ಉಡುಪಿ: ನಕಲಿ ಚಿನ್ನ ನೀಡಿ ವಂಚನೆ..! ಆರೋಪಿಯ ಬಂಧನ

0 0
Read Time:1 Minute, 3 Second

ಉಡುಪಿ: ಕಡಿಮೆ ಬೆಲೆಗೆ ಚಿನ್ನ ನೀಡುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಚಿತ್ರದುರ್ಗ ಜಿಲ್ಲೆಯ ಜಯಪ್ರಕಾಸ್.ಡಿ ಎಂದು ಗುರುತಿಸಲಾಗಿದೆ.

ಸಿದ್ದಾಪುರದ ಕಮಲಶಿಲೆ ರಸ್ತೆಯಲ್ಲಿ ಆರೋಪಿಗಳು ರಾಯಚೂರಿನ ಗೋಪಾಲ ಎಂಬವರಿಗೆ 150 ಗ್ರಾಂ ಚಿನ್ನವೆಂದು ಹೇಳಿ 5 ಲಕ್ಷ ಪಡೆದುಕೊಂಡು ನಕಲಿ ಚಿನ್ನ ನೀಡಿ ಪರಾರಿಯಾಗಿದ್ದರು.

ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತನಿಖೆ ಕೈಗೊತ್ತಿಕೊಂಡಿದ್ದ ಪೊಲೀಸರು ಆರೋಪಿಯನ್ನು ಬಂಧಿಸಿ ಆತನಿಂದ 4,50,000 ರೂ. ನಗದು ಹಾಗೂ ಕೃತ್ಯಕ್ಕೆ ಬಳಸಿದ್ದ ಸುಮಾರು 10,00,000 ರೂ. ಮೌಲ್ಯದ ಕಾರನ್ನು ವಶಪಡಿಸಿಕೊಂಡು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *