ಉತ್ತರಾಖಂಡದಲ್ಲಿ ಚಾರಣಕ್ಕೆ ತೆರಳಿದ್ದ ಕರ್ನಾಟಕದ ನಾಲ್ವರು ದುರ್ಮರಣ

ಡೆಹ್ರಾಡೂನ್‌:ಉತ್ತರಾಖಂಡದಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ ನಾಲ್ವರು ಸೇರಿ 9 ಮಂದಿ ಚಾರಣಿಗರು ಸಾವನ್ನಪ್ಪಿದ್ದಾರೆ. ಮೃತಪಟ್ಟವರು ಬೆಂಗಳೂರಿನ ಸುಜಾತ (52), ಪದ್ಮಿನಿ ಹೆಗಡೆ (35), ಚಿತ್ರಾ (48), ಸಿಂಧು (45), ವೆಂಕಟೇಶ್‌ ಪ್ರಸಾದ್‌ (52), ಅನಿತಾ (61), ಆಶಾ ಸುಧಾಕರ (72), ಪದ್ಮನಾಭನ್ ಕೆಪಿಎಸ್‌ (50) ವಿನಾಯಕ್ ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ 18, ಪುಣೆಯಿಂದ ಒಬ್ಬರು ಜೊತೆ ಟ್ರೆಕ್ಕಿಂಗ್‌ ಗೈಡ್‌ಗಳಾಗಿ ಉತ್ತರ ಕಾಶಿಯ ಮೂವರು ನಿವಾಸಿಗಳು ತೆರಳಿದ್ದರು. ಉತ್ತರಾಖಂಡದ ಸಹಸ್ತ್ರ ತಾಲ್‌ನಲ್ಲಿ ಸಿಲುಕಿದ್ದ ಚಾರಣಿಗರ ಪೈಕಿ ಸೌಮ್ಯಾ, ವಿನಯ,…

Read More

ಜೂ.8 ರಂದು 3 ನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ

ನವದೆಹಲಿ : ಜೂನ್ 8 ರಂದು ರಾತ್ರಿ 8 ಗಂಟೆಗೆ 3 ನೇ ಬಾರಿಗೆ ದೇಶದ ಪ್ರಧಾನಿಯಾಗಿ ‘ನರೇಂದ್ರ ಮೋದಿ’ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿದೆ. 3 ನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಮತ್ತೆ ಅಧಿಕಾರದ ಗದ್ದುಗೆ ಏರಲಿದ್ದಾರೆ. ಜೂ.8 ರಂದು ಸಂಜೆ ದೆಹಲಿಯಲ್ಲಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಮೂಲಗಳು ಮಾಹಿತಿ ನೀಡಿವೆ. ಇದರ ನಡುವೆ ಇಂದು ಸಂಜೆ 4:30 ಕ್ಕೆ ಎನ್‌ಡಿಎ ಮೈತ್ರಿಕೂಟದ…

Read More

NDA ಜೊತೆಗೆ ಇರುತ್ತೇನೆ- ಚಂದ್ರಬಾಬು ನಾಯ್ಡು ಸ್ಪಷ್ಟನೆ

ಅಮರಾವತಿ: ಆಂಧ್ರಪ್ರದೇಶದಲ್ಲಿ ಎನ್‌ಡಿಎ ಮೈತ್ರಿಕೂಟಕ್ಕೆ ರಾಜ್ಯದ ಜನತೆ ನೀಡಿದ ಅಭೂತಪೂರ್ವ ಬೆಂಬಲಕ್ಕಾಗಿ ಜನತೆಗೆ ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಧನ್ಯವಾದ ಹೇಳಿದ್ದಾರೆ. ಲೋಕಸಭೆ ಮತ್ತು ವಿಧಾನ ಸಭೆ ಚುನಾವಣೆ ಫಲಿತಾಂಶ ಹೊರಬಿದ್ದ ನಂತರ ಸೋಷಿಯಲ್ ಮೀಡಿಯಾ ಪೋಸ್ಟ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ ಚಂದ್ರಬಾಬು ನಾಯ್ಡು ಅವರು ಆಂಧ್ರಪ್ರದೇಶದ ಭವಿಷ್ಯಕ್ಕಾಗಿ ತಮ್ಮ ಬದ್ಧತೆಗಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಹಿರಿಯ ನಾಯಕರಾದ ಅಮಿತ್ ಶಾ ಮತ್ತು ಜೆಪಿ ನಡ್ಡಾ ಅವರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ. ಇಂದು…

Read More

ವಾರಾಣಸಿ ಕ್ಷೇತ್ರದಿಂದ ಪ್ರಧಾನಿ ಮೋದಿ ಭರ್ಜರಿ ಗೆಲುವು

ವಾರಾಣಸಿ : ಪ್ರಧಾನಿ ಮೋದಿ ವಾರಾಣಸಿ ಕ್ಷೇತ್ರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. ಸತತ ಮೂರನೇ ಬಾರಿಗೆ ಮೋದಿ ವಾರಾಣಸಿ ಕ್ಷೇತ್ರದಿಂದ ದಿಗ್ವಿಜಯ ಸಾಧಿಸಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ಅಜಯ್ ರೈ ವಿರುದ್ಧ ಪ್ರಧಾನಿ ಮೋದಿ ಭರ್ಜರಿ ಗೆಲುವು ಕಂಡಿದ್ದಾರೆ. 1,52, 513 ಮತಗಳ ಅಂತರದಿಂದ ಪ್ರಧಾನಿ ಮೋದಿ ಗೆದ್ದಿದ್ದಾರೆ. ಮೋದಿ 6,12,970 ಮತಗಳನ್ನು ಪಡೆದರೆ, ಕಾಂಗ್ರೆಸ್ ಅಭ್ಯರ್ಥಿ ಅಜಯ್ ರೈ 4,60,457 ಮತಗಳನ್ನು ಪಡೆದಿದ್ದಾರೆ.

Read More

5 ಲಕ್ಷ ಮತಗಳಿಂದ ಅಮಿತ್ ಶಾ ಭರ್ಜರಿ ಗೆಲುವು

ಲೋಕಸಭೆ ಚುನಾವಣೆಯ ಮತಎಣಿಕೆ ಕಾರ್ಯವು ಭರದಿಂದ ಸಾಗುತ್ತಿದ್ದು, ಒಟ್ಟು 543 ಕ್ಷೇತ್ರಗಳ ಪೈಕಿ ಎನ್‌ಡಿಎ ಮೈತ್ರಿಕೂಟವು 294 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಅತ್ತ, ಇಂಡಿಯಾ ಒಕ್ಕೂಟವೂ ತೀವ್ರ ಪೈಪೋಟಿ ನೀಡುತ್ತಿದ್ದು, 230 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಇದರ ಮಧ್ಯೆಯೇ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಬಿಜೆಪಿಗೆ ಮೊದಲ ಗೆಲುವು ತಂದುಕೊಟ್ಟಿದ್ದಾರೆ. ಅಮಿತ್‌ ಶಾ ಗುಜರಾತ್‌ನ ಗಾಂಧಿನಗರ ಲೋಕಸಭೆ ಕ್ಷೇತ್ರದಲ್ಲಿ 5 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

Read More

ವಾರಣಾಸಿಯಲ್ಲಿ ಮೋದಿಗೆ ಒಂದು ಲಕ್ಷ ಮತಗಳ ಮುನ್ನಡೆ

ಲಕ್ನೋ: ವಾರಣಾಸಿ ಲೋಕಸಭಾ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಅವರು ಕಾಂಗ್ರೆಸ್‌ ಅಭ್ಯರ್ಥಿ ಅಜಯ್ ರೈ ಅವರನ್ನು ಹಿಂದಿಕ್ಕಿ ಸುಮಾರು ಒಂದು ಲಕ್ಷ ಮತಗಳ ಮುನ್ನಡೆ ಸಾಧಿಸಿದ್ದಾರೆ.

Read More

BREAKING : ಲೋಕಸಭೆ ಚುನಾವಣೆ ಫಲಿತಾಂಶ : ದೇಶಾದ್ಯಂತ ʻNDAʼ 271, ʻಇಂಡಿಯಾʼ 183 ಕ್ಷೇತ್ರಗಳಲ್ಲಿ ಮುನ್ನಡೆ

ಬೆಂಗಳೂರು : ದೇಶಾದ್ಯಂತ ಸುಧೀರ್ಘ ಏಳು ಹಂತಗಳಲ್ಲಿ ನಡೆದ ಲೋಕಸಭೆ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದೆ. ಇಂದು ಬೆಳಗ್ಗೆ 8 ಗಂಟೆಯಿಂದ 543 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಆರಂಭವಾಗಿದ್ದು, 8,360 ಅಭ್ಯರ್ಥಿಗಳ ಹಣೆ ಬರಹ ನಿರ್ಧಾರವಾಗಲಿದೆ. ದೇಶಾದ್ಯಂತ ಎನ್‌ ಡಿಎ ಮೈತ್ರಿಕೂಟದ ಅಭ್ಯರ್ಥಿಗಳು 271 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ರೆ, ಇಂಡಿಯಾ ಮೈತ್ರಿ ಮೈತ್ರಿಕೂಟದ ಅಭ್ಯರ್ಥಿಗಳು 183 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. 52 ಪಕ್ಷೇತರ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ. ಕರ್ನಾಟಕದ 15 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ…

Read More

ಎಕ್ಸಿಟ್ ಪೋಲ್ ನಲ್ಲಿ ಮತ್ತೆ ಮೋದಿ: ವರದಿಗಳ ಬೆನ್ನಲ್ಲೇ ಷೇರು ಮಾರುಕಟ್ಟೆ ಏರಿಕೆ ನಿರೀಕ್ಷೆ!

ಮುಂಬಯಿ: ಕಳೆದ ವಾರ ಸಾಕಷ್ಟು ಏರುಪೇರಿನಿಂದ ಕೂಡಿದ್ದ ಷೇರು ಮಾರುಕಟ್ಟೆ, ರೂಪಾಯಿ ಮೌಲ್ಯ ಮತ್ತು ಬಾಂಡ್‌ ಮೌಲ್ಯಗಳು ಸೋಮವಾರ ಏರಿಕೆ ಕಾಣಬಹುದು ಎಂಬ ನಿರೀಕ್ಷೆ ಹುಟ್ಟಿದೆ. ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಮತ್ತೂಮ್ಮೆ ಅಧಿಕಾರಕ್ಕೇರಲಿದೆ ಎಂದು ಬಹುತೇಕ ಸಮೀಕ್ಷೆಗಳು ಭವಿಷ್ಯ ನುಡಿದಿರುವ ಹಿನ್ನೆಲೆಯಲ್ಲಿ ಹೂಡಿಕೆದಾರರ ಉತ್ಸಾಹ ಹೆಚ್ಚಾಗಿದ್ದು, ಷೇರುಪೇಟೆ ಏರಿಕೆ ಹಾದಿಗೆ ಮರಳಬಹುದು ಎನ್ನಲಾಗಿದೆ. ಫ‌ಲಿತಾಂಶ ಬಾಕಿ ಇದ್ದ ಕಾರಣ ವಿದೇಶಿ ಹೂಡಿಕೆ ದಾರರು ಎಚ್ಚರಿಕೆಯಿಂದ ಹೂಡಿಕೆ ಮಾಡಿದ್ದರು. ಹೀಗಾಗಿ ಷೇರುಪೇಟೆ ಕುಸಿತ ಕಂಡಿತ್ತು. ಈಗ ಮತಗಟ್ಟೆ ಸಮೀಕ್ಷೆಗಳ…

Read More

ಜೈಲಿನಲ್ಲಿ ಮುಂಬೈ ಸರಣಿ ಸ್ಫೋಟದ ಆರೋಪಿ ಮೊಹಮ್ಮದ್ ಖಾನ್ ಬರ್ಬರ ಹತ್ಯೆ

ಕೊಲ್ಲಾಪುರ: 1993ರ ಮುಂಬೈ ಬಾಂಬ್ ಸ್ಫೋಟದ ಆರೋಪಿ ಮೊಹಮ್ಮದ್ ಅಲಿ ಖಾನ್‌ರನ್ನು ಕೊಲ್ಲಾಪುರ ಜೈಲಿನಲ್ಲಿ ಶಿರಚ್ಛೇದ ಮಾಡುವ ಮೂಲಕ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಐವರು ಆರೋಪಿಗಳು ಭಾನುವಾರ ಆರೋಪಿ ಮೊಹಮ್ಮದ್ ಅಲಿಯನ್ನು ಕೊಲೆ ಮಾಡಿದ್ದಾರೆ. ಈ ಐವರು ಆರೋಪಿಗಳು ಮೊಹಮ್ಮದ್ ಅಲಿಯ ಶಿರಚ್ಛೇದ ಮಾಡಿದ ಪರಿಣಾಮ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. 1993ರ ಮುಂಬೈ ಸ್ಫೋಟದ ನಾಲ್ವರು ಅಪರಾಧಿಗಳನ್ನು ಕೊಲ್ಲಾಪುರ ಜೈಲಿನಲ್ಲಿ ಬಂಧಿಸಲಾಗಿತ್ತು. ಒಬ್ಬ ಅಪರಾಧಿಯ ಹೆಸರು ಮೊಹಮ್ಮದ್ ಅಲಿ ಖಾನ್. ಇನ್ನೊಂದು ಪ್ರಕರಣದಲ್ಲಿ…

Read More

ಪ್ರಧಾನಿ ಮೋದಿ ವ್ಯಕ್ತಿತ್ವ ಹಿಮಾಲಯದಂತಿದೆ, ಅವರ ಮುಂದೆ ಯಾರೂ ನಿಲ್ಲಲು ಸಾಧ್ಯವಿಲ್ಲ: ಬಾಬಾ ರಾಮದೇವ್

ನವದೆಹಲಿ: ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಲಿದ್ದಾರೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಹೇಳಿದ ನಂತರ ಯೋಗ ಗುರು ಬಾಬಾ ರಾಮ್ದೇವ್ ಭಾನುವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ಶ್ಲಾಘಿಸಿದ್ದಾರೆ ಮತ್ತು ಅವರ ನಾಯಕತ್ವ ಮತ್ತು ವ್ಯಕ್ತಿತ್ವವನ್ನು ಶ್ಲಾಘಿಸಿದ್ದಾರೆ. ರಾಮದೇವ್ ಅವರು ಮೋದಿ ವ್ಯಕ್ತಿತ್ವವನ್ನು ಹಿಮಾಲಯಕ್ಕೆ ಹೋಲಿಸಿದ್ದಾರೆ ಮತ್ತು ಅವರ ಮುಂದೆ ಯಾರೂ ನಿಲ್ಲಲು ಸಾಧ್ಯವಿಲ್ಲ ಎಂದು ಹೇಳಿದರು.ಬಿಜೆಪಿ ನೇತೃತ್ವದ ಎನ್ಡಿಎ ಮೂರನೇ ಅವಧಿಗೆ ಆಯ್ಕೆಯಾಗಲಿದೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಘೋಷಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಬಾಬಾ ರಾಮ್ದೇವ್,…

Read More