ಬಾಂಗ್ಲಾದಲ್ಲಿ ಚಿನ್ಮಯ ಕೃಷ್ಣದಾಸ ಪ್ರಭು ಬಂಧನ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ

0 0
Read Time:2 Minute, 3 Second

ಮಂಗಳೂರು: ಬಾಂಗ್ಲಾದೇಶದಲ್ಲಿ ಬಂಧಿಸಲ್ಪಟ್ಟ ಧಾರ್ಮಿಕ ಮುಖಂಡ ಚಿನ್ಮಯ ಕೃಷ್ಣದಾಸ ಪ್ರಭು ಅವರನ್ನು ಬಿಡುಗಡೆಗೊಳಿಸಬೇಕು, ಬಾಂಗ್ಲಾದ ಹಿಂದೂಗಳಿಗೆ ರಕ್ಷಣೆ ಒದಗಿಸಬೇಕು ಎಂದು ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ಮಂಗಳೂರಿನ ಮಿನಿ ವಿಧಾನ ಸೌಧದ ಎದುರು ಇಂದು ಪ್ರತಿಭಟನೆ ನಡೆಯಿತು.

ಪ್ರತಿಭಟನೆಯಲ್ಲಿ ಮಾತನಾಡಿದ ವಿಹೆಚ್ ಪಿ ಕರ್ನಾಟಕ ದಕ್ಷಿಣ ಪ್ರಾಂತ ಅಧ್ಯಕ್ಷ ಡಾ. ಎಂ.ಬಿ.ಪುರಾಣಿಕ್ ಅವರು, ಬಾಂಗ್ಲಾದಿಂದ ಹಿಂದೂಗಳನ್ನು ಹೊರ ದಬ್ಬುವ ಷಡ್ಯಂತ್ರ ನಡೆಯುತ್ತಿದೆ. ಜಗತ್ತಿನಲ್ಲಿ ಶಾಂತಿಗಾಗಿ ಹುಟ್ಟಿದ ಇಸ್ಕಾನ್ ಸಂಸ್ಥೆ ಜಗತ್ತಿನ ಜನರ ಪ್ರೀತಿ ಗಳಿಸಿದೆ. ಬಡವರ ಸೇವೆ ಮಾಡುತ್ತಿರುವ ಇಸ್ಕಾನ್ ನ ಸ್ವಾಮಿಗಳನ್ನು ಏನೂ ಕಾರಣ ಕೊಡದೆ ಬಾಂಗ್ಲಾದಲ್ಲಿ ಬಂಧಿಸಿದ್ದಾರೆ. ಅಲ್ಲಿನ ಸರ್ಕಾರ, ನ್ಯಾಯಾಲಯ ಅಲ್ಲಿನ ಅಲ್ಪಸಂಖ್ಯಾಕರಾದ ಹಿಂದೂಗಳ ವಿರೋಧಿಯಾಗಿದೆ. ಬಾಂಗ್ಲಾದ ಹಿಂದೂಗಳು ಶಾಂತಿಯಿಂದ ಬದುಕಲು ಅವಕಾಶ ನೀಡಬೇಕು. ಇಲ್ಲವಾದರೆ ಮುಂದಿನ ಪರಿಣಾಮಗಳಿಗೆ ಬಾಂಗ್ಲಾ ಸರ್ಕಾರವೇ ಹೊಣೆಯಾಗುತ್ತದೆ ಎಂದು ಆಕ್ರೋಶ ಹೊರಹಾಕಿದರು.ಪ್ರತಿಭಟನೆಯಲ್ಲಿ ಮಾಣಿಲ ಶ್ರೀ ಮೋಹನದಾಸ ಸ್ವಾಮೀಜಿ, ಇಸ್ಕಾನ್ ನ ಪ್ರೇಮಭಕ್ತಿ ಪ್ರಭು, ಓಂ ಶ್ರೀ ಮಠದ ವಿದ್ಯಾನಂದ ಸರಸ್ವತಿ ಸ್ವಾಮೀಜಿ, ಇಸ್ಕಾನ್ ನ ಸಚ್ಚಿದಾನಂದ ಅದ್ವೈತ ದಾಸ, ಪ್ರಮುಖರಾದ ಗೋಪಾಲ್ ಕುತ್ತಾರ್, ಎಚ್. ಕೆ ಪುರುಷೋತ್ತಮ್, ಕೃಷ್ಣ ಪ್ರಸನ್ನ, ಶಿವಾನಂದ ಮೆಂಡನ್, ಪುನೀತ್ ಅತ್ತಾವರ, ಶರಣ್ ಪಂಪ್ ವೆಲ್, ಗಣೇಶ್ ಪೊದುವಾಳ್, ಶಕೀಲಾ ಕಾವಾ, ಪ್ರೇಮಾನಂದ ಶೆಟ್ಟಿ ಮತ್ತಿತರರು ಭಾಗಿಯಾಗಿದ್ದರು.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *