ಮಂಗಳೂರು: ಮಾಜಿ ಸಂಸದ ನಳಿನ್ ಕುಮಾರ್ ಕಟೀಲು ವಿರುದ್ದ ಸುಳ್ಳು ಸಂದೇಶ – ದೂರು ದಾಖಲು

0 0
Read Time:1 Minute, 41 Second

ಮಂಗಳೂರು : ಮಾಜಿ ಸಂಸದ ನಳಿನ್ ಕುಮಾರ್ ಕಟೀಲು ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ‌ ಸುಳ್ಳು ಸಂದೇಶ ರವಾನಿಸುತ್ತಿರುವ ಬಗ್ಗೆ ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ ಉದ್ಯಮಿ, ನಳಿನ್ ಆಪ್ತ ಸೀತಾರಾಮ ರೈ ಕೆದಂಬಾಡಿಗುತ್ತು ದೂರು ನೀಡಿದ್ದಾರೆ.

ಅಝೀಜ್ ಹಾಗೂ ಇನ್ನಿತರರು ನಳಿನ್ ಕುಮಾರ್ ಕಟೀಲು ಅವರ ವಿರುದ್ಧ ವಾಟ್ಸ್ಆ್ಯಪ್‌ನಲ್ಲಿ ತಪ್ಪು ಸಂದೇಶ ರವಾನಿಸುತ್ತಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.‌ ಮೇ 14ರಿಂದ ವಾಟ್ಸ್ಆ್ಯಪ್‌ನಲ್ಲಿ ನಿರಂತರವಾಗಿ ನಳಿನ್ ಕುಮಾರ್ ಕಟೀಲು ವಿರುದ್ಧ ಮಾನಹಾನಿಯಾಗುವಂತೆ ಸಂದೇಶವನ್ನು ಹರಿಯಬಿಡಲಾಗಿದೆ. ಅಜೀಜ್ ಎಂಬಾತ “ಪ್ರವೀಣ್ ನೆಟ್ಟಾರ್ ಹತ್ಯೆಗೆ ಬಿಗ್ ಟ್ವಿಸ್ಟ್ – ಹಣ ನೀಡಿ ಕೊಲೆ ಮಾಡಿಸಿದ ನಳಿನ್ ಕುಮಾರ್ ಕಟೀಲು” ಎಂಬಿತ್ಯಾದಿ ಸಂದೇಶಗಳನ್ನು ರವಾನಿಸುತ್ತಿದ್ದಾನೆ. ಪ್ರಸಾದ್ ಕೆ. ಎಂಬಾತನಿಂದಲೂ ಈ ವಿಚಾರದ ಬಗ್ಗೆ ಪ್ರಚಾರವಾಗುತ್ತಿದೆ. ನಳಿನ್ ಕುಮಾರ್ ಕಟೀಲು ಅವರ ತೇಜೋವಧೆ ಮಾಡಲು ಪ್ರಯತ್ನಿಸುತ್ತಿರುವುದು ಕಂಡು ಬರುತ್ತಿದೆ. ಇದು ಅವರ ಅಭಿಮಾನಿ ಬಳಗಕ್ಕೆ ತುಂಬಾ ನೋವುಂಟಾಗಿರುತ್ತದೆ. ಈ ಬಗ್ಗೆ ತಕ್ಷಣ ಪ್ರಕರಣ ದಾಖಲಿಸಿ ಮಾನಹಾನಿಕರ ಸಂದೇಶಗಳನ್ನು ರವಾನಿಸುವವರ ವಿರುದ್ಧ ಕ್ರಮ ಕೈಗೊಂಡು ನ್ಯಾಯ ಒದಗಿಸುವಂತೆ ದೂರಿನಲ್ಲಿ ತಿಳಿಸಲಾಗಿದೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *