ಹರೇಕಳ ಬಿಜೆಪಿ ಕಾರ್ಯಕರ್ತ ಹಾಗೂ ವೃದ್ಧೆಯ ಮೇಲೆ ನಡೆದ ಹಲ್ಲೆ ಖಂಡನೀಯ: ಕಿಶೋರ್ ಕುಮಾರ್ ಪುತ್ತೂರು

0 0
Read Time:1 Minute, 48 Second

ಮಂಗಳೂರು: ಹರೇಕಳದಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ಬಿಜೆಪಿ ಕಾರ್ಯಕರ್ತ ಶರತ್ ಕುಮಾರ್ ಗಟ್ಟಿ ಮೇಲೆ ಹಲ್ಲೆ ನಡೆಸಿದ್ದು,ಗಾಯಾಳುವನ್ನು ಆಸ್ಪತ್ರೆಯಲ್ಲಿ ಭೇಟಿಯಾಗಿ ಆರೋಗ್ಯ ಸ್ಥಿತಿಗತಿಗಳ ಕುರಿತು ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಮಾಹಿತಿ ಪಡೆದುಕೊಂಡರು.

ಹರೇಕಳ ಬಿಜೆಪಿ ಬೂತ್ ಅಧ್ಯಕ್ಷ ಶರತ್ ಕುಮಾರ್ ಗಟ್ಟಿ ಅವರ ಮೇಲೆ ಪಂಚಾಯತ್ ನೀರಿನ ಕ್ಷುಲ್ಲಕ ಕಾರಣಕ್ಕಾಗಿ ಮಸೀದಿಯಿಂದ ಬಂದ ಸರಿ ಸುಮಾರು 15-20 ಜನರ ತಂಡ ಮನೆಗೆ ನುಗ್ಗಿ ಹಲ್ಲೆ ನಡೆಸಿದ್ದು, ಹಲ್ಲೆಕೋರ ಮತಾಂತರನ್ನು ತಡೆಯಲು ಬಂದ ಅವರ ಅಜ್ಜಿಯ ಮೇಲೂ ಹಲ್ಲೆ ನಡೆಸಲಾಗಿದೆ. ಹಲ್ಲೆಕೋರರ ಮೇಲೆ ಕಠಿಣ ಕಾನೂನು ಕ್ರಮ ಜರಗಿಸಬೇಕು.

ಹಲ್ಲೆ ನಡೆಸಿರುವ ಆರೋಪಿಗಳು ಕೂಡ ಆಸ್ಪತ್ರೆ ದಾಖಲಾಗಿ ಸುಳ್ಳು ಕೇಸು ದಾಖಲಿಸಲು ಪ್ರಯತ್ನಿಸುತ್ತಿದ್ದು, ಪೊಲೀಸ್ ಇಲಾಖೆ ತಪ್ಪಿತಸ್ಥರ ಮೇಲೆ ತಕ್ಷಣವೇ ಕ್ರಮ ಕೈಗೊಳ್ಳಬೇಕು. ಹಿಂದೂ ಕಾರ್ಯಕರ್ತರ ಮೇಲೆ ದೌರ್ಜನ್ಯ ನಡೆಸುವುದನ್ನು ಕಂಡು ಸಮ್ಮನಿರುವುದು ಸಾಧ್ಯವಿಲ್ಲ. ಪದೇ ಪದೇ ಇಂತಹ ಘಟನೆಗಳು ನಡೆಯುವುದರಿಂದ ಜಿಲ್ಲೆಯಲ್ಲಿ ಅಶಾಂತಿ ನಿರ್ಮಾಣವಾಗುತ್ತಿದೆ. ಹಿಂದೂ ಸಮಾಜದ ತಾಳ್ಮೆ ಪರೀಕ್ಷಿಸಲು ಈ ರೀತಿ ಕೃತ್ಯ ಎಸಗುವವರು ಹೀಗೆಯೇ ಮುಂದುವರಿದರೆ ತಕ್ಕ ಉತ್ತರ ನೀಡಲು ಹಿಂದೂ ಸಮಾಜ ಸಿದ್ಧವಾಗಿದೆ. ಶಾಂತಿ ಕಾಪಾಡಾಲು ಮುಸಲ್ಮಾನ ಸಮಾಜದ ಹಿರಿಯರು ಗಮನ ಹರಿಸಬೇಕು ಎಂದು ಎಚ್ಚರಿಕೆ ನೀಡಿದ್ದಾರೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *