ವಿಧಾನಸಭಾಧ್ಯಕ್ಷ ಯು.ಟಿ ಖಾದರ್ ಗೆ ಗೌರವ ಡಾಕ್ಟರೇಟ್ ಪದವಿ
ಬೆಂಗಳೂರು ವಿಶ್ವವಿದ್ಯಾನಿಲಯದ 60ನೇ ವಾರ್ಷಿಕ ಘಟಿಕೋತ್ಸವದಲ್ಲಿ ಕರ್ನಾಟಕ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಸಹಿತ ಮೂವರು ಗೌರವ ಡಾಕ್ಟರೇಟ್ ಪದವಿ ಪಡೆಯಲಿದ್ದಾರೆ. ವಿಧಾನ ಪರಿಷತ್ ಮಾಜಿ ಸದಸ್ಯ ಹಾಗೂ ಸಮಾಜಸೇವಕ ಡಿ. ಮಾದೇಗೌಡ ಹಾಗೂ ಜೆ.ಪಿ. ಅಗ್ರಿ ಜೆನೆಟಿಕ್ಸ್ ಪ್ರೈವೇಟ್ ಲಿಮಿಟೆಡ್ ನ ಸಂಸ್ಥಾಪಕ ಹಾಗೂ ವ್ಯವಸ್ಥಾಪಕ ನಿರ್ದೇಶಕರಾಗಿರುವ ಡಾ.ಟಿ.ಬಿ.ಪ್ರಸನ್ನ ಗೌರವ ಡಾಕ್ಟರೇಟ್ ಪದವಿ ಪಡೆಯುವ ಇನ್ನಿಬ್ಬರು ಸಾಧಕರಾಗಿದ್ದಾರೆ. ಅ.8ರಂದು ಪೂರ್ವಾಹ್ನ 11:30ಕ್ಕೆ ಬೆಂಗಳೂರಿನ ಅರಮನೆ ರಸ್ತೆಯಲ್ಲಿರುವ ಸೆಂಟ್ರಲ್ ಕಾಲೇಜು ಆವರಣದಲ್ಲಿ ಜರುಗುವ ಘಟಿಕೋತ್ಸವದಲ್ಲಿ ಈ ಮೂವರಿಗೆ ಗೌರವ ಡಾಕ್ಟರೇಟ್…

