ಕಟೀಲು ದೇವರಿಗೆ ಸ್ವರ್ಣಪಾದುಕೆ ಸಮರ್ಪಣೆ

0 0
Read Time:1 Minute, 6 Second

ಕಟೀಲು: ದಕ್ಷಿಣಾಮ್ನಾಯ ಶೃಂಗೇರಿ ಶಾರದಾ ಪೀಠದ 36ನೆಯ ಅಧಿಪತಿಗಳಾದ ಜಗದ್ಗುರು ಶ್ರೀ ಭಾರತೀತೀರ್ಥ ಮಹಾಸ್ವಾಮಿಗಳವರ ಸನ್ಯಾಸ ಸ್ವೀಕಾರ ಸುವರ್ಣ ಮಹೋತ್ಸವ (1974-2024)ದ ಸಂಸ್ಮರಣಾರ್ಥ ಶ್ರೀಕ್ಷೇತ್ರ ಕಟೀಲು ಶ್ರೀ ದುರ್ಗಾಪರಮೇಶ್ವರೀ ಅಮ್ಮನವರಿಗೆ ಶೃಂಗೇರಿ ಶಾರದಾ ಪೀಠದ ವತಿಯಿಂದ 40 ಲಕ್ಷ ರೂ. ಮೌಲ್ಯದ ಸ್ವರ್ಣಪಾದುಕೆ ಹಾಗೂ ಒಡ್ಯಾಣವನ್ನು ಸಮರ್ಪಿಸಲಾಯಿತು.

ಶೃಂಗೇರಿಯಲ್ಲಿ ಉಭಯ ಜಗದ್ಗುರುಗಳು ಈ ಪಾದುಕೆ ಹಾಗೂ ಒಡ್ಯಾಣವನ್ನು ಕಟೀಲು ದೇಗುಲದ ಆನುವಂಶಿಕ ಅರ್ಚಕರಾದ ಹರಿನಾರಾಯಣದಾಸ ಆಸ್ರಣ್ಣರಿಗೆ ಹಸ್ತಾಂತರಿಸಿದರು. ಈ ಪಾದುಕೆ ಮತ್ತು ಒಡ್ಯಾಣವನ್ನು ಬುಧವಾರ ಶ್ರೀದೇವಿಗೆ ತೊಡಿಸಿ ಅಲಂಕಾರ ಮಾಡಲಾಯಿತು. ಶೃಂಗೇರಿ ಶ್ರೀ ಮಠದ ಶಿಷ್ಯರಾದ ಆಂಧ್ರಪ್ರದೇಶದ ಪೋಲಿಸೆಟ್ಟಿ ಶ್ಯಾಮ್‌ ಸುಂದರ್‌ ಅವರು ಇದನ್ನು ಸೇವೆಯಾಗಿ ನೀಡಿದ್ದರು.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *