ಮುಡಾ ಹಗರಣ ಒಪ್ಪಿಕೊಂಡ ಸರಕಾರ – ಸಿದ್ದರಾಮಯ್ಯಗೆ ಮತ್ತಷ್ಟು ಮುಜುಗರ

0 0
Read Time:1 Minute, 47 Second

ಬೆಂಗಳೂರು/ಮೈಸೂರು: ಕಾಂಗ್ರೆಸ್ ಸರಕಾರವನ್ನು ತೀವ್ರ ಮುಜುಗರಕ್ಕೆ ಸಿಲುಕಿಸಿರುವ ಮುಡಾ ಹಗರಣವನ್ನು ಬಯಲಿಗೆ ತಂದಿದ್ದ ಆರ್‌ಟಿಐ ಕಾರ್ಯಕರ್ತ ಗಂಗರಾಜು ಅವರಿಗೆ ಎದರಿಕೆ ಹಾಕಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಬೆಂಗಳೂರು-ಮೈಸೂರು ಮುಖ್ಯರಸ್ತೆಯಲ್ಲಿ ಬೈಕ್ ಗಳಲ್ಲಿ ಬಂದಿದ್ದ ಅಪರಿಚಿತರು ಬೆದರಿಕೆ ಹಾಕಿದ್ದಾರೆ ಎಂದು ಗಂಗರಾಜು ಆರೋಪ ಮಾಡಿದ್ದಾರೆ. ಈ ಹಿನ್ನೆಲೆ ಗಂಗರಾಜು ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಬಿಜೆಪಿ ಒತ್ತಾಯಿಸಿದೆ . ಇನ್ನು ಸಿಎಂ ಸಿದ್ದರಾಮಯ್ಯ ಪತ್ನಿಗೆ 50:50 ಅನುಪಾತದಲ್ಲಿ ಸೈಟ್ ಕೊಟ್ಟಿದ್ದು ತಪ್ಪು ಎಂದು ಅಧಿಕೃತವಾಗಿ ಸರ್ಕಾರ ಒಪ್ಪಿಕೊಂಡಿದೆ. ಈ ಒಂದು ಆದೇಶ ಸಿಎಂಗೆ ಮುಳುವಾಗುತ್ತಾ ಎಂಬ ಪ್ರಶ್ನೆ ಎದುರಾಗಿದೆ. ಈ ಮಧ್ಯೆ ಹಿಂದಿನ ಆಯುಕ್ತರಾಗಿದ್ದ ಜಿ.ಟಿ. ದಿನೇಶ್ ಕುಮಾರ್ ರನ್ನು ಅಮಾನತು ಮಾಡಿ ರಾಜ್ಯ ಸರ್ಕಾರವೇ ಹೊರಡಿಸಿರುವ ಆದೇಶ ಈಗ ಸಿಎಂಗೆ ತಲೆನೋವಾಗುವ ಸಾಧ್ಯತೆಗಳಿವೆ. ಆರಂಭದಿಂದಲೂ 50:50 ರ ಅನುಪಾತದಲ್ಲಿ ಸೈಟ್ ಹಂಚಿಕೆ ಆಗಿದೆ ಎಂಬ ಆರೋಪವನ್ನು ವಿಪಕ್ಷ ಬಿಜೆಪಿ ಮಾಡುತ್ತಲೇ ಬಂದಿತ್ತು. ಆದರೆ ನಿನ್ನೆ(ಸೆ.02) ಹೊರಡಿಸಲ್ಪಟ್ಟಿರುವ ಅಮಾನತು ಆದೇಶದಲ್ಲಿ 50:50 ಅನುಪಾತದಲ್ಲಿ ನಿಯಮ ಬಾಹಿರವಾಗಿ ನಡೆದುಕೊಂಡಿರುವ ಕಾರಣವನ್ನು ಕೊಡಲಾಗಿದೆ. ಇದರಿಂದಾಗಿ ಬಿಜೆಪಿ ಮತ್ತು ದೂರುದಾರರ ಆರೋಪವನ್ನು ರಾಜ್ಯ ಸರ್ಕಾರವೇ ಒಪ್ಪಿಕೊಂಡಂತಾಗಿದೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *