ್ತೆಗೆ ಸಂಬಂಧಿಸಿದ ಹಾಗೆ ಅನುಮಾನ ವ್ಯಕ್ತವಾಗಿದೆ. ಬೆಳ್ತಂಗಡಿ…

Read More

ಬಂಟ್ವಾಳ: ನಿಲ್ಲಿಸಿದ್ದ ಟ್ಯಾಂಕರ್‌ಗೆ ಗೂಡ್ಸ್ ವಾಹನ ಡಿಕ್ಕಿ..!!

ಕಲ್ಲಡ್ಕ: ಗೂಡ್ಸ್ ವಾಹನವೊಂದು ನಿಲ್ಲಿಸಿದ್ದ ಟ್ಯಾಂಕರ್‌ಗೆ ಗುದ್ದಿದ ಘಟನೆ ಕಲ್ಲಡ್ಕದಲ್ಲಿ ನಡೆದಿದೆ. ಹೊಟೇಲ್ ಸಮುದ್ರ ಬಳಿ ಈ ಘಟನೆ ನಡೆದಿದೆ. ಪರಿಣಾಮ ಗೂಡ್ಸ್ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಯಾವುದೇ ದೊಡ್ಡ ಮಟ್ಟದ ಅಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

Read More

ಮಂಗಳೂರು: ಶಬರಿಮಲೆ ಯಾತ್ರೆಗೆ ತೆರಳಿದ್ದ ಮಾಲಾಧಾರಿ ಎರಿಮಲೆಯಲ್ಲಿ ಹೃದಯಾಘಾತದಿಂದ ನಿಧನ

ಮಂಗಳೂರು : ಶಬರಿಮಲೆ ಯಾತ್ರೆ ಕೈಗೊಂಡಿದ್ದ ಉಳ್ಳಾಲ ತಾಲೂಕಿನ ಅಯ್ಯಪ್ಪ ಮಾಲಾ ವೃತಧಾರಿಯೊಬ್ಬರು ಕೇರಳದ ಎರಿಮಲೆಯಲ್ಲಿ ಹೃದಯಾಘಾತಕ್ಕೆ ಬಲಿಯಾದ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ. ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು ದೇಲಂತಬೆಟ್ಟು ನಿವಾಸಿ ಉದ್ಯಮಿ ಚಂದ್ರಹಾಸ್ ಶೆಟ್ಟಿ (55) ಮೃತಪಟ್ಟವರು. ಚಂದ್ರಹಾಸ್ ಅವರು ಇತರ ಅಯ್ಯಪ್ಪ ಮಾಲಾ ವೃತಧಾರಿಗಳ ಜೊತೆ ಶನಿವಾರದಂದು ನಗರದ ಅರ್ಕುಳ, ತುಪ್ಪೇಕಲ್ಲಿನಿಂದ ಶಬರಿಮಲೆ ಯಾತ್ರೆ ಕೈಗೊಂಡಿದ್ದರು. ಸೋಮವಾರ ಬೆಳಿಗ್ಗೆ ಚಂದ್ರಹಾಸ್ ಅವರು ಎರಿಮಲೆಯಿಂದ ಕಾಡಿನ ದಾರಿಯಾಗಿ ಪಂಪೆಗೆ ಪ್ರಯಾಣ ಬೆಳೆಸಿದ್ದ ವೇಳೆ ಕುಸಿದು ಬಿದ್ದು…

Read More

ಒಇಸಿ ಕುಲಾಲ ಪ್ರಮಾಣಪತ್ರ ವ್ಯವಸ್ಥೆ ಮರುಸ್ಥಾಪನೆಗೆ ಸಂಘಟಿತ ಹೋರಾಟ

ಮಂಜೇಶ್ವರ‌ : ಕಾಸರಗೋಡು ಭಾಗದ ಕುಲಾಲ ಸಮುದಾಯದ ಜನರು ಒಇಸಿ ಕುಲಾಲ (Other eligible comunity) ಪ್ರಮಾಣಪತ್ರ ಪಡೆಯಲು ಸಂಘಟಿತ ಹೋರಾಟ ನಡೆಸುವಂತೆ ಕೇರಳ ಮಣ್ ಪಾತ್ರ ನಿರ್ಮಾಣ ಸಮಯದಾಯ ಸಭಾ (ಕೆ.ಎಂ.ಎಸ್.ಎಸ್.) ಕೇರಳ ರಾಜ್ಯ ಸಮಿತಿ ಪ್ರಧಾನ ಕಾರ್ಯದರ್ಶಿ ರಾಜೇಶ್ ಪಾಲಂಗಾಟ್ ಹೇಳಿದರು. ಕುಲಾಲ ವೇದಿಕೆ ಮಂಜೇಶ್ವರ‌ ಆಶ್ರಯದಲ್ಲಿ‌ ಮಜಿಬೈಲು ಸಹಕಾರಿ ಬ್ಯಾಂಕ್ ಸಭಾಂಗಣದಲ್ಲಿ ರವಿವಾರ ಜರುಗಿದ ಕೆಎಂಎಸ್ಎಸ್ ಮಂಜೇಶ್ವರ‌ ವಲಯ ಸಮಿತಿ ರೂಪೀಕರಣ ಸಭೆ ಹಾಗೂ ತ್ರಿಸ್ತರ ಪಂಚಾಯತ್ ಚುನಾವಣೆ ವಿಜೇತ ಸಮುದಾಯದ ಜನಪ್ರತಿನಿಧಿಗಳ…

Read More

ಮಂಗಳೂರು: ಯುವಕರಿಗೆ ಡ್ರಗ್ಸ್ ಸಾಗಾಟ ಮಾಡುತ್ತಿದ್ದ ಉಗಾಂಢ ಮೂಲದ ಮಹಿಳೆಯ ಬಂಧನ!

ಮಂಗಳೂರು: ಯುವಕರಿಗೆ ಡ್ರಗ್ಸ್ ಸಾಗಾಟ ಮಾಡುತ್ತಿದ್ದ 6ಜನ ವ್ಯಾಪಾರಿಗಳಿಗೆ ವ್ಯವಸ್ಥಿತವಾಗಿ ಬೆಂಗಳೂರು ಸರಹದ್ದಿನಿಂದ ಡ್ರಗ್ಸ್ ನೀಡುತ್ತಿದ್ದ ಉಗಾಂಢ ಮೂಲದ ಮಹಿಳೆಯನ್ನು4ಕೆಜಿ ಎಂಡಿಎಂನೊಂದಿಗೆ ಜಿಗ್ನಿ ಸರಹದ್ದಿನಲ್ಲಿ ಸಿಸಿಬಿ ಪೋಲಿಸರು ಬಂಧಿಸಿದ್ದಾರೆ. ಇದರೊಂದಿಗೆ ಮಂಗಳೂರು ಸರಹದ್ದಿನಲ್ಲಿ ಡ್ರಗ್ಸ್ ಸಾಗಾಟ ಮಾಡುತ್ತಿದ್ದ ಸಪ್ಲೆಯರ್‍,ಗೆ ಇದ್ದ ಒಂದು ಮೂಲವನ್ನು ಬಂಧಿಸಿದ ಹಾಗೆ ಆಗಿದೆ. ಈಗಾಗಲೇ ಡ್ರಗ್ಸ್ ಸಾಗಾಟ ಮಾಡುತ್ತಿದ್ದ 6ಜನ ವ್ಯಾಪಾರಿಗಳನ್ನು ಬಂಧಿಸಿ ಅವರು JC(ನ್ಯಾಯಾಂಗ ಬಂಧನ) ಯಲ್ಲಿದ್ದಾರೆ. NCB ಲೆಕ್ಕಾಚಾರದ ಪ್ರಕಾರ ಸುಮಾರು 4ಕೋಟಿ ಬೆಲೆಬಾಳುವಷ್ಟು 4ಕೆಜಿ ಎಂಡಿಎಂನೊಂದಿಗೆ ಇವರನ್ನು ಬಂಧಿಸಿ…

Read More

ಮಂಗಳೂರು ಮೂಲದ ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್..!!

ಬೆಂಗಳೂರು: ಅಪಾರ್ಟ್ಮೆಂಟ್ ನಲ್ಲಿ ಬೆಂಕಿ ಅವಘಡ ಸಂಭವಿಸಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದ್ದ ಮಹಿಳಾ ಸಾಫ್ಟ್‌ವೇರ್ ಎಂಜಿನಿಯರ್ ಕೇಸ್ ಗೆ ಸ್ಪೋಟಕ ಟ್ವಿಸ್ಟ್ ಸಿಕ್ಕಿದೆ. ಕೊಲೆಯಾದ ಟೆಕ್ಕಿ ಶರ್ಮಿಳಾ ಮೊಬೈಲ್ ಫೋನ್ ಕಾಣೆಯಾಗಿದ್ದು, ತೆರೆದ ಕಿಟಕಿ, ಬೆಂಕಿ ಅವಘಡಕ್ಕೆ ಕಾರಣವೇನೆಂದು ತಿಳಿದು ಬಂದಿರಲಿಲ್ಲ. ಆಕೆಯ ಮೊಬೈಲ್ ನಾಪತ್ತೆಯಾಗಿದ್ದು ಪೊಲೀಸರು ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಭೇದಿಸಲು ಕಾರಣವಾಯಿತು. ಪಕ್ಕದ ಮನೆಯಲ್ಲಿ ವಾಸಿಸುತ್ತಿದ್ದ 18 ವರ್ಷದ ದ್ವಿತೀಯ ಪಿಯು ವಿದ್ಯಾರ್ಥಿಯನ್ನು ಮಹಿಳೆಯ ಮೇಲೆ ಅತ್ಯಾಚಾರ ಹಾಗೂ ಕತ್ತು ಹಿಸುಕಿ…

Read More