7 ಕೋಟಿ ರೂ. ನಗದು ದರೋಡೆ ಪ್ರಕರಣ: 5 ಕೋ.ರೂ ವಶ, ಕಾನ್ಸ್ಟೇಬಲ್ ಸೇರಿ ನಾಲ್ವರ ಬಂಧನ

ಬೆಂಗಳೂರು: ರಾಜಧಾನಿಯಲ್ಲಿ ಇತ್ತೀಚೆಗೆ ನಡೆದ 7.11 ಕೋಟಿ ರೂಪಾಯಿ ಹಗಲು ದರೋಡೆ ಪ್ರಕರಣದ ತನಿಖೆ ನಡೆಸುತ್ತಿರುವ ದಕ್ಷಿಣ ವಿಭಾಗದ ಪೊಲೀಸರು, ದರೋಡೆ ಮಾಡಲಾದ 7.11 ಕೋಟಿ ರೂಪಾಯಿಗಳಲ್ಲಿ 5 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ವಶಪಡಿಸಿಕೊಳ್ಳುವ ಮೂಲಕ ಮಹತ್ವದ ಪ್ರಗತಿ ಸಾಧಿಸಿದ್ದಾರೆ. ಚೆನ್ನೈ ಮತ್ತು ಆಂಧ್ರಪ್ರದೇಶದಿಂದ ಪೊಲೀಸರು ಹಣವನ್ನು ವಶಪಡಿಸಿಕೊಂಡಿದ್ದಾರೆ. ಪೊಲೀಸ್ ಕಾನ್ಸ್ಟೇಬಲ್ ಮಾಸ್ಟರ್ ಮೈಂಡ್ ಬೆಂಗಳೂರು ನಗರ ಪೂರ್ವ ವಿಭಾಗಕ್ಕೆ ಸೇರಿದ ಪೊಲೀಸ್ ಕಾನ್ಸ್ಟೇಬಲ್ ನನ್ನು ಪ್ರಕರಣದ ಮಾಸ್ಟರ್ ಮೈಂಡ್ ಎಂದು ಹೇಳಲಾಗುತ್ತಿದೆ. ಕೇರಳದ ನಗದು…

Read More

ಧರ್ಮದ ಹೆಸರಲ್ಲಿ ಸರ್ಕಾರಿ ಜಾಗ ಒತ್ತುವರಿ, ರಿಯಲ್ ಎಸ್ಟೇಟ್ ನಡೆಸಲು ಅವಕಾಶ ಇಲ್ಲ : ಹೈಕೋರ್ಟ್ ತೀರ್ಪು

ಬೆಂಗಳೂರು : ಧರ್ಮದ ಹೆಸರಲ್ಲಿ ಸರ್ಕಾರಿ ಜಾಗ ಒತ್ತುವರಿ ಹಾಗೂ ದೇವರ ಹೆಸರಲ್ಲಿ ರಿಯಲ್ ಎಸ್ಟೇಟ್ ನಡೆಸಲು ಅವಕಾಶ ನೀಡಲಾಗದು ಎಂದು ಹೈಕೋರ್ಟ್ ಖಡಕ್ ತೀರ್ಪು ನೀಡಿದೆ. ಅರ್ಜಿಯೊಂದರ ವಿಚಾರಣೆ ನಡೆಸಿದ ಹೈಕೋರ್ಟ್ ಜಾಗ ಸರ್ಕಾರಕ್ಕೆ ಸೇರಿದ್ದು. ಸರ್ಕಾರಿ ಜಾಗದಲ್ಲಿ ನೀವು ಹಕ್ಕು ಸಾಧಿಸಲು ಬರುವುದಿಲ್ಲ. ಸರ್ಕಾರಿ ಜಾಗ ಇದ್ದಾಗ ನಿಮಗೆ ಯಾವುದೇ ರಕ್ಷಣೆ ಅಥವಾ ಪರಿಹಾರ ನೀಡಲಾಗದು ಎಂದು ಹೈಕೋರ್ಟ್ ಹೇಳಿತು. ಕೋಲಾರ ತಾಲೂಕು ವೇಮಗಲ್ ಹೋಬಳಿಯ ಕ್ಯಾಲನೂರು ಗ್ರಾಮದ ಸರ್ಕಾರಿ ಶಾಲೆ ಕಾಂಪೌಂಡ್ ಗೋಡೆ…

Read More

7.11 ಕೋಟಿ ನಗದು ದರೋಡೆ ಕೇಸ್ : ಮಾಸ್ಟರ್ ಮೈಂಡ್ ‘ಪೊಲೀಸ್ ಕಾನ್ಸ್ಟೇಬಲ್’ ಅರೆಸ್ಟ್.!

ಬೆಂಗಳೂರಲ್ಲಿ ರಾಜ್ಯದ ಇತಿಹಾಸದಲ್ಲೇ ಅತೀ ದೊಡ್ಡ ದರೋಡೆ ನಡೆದಿದ್ದು, 7.11 ಕೋಟಿ ನಗದು ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಸ್ಟರ್ ಮೈಂಡ್ ಪೊಲೀಸ್ ಕಾನ್ಸ್ಟೇಬಲ್ ಒಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಹೌದು. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಶಂಕಿತರನ್ನು ವಶಕ್ಕೆ ಪಡೆದ ಪೊಲೀಸರು ತೀವ್ರ ವಿಚಾರಣೆ ನಡೆಸಿದ್ದಾರೆ. ಇದರ ನಡುವೆ ದರೋಡೆಯ ಮಾಸ್ಟರ್ ಮೈಂಡ್ ಓರ್ವ ಪೊಲೀಸ್ ಕಾನ್ಸ್ಟೇಬಲ್ ಎಂಬ ಶಂಕೆ ವ್ಯಕ್ತವಾಗಿದೆ. ದರೋಡೆ ಕೇಸ್ ಸಂಬಂಧ ಗೋವಿಂದಪುರ ಠಾಣೆಯ ಕಾನ್ಸ್ಟೇಬಲ್ ಅಣ್ಣಪ್ಪ ನಾಯಕ್ ಎಂಬುವವರನ್ನು ದಕ್ಷಿಣ ವಿಭಾಗದ…

Read More

ಸಣ್ಣ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ಕಟ್ಟುನಿಟ್ಟಿನ ಜಾರಿಗೆ ಹೈಕೋರ್ಟ್‌ ನಿರ್ದೇಶನ

ಬೆಂಗಳೂರು: ದ್ವಿಚಕ್ರ ವಾಹನಗಳಲ್ಲಿ ಸಂಚಾರ ಮಾಡುವ ಮಕ್ಕಳಿಗೆ ಹೆಲ್ಮೆಟ್‌ ಮತ್ತು ಸುರಕ್ಷತಾ ಕ್ರಮಗಳುಳ್ಳ ಕೇಂದ್ರ ಮೋಟಾರು ವಾಹನ ನಿಯಮಗಳು 2022ರ ನಿಯಮ 138ರ ಅನುಷ್ಟಾನಕ್ಕೆ ಸಂಬಂಧಿಸಿದಂತೆ ತಕ್ಷಣ ಕ್ರಮಕ್ಕೆ ಮುಂದಾಗಬೇಕು ಎಂದು ಸರ್ಕಾರಕ್ಕೆ ಹೈಕೋರ್ಟ್​ ನಿರ್ದೇಶನ ನೀಡಿದೆ. ಶಿವಮೊಗ್ಗದ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಮನೋವಿಜ್ಞಾನ ವಿಭಾಗದ ಸಹಾಯಕ ಪ್ರೊಫೆಸರ್ ಮತ್ತು ಮುಖ್ಯಸ್ಥರಾದ ಅರ್ಚನಾ ಭಟ್ ಕೆ. ಎಂಬವರು 2023ರಲ್ಲಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ.ಪೂಣಚ್ಚ…

Read More

ಯಕ್ಷಗಾನ ಕಲಾವಿದರಲ್ಲಿ ಹಲವರು ಸಲಿಂಗಿಗಳು: ಪ್ರೊ. ಪುರುಷೋತ್ತಮ ಬಿಳಿಮಲೆ ಹೇಳಿಕೆ ಭಾರಿ ಚರ್ಚೆ!

ಬೆಂಗಳೂರು: ಕರಾವಳಿ ಕರ್ನಾಟಕದಲ್ಲಿ ಗಂಡು ಕಲೆ ಯಕ್ಷಗಾನಕ್ಕೆ ವಿಶೇಷವಾದ ಸ್ಥಾನವಿದೆ. ಅಲ್ಲದೇ ಯಕ್ಷಗಾನ ಕಲಾವಿದರನ್ನು ಅತ್ಯಂತ ಗೌರವದಿಂದಲೂ ಕಾಣಲಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಕರ್ನಾಟಕದ ಕರಾವಳಿ ಭಾಗದಲ್ಲಿ ಕೆಲವು ಕಲಾವಿದರು ರಾಜಕೀಯ ಪಕ್ಷಗಳು, ನಾಯಕರ ಪರವಾಗಿ ಪ್ರಚಾರ ಮಾಡುವುದು ಇದೆ. ಆದರೆ ಇದೀಗ ಕರ್ನಾಟಕದ ಯಕ್ಷಗಾನ ಕಲಾವಿದರಿಗೆ ಸಂಬಂಧಿಸಿದಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಪುರುಷೋತ್ತಮ ಬಿಳಿಮಲೆ ಅವರು ನೀಡಿರುವ ಹೇಳಿಕೆಯು ಭಾರೀ ಚರ್ಚೆಗೆ ಕಾರಣವಾಗಿದೆ. ಯಕ್ಷಗಾನ ಕಲಾವಿದರಲ್ಲಿ ಅನೇಕರು ಸಲಿಂಗಿಗಳು. ಅಲ್ಲಿ ಅಂಥ ಅನಿವಾರ್ಯತೆ ನಿರ್ಮಾಣವಾಗಿತ್ತು ಎಂದು…

Read More

ಹಣ ಡಬಲ್ ಮಾಡಿ ಕೊಡುವುದಾಗಿ ಆಮಿಷವೊಡ್ಡಿ  ಕೋಟ್ಯಾಂತರ ರೂಪಾಯಿ ಪಂಗನಾಮ: ದಂಪತಿ ಪರಾರಿ

ಒಂದು ವಾರದಲ್ಲಿ ಹಣವನ್ನು ಡಬಲ್ ಮಾಡಿ ಕೊಡುವುದಾಗಿ ಆಮಿಷವೊಡ್ಡಿ, ಸಾರ್ವಜನಿಕರಿಗೆ ಕೋಟ್ಯಾಂತರ ರೂಪಾಯಿ ಪಂಗನಾಮ ಹಾಕಿ ದಾವಣಗೆರೆಯಲ್ಲಿ ಖತರ್ನಾಕ್ ದಂಪತಿ ಎಸ್ಕೇಪ್ ಆಗಿದ್ದಾರೆ. ನಿವಾಸಿಗಳಾದ ಬೊಗ್ಗು ಶ್ರೀರಾಮಲು- ಪುಷ್ಪಾ ವಂಚಿಸಿ ಎಸ್ಕೆಪ್ ಆಗಿರುವ ದಂಪತಿ ಎಂದು ಗುರುತಿಸಲಾಗಿದೆ. ಈ ದಂಪತಿ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ವಿವಿಧ ಗ್ರಾಮಗಳ ಮಹಿಳೆಯರಿಗೆ ವಂಚಿಸಿ ಪರಾರಿಯಾಗಿದ್ದಾರೆ. ಮನಿ ಡಬಲ್ ಆಸೆಗೆ ರೇಣುಕಮ್ಮ ಎಂಬವರು ಜಮೀನು ಮಾರಾಟ ಮಾಡಿ 33 ಲಕ್ಷ ರೂ. ನೀಡಿದ್ದರು. ಅಲ್ಲದೇ ಮೀನಾ 40 ಲಕ್ಷ ರೂ….

Read More

ತಪಾಸಣೆ ವೇಳೆ ಕಾರಿನಲ್ಲಿ ಮಹಿಳೆಯ ಮೃತದೇಹ ಪತ್ತೆ..!!

ಚೆಕ್‌ಪೋಸ್ಟ್ ವೊಂದರಲ್ಲಿ ಶುಕ್ರವಾರ ರಾತ್ರಿ ಅರಣ್ಯ ಸಿಬ್ಬಂದಿಗಳು ತಪಾಸಣೆ ನಡೆಸುತ್ತಿದ್ದ ಸಂದರ್ಭ ಕಾರೊಂದರಲ್ಲಿ ಮಹಿಳೆಯ ಮೃತದೇಹ ಪತ್ತೆಯಾದ ಪ್ರಕರಣ ಕೊಡಗು ಜಿಲ್ಲೆಯ ಮಾಲ್ದಾರೆ ಗ್ರಾ.ಪಂ ವ್ಯಾಪ್ತಿಯ ಲಿಂಗಾಪುರ ಚೆಕ್‌ಪೋಸ್ಟ್ ನಲ್ಲಿ ಬೆಳಕಿಗೆ ಬಂದಿದೆ. ಮೈಸೂರಿನಲ್ಲಿ ಪತಿಯೊಂದಿಗೆ ವಾಸವಾಗಿದ್ದ ಹರಿಯಾಣ ಮೂಲದ ನಾನ್ನಿದೇವಿ (47) ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಮೂವರನ್ನು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ. ಅರಣ್ಯ ಇಲಾಖೆಯ ಸಿಬ್ಬಂದಿಗಳು ಎಂದಿನಂತೆ ಶುಕ್ರವಾರ ರಾತ್ರಿ ಲಿಂಗಾಪುರ ಚೆಕ್‌ಪೋಸ್ಟ್ ನಲ್ಲಿ ತಪಾಸಣೆಯಲ್ಲಿ ತೊಡಗಿದ್ದರು….

Read More

ಪದ್ಮಶ್ರೀ ಪುರಸ್ಕೃತ, ಪರಿಸರವಾದಿ ಸಾಲುಮರದ ತಿಮ್ಮಕ್ಕ ನಿಧನ

ಸಾವಿರಾರು ಮರಗಳನ್ನು ನೆಟ್ಟು ‘ವೃಕ್ಷಮಾತೆ’ ಎಂದೇ ಹೆಸರುವಾಸಿಯಾಗಿರುವ ಪರಿಸರವಾದಿ, ಪದ್ಮಶ್ರೀ ಪುರಸ್ಕೃತ ಶತಾಯುಷಿ ಸಾಲುಮರದ ತಿಮ್ಮಕ್ಕ ನಿಧನರಾಗಿದ್ದಾರೆ. ಮರಗಳನ್ನೇ ತಮ್ಮ ಮಕ್ಕಳೆಂದು ತಮ್ಮ ಪತಿಯೊಂದಿಗೆ ರಾಮನಗರ ಜಿಲ್ಲೆಯ ಹುಲಿಕಲ್ ಮತ್ತು ಕುದೂರು ನಡುವೆ 4.5 ಕಿಲೋಮೀಟರ್ ಹೆದ್ದಾರಿಯ ಉದ್ದಕ್ಕೂ 385 ಆಲದ ಮರಗಳನ್ನು ನೆಟ್ಟು ಬೆಳೆಸಿದ ತಿಮ್ಮಕ್ಕ ಅವರು ಈವರೆಗೆ 8,000ಕ್ಕೂ ಹೆಚ್ಚು ಮರಗಳನ್ನು ನೆಟ್ಟು ಬೆಳೆಸಿದ್ದಾರೆ. ಇದನ್ನು ಓದಿದ್ದೀರಾ? ಸಾಲು ಮರದ ತಿಮ್ಮಕ್ಕ ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ಮುಂದುವರಿಸಿ ಸಿಎಂ ಆದೇಶ ನಿಸ್ವಾರ್ಥ ಸೇವೆಯನ್ನು…

Read More

ದೆಹಲಿ ಸ್ಫೋಟಕ್ಕೂ ತುಮಕೂರಿಗೂ ನಂಟು? ತುಮಕೂರಿನಲ್ಲಿ ಶಂಕಿತನ ವಿಚಾರಣೆ ನಡೆಸಿದ ಪೊಲೀಸರು

ದೆಹಲಿಯಲ್ಲಿ ಕಾರು ಸ್ಫೋಟ ಪ್ರಕರಣ ಇಡೀ ದೇಶದ ಜನತೆಯನ್ನು ಬೆಚ್ಚಿಬಿಳಿಸಿದ್ದು,ಈ ಒಂದು ಪ್ರಕರಣದ ಬಳಿಕ ರಾಜ್ಯಕ್ಕೂ ರಾಷ್ಟ್ರ ರಾಜಧಾನಿ ದೆಹಲಿಗೂ ನಂಟು ಇದೆಯಾ ಎನ್ನುವ ಅನುಮಾನ ವ್ಯಕ್ತವಾಗುತ್ತಿದೆ. ಏಕೆಂದರೆ ತುಮಕೂರಿನಲ್ಲಿ ಶಂಕಿತ ವ್ಯಕ್ತಿಯನ್ನು ಪೊಲೀಸರು ಠಾಣೆಗೆ ಕರೆದು ಉಚ್ಚಾರಣೆ ಮಾಡಿ ಕಳುಹಿಸಿರುವ ಘಟನೆ ವರದಿಯಾಗಿದೆ. ಹೌದು ದೆಹಲಿ ಸ್ಫೋಟದ ಬಳಕೆ ತುಮಕೂರಿನಲ್ಲಿ ವ್ಯಕ್ತಿಯ ವಿಚಾರಣೆ ನಡೆಸಲಾಗುತ್ತಿದೆ. ಉಗ್ರ ಸಂಘಟನೆ ಜೊತೆಗೆ ಈ ಹಿಂದೆ ಈ ವ್ಯಕ್ತಿ ಉಗ್ರ ಸಂಘಟನೆಯ ಸಂಪರ್ಕದಲ್ಲಿ ಇದ್ದ ಎನ್ನಲಾಗುತ್ತಿದ್ದು ಆ ಕಾರಣ ಹಿನ್ನೆಲೆ…

Read More

ಮಕ್ಕಳನ್ನು ಮಾರುವುದು, ಕೊಳ್ಳುವುದು ಅಪರಾಧ, 5 ವರ್ಷ ಜೈಲು ಫಿಕ್ಸ್

ಬೆಂಗಳೂರು: ಮಕ್ಕಳ ರಕ್ಷಣಾ ನಿರ್ದೇಶನಾಲಯದ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವು ಕೂಡ ನವೆಂಬರ್-2025ರ ಮಾಹೆಯನ್ನು ಅಂತರಾಷ್ಟ್ರೀಯ ದತ್ತು ಮಾಸಾಚರಣೆಯಾಗಿ ಆಚರಿಸಲಾಗುತ್ತಿದೆ. ಇದರ ಅಂಗವಾಗಿ ಪೋಷಕತ್ವ ಯೋಜನೆ, ಕಾನೂನು ಬದ್ಧ ದತ್ತು ಹಾಗೂ ಕಾನೂನು ಬಾಹಿರ ದತ್ತು ಪ್ರಕ್ರಿಯೆ ಅಪರಾಧ , ಮಕ್ಕಳನ್ನು ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದ್ದು, “ಮಕ್ಕಳನ್ನು ಮಾರುವವರಿಗೂ ಹಾಗೂ ಕೊಳ್ಳುವವರಿಗೂ ಬಾಲನ್ಯಾಯ ಕಾಯ್ದೆ-2015 ಸೆಕ್ಷನ್ 80 ಮತ್ತು 81ರ ಅನ್ವಯ 5 ವರ್ಷಗಳವರೆಗೂ ಸೆರೆಮನೆ ವಾಸದೊಂದಿಗೆ ರೂ.1.00 ಲಕ್ಷಗಳವರೆಗೆ ದಂಡ ವಿಧಿಸಲಾಗುವುದು. ಈ…

Read More