ತಪಾಸಣೆ ವೇಳೆ ಕಾರಿನಲ್ಲಿ ಮಹಿಳೆಯ ಮೃತದೇಹ ಪತ್ತೆ..!!

ಚೆಕ್‌ಪೋಸ್ಟ್ ವೊಂದರಲ್ಲಿ ಶುಕ್ರವಾರ ರಾತ್ರಿ ಅರಣ್ಯ ಸಿಬ್ಬಂದಿಗಳು ತಪಾಸಣೆ ನಡೆಸುತ್ತಿದ್ದ ಸಂದರ್ಭ ಕಾರೊಂದರಲ್ಲಿ ಮಹಿಳೆಯ ಮೃತದೇಹ ಪತ್ತೆಯಾದ ಪ್ರಕರಣ ಕೊಡಗು ಜಿಲ್ಲೆಯ ಮಾಲ್ದಾರೆ ಗ್ರಾ.ಪಂ ವ್ಯಾಪ್ತಿಯ ಲಿಂಗಾಪುರ ಚೆಕ್‌ಪೋಸ್ಟ್ ನಲ್ಲಿ ಬೆಳಕಿಗೆ ಬಂದಿದೆ. ಮೈಸೂರಿನಲ್ಲಿ ಪತಿಯೊಂದಿಗೆ ವಾಸವಾಗಿದ್ದ ಹರಿಯಾಣ ಮೂಲದ ನಾನ್ನಿದೇವಿ (47) ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಮೂವರನ್ನು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ. ಅರಣ್ಯ ಇಲಾಖೆಯ ಸಿಬ್ಬಂದಿಗಳು ಎಂದಿನಂತೆ ಶುಕ್ರವಾರ ರಾತ್ರಿ ಲಿಂಗಾಪುರ ಚೆಕ್‌ಪೋಸ್ಟ್ ನಲ್ಲಿ ತಪಾಸಣೆಯಲ್ಲಿ ತೊಡಗಿದ್ದರು….

Read More

ಪದ್ಮಶ್ರೀ ಪುರಸ್ಕೃತ, ಪರಿಸರವಾದಿ ಸಾಲುಮರದ ತಿಮ್ಮಕ್ಕ ನಿಧನ

ಸಾವಿರಾರು ಮರಗಳನ್ನು ನೆಟ್ಟು ‘ವೃಕ್ಷಮಾತೆ’ ಎಂದೇ ಹೆಸರುವಾಸಿಯಾಗಿರುವ ಪರಿಸರವಾದಿ, ಪದ್ಮಶ್ರೀ ಪುರಸ್ಕೃತ ಶತಾಯುಷಿ ಸಾಲುಮರದ ತಿಮ್ಮಕ್ಕ ನಿಧನರಾಗಿದ್ದಾರೆ. ಮರಗಳನ್ನೇ ತಮ್ಮ ಮಕ್ಕಳೆಂದು ತಮ್ಮ ಪತಿಯೊಂದಿಗೆ ರಾಮನಗರ ಜಿಲ್ಲೆಯ ಹುಲಿಕಲ್ ಮತ್ತು ಕುದೂರು ನಡುವೆ 4.5 ಕಿಲೋಮೀಟರ್ ಹೆದ್ದಾರಿಯ ಉದ್ದಕ್ಕೂ 385 ಆಲದ ಮರಗಳನ್ನು ನೆಟ್ಟು ಬೆಳೆಸಿದ ತಿಮ್ಮಕ್ಕ ಅವರು ಈವರೆಗೆ 8,000ಕ್ಕೂ ಹೆಚ್ಚು ಮರಗಳನ್ನು ನೆಟ್ಟು ಬೆಳೆಸಿದ್ದಾರೆ. ಇದನ್ನು ಓದಿದ್ದೀರಾ? ಸಾಲು ಮರದ ತಿಮ್ಮಕ್ಕ ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ಮುಂದುವರಿಸಿ ಸಿಎಂ ಆದೇಶ ನಿಸ್ವಾರ್ಥ ಸೇವೆಯನ್ನು…

Read More

ದೆಹಲಿ ಸ್ಫೋಟಕ್ಕೂ ತುಮಕೂರಿಗೂ ನಂಟು? ತುಮಕೂರಿನಲ್ಲಿ ಶಂಕಿತನ ವಿಚಾರಣೆ ನಡೆಸಿದ ಪೊಲೀಸರು

ದೆಹಲಿಯಲ್ಲಿ ಕಾರು ಸ್ಫೋಟ ಪ್ರಕರಣ ಇಡೀ ದೇಶದ ಜನತೆಯನ್ನು ಬೆಚ್ಚಿಬಿಳಿಸಿದ್ದು,ಈ ಒಂದು ಪ್ರಕರಣದ ಬಳಿಕ ರಾಜ್ಯಕ್ಕೂ ರಾಷ್ಟ್ರ ರಾಜಧಾನಿ ದೆಹಲಿಗೂ ನಂಟು ಇದೆಯಾ ಎನ್ನುವ ಅನುಮಾನ ವ್ಯಕ್ತವಾಗುತ್ತಿದೆ. ಏಕೆಂದರೆ ತುಮಕೂರಿನಲ್ಲಿ ಶಂಕಿತ ವ್ಯಕ್ತಿಯನ್ನು ಪೊಲೀಸರು ಠಾಣೆಗೆ ಕರೆದು ಉಚ್ಚಾರಣೆ ಮಾಡಿ ಕಳುಹಿಸಿರುವ ಘಟನೆ ವರದಿಯಾಗಿದೆ. ಹೌದು ದೆಹಲಿ ಸ್ಫೋಟದ ಬಳಕೆ ತುಮಕೂರಿನಲ್ಲಿ ವ್ಯಕ್ತಿಯ ವಿಚಾರಣೆ ನಡೆಸಲಾಗುತ್ತಿದೆ. ಉಗ್ರ ಸಂಘಟನೆ ಜೊತೆಗೆ ಈ ಹಿಂದೆ ಈ ವ್ಯಕ್ತಿ ಉಗ್ರ ಸಂಘಟನೆಯ ಸಂಪರ್ಕದಲ್ಲಿ ಇದ್ದ ಎನ್ನಲಾಗುತ್ತಿದ್ದು ಆ ಕಾರಣ ಹಿನ್ನೆಲೆ…

Read More

ಮಕ್ಕಳನ್ನು ಮಾರುವುದು, ಕೊಳ್ಳುವುದು ಅಪರಾಧ, 5 ವರ್ಷ ಜೈಲು ಫಿಕ್ಸ್

ಬೆಂಗಳೂರು: ಮಕ್ಕಳ ರಕ್ಷಣಾ ನಿರ್ದೇಶನಾಲಯದ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವು ಕೂಡ ನವೆಂಬರ್-2025ರ ಮಾಹೆಯನ್ನು ಅಂತರಾಷ್ಟ್ರೀಯ ದತ್ತು ಮಾಸಾಚರಣೆಯಾಗಿ ಆಚರಿಸಲಾಗುತ್ತಿದೆ. ಇದರ ಅಂಗವಾಗಿ ಪೋಷಕತ್ವ ಯೋಜನೆ, ಕಾನೂನು ಬದ್ಧ ದತ್ತು ಹಾಗೂ ಕಾನೂನು ಬಾಹಿರ ದತ್ತು ಪ್ರಕ್ರಿಯೆ ಅಪರಾಧ , ಮಕ್ಕಳನ್ನು ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದ್ದು, “ಮಕ್ಕಳನ್ನು ಮಾರುವವರಿಗೂ ಹಾಗೂ ಕೊಳ್ಳುವವರಿಗೂ ಬಾಲನ್ಯಾಯ ಕಾಯ್ದೆ-2015 ಸೆಕ್ಷನ್ 80 ಮತ್ತು 81ರ ಅನ್ವಯ 5 ವರ್ಷಗಳವರೆಗೂ ಸೆರೆಮನೆ ವಾಸದೊಂದಿಗೆ ರೂ.1.00 ಲಕ್ಷಗಳವರೆಗೆ ದಂಡ ವಿಧಿಸಲಾಗುವುದು. ಈ…

Read More

ಕಳ್ಳತನದಲ್ಲೂ ದೇವರಿಗೆ ಪಾಲು ಕೊಡ್ತಿದ್ದ ಕಿರಾತಕ : 5 ಜಿಲ್ಲೆಗೆ ಬೇಕಾಗಿದ್ದ ನಟೋರಿಯಸ್ ಕಳ್ಳ ಅರೆಸ್ಟ್!

ರಾಜ್ಯದಲ್ಲಿ ಒಬ್ಬ ವಿಚಿತ್ರ ಕಳ್ಳನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬೆಂಗಳೂರಿನಲ್ಲಿ ನಟೋರಿಯಸ್ ಕಳ್ಳನನ್ನು ಅರೆಸ್ಟ್ ಮಾಡಲಾಗಿದ್ದು, 5 ಜಿಲ್ಲೆಗೆ ಬೇಕಾಗಿದ್ದ ನಟೋರಿಯಸ್ ಕಳ್ಳ ಅರೆಸ್ಟ್ ಆಗಿದ್ದಾನೆ. ವಿದ್ಯಾರಣ್ಯಪುರ ಪೊಲೀಸರಿಂದ ಕಳ್ಳನ ಬಂಧನವಾಗಿದೆ. ಅಸ್ಲಾಂ ಪಾಷಾ ವಿರುದ್ಧ 150 ಪ್ರಕರಣ ದಾಖಲಾಗಿತ್ತು. ಬೆಂಗಳೂರು , ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಹಾವೇರಿ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿಯೂ ಈತ ಮನೆಗಳ ತನ ಮಾಡಿದ್ದ. ಕದ್ದ ಮಾಲ್ ಅಲ್ಲಿ ದೇವರಿಗೆ ಪಾಲು! ಕಳ್ಳತನದಲ್ಲೂ ಅಸ್ಲಾಂ ಪಾಶಾಗೆ ದೇವರ ಮೇಲೆ ನಂಬಿಕೆ ಹೆಚ್ಚಾಗಿತ್ತು. ಪ್ರತಿ…

Read More

ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹರೀಶ್ ರಾಯ್ ನಿಧನ

ಬೆಂಗಳೂರು:  ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹರೀಶ್ ರಾಯ್ ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದು ರ ಇಂದು ನಿಧನ ಹೊಂದಿದ್ದಾರೆ. ‘ಓಂ’, ‘ನಲ್ಲ’, ‘ಕೆಜಿಎಫ್’, ‘ಕೆಜಿಎಫ್ 2’ ಸೇರಿದಂತೆ ಅನೇಕ ಸೂಪರ್ ಹಿಟ್ ಚಿತ್ರಗಳಲ್ಲಿ ತಮ್ಮ ಶಕ್ತಿಶಾಲಿ ಅಭಿನಯದಿಂದ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರರಾಗಿದ್ದ ಅವರು, ಕಳೆದ ಕೆಲವು ವರ್ಷಗಳಿಂದ ಥೈರಾಯ್ಡ್ ಕ್ಯಾನ್ಸರ್ನೊಂದಿಗೆ ಹೋರಾಟ ನಡೆಸುತ್ತಿದ್ದರು. ಹರೀಶ್ ರಾಯ್ ಅವರ ಆರೋಗ್ಯ ಕಳೆದ ತಿಂಗಳುಗಳಿಂದ ಹದಗೆಡುತ್ತಲೇ ಇತ್ತು. ಹೊಟ್ಟೆ ಉಬ್ಬರಗೊಂಡು ದೇಹ ಕೃಷಗೊಂಡಿದ್ದ ಅವರು ಗುರುತೇ ಸಿಗದಷ್ಟು ಬದಲಾವಣೆಗೆ ಒಳಗಾಗಿದ್ದರು….

Read More

ನಂದಿನಿ ತುಪ್ಪದ ಬೆಲೆ ದಿಢೀರ್‌ 90 ರೂ. ಏರಿಕೆ

ಬೆಂಗಳೂರು: ಜಿಎಸ್‌ಟಿ ಇಳಿಕೆಯಿಂದಾಗಿ ಎಲ್ಲ ವಸ್ತುಗಳ ಬೆಲೆ ಇಳಿಕೆಯಾಗಿ ನಿರಾಳವಾಗಿದ್ದ ಜನತೆಗೆ ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ (ಕೆಎಂಎಫ್‌) ನಂದಿನ ತುಪ್ಪದ ಬೆಲೆಯಲ್ಲಿ ಏಕಾಏಕಿ 90 ರೂ. ಏರಿಕೆ ಮಾಡಿ ದಿಢೀರ್‌ ಶಾಕ್‌ ಕೊಟ್ಟಿದೆ. ನಂದಿನಿ ತುಪ್ಪದ ದರ ಪ್ರತಿ ಕೆಜಿಗೆ 90 ರೂ. ಏರಿಕೆ ಮಾಡಿ ಆದೇಶ ಹೊರಡಿಸಿದ್ದು, ಇಂದಿನಿಂದಲೇ ನೂತನ ದರ ಜಾರಿಗೆ ಬರಲಿದೆ ಎಂದು ತಿಳಿಸಿದೆ. ಈ ಹಿಂದೆ 1 ಕೆಜಿ ತುಪ್ಪಕ್ಕೆ 610 ರೂ. ಇತ್ತು, ಸದ್ಯ 90 ರೂ….

Read More

 ಯುವತಿ ವಿಚಾರಕ್ಕೆ ಯುವಕನ ಬಟ್ಟೆ ಬಿಚ್ಚಿ ಮಾರಣಾಂತಿಕ ಹಲ್ಲೆ.!!

 ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ಹಾಸನ ಹೊರವಲಯದ ಗೆಂಡೆಕಟ್ಟೆ ಅರಣ್ಯದಲ್ಲಿ ಈ ಒಂದು ಘಟನೆ ನಡೆದಿದ್ದು, ಬಟ್ಟೆ ಬಿಚ್ಚಿ ಭರತ ಎನ್ನುವ ಯುವಕನ ಮೇಲೆ ಯುವಕರ ಗುಂಪು ಹಲ್ಲೆ ಮಾಡಿದೆ. ಈ ಒಂದು ಘಟನೆಗೆ ಯುವತಿ ಹಾಗು ಹಣದ ವಿಚಾರಕ್ಕೆ ಈ ಒಂದು ಗ್ಯಾಂಗ್ ಹಲ್ಲೆ ನಡೆಸಿರುವ ಅನುಮಾನ ವ್ಯಕ್ತವಾಗಿದೆ. ಯುವಕ ಭರತ್ ಎಷ್ಟೇ ಬೇಡಿಕೊಂಡರೂ ಕೂಡ ಕಿಡಿಗೇಡಿಗಳು ಆತನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಘಟನೆ ಕುರಿತಂತೆ ಬಡಾವಣೆ…

Read More

ಸೇನೆ ಸೇರಬಯಸುವವರಿಗೆ ಗುಡ್ ನ್ಯೂಸ್ : ನ.13 ರಿಂದ 19 ರ ವರೆಗೆ ಬಳ್ಳಾರಿಯಲ್ಲಿ ಅಗ್ನಿವೀರ್ ನೇಮಕಾತಿ ರ‍್ಯಾಲಿ

ಬೆಂಗಳೂರು ಪ್ರಧಾನ ಕಚೇರಿ ನೇಮಕಾತಿ ವಲಯದಿಂದ ನವೆಂಬರ್ 13 ರಿಂದ 19 ರ ವರೆಗೆ  ಬಳ್ಳಾರಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಅಗ್ನಿವೀರ್ ನೇಮಕಾತಿ ರ‍್ಯಾಲಿ ಏರ್ಪಡಿಸಲಾಗಿದೆ. ಕರ್ನಾಟಕ, ಕೇರಳ, ಲಕ್ಷದ್ವೀಪ ಮತ್ತು ಮಾಹೆ ರಾಜ್ಯದ ಅಭ್ಯರ್ಥಿಗಳಿಗೆ 30 ಜೂನ್ 2025 ರಿಂದ 10 ಜುಲೈ 2025 ರವರೆಗೆ ನಡೆಸಲಾದ ಆನ್‌ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಗ್ನಿವೀರ್ ವರ್ಗಗಳ ಅರ್ಜಿದಾರರನ್ನು (ಅನ್ವಯವಾಗುವಂತೆ) ವರ್ಗವಾರು ರ‍್ಯಾಲಿಗೆ ಕರೆಯಲಾಗಿದೆ. ಶಾರ್ಟ್ ಲಿಸ್ಟ್ ಮಾಡಿದ ಅಭ್ಯರ್ಥಿಗಳ ರಾಜ್ಯ ಮತ್ತು ಜಿಲ್ಲೆಗಳ…

Read More

ಇನ್ನು ಗ್ರಾಮ ಪಂಚಾಯತ್ ಗಳಲ್ಲಿ ಈ ಎಲ್ಲಾ ಸೇವೆಗಳು ಲಭ್ಯ

ರಾಜ್ಯದ ಗ್ರಾಮ ಪಂಚಾಯ್ತಿಗಳಲ್ಲಿ ಗ್ರಾಮೀಣ ಜನತೆಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ವಿವಿಧ ಸೇವೆಗಳನ್ನು ಒದಗಿಸಲಾಗುತ್ತಿದೆ. ಆ ಮೂಲಕ ಗ್ರಾಮೀಣ ಜನರು ತಾಲ್ಲೂಕು, ಜಿಲ್ಲಾ ಮಟ್ಟಕ್ಕೆ ಅಲೆಯುವುದನ್ನು ಸರ್ಕಾರ ತಪ್ಪಿಸಿದೆ. ಹಾಗಾದ್ರೇ ಸಾರ್ವಜನಿಕರಿಗೆ ಉಪಯುಕ್ತ ಮಾಹಿತಿ ಎನ್ನುವಂತೆ ರಾಜ್ಯದ ಗ್ರಾಮ ಪಂಚಾಯ್ತಿಗಳಲ್ಲಿ ಸಿಗುವಂತ ಸೇವೆಗಳ ಸಂಪೂರ್ಣ ಮಾಹಿತಿ ಮುಂದಿದೆ ಓದಿ ತಿಳಿದುಕೊಳ್ಳಿ. ಬಾಪೂಜಿ ಸೇವಾ ಕೇಂದ್ರ (ಬಿ.ಎಸ್.ಕೆ.)(bsk.karnataka.gov.in) ಗ್ರಾಮೀಣ ಜನತೆಗೆ ತಮ್ಮ ಸಾಮಾಜಿಕ, ಶೈಕ್ಷಣಿಕ, ವಾಣಿಜ್ಯ ಹಾಗೂ ಕೃಷಿ ಚಟುವಟಿಕೆಗಳಗಾಗಿ ವಿವಿಧ ಇಲಾಖೆಗಳಿಂದ ಹಲವಾರು ದಾಖಲೆಗಳು ಬೇಕಾಗುತ್ತವೆ. ಇವುಗಳನ್ನು…

Read More