ಶಾಲಾ ಮಕ್ಕಳಿಗೆ ಗುಡ್ ನ್ಯೂಸ್‌: ಇನ್ಮುಂದೆ ವಾರದ 6 ದಿನವೂ ಸಿಗಲಿದೆ ಮೊಟ್ಟೆ-ಬಾಳೆ ಹಣ್ಣು

0 0
Read Time:1 Minute, 32 Second

ಬೆಂಗಳೂರು: 2025-26ನೇ ಸಾಲಿನ ಬಜೆಟ್‌ ಅನ್ನು ಸಿಎಂ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ಮಂಡನೆ ಮಾಡುತ್ತಿದ್ದಾರೆ. ಈ ನಡುವೆ ಅವರು ತಮ್ಮ ಬಜೆಟ್‌ ಮಂಡನೆ ವೇಳೆಯಲ್ಲಿ ಮಾತನಾಡುತ್ತ ಸರ್ಕಾರ ಹಲವು ಯೋಜನೆಗಳನ್ನು ರೂಪಿಸಿದೆ. ಭವಿಶ್ಯದ ಕರ್ನಾಟಕದ ಆರ್ಥಿಕ ಅಭಿವೃದ್ದಿಗೆ ಸಹಾಯವಾಗಲಿದೆ ಅಂತ ತಿಳಿಸಿದರು.

ಬೆಂಗಳೂರಿಗೆ ಅನುದಾನ ಏಳು ಸಾವಿರ ಕೋಟಿ ಏರಿಕೆ ಮಾಡಲಾಗಿದೆ ಅಂತ ತಿಳಿಸಿದರು. ಇನ್ನೂ ಇದೇ ವೇಳೆ ಬೆಂಗಳೂರು ಟನಲ್‌ ಯೋಜನೆಗೆ ನಲವತ್ತು ಸಾವಿರ ಕೋಟಿಯನ್ನು ಬಿಡುಗಡೆ ಮಾಡಲಾಗುವುದು ಅಂತ ತಿಳಿಸಿದರು. ಇದೇ ವೇಳೆ ಸರ್ಕಾರಿ-ಪ್ರೌಢಶಾಲೆ ಶಿಕ್ಷಕರ ಗೌರವ ಧನ ಹೆಚ್ಚಳ ಮಾಡಲಾಗಿದ್ದು, ಮಾಸಿಕ ಎರಡು ಸಾವಿರ ರೂಗಳನ್ನು ಹೆಚ್ಚಳ ಮಾಡಿರುವುದಾಗಿ ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.  ಇದೇ ವೇಳೆ ಅವರು ಬಿಸಿಯೂಟ ಕಾರ್ಯಕರ್ತೆಯರ ಗೌರವ ಧನ ಹೆಚ್ಚಳ ಮಾಡಿರುವುದಾಗಿ ತಿಳಿಸಿದರು.
ಇದೇ ವೇಳೆ ಶಾಲಾ ಮಕ್ಕಳಿಗೆ ನೀಡುತ್ತಿರುವ ಮೊಟ್ಟೆ ಮತ್ತು ಮತ್ತು ಬಾಳೆ ಹಣ್ಣನ್ನು ವಾರದ ಆರು ದಿನವೂ ಕೂಡ ನೀಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದ್ದು, ಇದಕ್ಕೆ ಬರೋಬ್ಬರಿ 1500 ಕೋಟಿ ಹಣವನ್ನು ಮೀಸಲು ಇಡಲಾಗಿದೆ ಅಂತ ತಿಳಿಸಿದರು.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *